Sunday, February 6, 2011


ತಾಲೂಕಿನಲ್ಲಿ ರಾಜ್ಯ ಸಕರ್ಾರಿ ನೌಕರರ ಸಂಘದ ಬೃಹತ್ ಬಹಿರಂಗ ಸಭೆ
ಚಿಕ್ಕನಾಯಕನಹಳ್ಳಿ,ಫೆ.06: ತಾಲೂಕು ಸಕರ್ಾರಿ ನೌಕರರ ಬೃಹತ್ ಬಹಿರಂಗ ಸಭೆಯನ್ನು ಇದೇ 9ರ ಬುಧವಾರ ಮಧ್ಯಾಹ್ನ 1.35ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಸಕರ್ಾರಿ ನೌಕರರ ಸಂಘದ ಅಧ್ಯಕ್ಷ ಆರ್.ಪರಶಿವಮೂತರ್ಿ ತಿಳಿಸಿದ್ದಾರೆ.
ಬಹಿರಂಗ ಸಭೆಯನ್ನು ತಾಲೂಕು ಕಛೇರಿ ಮುಂಭಾಗದಲ್ಲಿ ಹಮ್ಮಿಕೊಂಡಿದ್ದು ಈ ಸಂದರ್ಭದಲ್ಲಿ ನೌಕರರ ಹಲವು ಬೇಡಿಕೆಗಳಾದ ಕೇಂದ್ರ ಸಕರ್ಾರ ತನ್ನ ನೌಕರರಿಗೆ ಜಾರಿಗೊಳಿಸಿರುವ ವೇತನ ಭತ್ಯೆ ಹಾಗೂ ಇತರೆ ಸೌಲಭ್ಯಗಳನ್ನು ರಾಜ್ಯ ಸಕರ್ಾರಿ ನೌಕರರಿಗೂ ಜಾರಿಗೊಳಿಸುವುದು, ಕೇಂದ್ರ ಸಕರ್ಾರಕ್ಕನುಗುಣವಾಗಿ ರಾಜ್ಯ ಸಕರ್ಾರಿ ನೌಕರರಿಗೂ ಮನೆ ಬಾಡಿಗೆ ಹಾಗೂ ನಗರ ಪರಿಹಾರ ಭತ್ಯೆಗಳನ್ನು ಮಂಜೂರು ಮಾಡುವುದು, ವಗರ್ಾವಣೆ ಬಗ್ಗೆ ಕಾಯಿದೆ ರೂಪಿಸುವುದು, ಆರೋಗ್ಯ ಭಾಗ್ಯ ಯೋಜನೆ ಅಡಿಯಲ್ಲಿ ಸಕರ್ಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ಯೋಜನೆ ಮಾಡುವುದು, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಕರ್ಾರಿ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀಖಿನ ಒಳಗೆ ವೇತನ ಪಾವತಿಸುವುದು, ರಾಜ್ಯ ಸಕರ್ಾರಿ ನೌಕರರ ಮಕ್ಕಳು ಶಾಲಾ ಕಾಲೇಜುಗಳಲ್ಲಿ ಪ್ರವೇಶ ಪಡೆಯುವಾಗ ಮೀಸಲಾತಿ ಪಡೆಯಲು ವರಮಾನದ ಮಿತಿ ಬಹಳ ಹಿಂದೆ ನಿಗದಿಪಡಿಸಲಾಗಿದ್ದು ಕೇಂದ್ರ ಸಕರ್ಾರದ ಮಾದರಿಯಲ್ಲಿಯೇ ವರಮಾನ ಮಿತಿ ಹೆಚ್ಚಿಸುವುದು, ಸೇವಾವಧಿಯ ಅಂತಿಮ ವರ್ಷದ ಸೇವೆಯನ್ನು ಪರಿಗಣಿಸಿ ವಾಷರ್ಿಕ ಮುಂಬಡ್ತಿಯನ್ನು ನೀಡುವುದು, ಸ್ಥಗಿತ ವೇತನ ಬಡ್ತಿಗಳನ್ನು ಹೆಚ್ಚಿಸುವುದು, ಸ್ಥಗಿತ ವೇತನ ಮುಂಬಡ್ತಿಗಳನ್ನು ವೇತನ ಶ್ರೇಣಯ ಕೊನೆಯ ಹಂತದ ವಾಷರ್ಿಕ ಮುಂಬಡ್ತಿಯನ್ನು ನೀಡುವುದರ ಬದಲು ಮುಖ್ಯ ವೇತನ ಶ್ರೇಣಿಯನ್ವಯ ನಂತರದ ಮುಂದಿನ ಹಂತಕ್ಕೆ ಸಮನಾದ ಮುಂಬಡ್ತಿಯನ್ನು ನೀಡುವುದು, ಸಕರ್ಾರಿ ನೌಕರರ ತಂದೆ-ತಾಯಿಗಳು ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಪಡೆಯಲು ನಿಗದಿಪಡಿಸಿದ್ದ 4ಸಾವಿರ ಮಾಸಿಕ ಪಿಂಚಣಿ ನಿರ್ಭಂದವನ್ನು ಸಡಿಲಿಸಿ ಪಿಂಚಣಿ ಪರಿಷ್ಕರಿಸಿದಂತೆ ಅವರ ಮಾಸಿಕ ಆದಾಯವನ್ನು ಪರಿಷ್ಕರಿಸುವುದು ಹಾಗೂ ವೈದ್ಯಕೀಯ ವೆಚ್ಚ ಮರುಪಾವತಿಯ ಸಂದರ್ಭದಲ್ಲಿ ಅವಲಂಬಿತರು ಎಂಬ ಬಗ್ಗೆ ದೃಡೀಕರಣಕ್ಕಾಗಿ ಕುಟುಂಬ ಆಹಾರ ಪಡಿತರ ಚೀಟಿಯನ್ನು ಪರಿಗಣಿಸವುದು ಸೇರಿದಂತೆ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ತಾಲೂಕಿನ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಲು ಕೋರಿದ್ದಾರೆ ಹಾಗೂ ಪಟ್ಟಣದ ನೌಕರರು ಮಧ್ಯಾಹ್ನ ಉಪಹಾರದ ಸಮಯದಲ್ಲಿ ಮಾತ್ರ ಬಹಿರಂಗ ಸಭೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಕೋರಿದ್ದಾರೆ.
ಕುಪ್ಪೂರ್ ಗೋಪಾಲ್ ನಿಧನಕ್ಕೆ ಡಾ.ಅಭಿನವ ಮಲ್ಲಿಕಾರ್ಜನ ಶ್ರೀಗಳ ಸಂತಾಪ
ಚಿಕ್ಕನಾಯಕನಹಳ್ಳಿ,ಫೆ.6: ಸ್ವತಂತ್ರ ಹೋರಾಟಗಾರ ಹಾಗೂ ಹಿರಿಯ ಪತ್ರಕರ್ತ ಕುಪ್ಪೂರು ಗೋಪಾಲ್ ರವರ ನಿಧನಕ್ಕೆ ಕುಪ್ಪೂರು ತಮ್ಮಡಿಹಳ್ಳಿ ವಿರಕ್ತಮಠದ ಅಧ್ಯಕ್ಷ ಡಾ.ಅಭಿನವ ಮಲ್ಲಿಕಾರ್ಜನ ಸ್ವಾಮಿ ಸಂತಾಪ ಸೂಚಿಸಿದ್ದಾರೆ.
ವಿದ್ಯಾಥರ್ಿ ದೆಸೆಯಲ್ಲಿ ಸ್ವತಂತ್ರ ಹೋರಾಟದಲ್ಲಿ ಭಾಗವಹಿಸುವ ಮೂಲಕ ದೇಶಾಭಿಮಾನವನ್ನು ಬೆಳಸಿಕೊಂಡಿದ್ದ ಶ್ರೀಯುತರು ಸ್ವಾತಂತ್ರಾನಂತರದಲ್ಲಿ ಪತ್ರಿಕೆಗಳಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಪತ್ರಿಕೆಗಳಲ್ಲಿ ಲೇಖನ ಬರೆಯುವ ಮೂಲಕ ಆಳುವ ವರ್ಗದ ಕಣ್ಣು ತೆರೆಸಿದ್ದ ಇವರ ಸಾಮಾಜಿಕ ಕಾಳಜಿಯ ಬಗ್ಗೆ ಮೆಚ್ಚುಗೆ ಸೂಚಿಸಿದ ಅವರು, ತಾಲೂಕಿನ ಹಿರಿಯ ಪತ್ರಕರ್ತರ ಗುಂಪಿನಲ್ಲಿ ಕೊನೆಯ ಕೊಂಡಿಯೊಂದು ಕಳಜಿದಂತಾಗಿದೆ ಎಂದಿದ್ದಾರೆ.
60 ವರ್ಷಗಳ ಸುದೀರ್ಘಕಾಲ ಪತ್ರಿಕಾ ವ್ಯವಸಾಯದಲ್ಲಿ ತೊಡಗಿಸಿಕೊಂಡಿದ್ದ ಗೋಪಾಲ್ ಅವರ ನಿಷ್ಠೆಯನ್ನು ಶ್ಲಾಘಿಸಿದ್ದಾರೆ. ದಯಾಮಯನಾದ ಭಗವಂತ ಅವರ ಕುಟುಂಬಕ್ಕೆ ಹಾಗೂ ಅವರ ಹಿತೈಷಿಗಳಿಗೆ ಅವರ ಅಗಲಿಕೆಯ ದುಃಕಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದರು.

No comments:

Post a Comment