Tuesday, January 25, 2011







ಮತದಾರರು ಚುನಾವಣಾ ಘನತೆಯನ್ನು ಎತ್ತಿಹಿಡಿಯಬೇಕು: ತಹಶೀಲ್ದಾರ್
ಚಿಕ್ಕನಾಯಕನಹಳ್ಳಿ,ಜ.25: ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯಬೇಕು ಎಂದು ತಹಶೀಲ್ದಾರ್ ಟಿ.ಸಿ.ಕಾಂತರಾಜು ತಿಳಿಸಿದರು.
ಪಟ್ಟಣದ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮತದಾರರು ಪ್ರತಿಯೊಂದು ಚುನಾವಣೆಯಲ್ಲಿ ನಿಭರ್ೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತಭಾಷೆಗಳ ಯಾವುದೇ ಪ್ರೇರೇಪಣೆಗಳಿಂದ ದೂರವಿದ್ದು, ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸಬೇಕೆಂದು ತಮ್ಮ ಪ್ರತಿಜ್ಷಾ ವಿಧಿಯಲ್ಲಿ ತಿಳಿಸಿದರು.
ಸಿ.ಡಿ.ಪಿ.ಓ ಅನೀಸ್ ಖೈಸರ್ ಮಾತನಾಡಿ, ಪ್ರಜಾಪ್ರಭುತ್ವವನ್ನು ಬಲಪಡಿಸಲು, ಚುನಾವಣಾ ಪ್ರಕ್ರಿಯೆಗಳಲ್ಲಿ ಯುವ ಜನತೆ ತೊಡಗಿಸಿಕೊಳ್ಳಲು ಚುನಾವಣಾ ಗುರುತಿನ ಚೀಟಿ ಮುಖ್ಯವಾಗಿದೆ ಎಂದರಲ್ಲದೆ, ಚುನಾವಣೆಯ ಸಂದರ್ಭದಲ್ಲಿ ಮತ ಪಟ್ಟಿಯಲ್ಲಿ ಮತದಾರರ ಹೆಸರು ಇಲ್ಲದಿದ್ದಾಗ ಮತದಾರರಿಗೆ ಆಗುವ ಅನ್ಯಾಯವನ್ನು ಸರಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದರು. 18ವರ್ಷ ವಯಸ್ಸಿನ ಎಲ್ಲಾ ವಯಸ್ಕರಿಗೂ ಮತದಾರರ ಗುರುತಿನ ಚೀಟಿ ಪಡೆಯ ಬೇಕೆಂದರು.
ಸಮಾರಂಭದಲ್ಲಿ ತಾಪಂ,ಇ.ಓ. ಎನ್.ಎಂ.ದಯಾನಂದ್, ಪುರಸಭಾ ಉಪಾಧ್ಯಕ್ಷೆ ಕವಿತಾಚನ್ನಬಸವಯ್ಯ, ಬಿ.ಇ.ಓ ಸಾ.ಚಿ.ನಾಗೇಶ್, ಪುರಸಭೆ ಮುಖ್ಯಾಧಿಕಾರಿ ಹೊನ್ನಪ್ಪ ಉಪಸ್ಥಿತರಿದ್ದರು.
ಲೋಕ ಶಿಕ್ಷಣ ಕೇಂದ್ರಗಳು, ಗ್ರಾಮದ ಮಾಹಿತಿ ಕೇಂದ್ರಗಳು
ಚಿಕ್ಕನಾಯಕನಹಳ್ಳಿ,ಜ.25: ಗ್ರಾಮಗಳ ಅಭಿವೃದ್ದಿಗಾಗಿ ಗ್ರಾಮಗಳ ವಯಸ್ಕರಿಗೆ ಸಾಕ್ಷರತೆ ಮತ್ತು ಕೌಶಲ್ಯಾಭಿವೃದ್ದಿ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಭಾರತ ಸಕರ್ಾರ ಸಾಕ್ಷರ್ ಭಾರತ್ ಎಂಬ ಕಾರ್ಯಕ್ರಮ ಏರ್ಪಡಿಸಿದೆ ಎಂದು ಜಿಲ್ಲಾ ವಯಸ್ಕ ಶಿಕ್ಷಣಾಧಿಕಾರಿ ರಾಜ್ಕುಮಾರ್ ಹೇಳಿದರು.
ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸಾಕ್ಷರ್ ಭಾರತ್ 2012 ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಲೋಕ ಶಿಕ್ಷಣ ಕೇಂದ್ರವನ್ನು ಸ್ಥಾಪಿಸಲಾಗಿದ್ದು ಪುಸ್ತಕಗಳು, ದಿನಪತ್ರಿಕೆಗಳು, ನಿಯತಕಾಲಿಕೆಗಳು ಹಾಗೂ ಮಾಹಿತಿ ಪತ್ರ ಮುಂತಾದವುಗಳನ್ನೊಳಗೊಂಡ ಗ್ರಂಥಾಲಯವನ್ನು ತೆರೆಯಲಾಗಿದ್ದು ಆಧುನಿಕ ಸೌಲಭ್ಯಗಳನ್ನು ಸುಸಜ್ಜಿತಗೊಳಿಸಲಾಗುತ್ತದೆ ಎಂದರು.
ತಾ.ಪಂ.ಅಧ್ಯಕ್ಷ ಕೆ.ಜಿ.ಮಲ್ಲಿಕಾಜರ್ುನಯ್ಯ ಮಾತನಾಡಿ ಗ್ರಾಮಗಳಲ್ಲಿರುವ ಜನರು ತಮ್ಮ ಹಳ್ಳಿಗಳಲ್ಲಿನ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಪಂಚಾಯ್ತಿ ವ್ಯಾಪ್ತಿಯಲ್ಲಿ ಸಾಕ್ಷರರಾಗಲು ತಿಳಿಸಿದ ಅವರು ದೇಶ ಪ್ರಗತಿ ಹೊಂದಲು ಸಹಕರಿಸಬೇಕು ಎಂದರು.
ಸಮಾರಂಭದಲ್ಲಿ ತಹಶೀಲ್ದಾರ್ ಟಿ.ಸಿ.ಕಾಂತರಾಜು, ತಾ.ಪಂ,ಇ.ಓ. ಎನ್.ಎಂ.ದಯಾನಂದ್, ಬಿ.ಇ.ಓ ಸಾ.ಚಿ.ನಾಗೇಶ್ ಸಿ.ಡಿ.ಪಿ.ಓ ಅನೀಸ್ಖೈಸರ್ ಉಪಸ್ಥಿತರಿದ್ದರು.

No comments:

Post a Comment