Tuesday, November 9, 2010

ಪರಂಪರಾಕೂಟ ಮತ್ತು ಕನ್ನಡ ರಾಜ್ಯೋತ್ಸವದ ಉದ್ಘಾಟನೆ ಕಾರ್ಯಕ್ರಮ
ಚಿಕ್ಕನಾಯಕನಹಳ್ಳಿ,ನ.09: ಸಕರ್ಾರಿ ಪ್ರಥಮ ದಜರ್ೆ ಕಾಲೇಜಿನಲ್ಲಿ ಪರಂಪರಾಕೂಟದ ಉದ್ಘಾಟನೆ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಇದೇ 11ರ ಗುರುವಾರ ಮಧ್ಯಾಹ್ನ 1 ಗಂಟೆಗೆ ಏರ್ಪಡಿಸಲಾಗಿದೆ ಇತಿಹಾಸ ವಿಭಾಗದ ಪ್ರಾಧ್ಯಾಪಕರಾದ ಸಿ.ಜಿ.ಸುರೇಶ್ ತಿಳಿಸಿದ್ದಾರೆ.
ಸಮಾರಂಭವನ್ನು ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದು ಪರಂಪರಾಕೂಟದ ಜಿಲ್ಲಾ ಸಂಚಾಲಕ ಡಾ.ಡಿ.ಎನ್.ಯೋಗಿಶ್ ಉದ್ಘಾಟನೆ ನೆರವೇರಿಸಲಿದ್ದು, ಪ್ರಾಂಶುಪಾಲ ಎ.ಎನ್.ವಿಶ್ವೇಶ್ವರಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಇತಿಹಾಸ ಸಹ ಪ್ರಾಧ್ಯಾಪಕರಾದ ಈರಪ್ಪನಾಯಕ ಡಿ.ಎನ್, ರವೀಂದ್ರವರ್ಮ, ಪರಂಪರಾಕೂಟದ ಸಂಚಾಲಕ ಸಿ.ಜಿ.ಸುರೇಶ್ ಉಪಸ್ಥಿತರಿರುವರು.