Friday, January 28, 2011





ಕುಷ್ಠ ರೋಗದ ನಿಮರ್ೂಲನೆಗೆ ಸಹಕರಿಸಿ
ಚಿಕ್ಕನಾಯಕನಹಳ್ಳಿ,ಜ.28: ಕುಷ್ಠರೋಗದ ಲಕ್ಷಣಗಳು ಕಂಡ ಬಂದ ಮೇಲೆಯೂ ರೋಗಿ ಶೀಘ್ರ ಚಿಕಿತ್ಸೆ ಪಡೆಯದೇ ರೋಗದ ಬಗ್ಗೆ ನಿಗಾವಹಿಸದಿದ್ದಲ್ಲಿ ರೋಗಿಯು ಅಂಗವಿಕಲತೆಗೆ ತುತ್ತಾಗುತ್ತಾನೆ ಎಂದು ಆರೋಗ್ಯಾಧಿಕಾರಿ ಶಿವಕುಮಾರ್ ಹೇಳಿದರು.
ಪಟ್ಟಣದ ಜ್ಞಾನಪೀಠ ಪ್ರೌಡಶಾಲಾ ಆವರಣದಲ್ಲಿ ರೋಟರಿ ಕ್ಚಬ್ ಹಾಗೂ ಸಾರ್ವಜನಿಕ ಆಸ್ಪತ್ರೆ ವತಿಯಿಂದ ನಡೆದ ರಾಷ್ಟ್ರೀಯ ಕುಷ್ಠರೋಗ ನಿವಾರಣಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುಷ್ಠರೋಗವನ್ನು ಸಾರ್ವಜನಿಕರು ತಮ್ಮ ನೆರಹೊರೆಯವರಲ್ಲಿ ಅರಿವು ಮೂಡಿಸಿ ಕುಷ್ಠರೋಗ ನಿಮರ್ೂಲನೆ ಮಾಡಬೇಕು ಎಂದರು.
ರೋಟರಿ ಅಧ್ಯಕ್ಷ ಎನ್.ಶ್ರೀಕಂಠಯ್ಯ ಕಾರ್ಯದಶರ್ಿ ಅಶ್ವತ್ಥ್ನಾರಾಯಣ್ ಮಾತನಾಡಿದರು.
ಸಮಾರಂಭದಲ್ಲಿ ರೋಟರಿ ಸಂಸ್ಥೆಯಿಂದ ಕುಷ್ಠರೋಗಿಗಳಿಗೆ ಕಂಬಳಿ ವಿತರಿಸಲಾಯಿತು.
ಸಮಾರಂಭದಲ್ಲಿ ಮುಖ್ಯೋಪಾಧ್ಯಾಯ ಗೋವಿಂದರಾಜ್, ಆರೋಗ್ಯ ಕಾರ್ಯಕರ್ತರಾದ ರೇಣುಕಾರಾಧ್ಯ, ರಂಗನಾಥ್, ಶಂಕರ್ ಉಪಸ್ಥಿತರಿದ್ದರು. ಜನಗಣತಿ ಕಾರ್ಯಕ್ಕೆ ಗೈರು ಹಾಜರಾಗುವ ನೌಕರರ ಮೇಲೆ ನಿದ್ಯರ್ಾಕ್ಷಣ್ಯ ಕ್ರಮ
ಚಿಕ್ಕನಾಯಕನಹಳ್ಳಿ,ಜ.28: ತಾಲೂಕಿನ ಜನಗಣತಿಯ ಗಣತಿ ಕಾರ್ಯದ ತರಬೇತಿ ಇದೇ 29ರಿಂದ 31ರವರಗೆ ನಡೆಯಲಿದ್ದು ಈ ಕಾರ್ಯಕ್ಕೆ ನೇಮಕಗೊಂಡಿರುವ ಮೇಲ್ವಿಚಾರಕರು ಗಣತಿ ಕಾರ್ಯಕ್ಕೆ ಹಾಜರಾಗದಿದ್ದಲ್ಲಿ ನೇಮಕಗೊಂಡಿರುವವರ ಮೇಲೆ ನಿದರ್ಾಕ್ಷಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಟಿ.ಸಿ.ಕಾಂತರಾಜು ತಿಳಿಸಿದರು.
ಪಟ್ಟಣದ ತಾಲೂಕು ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಗಣತಿ ಕಾರ್ಯವು ರೋಟರಿ ಶಾಲಾ ಆವರಣದಲ್ಲಿ ನಡೆಯಲಿದೆ, ಜನಗಣತಿ ಕಾರ್ಯಕ್ರಮವು ರಾಷ್ಟ್ರೀಯ ಕಾರ್ಯಕ್ರಮವಾದ್ದರಿಂದ ಪ್ರತಿಯೊಬ್ಬ ನಾಗರೀಕರು ಗಣತಿದಾರರಿಗೆ ಸಹಕರಿಸಿ ಅವರಿಗೆ ಮುಚ್ಚು ಮರೆಯಿಲ್ಲದೆ ಮಾಹಿತಿ ನೀಡಿ ಸಹಕರಿಸಬೇಕು ಎಂದ ಅವರು, ಫೆಬ್ರವರಿ 9ರಿಂದ 28ರವರಗೆ ನಡೆಯುವ ಭಾರತದ ಜನಗಣತಿ ಕಾರ್ಯದಲ್ಲಿ ಅಗತ್ಯ ಮಾಹಿತಿ ನೀಡಿ ದೇಶದ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದರು ಜನಗಣತಿ ಕಾರ್ಯದಲ್ಲಿ ಶಿಕ್ಷಕರು ಬೆಳಗ್ಗೆ 8ಕ್ಕೆ ಆರಂಭಿಸಿ 11ಗಂಟೆ ವೇಳೆಗೆ ಮುಗಿಸಿ ಶಾಲೆಗಳಿಗೆ ಹಾಜರಾಗಬೇಕು ಶಿಕ್ಷಣ ಕಾರ್ಯಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಸ್ತ್ರೀಶಕ್ತಿ ಭವನವನ್ನು ಮಹಿಳೆಯರ ಅಭಿವೃದ್ದಿಗಾಗಿ ಬಳಸಿ
ಚಿಕ್ಕನಾಯಕನಹಳ್ಳಿ,ಜ.28: ಸ್ತ್ರೀಯರ ಮೇಲಿನ ನಂಬಿಕೆಯಿಂದ ಸ್ತ್ರಿ ಶಕ್ತಿ ಸಂಘಗಳಿಗೆ, ಸಹಕಾರ ಸಂಘಗಳು ಸೇರಿದಂತೆ ಬ್ಯಾಂಕುಗಳು ಸಾಲವನ್ನು ನೀಡಿ ಅವರಿಗೆ ಆಥರ್ಿಕವಾಗಿ ಸಹಕರಿಸಿತ್ತಿರುವುದರ ಜೊತೆಗೆ ಬೇರೊಂದು ರೀತಿಯಲ್ಲಿ ನಮ್ಮ ಬೆಂಬಲ ಮಹಿಳೆಯರಿಗೆ ನಿರಂತರವಾಗಿರುತ್ತದೆ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ತಿಳಿಸಿದರು.
ಪಟ್ಟಣದ ಸ್ತ್ರೀ ಶಕ್ತಿಭವನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಥರ್ಿಕ ಸಂಸ್ಥೆಗಳು ನೀಡಿದ ಹಣವನ್ನು ಸರಿಯಾದ ಸಮಯಕ್ಕೆ ಪಾವತಿಸಿ ಪುನಃ ಮತ್ತೊಬ್ಬರಿಗೆ ಹಣದ ನೆರವು ನೀಡಲು ಮಹಿಳೆಯರು ಸಹಕರಿಸಿ, ನೀಡಿದ ಹಣವನ್ನು ಒಳ್ಳೆ ರೀತಿಯ ಕೆಲಸ ಕಾರ್ಯಗಳಿಗೆ ಬಳಸಿ ಉತ್ತಮ ಲಾಭವನ್ನು ಪಡೆಯಬೇಕು ಎಂದ ಅವರು, ತಾಲೂಕಿನಲ್ಲಿ 1035 ಸ್ತ್ರೀ ಶಕ್ತಿ ಸಂಘಗಳಿದ್ದು ಈ ಸಂಘಗಳ ಬೆಳವಣಿಗೆಯಿಂದಲೇ ಮಹಿಳೆಯರು ರಾಜಕೀಯವಾಗಿ, ಸಾಮಾಜಿಕವಾಗಿ ಪ್ರೇರಿತರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸುತ್ತಿದ್ದಾರೆ ಎಂದರು. ಮುಂದಿನ ಫೆಬ್ರವರಿ 16ರಂದು ನಗರದಲ್ಲಿ ಉದ್ಯೋಗ ಮೇಳ ಹಮ್ಮಿಕೊಂಡಿದ್ದು 7ನೇ ತರಗತಿಯಿಂದ ಪದವಿ ವರೆಗೆ ಓದಿರುವ 3000 ವಿದ್ಯಾಥರ್ಿಗಳಿಗೆ ಉದ್ಯೋಗವನ್ನು ವಿವಿಧ ಕಂಪನಿಗಳಿಂದ ಕೊಡಿಸುವ ನಿರೀಕ್ಷೆ ವ್ಯಕ್ತಪಡಿಸಿದರು, ಆದಿಚುಂನಚಗಿರಿಯ ವೈದ್ಯಕೀಯ ಕಾಲೇಜಿನ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗುವುದು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಟಿ.ರಾಮು ಮಾತನಾಡಿ, ಸ್ತ್ರೀಯರು ಜೀವನದ ಮುಂದಿನ ರೂಪುರೇಷೆಗಾಗಿ ಮಿತಿವಾಗಿ ಹಣವನ್ನು ಬಳಸಿ, ಉಳಿಸಿದ ಹಣವನ್ನು ಸದ್ಬಳಕೆಗೆ ಉಪಯೋಗಿಸಿ ಜೀವನ ನಿರ್ವಹಣೆಯನ್ನು ಸುಗಮಗೊಳಿಸಬೇಕು ಎಂದರು. ಸ್ತ್ರೀ ಶಕ್ತಿ ಭವನವು ಸ್ತ್ರೀಯರಿಗಾಗಿದ್ದು ಅವರ ವಿಶ್ರಾಂತಿ, ಉದ್ಯೋಗ ಇನ್ನೂ ಹಲವಾರು ಉಪಯೋಗಕ್ಕಾಗಿ ಬಳಸಿಕೊಳ್ಳಬಹುದು ಎಂದರು.
ಸಮಾರಂಭದಲ್ಲಿ ತಹಶೀಲ್ದಾರ್ ಟಿ.ಸಿ.ಕಾಂತರಾಜು, ತಾ.ಪಂ.ಅಧ್ಯಕ್ಷ ಕೆ.ಜಿ.ಮಲ್ಲಿಕಾಜರ್ುನಯ್ಯ, ಪುರಸಭಾ ಉಪಾದ್ಯಕ್ಷೆ ಕವಿತಾಚನ್ನಬಸವಯ್ಯ, ಅಂಬಿಕಾ ಮಲ್ಲಿಕಾಜರ್ುನಯ್ಯ ಮಾತನಾಡಿದರು.
ಸಮಾರಂಭದಲ್ಲಿ ಪುರಸಭಾ ಅಧ್ಯಕ್ಷ ರಾಜಣ್ಣ, ಟೌನ್ ಬ್ಯಾಂಕ್ ಅಧ್ಯಕ್ಷ ಸಿ.ಎಸ್.ನಟರಾಜು, ತಾ.ಪಂ.ಸದಸ್ಯರಾದ ಲತಾ, ಚೇತನ, ಉಮಾದೇವಿ, ಇ.ಓ ದಯಾನಂದ್, ಪುರಸಭಾ ಸದಸ್ಯರಾದ ಎಂ.ಎನ್.ಸುರೇಶ್, ದೊರೆಮುದ್ದಯ್ಯ, ರುಕ್ಮಿಣಮ್ಮ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಸಿ.ಡಿ.ಪಿ.ಓ ಅನೀಸ್ಖೈಸರ್ ಪ್ರಾಸ್ತಾವಿಕ ಮಾತನಾಡಿ, ಪರಮೇಶ್ವರಪ್ಪ ಸ್ವಾಗತಿಸಿ ವಂದಿಸಿದರು.