Friday, January 14, 2011

ಪಲ್ಸ್ ಪೊಲೀಯೊ ಯಶಸ್ವಿಗೆ ಸಕಲ ಸಿದ್ದತೆ: ತಹಶೀಲ್ದಾರ್
ಚಿಕ್ಕನಾಯಕನಹಳ್ಳಿ.ಜ.14: ಇದೇ 23 ಹಾಗೂ ಫೆಬ್ರವರಿ 27 ಈ ಎರಡು ದಿನಗಳು ಪೊಲೀಯೋ ಲಸಿಕೆಯನ್ನು ಮಕ್ಕಳಿಗೆ ಹಾಕಲಾಗುವುದು, ಈ ಪಲ್ಸ್ ಪೋಲಿಯೋ ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು ಇದರ ಯಶಸ್ವಿಗೆ ಸಾರ್ವಜನಿಕರು, ಸಕರ್ಾರಿ ಇಲಾಖೆಗಳು, ಸಂಘಸಂಸ್ಥೆಗಳು ಸೇರಿದಂತೆ ಎಲ್ಲರೂ ಕೈಜೋಡಿಸಬೇಕೆಂದು ತಹಶೀಲ್ದಾರ್ ಟಿ.ಸಿ.ಕಾಂತರಾಜು ಕೋರಿದರು.
ಪಲ್ಸ್ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ನೂರಕ್ಕೆ ನೂರರಷ್ಟು ಪೋಲಿಯೋ ಹನಿಯನ್ನು ಹಾಕಿಸಲು ಎಲ್ಲಾ ಅಧಿಕಾರಿಗಳು ಸಿಬ್ಬಂದಿಗಳು, ಎಲ್ಲಾ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ನಾಗರೀಕರು ಸಹಕರಿಸಬೇಕೆಂದು ಕೋರಿದ ಅವರು, ಅಂಗನವಾಡಿ ಕೇಂದ್ರದ ಸಿಬ್ಬಂದಿ, ಬೆಸ್ಕಾಂನವರು ಹಾಗೂ ಲಸಿಕೆಗೆ ಸರಬರಾಜು ಮಾಡುವ ಆರೋಗ್ಯ ಇಲಾಖೆಯವರು, ವಾಕ್ಸನ್ ಮತ್ತು ಅದಕ್ಕೆ ಬೇಕಾದ ಪರಿಕರಗಳನ್ನು ತಲುಪಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ವಾಹನಗಳನ್ನು ಹೊಂದಿರುವ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ಕೋರಲಾಯಿತು. ವಾಹನಗಳು 22ರ ಸಂಜೆಯೇ ತಾಲೂಕು ಆರೋಗ್ಯಾಧಿಕಾರಿಗಳ ಬಳಿ ಹಾಜರಾಗುವಂತೆ ತಿಳಿಸಲಾಯಿತು.
ಯಾವ ಅಂಗನವಾಡಿ ಕೇಂದ್ರಗಳಲ್ಲಿ ಪಲ್ಸ್ ಪೋಲಿಯೋ ಬೂತ್ಗಳನ್ನು ಸ್ಥಾಪಿಸಲಾಗುವುದೋ ಅಂತಹ ಕೇಂದ್ರಗಳಲ್ಲಿ ಅಂಗನವಾಡಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಇಲಾಖೆಯ ಒಬ್ಬರು ಖಡ್ಡಾಯವಾಗಿ ಹಾಜರಿದ್ದರು ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ನಡೆಸಬೇಕೆಂದು ಸಭೆಯಲ್ಲಿ ತೀಮರ್ಾನಿಸಲಾಯಿತು.
ತಾ.ಪಂ. ಇ.ಓ, ನಡೆಯುವ ಪಲ್ಸ್ ಪೋಲಿಯೋ ಬೂತ್ಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ಊಟದ ತೊಂದರೆಯಾಗುವುದರಿಂದ ಗ್ರಾಮ ಪಂಚಾಯತಿಯವರು ಈ ಜವಬ್ಚಾರಿಯನ್ನು ಹೊತ್ತು ಆಹಾರ ಸರಬರಾಜು ಮಾಡುವಂತೆ ತೀಮರ್ಾನಿಸಲಾಯಿತು.
ಬೂತ್ ಹಾಗೂ ಮನೆಗಳ ಸವರ್ೆ ಕಾರ್ಯ ನಿರ್ವಹಣೆಯಲ್ಲಿ ಅಂಗನವಾಡಿ ಕಾರ್ಯಕತರ್ೆಯರು ಹಾಗೂ ಆಶಾ ಕಾರ್ಯಕತರ್ೆಯರ ನಿಯೋಜನೆಯಲ್ಲಿ ಉಂಟಾಗಿರುವ ಸಮಸ್ಯೆ ನಿವಾರಣೆ ಬಗ್ಗೆ ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಶಿಶು ಅಭಿವೃದ್ದಿ ಅಧಿಕಾರಿಗಳು ಚಚರ್ಿಸಿ ತೀಮರ್ಾನ ತೆಗೆದುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಶಾಲೆಯ ಮಕ್ಕಳನ್ನು ಸೇರಿಸಿ ಪಲ್ಸ್ ಪೋಲಿಯೋ ಬಗ್ಗೆ ಜಾಗೃತಿ ಜಾಥಾವನ್ನು ಮಾಡಲು ಮತ್ತು ಪ್ರತಿ ಹೋಬಳಿ ಮಟ್ಟದ ಶಾಲೆಗಳಲ್ಲೂ ಬಿ.ಇಓ ರವರ ಅನುಮತಿ ಪಡೆದು ಶಾಲಾ ಮಕ್ಕಳಿಂದ ಜಾಥಾ ಕಾರ್ಯಮಾಡಿ ಜಾಗೃತಿ ಮೂಡಿಸಲು ತೀಮರ್ಾನಿಸಲಾಯಿತು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಅಗತ್ಯ ಕರ ಪತ್ರಗಳನ್ನು ಮುದ್ರಿಸಿ ಸರಬರಾಜು ಮಾಡುವ ಜವಬ್ದಾರಿಯನ್ನು ಪುರಸಭೆಗೆ ವಹಿಸಲಾಯಿತು ಮತ್ತು ಸ್ಕೌಟ್ಸ್ ಗೈಡ್ಸ್ ವಿದ್ಯಾಥರ್ಿಗಳನ್ನು ಬಳಸಿಕೊಳ್ಳುವಂತೆ ತೀಮರ್ಾನಿಸಲಾಯಿತು.
ಸಭೆಯಲ್ಲಿ ಡಾ.ಶಿವಕುಮಾರ್,


ಚಿಕ್ಕನಾಯಕನಹಳ್ಳಿ,ಜ.14: ರಾಷ್ಟ್ರಕವಿ ಕುವೆಂಪು-ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಇದೇ 17ರಸೋಮವಾರ ತಾ.ಕಸಾಪ, ಹಾಗೂ ಪತ್ರಕರ್ತರ ಸಂಘ ಮತ್ತು ಮಲ್ಲಿಕಾಜರ್ುನ ಡಿ.ಇಡಿ ಕಾಲೇಜು ಇವರಗಳ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 11ಕ್ಕೆ ಏರ್ಪಡಿಸಲಾಗಿದೆ.
ಸಮಾರಂಭವನ್ನು ಪಟ್ಟಣದ ಬಿ.ಆರ್.ಸಿ ಸಭಾಂಗಣದಲ್ಲಿ ಏರ್ಪಡಿಸಿದ್ದು ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮೀ ವಿರೇಶಾನಂದಜೀ ಕುವೆಂಪು ಕಂಡಂತೆ ರಾಮಕೃಷ್ಣ-ವಿವೇಕಾನಂದರು ಎಂಬ ವಿಷಯವಾಗಿ ಮಾತನಾಡಲಿದ್ದಾರೆ.
ತಾ.ಕಸಾಪ ಅಧ್ಯಕ್ಷ ಎಂ.ವಿ.ನಾಗರಾಜ್ರಾವ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು ಮಲ್ಲಿಕಾಜರ್ುನ ಡಿ.ಇಡಿ ಕಾಲೇಜಿನ ಪ್ರಾಂಶುಪಾಲ ಎಂ.ವಿ.ರಾಜಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ, ಬಿ.ಇ.ಓ ಸಾ.ಚಿ.ನಾಗೇಶ್ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ.
ಸಮಾರಂಭದಲ್ಲಿ ತಾ.ಕಾ.ನಿ.ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಜಿ.ರಾಜೀವಲೋಚನ ಮತ್ತು ಬಿ.ಆರ್.ಸಿ ಎನ್.ಎಸ್.ಸುಧಾಕರ್ರವರು ಪ್ರತಿಭಾ ಸನ್ಮಾನವನ್ನು ನಡೆಸಿಕೊಡಲಿದ್ದಾರೆ.