Tuesday, June 21, 2011


ತಾಲ್ಲೂಕಿನ ಅಭಿವೃದ್ದಿಗಾಗಿ ವಿದೇಶಿ ಪ್ರವಾಸ : ಸಿ.ಬಿ.ಸುರೇಶ್ಬಾಬು
ಚಿಕ್ಕನಾಯಕನಹಳ್ಳಿ,ಜೂ.21: ದೇಶ ಸುತ್ತು ಇಲ್ಲ ಕೋಶ ಓದು ಎಂಬ ಗಾದೆಯಂತೆ ದೇಶಗಳ ಪ್ರವಾಸ ಮಾಡಿ ಅಲ್ಲಿನ ಜನತೆಯ ಶಿಕ್ಷಣ, ಆಥರ್ಿಕತೆಯಂತೆ ರಾಜ್ಯದ ಜನತೆಗೂ ತಿಳಿಸಲು ವಿದೇಶಿ ಪ್ರವಾಸ ಕೈಗೊಂಡು ಉತ್ತಮ ತರಬೇತಿ ಪಡೆದು ತಾಲ್ಲೂಕಿನ ಅಭಿವೃದ್ದಿಯತ್ತ ಮುನ್ನುಗ್ಗುತ್ತೇನೆ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಹೇಳಿದರು.
ಪಟ್ಟಣದ ದೇಶೀಯ ವಿದ್ಯಾಪೀಠ ಪ್ರೌಡಶಾಲಾ ಆವರಣದಲ್ಲಿ ಶಾಸಕರ ವಿದೇಶಿ ಪ್ರವಾಸ ಸುಗಮವಾಗಿ ಹಿಂತಿರುಗಲಿ ಎಂದು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು ರಾಜ್ಯದ ಅಭಿವೃದ್ದಿಯ ಹಿತದೃಷ್ಠಿಯಿಂದ ವಿದೇಶ ಪ್ರವಾಸ ಕೈಗೊಂಡಿದ್ದೇವೆ, ರಾಜ್ಯದ ಹಿಂದುಳಿದ ಮತ್ತು ಅಲ್ಪಸಂಖ್ಯಾತರ 20 ಜನರ ಸಮಿತಿ ಸದಸ್ಯರು ಈ ಪ್ರವಾಸ ಕೈಗೊಂಡಿದ್ದು, ಹಿಂದುಳಿದ ಜನರ ಅಭಿವೃದ್ದಿಗಾಗಿ ಪ್ರವಾಸದಲ್ಲಿ ಹಲವು ಕಾರ್ಯಗಳ ಬಗ್ಗೆ ತಿಳಿದುಕೊಳ್ಳಲಿದ್ದು ಹಣಕಾಸು ಯೋಜನೆಯಂತಹ ಉತ್ತಮ ಯೋಜನೆಗಳ ಬಗ್ಗೆ ರಾಜ್ಯದ ಜನರಿಗೆ ತಿಳಿಸಲು, ಮತ್ತು ರಾಜ್ಯದಲ್ಲಿರುವ ಹಲವಾರು ಯೋಜನೆಗಳು ವಿಫಲವಾಗುತ್ತಿರುವುದರಿಂದ ಅಲ್ಲಿನ, ತರಬೇತಿ ಪಡೆದು ಮಾಪರ್ಾಡು ಮಾಡುವಂತಹ ಚಿಂತನೆಯಿದ್ದು, ಮುಂದಿನ ದಿನಗಳಲ್ಲಿ ಈಗಿನ ವಿದ್ಯಾಥರ್ಿಗಳು ಇದರ ಬಗ್ಗೆ ಚಚರ್ಿಸಲಿದ್ದಾರೆ ಎಂದು ತಿಳಿಸಿದರು.
ಉಪನ್ಯಾಸಕ ಕಣ್ಣಯ್ಯ ಮಾತನಾಡಿ ಶಾಸಕರ ಪ್ರವಾಸ 13ದಿನಗಳ ಪ್ರವಾಸವಾಗಿದ್ದು 5 ದಿನ ದೇಶದ ರಾಜ್ಯಗಳಾದ ಮಹಾರಾಷ್ಟ್ರ, ಗುಜರಾತ್, ಪಂಜಾಬ್, ದೆಹಲಿ, ರಾಜಸ್ಥಾನ ಉಳಿದ 7 ದಿವಸ ದಕ್ಷಿಣಾ ಆಪ್ರಿಕ ದೇಶದ ಪ್ರವಾಸವಾಗಿದೆ ಎಂದು ತಿಳಿಸಿದರು.
ನಿವೃತ್ತ ಶಿಕ್ಷಕ ಜಿ.ತಿಮ್ಮಯ್ಯ, ಬಿ.ಇ.ಓ ಸಾ.ಚಿ.ನಾಗೇಶ್, ಸಿ.ಬಿ.ರೇಣುಕಸ್ವಾಮಿ ಮಾತನಾಡಿ ಶುಭಾಷಯ ಕೋರಿದರು.
ಸಮಾರಂಭದಲ್ಲಿ ಶಾಲಾ ಕಾರ್ಯದಶರ್ಿ ಸಿ.ಎಸ್.ನಟರಾಜು, ಪುರಸಭಾ ಸದಸ್ಯ ದೊರೆಮುದ್ದಯ್ಯ, ತಾ.ಪಂ.ಸದಸ್ಯೆ ಚೇತನಗಂಗಾಧರ್, ರವಿ, ಕೃಷ್ಣೆಗೌಡ ಉಪಸ್ಥಿತರಿದ್ದರು.

ವಿದ್ಯಾಥರ್ಿ ನಿಲಯಕ್ಕೆ ಅಜರ್ಿ ಆಹ್ವಾನ
ಚಿಕ್ಕನಾಯಕನಹಳ್ಳಿ,ಜೂ.21: 2011-12ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಸಕರ್ಾರಿ ಕಾಲೇಜು ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗದ ಬಾಲಕರ ವಿದ್ಯಾಥರ್ಿ ನಿಲಯದಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗದ ಅರ್ಹ ವಿದ್ಯಾಥರ್ಿಗಳಿಂದ ಅಜರ್ಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ಸಮಾಜಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಆಸಕ್ತ ವಿದ್ಯಾಥರ್ಿಗಳು ತಹಶೀಲ್ದಾರ್ರವರಿಂದ ಪಡೆದ ಪ್ರಸಕ್ತ ಸಾಲಿನ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಮತ್ತು ಹಿಂದಿನ ತರಗತಿಯಲ್ಲಿ ಉತ್ತೀರ್ಣವಾದ ಅಂಕಪಟ್ಟಿ ಹಾಗೂ ಇತ್ತೀಚಿನ ಪಾಸ್ ಪೋಟರ್್ ಸೈಜ್ 3ಭಾವಚಿತ್ರಗಳನ್ನು ಲಗತ್ತಿಸಿ ಸಲ್ಲಿಸುವುದು, ವಾಷರ್ಿಕ ಆದಾಯ ಮಿತಿ 1ಲಕ್ಷ ರೂ ಮೀರಿರುವರು ಹಾಗೂ ವಿದ್ಯಾಭ್ಯಾಸ ಕುಂಠಿತವಾಗಿರುವವರು ಅರ್ಹರಿರುವುದಿಲ್ಲ ಎಂದು ತಿಳಿಸಿರುವ ಅವರು ಭಾರತ ಸಕರ್ಾರದ ವಿದ್ಯಾಥರ್ಿ ವೇತನ ಪಡೆಯಲು ಅರ್ಹರಿರುವ ಪ.ಜಾತಿ ಮತ್ತು ಪ.ವರ್ಗದವರು ಮಾತ್ರ ಅಜರ್ಿ ಸಲ್ಲಿಸಬೇಕು, ಪ್ರವೇಶ ಪಡೆದ ವಿದ್ಯಾಥರ್ಿಗಳಿಗೆ ಊಟ, ತಿಂಡಿ, ವ್ಯವಸ್ಥೆಯನ್ನು ವಿದ್ಯಾಥರ್ಿ ನಿಲಯಕ್ಕೆ ದಾಖಲಾದ ವಿದ್ಯಾಥರ್ಿಗಳಿಗೆ ಮಂಜೂರು ಮಾಡಲಾದ ವಿದ್ಯಾಥರ್ಿ ವೇತನ ಮತ್ತು ಹೆಚ್ಚುವರಿ ಊಟ ಮತ್ತು ವಸತಿ ವೆಚ್ಚದಲ್ಲಿ ಭರಿಸಲಾಗುವುದು, ವಿದ್ಯಾಥರ್ಿ ನಿಲಯಕ್ಕೆ ಆಯ್ಕೆಯಾದ ವಿದ್ಯಾಥರ್ಿಗಳಿಗೆ ನಿಲಯದ ನಿಬಂಧನೆಗಳಿಗೆ ಒಳಪಡುವುದಾಗಿ ಮುಚ್ಚಳಿಕೆ ಪತ್ರವನ್ನು ದಾಖಲಾತಿ ಸಮಯದಲ್ಲಿ ನೀಡುವುದು, ಆಯ್ಕೆಯಾದ ವಿದ್ಯಾಥರ್ಿಗಳು ರೂ.100/-ಗಳ ಎಚ್ಚರಿಕೆ ಹಣ ಪಾವತಿಸಬೇಕು, ವ್ಯಾಸಾಂಗ ಮುಗಿದ ನಂತರ ಸದರಿ ಹಣವನ್ನು ವಾಪಸ್ ಮಾಡಲಾಗುವುದಿಲ್ಲ.
ನಿಗದಿತ ಅಜರ್ಿ ನಮೂನೆಗಳನ್ನು ಸಂಬಂಧಿಸಿದ ವಿದ್ಯಾಥರ್ಿನಿಲಯದಲ್ಲಿ ಅಥವಾ ಚಿ.ನಾ.ಹಳ್ಳಿ ತಾಲ್ಲೂಕು ಸಮಾಜಕಲ್ಯಾಣಾಧಿಕಾರಿಗಳ ಕಛೇರಿರವರಿಂದ ಉಚಿತವಾಗಿ ಪಡೆದು ಜೂನ್ 30ರೊಳಗೆ ಸಲ್ಲಿಸುವುದು, ತಡವಾಗಿ ಬಂದ ಅಥವಾ ಅಪೂರ್ಣವಾದ ಅಜರ್ಿಗಳನ್ನು ಪರಿಗಣಿಸಲಾಗುವುದಿಲ್ಲ, ಹೆಚ್ಚಿನ ವಿವರಗಳಿಗಾಗಿ ತಾಲ್ಲೂಕು ಸಮಾಜಕಲ್ಯಾಣಾಧಿಕಾರಿಗಳ ಕಛೇರಿಯನ್ನು ಸಂಪಕರ್ಿಸಬಹುದಾಗಿದೆ ಎಂದು ತಿಳಿಸಿದ್ದಾರೆ.