Tuesday, November 23, 2010





ಕ್ಷೇತ್ರದ ಅಭಿವೃದ್ದಿಯ ಬಗ್ಗೆ ಗಮನ ಬಿಟ್ಟು ಸಕರ್ಾರ ಉರುಳಿಸುವ ದೃಷ್ಟಿಯಲ್ಲಿರುವ ಶಾಸಕರು
ಚಿಕ್ಕನಾಯಕನಹಳ್ಳಿ,ನ.23: ಪ್ರಜಾಪ್ರಭುತ್ವ ವ್ಯವಸ್ಥೆಯ ಜನಾಂದೋಲನ ನೀತಿಯ ವಿರುದ್ದ ಶಾಸಕರು ತಮ್ಮ ಕರ್ತವ್ಯ ಮರೆತು ಬಿಜೆಪಿ ಸಕರ್ಾರ ಉರುಳಿಸುವ ದೃಷ್ಟಿಯಿಂದ ನಿರಂತರವಾಗಿ ಜನತೆಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಶಿವಪ್ರಸಾದ್ ಹೇಳಿದರು.
ಪಟ್ಟಣದ ತಾಲೂಕು ಕಛೇರಿ ಆವರಣದಲ್ಲಿ ಏರ್ಪಡಿಸಿದ್ದ ಸ್ಪಂದನ ಜನಸ್ಪಶರ್ಿ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು 40 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ಬಂದು ಪ್ರತಿ ಗ್ರಾಮಗಳಲ್ಲಿ ಹಲವು ಜನಪರ ಕಾರ್ಯಗಳನ್ನು ಏರ್ಪಡಿಸಿ ಶೇಕಡ 80ರಷ್ಟು ಯೋಜನೆಗಳನ್ನು ಮನೆ ಬಾಗಿಲಿಗೆ ಬರುವಂತೆ ಮಾಡಿದ್ದಾರೆ, ಈ ಸಾಧನೆಗಳನ್ನೆಲ್ಲಾ ವಿರೋದ ಪಕ್ಷದವರು ಮರೆತು ಸಕರ್ಾರ ಉರುಳಿಸಿ ಹಿಂಬಾಗಿಲಿನಿಂದ ಬರುವ ಪ್ರಯತ್ನ ನಡೆಸುತ್ತಿದ್ದಾರೆ., ಇಂತಹ ಗುಂಪಿನೊಂದಿಗೆ ಕೈ ಜೋಡಿಸಿರುವ ಶಾಸಕರು ಕ್ಷೇತ್ರದಲ್ಲಿ ಹರಾಜಕತೆ ಉಂಟು ಮಾಡಿ ಜನಸಾಮಾನ್ಯರ ಸಮಸೈಯನ್ನು ಅತಿರೇಕಕ್ಕೆ ಎಡೆಮಾಡಿಕೊಟ್ಟಿದ್ದಾರೆ, ಇದರಿಂದ ತಾಲೂಕು ಬಿಜೆಪಿ ಘಟಕ ಪ್ರತಿವಾರ ಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡು ಸಂಕಷ್ಟ ಜನರ ನೆರವಿಗೆ ಬಂರಲಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಮಿಲ್ಟ್ರಿ ಶಿವಣ್ಣ, ಜಿಲ್ಲಾ ಪ್ರಧಾನ ಕಾರ್ಯದಶರ್ಿ ಶಂಕರಪ್ಪ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಗೋಡೆಕೆರೆ ಜಗದೀಶ್ ಸ್ವಾಗತಿಸಿದರೆ ಸುರೇಶ್ಹಳೇಮನೆ ನಿರೂಪಿಸಿ, ಕವಿತಾಕಿರಣ್ಕುಮಾರ್ ವಂದಿಸಿದರು.

ಕನಕದಾಸರ ಜಯೋತ್ಯೋತ್ಸವ ಆಚರಣೆ
ಚಿಕ್ಕನಾಯಕನಹಳ್ಳಿ,ನ.23: ಕಲಿ, ಸಂತ, ಕೀರ್ತನಕಾರ, ಸಮಾಜ ಸೇವಕ, ಕವಿ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತ್ಯೋತ್ಸವ ಸಮಾರಂಭವನ್ನು ಇದೇ 24ರ ಬುಧವಾರ ಮಧ್ಯಾಹ್ನ 12ಗಂಟೆಗೆ ಏರ್ಪಡಿಸಲಾಗಿದೆ.
ಸಮಾರಂಭವನ್ನು ಪಟ್ಟಣದ ಕನ್ನಡ ಸಂಘದ ವೇದಿಕೆಯಲ್ಲಿ ಏರ್ಪಡಿಸಿದ್ದು ಶಾಸಕ ಸಿ.ಬಿ.ಸುರೇಶ್ಬಾಬು ಅಧ್ಯಕ್ಷತೆ ವಹಿಸಲಿದ್ದು ತಾ.ಪಂ.ಅಧ್ಯಕ್ಷ ಕೆ.ಜಿ.ಮಲ್ಲಿಕಾಜರ್ುನಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಸಮಾರಂಭದಲ್ಲಿ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ವಿಶೇಷ ಉಪನ್ಯಾಸ ನೀಡಲಿದ್ದು ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತರ ಇಲಾಖಾಧಿಕಾರಿ ಸಿ.ಟಿ.ಮುದ್ದುಕುಮಾರ್ ಸಾಧಕರಿಗೆ ಸನ್ಮಾನಿಸಲಿದ್ದು ಪುರಸಭಾಧ್ಯಕ್ಷ ಸಿ.ಜಿ.ರಾಜಣ್ಣ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು, ವಿಧಾನ ಪರಿಷತ್ ಸದಸ್ಯರಾದ ಎ.ಎಚ್.ಶಿವಯೋಗಿಸ್ವಾಮಿ, ಎಂ.ಆರ್.ಹುಲಿನಾಯ್ಕರ್, ವೈ.ಎ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ಬಿ.ಲಕ್ಕಪ್ಪ, ಜೆ.ಸಿ.ಮಾಧುಸ್ವಾಮಿ, ಕೆ.ಎಸ್.ಕಿರಣ್ಕುಮಾರ್, ಇ.ಓ ದಯಾನಂದ್, ಸಿ.ಪಿ.ಐ ರವಿಪ್ರಸಾದ್, ಬಿ.ಇ.ಓ ಸಾ.ಚಿ.ನಾಗೇಶ್, ತಾ.ಪಂ.ಉಪಾಧ್ಯಕ್ಷೆ ಶಾಂತಮ್ಮ, ಪುರಸಭಾ ಉಪಾಧ್ಯಕ್ಷೆ ಕವಿತಾಚನ್ನಬಸವಯ್ಯ, ರಾ.ಸ.ನೌ.ಸಂಘದ ಅಧ್ಯಕ್ಷ ಆರ್.ಪರಶಿವಮೂತರ್ಿ, ಕನಕ ಯುವಕ ಸಂಘದ ಕಾರ್ಯದಶರ್ಿ ಕಣ್ಣಯ್ಯ ಉಪಸ್ಥಿತರಿರುವರು ಎಂದು ತಹಶೀಲ್ದಾರ್ ಟಿ.ಸಿ.ಕಾಂತರಾಜು ತಿಳಿಸಿದ್ದಾರೆ.

ಉಚಿತ ಬೆಡ್ಶೀಟ್ ಹಾಗೂ ಪುಸ್ತಕ ಕೊಡುಗೆ ಸಮಾರಂಭ
ಚಿಕ್ಕನಾಯಕನಹಳ್ಳಿ.ನ.23: ಉಚಿತ ಬೆಡ್ಶೀಟ್ ವಿತರಣೆ ಹಾಗೂ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಕಾರ್ಯಕ್ರಮವನ್ನು ಇದೇ 25ರ ಗುರುವಾರ ಮಧ್ಯಾಹ್ನ 12.45ಕ್ಕೆ ಏರ್ಪಡಿಸಲಾಗಿದೆ.
ಸಮಾರಂಭವನ್ನು ಇನ್ನರ್ವೀಲ್ ಕ್ಲಬ್ ಹಾಗೂ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ಏರ್ಪಡಿಸಿದ್ದು ಬಿ.ಸಿ.ಎಂ. ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾಥರ್ಿ ನಿಲಯದಲ್ಲಿ ಸಮಾರಂಭ ಹಮ್ಮಿಕೊಂಡಿದ್ದು ಶಾಸಕ ಸಿ.ಬಿ.ಸುರೇಶ್ಬಾಬು ಉದ್ಘಾಟನೆ ನೆರವೇರಿಸಲಿದ್ದು ಇನ್ನರ್ವೀಲ್ ಅಧ್ಯಕ್ಷೆ ನಾಗರತ್ನರಾವ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು ಜಿಲ್ಲಾ 319ರ ಇನ್ನರ್ವೀಲ್ ಚೇರ್ಮನ್ ರೇಣು ಅಯ್ಯರ್ ವಿದ್ಯಾಥರ್ಿನಿಯರಿಗೆ ಬೆಡ್ಶೀಟ್ ವಿತರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ತಾ.ಪಂ.ಅಧ್ಯಕ್ಷ ಕೆ.ಜಿ.ಮಲ್ಲಿಕಾಜರ್ುನಯ್ಯ, ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಸಿ.ಟಿ.ಮುದ್ದುಕುಮಾರ್, ಇ.ಓ ಎನ್.ಎಂ ದಯಾನಂದ್, ಉಪಸ್ಥಿತರಿರುವರು.