Thursday, June 30, 2011

ಏಕದಶಿ ಜಾತ್ರೆಯ ಪ್ರಯುಕ್ತ ರಥೋತ್ಸವ ಹಾಗೂ ರಾಜ್ಯ ಮಟ್ಟದ ವಿವಿಧ ಸ್ಪಧರ್ೆಚಿಕ್ಕನಾಯಕನಹಳ್ಳಿ,ಜೂ.30 : ಹಳೆಯೂರು ಶ್ರೀ ಆಂಜನೇಯಸ್ವಾಮಿಯವರ ರಥೋತ್ಸವವನ್ನು ಜುಲೈ 11 ರಿಂದ 13ರವರೆಗೆ ಏರ್ಪಡಿಸಿದ್ದು ಈ ಸಂಬಂಧ ವಿವಿಧ ಉತ್ಸವ ಹಾಗೂ ಸ್ಪಧರ್ೆಗಳನ್ನು ಹಮ್ಮಿಕೊಳ್ಳಲಾಗಿದೆ.ಜುಲೈ 11ರಂದು ಸೋಮವಾರ ಬೆಳ್ಳಿ ಪಲ್ಲಕ್ಕಿಉತ್ಸವ, 12ರ ಮಂಗಳವಾರದಂದು ಬ್ರಹ್ಮರಥೋತ್ಸವ ಏರ್ಪಡಿಸಲಾಗಿದೆ, ರಥೋತ್ಸವದ ನಂತರ ದಿವ್ಯಜ್ಯೋತಿ ಕಲಾ ಸಂಘದವರಿಂದ ಕಳಸಕ್ಕೆ ಬಾಳೆಹಣ್ಣು ಎಸೆಯುವ ಸ್ಪಧರ್ೆ, ಅನ್ನಪೂಣರ್ೇಶ್ವರಿ ಕಲಾ ಸಂಘದವರಿಂದ ಡ್ಯಾನ್ಸ್ ಡ್ಯಾನ್ಸ್ ಸ್ಪಧರ್ೆ ಏರ್ಪಡಿಸಿದೆ. ಜುಲೈ 13ರ ಬುಧವಾರದಂದು ರಥೋತ್ಸವ ಮತ್ತು ಅನ್ನ ಸಂತರ್ಪಣೆ ನಡೆಸಲಾಗಿದೆ.ಇದೇ ದಿನ ಮಧ್ಯಾಹ್ನ 3 ಗಂಟೆಗೆ ಕಲ್ಪವೃಕ್ಷ ಕೋ-ಅಪರೇಟೀವ್ ಬ್ಯಾಂಕ್ ಸಭಾಂಗಣದಲ್ಲಿ ದಿವ್ಯ ಜ್ಯೋತಿ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 'ನವ ದಂಪತಿಗಳ' ಸ್ಪಧರ್ೆಯನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಅಂದು ಮಿತ್ರಕಲಾ ಸಂಘದವರಿಂದ ಸಂಪೂರ್ಣ ರಾಮಾಯಣ ನಾಟಕ ಮತ್ತು ಮಾರುತಿ ವ್ಯಾಯಾಮ ಶಾಲೆಯವರಿಂದ ಜಿದ್ದಾ ಜಿದ್ದಿನ ಕುಸ್ತಿಯನ್ನು ಏರ್ಪಡಿಸಲಾಗಿದೆ.
13ನೇ ವರ್ಷದ ರಾಜ್ಯಮಟ್ಟದ ಡ್ಯಾನ್ಸ್-ಡ್ಯಾನ್ಸ್ ಸ್ಪಧರ್ೆಚಿಕ್ಕನಾಯಕನಹಳ್ಳಿ,ಜೂ.30 : 13ನೇ ವರ್ಷದ ರಾಜ್ಯಮಟ್ಟದ ಡ್ಯಾನ್ಸ್-ಡ್ಯಾನ್ಸ್ ಸ್ಪಧರ್ೆಯನ್ನು ಜುಲೈ12ರ ಮಂಗಳವಾರ ಬೆಳಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ.ಶ್ರೀ ಅನ್ನಪೂಣರ್ೇಶ್ವರಿ ಕಲಾ ಸಂಘದವರಿಂದ ಎನ್.ಬಸವಯ್ಯನವರ ಸವಿನೆನಪಿಗಾಗಿ ಕಲ್ಪವೃಕ್ಷ ಕೋ-ಆಪರೇಟಿವ್ ಸಪ್ತತಿ ಸಭಾಂಗಣದಲ್ಲಿ ಸಮಾರಂಭ ಹಮ್ಮಿಕೊಂಡಿದ್ದು ಸಿಡ್ಲೇಹಳ್ಳಿ ಸಂಸ್ಥಾನದ ಕರಿಬಸವದೇಶೀಕೇಂದ್ರಸ್ವಾಮಿ ಉದ್ಘಾಟನೆ ನೆರವೇರಿಸಲಿದ್ದು ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಗಣಿ ಮಾಲೀಕರ ಸಂಘದ ಅಧ್ಯಕ್ಷ ಎಸ್.ಎ.ನಭಿ, ಬೆಂಗಳೂರಿನ ಉಪ್ಪಾರಪೇಟೆ ಸರ್ಕಲ್ ಇನ್ಸ್ಪೆಕ್ಟರ್ ಲೋಕೇಶ್ವರ್, ಪೋದಾರ್ ಕಂಪನಿ ಶಂಕರ್, ಕುಶಾಲ್ ಗಾಮರ್ೆಂಟ್ಸ್ ಶಾಂತಕುಮಾರ್ ಉಪಸ್ಥಿತರಿರುವರು.ಡ್ಯಾನ್ಸ್-ಡ್ಯಾನ್ಸ್ ಸ್ಪಧರ್ೆ ವಿವರ : ಡ್ಯಾನ್ಸ್ ಡ್ಯಾನ್ಸ್ ಸ್ಪಧರ್ೆಯು ಸೀನಿಯರ್ ಗ್ರೂಪ್, ಜೂನಿಯರ್ ಗ್ರೂಪ್, ಸೀನಿಯರ್ ಸಿಂಗಲ್, ಜೂನಿಯರ್ ಸಿಂಗಲ್ ವಿಭಾಗವಿದ್ದು ಗ್ರೂಪ್ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಿದ್ದು, ಸೀನಿಯರ್ ಗ್ರೂಪ್ ಪ್ರವೇಶ ದರ 200, ಜೂನಿಯರ್ ಗ್ರೂಪ್ 100, ಸೀನಿಯರ್ ಸಿಂಗಲ್ 100, ಸೀನಿಯರ್ ಸಿಂಗಲ್ 100 ಪ್ರವೇಶ ದರಗಳಿದ್ದು ತೀಪರ್ುಗಾರರ ಮತ್ತು ವ್ಯವಸ್ಥಾಪಕರ ತೀಮರ್ಾನವೇ ಅಂತಿಮ ತೀಮರ್ಾನವಾಗಿದೆ, ಹೆಚ್ಚಿನ ವಿವರಗಳಿಗಾಗಿ ಸಿ.ಎಸ್.ರೇಣುಕಮೂತರ್ಿ-9980163152, 9742796001, ಸಂಪಕರ್ಿಸಬಹುದಾಗಿದೆ.
ಆಧಾರ್ 7ರವರೆಗೆ, ಮತದಾರ ನೊಂದಾಣಿ 31 ರವರೆಗೆ ಅವಧಿ ವಿಸ್ತರಣೆ: ತಹಶೀಲ್ದಾರ್ ಟಿ.ಸಿ.ಕೆ.ಚಿಕ್ಕನಾಯಕನಹಳ್ಳಿ,ಜೂ.30: ವಿಶಿಷ್ಟ ಗುರುತಿನ ಚೀಟಿ ಆಧಾರ್'' ಯೋಜನೆಯಲ್ಲಿ ಭಾವಚಿತ್ರ ತೆಗೆಯುವ ಕಾರ್ಯವನ್ನು ಜುಲೈ 7ರವರೆಗೆ ವಿಸ್ತರಿಸಲಾಗಿದೆ ಎಂದು ತಹಶೀಲ್ದಾರ್ ಟಿ.ಸಿ.ಕಾಂತರಾಜು ತಿಳಿಸಿದ್ದಾರೆ. ತಾಲೂಕಿನಲ್ಲಿ ಎರಡು ಲಕ್ಷದ ಹನ್ನೆರಡು ಸಾವಿರದ ಮೂರುನೂರ ಐವತ್ತು ಜನರಿದ್ದು, ಇದರಲ್ಲಿ ಎರಡು ಲಕ್ಷದ ಒಂದು ಸಾವಿರದ ಒಂದು ನೂರ ಐವತ್ತು ಜನರು ಈಗಾಗಲೇ ಆಧಾರ್ ಯೋಜನೆಗೆ ಒಳಪಟ್ಟಿದ್ದಾರೆ. ಇನ್ನು ಹತ್ತು ಸಾವಿರ ಜನ ಮಾತ್ರ ಆಧಾರ ಸಂಖ್ಯೆಯನ್ನು ಹೊಂದಬೇಕಾಗಿದೆ. ಈ ಹತ್ತು ಸಾವಿರ ಜನರಿಗಾಗಿ ಭಾವ ಚಿತ್ರ ತೆಗೆಯುವ ಕಾರ್ಯವನ್ನು ಜುಲೈ ಏಳರವರೆಗೆ ವಿಸ್ತರಿಸಿದ್ದು, ತಕ್ಷಣವೇ ಉಳಿದಿರುವ ಸಾರ್ವಜನಿಕರು ಈ ವ್ಯಾಪ್ತಿಗೆ ಒಳಪಡಬೇಕು ಎಂದಿದ್ದಾರೆ. ಆಧಾರ್ ಯೋಜನೆಗೆ ಒಳಪಡದೆ ಇರುವ ಜನರಿಗೆ ಸಕರ್ಾರದ ಸವಲತ್ತುಗಳಾದ ಪಡಿತರ ವಿತರಣೆ, ಸೀಮೆಣ್ಣೆ ವಿತರಣೆ, ಪಿಂಚಣಿ, ನೌಕರರಿಗೆ ಸಂಬಳ ಸೇರಿದಂತೆ ಎಲ್ಲಾ ರೀತಿಯ ಸಕರ್ಾರಿ ಸೌಲಭ್ಯಗಳನ್ನು ತಡೆಹಿಡಯಲಾಗುವುದು ಎಂದರು.ಜುಲೈ 30 ಮತಪರಿಷ್ಕರಣೆಗೆ ಗಡವು: ಹದಿನೆಂಟು ವರ್ಷ ತುಂಬಿರುವ ಎಲ್ಲಾ ಯುವ ಜನತೆ ತಮ್ಮ ಮೂಲಭೂತ ಹಕ್ಕಾದ ಮತದಾರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಲು ಜುಲೈ 31 ಅಂತಿಮ ದಿನವಾಗಿದೆ ಎಂದು ಚುನಾವಣಾ ಆಯೋಗ ನಿದರ್ೇಶನ ನೀಡಿದೆ ಎಂದು ತಹಶೀಲ್ದಾರ್ ಟಿ.ಸಿ.ಕಾಂತರಾಜು ತಿಳಿಸಿದ್ದಾರೆ. 1.1.11ಕ್ಕೆ 18 ವರ್ಷ ತುಂಬಿರುವ ಎಲ್ಲಾ ಯುವಕ, ಯುವತಿಯರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಗೆ ನೊಂದಾಯಿಸಲು ಅವಕಾಶವಿದ್ದು, ಹೊಸದಾಗಿ ನೊಂದಾಯಿಸಿಗೊಳ್ಳಲಿಚ್ಚಿಸುವರು ನಮೂನೆ 6ನ್ನು ಭತರ್ಿಮಾಡುವುದು, ಹೆಸರು, ಸ್ಥಳ, ಲಿಂಗ ಸೇರಿದಂತೆ ಇನ್ನಿತರ ತಿದ್ದುಪಡಿ ಮಾಡಲಿಚ್ಚಿಸುವರು ನಮೂನೆ 8ನ್ನು ಭತರ್ಿ ಮಾಡಿ ತಮ್ಮ ವ್ಯಾಪ್ತಿಯ ಬಿ.ಎಲ್.ಓ.ಗಳಿಗೆ ಕೊಡಬೇಕೆಂದು ಕೋರಲಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಒಂದು ಲಕ್ಷ ಐವತ್ತೈದು ಸಾವಿರ ಮತದಾರರ ಪೈಕಿ 93 ಸಾವಿರ ಮತದಾರರು ತಮ್ಮ ಮೊಬೈಲ್ ಯಾ ದೂರವಾಣಿ ಸಂಖ್ಯೆಯನ್ನು ನೊಂದಾಯಿಸಿಕೊಂಡಿದ್ದು ಉಳಿದವರು ಇನ್ನೂ ನೊಂದಾಯಿಸಿಕೊಳ್ಳಬೇಕಾಗಿದೆ ಆದ್ದರಿಂದ ಮೊಬೈಲ್ ಅಥವಾ ದೂರವಾಣಿ ಸಂಖ್ಯೆಗಳನ್ನು ನೊಂದಾಯಿಸುವುದು ಹಾಗೂ ಭಾವಚಿತ್ರ ಕೊಡುವುದು ಖಡ್ಡಾಯವಾಗಿರುವುದರಿಂದ ಸಂಬಂಧಿಸಿದವರು ತಮ್ಮ ವ್ಯಾಪ್ತಿಯ ಬಿ.ಎಲ್.ಓಗಳನ್ನು ಭೇಟಿ ಮಾಡಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತಹಶೀಲ್ದಾರ್ ಕಛೇರಿಯ ಚುನಾವಣೆಯ ಶಾಖೆಯ ದೂರವಾಣಿ ಸಂಖ್ಯೆ 08133 267242 ಇಲ್ಲಿ ಸಂಪಕರ್ಿಸಲು ಕೋರಲಾಗಿದೆ.ಹಂದನಕೆರೆ ಜನಸ್ಪಂದನ ಸಭೆ ಮುಂದೂಡಿಕೆ: ಹಂದನಕೆರೆಯಲ್ಲಿ ಜುಲೈ 2ರಂದು ನಡೆಯಬೇಕಾಗಿದ್ದ ಜನಸ್ಪಂದನ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ, ಮುಂದೂಡಿರುವ ಸಭೆಯನ್ನು ಜುಲೈ ತಿಂಗಳ ಮೂರನೇ ಶನಿವಾರದಂದು ನಡೆಸಲಾಗುವುದು ಎಂದು ತಾಲೂಕು ಕಛೇರಿಯ ಮೂಲ ತಿಳಿಸಿದೆ.
ವಿಶ್ವ ಪರಿಸರ ದಿನಾಚರಣೆ, ಪುಸ್ತಕ ಬಿಡುಗಡೆ ಮತ್ತು ಟ್ರಸ್ಟ್ ಉದ್ಘಾಟನೆಚಿಕ್ಕನಾಯಕನಹಳ್ಳಿ,ಜೂ.30 : ವಿಶ್ವ ಪರಿಸರ ದಿನಾಚರಣೆ, ಪುಸ್ತಕ ಬಿಡುಗಡೆ, ಟ್ರಸ್ಟ್ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಜುಲೈ 2ರ ಶನಿವಾರ ಬೆಳಗ್ಗೆ 10ಕ್ಕೆ ಏರ್ಪಡಿಸಲಾಗಿದೆ.ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಶ್ರೀ ಮಲ್ಲಿಕಾಜರ್ುನಸ್ವಾಮಿ ಡಿ.ಇಡಿ ಕಾಲೇಜು, ಶ್ರೀ ಕನಕ ಗ್ರಾಮೀಣ ಶಿಕ್ಷಣ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದು ತಮ್ಮಡಿಹಳ್ಳಿ ವಿರಕ್ತಮಠದ ಡಾ.ಅಭಿನವ ಮಲ್ಲಿಕಾಜರ್ುನ ದೇಶಿಕೇಂದ್ರಸ್ವಾಮಿ ದಿವ್ಯ ಸಾನಿದ್ಯ ವಹಿಸಲಿದ್ದು, ತಾ.ಕಸಾಪ ಅಧ್ಯಕ್ಷ ಎಂ.ವಿ.ನಾಗರಾಜ್ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ.ತಹಶೀಲ್ದಾರ್ ಟಿ.ಸಿ.ಕಾಂತರಾಜು ಸಸಿನೆಡು-ಮರ ಸಂರಕ್ಷಿಸು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ, ಶ್ರೀ ಕನಕ ಗ್ರಾಮೀಣ ಶಿಕ್ಷಣ ಮತ್ತು ಚಾರಿಟಬಲ್ ಟ್ರಸ್ನ ಉದ್ಘಾಟನೆಯನ್ನು ತುಮಕೂರು ಜಿ.ಪಂ.ನ ಯೋಜನಾ ನಿದರ್ೇಶಕ ಕೆ.ಬಿ.ಆಂಜನಪ್ಪ ಉದ್ಘಾಟಿಸಲಿದ್ದಾರೆ. ಲೇಖಕ ವಿದ್ಯಾವಾಚಸ್ಪತಿ ಕವಿತಾಕೃಷ್ಣ ಎಂ.ವಿ.ನಾಗರಾಜ್ರಾವ್ ಬರೆದಿರುವ ಗಾಂಧೀಜಿ 100 ಆದರ್ಶಗಳು ಪುಸ್ತಕವನ್ನು ಬಿಡುಗಡೆ ಮಾಡಲಿದ್ದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ ಜಿಲ್ಲಾಧಿಕಾರಿ ಸಿ.ಟಿ.ಮುದ್ದುಕುಮಾರ್ ಬಿ.ಸಿ.ಎಂ. ಹೆಣ್ಣುಮಕ್ಕಳ ವಸತಿ ನಿಲಯದ ಗ್ರಂಥಾಲಯಕ್ಕೆ ಪುಸ್ತಕಗಳ ವಿತರಣೆ ಮಾಡಲಿದ್ದಾರೆ, ಬಿ.ಇ.ಓ ಸಾ.ಚಿ.ನಾಗೇಶ್ ಪ್ರತಿಭಾ ಪುರಸ್ಕಾರ ವಿತರಣೆ ಮಾಡಲಿದ್ದು, ಶ್ರೀ.ಕ.ಗ್ರಾ.ಶಿ.ಚಾ.ಟ್ರಸ್ಟ್ ಮ್ಯಾನೇಂಜಿಂಗ್ ಟ್ರಸ್ಟಿ ಬಿ.ಎನ್.ಗಾಯಿತ್ರಿದೇವಿ ತಾಲ್ಲೂಕಿನ ಎಸ್.ಎಸ್.ಎಲ್.ಸಿ. ಪಿ.ಯು.ಸಿ, ಡಿ.ಇಡಿ, ಪರೀಕ್ಷೆಗಳಲ್ಲಿ ಕ್ನನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ 70 ವಿದ್ಯಾಥರ್ಿ, ವಿದ್ಯಾಥರ್ಿನಿಯರಿಗೆ ಅಭಿನಂದನ ಪತ್ರ ವಿತರಣೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಹಿರಿಯ ಸಾಹಿತಿ ಆರ್.ಬಸವರಾಜ್, ಶೃಂಗಾರ ಪ್ರಕಾಶನ ನಾಗರತ್ನರಾವ್, ವಲಯ ಅರಣ್ಯಾಧಿಕಾರಿ ನಂಜುಂಡಪ್ಪ, ಸಾಮಾಜಿಕ ಅರಣ್ಯ ಇಲಾಖೆಯ ಪಿ.ಎಚ್.ಮಾರುತಿ, ನಿ.ಕೃಷಿ ಸಹಾಯಕ ನಿದರ್ೇಶಕ ಸಿ.ಹೆಚ್.ನಾಗರಾಜ್, ಶಿಕ್ಷಕ ಕುಮಾರಸ್ವಾಮಿ ಉಪಸ್ಥಿತರಿರುವರು ಎಂದು ಡಿ.ಇಡಿ.ಕಾಲೇಜ್ನ ಪ್ರಾಂಶುಪಾಲ ಎಂ.ವಿ.ರಾಜ್ಕುಮಾರ್, ಕಸಾಪ ಕಾರ್ಯದಶರ್ಿ ಸಿ.ಗುರುಮೂತರ್ಿ ಕೊಟಿಗೆಮನೆ ತಿಳಿಸಿದ್ದಾರೆ.