Sunday, January 23, 2011

ಸಂಗೊಳ್ಳಿರಾಯಣ್ಣ ಹುತಾತ್ಮ ದಿನದ ನೆನಪಿಗಾಗಿ ನೇಕಾರರಿಗೆ ಸವಲತ್ತು ವಿತರಣೆ ಕಾರ್ಯಕ್ರಮ
ಚಿಕ್ಕನಾಯಕನಹಳ್ಳಿ,ಜ.23: ಸಂಗೊಳ್ಳಿರಾಯಣ್ಣ ಹುತಾತ್ಮ ದಿನದ ನೆನಪಿನ ಅಂಗವಾಗಿ ನೇಕಾರರಿಗೆ ವಿವಿಧ ಸವಲತ್ತುಗಳ ವಿತರಣೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಸಮಾರಂಭವನ್ನು ಇದೇ 26ರ ಮಧ್ಯಾಹ್ನ 3ಕ್ಕೆ ಏರ್ಪಡಿಸಲಾಗಿದೆ.
ಸಮಾರಂಭವನ್ನು ರೇವಣಸಿದ್ದೇಶ್ವರ ಕಂಬಳಿ ಸೊಸೈಟಿಯಲ್ಲಿ ಹಮ್ಮಿಕೊಂಡಿದ್ದು ಶಾಸಕ ಸಿ.ಬಿ.ಸುರೇಶ್ಬಾಬು ಉದ್ಘಾಟನೆ ನೆರವೇರಿಸಲಿದ್ದು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಟಿ.ಎಂ.ನಂಜರಾಜು ಚುನಾಯಿತರಿಗೆ ಸನ್ಮಾನಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ವ್ಯವಸ್ಥಾಪಕ ಕುಮಾರಸ್ವಾಮಿ ನೇಕಾರರ ಗುತರ್ಿನ ಚೀಟಿ ವಿತರಿಸಲಿದ್ದು ಕಂಬಳಿ ಸೊಸೈಟಿ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಸಾಪ ಕಾರ್ಯದಶರ್ಿ ಸಿ.ಗುರುಮೂತರ್ಿ ನುಡಿ ನಮನ ಮಾಡಲಿದ್ದು ಪುರಸಭಾಧ್ಯಕ್ಷ ರಾಜಣ್ಣ ಷೇರು ಪತ್ರ ವಿತರಿಸಲಿದ್ದು ರೋಟರಿ ಕ್ಲಬ್ ಅಧ್ಯಕ್ಷ ಎನ್.ಶ್ರೀಕಂಠಯ್ಯ ನೋಟ್ ಪುಸ್ತಕ ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾ.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಬಸವರಾಜು, ಬಿ.ಜೆ.ಪಿ ಅಧ್ಯಕ್ಷ ಮಿಲ್ಟ್ರೀ ಶಿವಣ್ಣ, ಅಹಿಂದ ರಾಜ್ಯ ಸಂಚಾಲಕ ಚಿ.ಲಿಂ.ರವಿಕುಮಾರ್, ತಾ.ಪ.ಕಾ.ನಿ. ಸಂಘದ ಕಾರ್ಯದಶರ್ಿ ಸಿ.ಹೆಚ್.ಚಿದಾನಂದ್, ಜಿಲ್ಲಾ,ಕ.ರ.ವೇ ಕಾರ್ಯದಶರ್ಿ ಟಿ.ಈ.ರಘುರಾಮ್, ತಾ.ಕ.ರ.ವೇ ಅಧ್ಯಕ್ಷ ಸಿ.ಟಿ.ಗುರುಮೂತರ್ಿ, ಸ.ನೌ.ಸಂ.ಅಧ್ಯಕ್ಷ ಪರಶಿವಮೂತರ್ಿ, ಕ.ಭ.ಸಮಿತಿ ಅಧ್ಯಕ್ಷ ಸಿ.ಎಸ್.ಬಸವರಾಜು, ಕ.ಯು.ಕ್ರೀ.ಕ.ಸಂಘದ ಅಧ್ಯಕ್ಷ ಸಿ.ಬಿ.ಲೋಕೇಶ್, ಕಂಬಳಿ ಸೊಸೈಟಿ ಉಪಾಧ್ಯಕ್ಷ ಸಿ.ಕೆ.ಲೋಕೇಶ್, ನಿದರ್ೇಶಕರುಗಳಾದ ಸಿ.ಹೆಚ್.ಅಳವೀರಯ್ಯ, ಸಿ.ಎಂ.ಬೀರಲಿಂಗಯ್ಯ, ಸಿ.ಎನ್.ವಿಜಯ್ಕುಮಾರ್, ಆರ್.ಜಿ.ಗಂಗಾಧರಯ್ಯ, ಗೋವಿಂದಯ್ಯ, ಭಾರತಿ ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ನೇಕಾರ ಸಮಾಜದ ಪ್ರತಿನಿಧಿಗಳಾದ ಜಿ.ಪಂ.ಸದಸ್ಯೆ ಎನ್.ಜಿ.ಮಂಜುಳ, ತಾ.ಪಂ.ಸದಸ್ಯರುಗಾಳದ ಡಿ.ಶಿವರಾಜು, ಎ.ಬಿ.ರಮೇಶ್ಕುಮಾರ್, ಉಮಾದೇವಿ, ಜಯಲಕ್ಷಮ್ಮ ರವರಿಗೆ ಸನ್ಮಾನಿಸಲಾಗುವುದು.
ಜಿಲ್ಲಾ ಮಟ್ಟದ ಜಾನಪದ, ಭಾವಗೀತೆ ಹಾಗೂ ಚಲನಚಿತ್ರ ಗೀತೆ ಸ್ಪಧರ್ೆ
ಚಿಕ್ಕನಾಯಕನಹಳ್ಳಿ,ಜ.22: ಜಿಲ್ಲಾ ಮಟ್ಟದ ಜಾನಪದ ಗೀತೆ, ಭಾವಗೀತೆ ಮತ್ತು ಚಲನಚಿತ್ರ ಗೀತೆ ಸ್ಪಧರ್ೆಯನ್ನು ಇದೇ 26ರ ಬುಧವಾರ ಸಂಜೆ 4ಗಂಟೆಗೆ ಏರ್ಪಡಿಸಲಾಗಿದೆ.
62ನೇ ಗಣರಾಜ್ಯೋತ್ಸವದ ಅಂಗವಾಗಿ ಹಾಗೂ ಭುವನೇಶ್ವರ ಯುವಕ ಸಂಘದ 30ನೇ ವರ್ಷದ ವಾಷರ್ಿಕೋತ್ಸವದ ಸವಿನೆನಪಿಗಾಗಿ ಸ್ಪಧರ್ೆಗಳನ್ನು ಏರ್ಪಡಿಸಿದ್ದು ಜಾನಪದ ಗೀತೆ 1ರಿಂದ 7ನೇ ತರಗತಿ, ಭಾವಗೀತೆ ಸ್ಪಧರ್ೆ 8ರಿಂದ 10ನೇ ತರಗತಿ ಮತ್ತು ಚಲನಚಿತ್ರಗೀತೆ ಸ್ಪಧರ್ೆಯನ್ನು ಪದವಿ ಪೂರ್ವ ಕಾಲೇಜು ವಿದ್ಯಾಥರ್ಿಗಳಿಗೆ ಏರ್ಪಡಿಸಿದ್ದು ಆಸಕ್ತರು 9980163152 ನಂ.ಗೆ ಸಂಪಕರ್ಿಸಬಹುದು ಎಂದು ಕೋರಿದ್ದಾರೆ.