Thursday, June 23, 2011



ಮಕ್ಕಳ ಶಿಕ್ಷಣಕ್ಕೆ ಬೇಕಾಗುವ ಸಲಕರಣೆಗಳನ್ನು ಸಂಘ ಸಂಸ್ಥೆಗಳು ನೀಡಲಿ ; ಕ್ಯಾಪ್ಟನ್ ಸೋಮಶೇಖರ್
ಚಿಕ್ಕನಾಯಕನಹಳ್ಳಿ,ಜೂ.23 : ಮಕ್ಕಳ ಶಿಕ್ಷಣಕ್ಕೆ ಬೇಕಾಗುವ ಸಲಕರಣೆಗಳನ್ನು ಸಂಘ ಸಂಸ್ಥೆಗಳು ಒದಗಿಸುವ ಮೂಲಕ ಮಕ್ಕಳಿಗೆ ಶಿಕ್ಷಣಾಸಕ್ತಿಯನ್ನು ಹೆಚ್ಚಿಸಿ ಅವರ ಮಂದಿನ ಭವಿಷ್ಯವನ್ನು ಬೆಳಗುವಂತಹ ದಾರಿಯಲ್ಲಿ ಕರೆದೊಯ್ಯಬೇಕು ಎಂದು ಕುರುಬರಶ್ರೇಣಿ ಹಿರಿಯ ವಿದ್ಯಾಥರ್ಿಗಳ ಸಂಘದ ಗೌರವಾಧ್ಯಕ್ಷ ಕ್ಯಾಪ್ಟನ್ ಸೋಮಶೇಖರ್ ಅಭಿಮತ ವ್ಯಕ್ತಪಡಿಸಿದರು.
ಪಟ್ಟಣದ ಲಕ್ಷ್ಮೀದೇವಾಲಯ ಆವಣರಣದಲ್ಲಿ ಕುರುಬರ ಶ್ರೇಣಿ ಶಾಲೆಯ ಹಿರಿಯ ವಿದ್ಯಾಥರ್ಿಗಳ ಸಂಘದ ವತಿಯಿಂದ ಶಾಲೆಯ ಬಡವಿದ್ಯಾಥರ್ಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ವಿತರಿಸಿ ಮಾತನಾಡಿದ ಅವರು ಬಡತನ ರೇಖೆಯಲ್ಲಿರುವ ಮಕ್ಕಳೇ ಹೆಚ್ಚಾಗಿ ಸಕರ್ಾರಿ ಶಾಲೆಗೆ ಸೇರುವವರಿದ್ದು , ಅದರಲ್ಲೂ ಪುಸ್ತಕ ಲೇಖನ ಸಾಮಗ್ರಿ ಕೊಳ್ಳಲು ಆಗದಂತಹ ಕುಟುಂಬಗಳಿಗೆ ನಮ್ಮ ಸಂಘ ನೆರವಾಗಲಿದೆ ಅಂತಹ ವಿದ್ಯಾಥರ್ಿಗಳ ಬಗ್ಗೆ ಆ ಶಾಲೆಯ ಶಿಕ್ಷಕರು ಹೆಸರುಗಳನ್ನು ಸೂಚಿಸಿದರೆ ಬಡ ವಿದ್ಯಾಥರ್ಿಗಳಿಗೆೆ ಸಂಘದ ವತಿಯಿಂದ ಸೌಲಭ್ಯ ನೀಡುವ ಆಶಯ ವ್ಯಕ್ತಪಡಿಸಿ, ದೇಶ ಕಾಯುವಂತಹ ಸೇನೆಯಲ್ಲಿ ವಿದ್ಯಾಥರ್ಿಗಳು ಹೆಚ್ಚು ಆಸಕ್ತಿ ತೋರಿಸಬೇಕು ಎಂದ ಅವರು ನಾವು ಓದಿದ ಶಾಲೆಯಲ್ಲಿನ ವಿದ್ಯಾಥರ್ಿಗಳು ಮುಂದೆ ಉನ್ನತ ಹುದ್ದೆಗಳನ್ನು ಹೊಂದುವಂತಹ ಮಕ್ಕಳು ತಯಾರು ಆಗಲಿ ಎಂಬ ಉದ್ದೇಶದಿಂದ ಹಿರಿಯ ವಿದ್ಯಾಥರ್ಿಗಳ ಸಂಘ ಉದಯವಾಗಿರುವುದು, ಈ ಮೂಲಕ ಉತ್ತಮ ಸಮಾಜ ನಿಮರ್ಾಣಸಾದ್ಯ ಎಂಬ ಉದ್ದೆಶವನ್ನು ಸಂಘ ಹೊಂದಿದೆ ಎಂದರು.
ಹಿರಿಯ ವಿದ್ಯಾಥರ್ಿಗಳ ಸಂಘದ ಅಧ್ಯಕ್ಷ ಜಿ.ರಂಗಯ್ಯ ಮಾತನಾಡಿ ಶಿಕ್ಷಣ ಕಲಿಕೆಯಿಂದ ಮೇಲೆ ಬಂದ ವಿದ್ಯಾಥರ್ಿಗಳು ಉನ್ನತ ಸ್ಥಾನವನ್ನೇರಿದರೂ, ತಾವು ಓದಿದ ಶಾಲೆಯ ಮಕ್ಕಳಿಗೆ ಸೇವೆ ಮಾಡುವುದರ ಮೂಲಕ ಶಿಕ್ಷಣ ಕಲಿಯುವ ಮಕ್ಕಳಿಗೆ ಮಾದರಿಯಾಗಬೇಕು ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಸುಧಾಕರ್ ಮಾತನಾಡಿ ಶಾಲಾ ಆವರಣ ಸ್ವಚ್ಛತೆಯಿಂದ ಕೂಡಿದ್ದು ಶಾಲಾ ಸಿಬ್ಬಂದಿಗಳಲ್ಲಿ ಹೊಂದಾಣಿಕೆಯಿದ್ದರೆ ಮಾತ್ರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಾಧ್ಯ ಎಂದರು.
ಇ.ಸಿ.ಓ. ಅಧಿಕಾರಿ ಮರುಳಾನಾಯ್ಕ ಮಾತನಾಡಿ ಮಕ್ಕಳಿಗೆ ನಿರಂತರ ಬರವಣಿಗೆಯ ಅಭ್ಯಾಸವು ರೂಢಿಯಾದರೆ ಶಿಕ್ಷಣ ನಿರಗ್ರ್ರಳವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಹಿರಿಯ ವಿದ್ಯಾಥರ್ಿಗಳ ಸಂಘದ ಕಾರ್ಯದಶರ್ಿ ಕೆ.ಜಿ.ರಾಜೀವಲೋಚನ, ಶಂಕರಪ್ಪ, ಮಿಲ್ಟ್ರಿ ಶಿವಣ್ಣ, ದುರ್ಗಯ್ಯ, ಮುಖ್ಯ ಶಿಕ್ಷಕಿ ಶಾಂತಮ್ಮ ಉಪಸ್ಥಿತರಿದ್ದರು.
ಲಾವಣ್ಯ ಸಂಗಡಿಗರು ಪ್ರಾಥರ್ಿಸಿದರು. ಶಿವಕುಮಾರ್ ಸ್ವಾಗತಿಸಿ, ನಿರೂಪಿಸಿದರೆ ಶಾಂತದುರ್ಗಯ್ಯ ವಂದಿಸಿದರು.

ಕನ್ನಡ ಕಾರ್ಯಗಾರ ಮುಂದೂಡಿಕೆ
ಚಿಕ್ಕನಾಯಕನಹಳ್ಳಿ,ಜೂ.23 ; ತಾಲ್ಲೂಕು ಪ್ರೌಡಶಾಲಾ ಕನ್ನಡ ಭಾಷಾ ಬೋಧಕರ ಸಂಘದ ವತಿಯಿಂದ ಏರ್ಪಡಿಸಿದ್ದ ಕನ್ನಡ ಕಾರ್ಯಗಾರವನ್ನು ಎಸ್.ಎಸ್.ಎಲ್.ಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯವಿರುವುದರಿಂದ ಕಾರ್ಯಗಾರವನ್ನು ಮುಂದೂಡಲಾಗಿದೆ ಎಂದು ಬಿ.ಇ.ಓ ಸಾ.ಚಿ.ನಾಗೇಶ್ ತಿಳಿಸಿದ್ದಾರೆ.
ಕ್ಷೇತ್ರಶಿಕ್ಷಣಾಧಿಕಾರಿಗಳ ಕಾಯರ್ಾಲಯ ಹಾಗೂ ತಾಲ್ಲೂಕು ಪ್ರೌಡಶಾಲಾ ಕನ್ನಡ ಭಾಷಾ ಬೋಧಕರ ಸಂಘದ ವತಿಯಿಂದ ಜೂನ್ 27ರ ಸೋಮವಾರ ಹುಳಿಯಾರಿನ ಟಿ.ಎಸ್.ಆರ್.ಎಸ್ ಪ್ರೌಡಶಾಲೆಯಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು, ಆದರೆ ಜೂನ್ನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯ ಜೂನ್ 27ರಿಂದ ಆರಂಭಗೊಳ್ಳುವುದರ ಹಿನ್ನೆಲೆಯಲ್ಲಿ ಕಾರ್ಯಗಾರವನ್ನು ಮುಂದೂಡಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

No comments:

Post a Comment