Friday, September 23, 2011






ಸಕರ್ಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯ ಶ್ರಮಿಸಲು ಕರೆ
ಚಿಕ್ಕನಾಯಕನಹಳ್ಳಿ,ಸೆ.23 : ಸಕರ್ಾರಿ ಶಾಲೆಗಳ ಸರ್ವತೋಮುಖ ಅಭಿವೃದ್ದಿಗೆ ಸಮುದಾಯ ಶ್ರಮಿಸುವಂತೆ ಎಸ್.ಡಿ.ಎಂ.ಸಿ.ಅಧ್ಯಕ್ಷ ಸಿ.ಬಿ.ಲೋಕೇಶ್ ಕರೆ ನೀಡಿದರು.
ಪಟ್ಟಣದ ಕೆ.ಎಂ.ಎಚ್.ಪಿ.ಎಸ್ ಶಾಲಾ ಆವರಣದಲ್ಲಿ ನಡೆದ 2011-12ನೇ ಸಾಲಿನ ಎಸ್.ಡಿ.ಎಂ.ಸಿ ಹಾಗೂ ಸಿ.ಎ.ಸಿ ಸದಸ್ಯರಿಗೆ ನಡೆದ ಎರಡು ದಿನದ ಸಂಕಲ್ಪ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಕರ್ಾರಿ ಅಧಿಕಾರಿಗಳು, ಸಕರ್ಾರಿ ಶಾಲಾ ಶಿಕ್ಷಕರು ತಮ್ಮ ಮಕ್ಕಳನ್ನು ಸಕರ್ಾರಿ ಶಾಲೆಗಳಿಂದ ದೂರವಿರಿಸಿ ಖಾಸಗಿ ಶಾಲೆಗಳತ್ತ ಮುಖ ಮಾಡಿದ್ದಾರೆ ಇದರಿಂದ ಸಕರ್ಾರಿ ಶಾಲೆಗಳಲ್ಲಿ ವಿದ್ಯಾಥರ್ಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದೆ ಎಂದ ಅವರು, ಸಕರ್ಾರಿ ಅಧಿಕಾರಿಗಳು ಮೊದಲು ತಮ್ಮ ಮಕ್ಕಳನ್ನು ಸಕರ್ಾರಿ ಶಾಲೆಗಳಿಗೆ ಕಳುಹಿಸಿದರೆ ಸಕರ್ಾರಿ ಶಾಲೆಗಳು ಅಭಿವೃದ್ದಿ ಹೊಂದುತ್ತವೆ, ಅಲ್ಲದೆ ಖಾಸಗಿ ಶಾಲೆಗಳಿಗಿಂತ ಸಕರ್ಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುತ್ತಿದ್ದು ಇದಕ್ಕೆ ಸಕರ್ಾರ ಗುಣಾತ್ಮಕ ಶಾಲಾ ಶಿಕ್ಷಣದತ್ತ ಸಮುದಾಯ ಎಂಬಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಹಾಗಾಗಿ ಸಮುದಾಯ ಸಕರ್ಾರಿ ಶಾಲೆಗಳ ಅಭಿವೃದ್ದಿಯಲ್ಲಿ ಶಿಕ್ಷಕರ ಜೊತೆ ಕೈಜೋಡಿಸಬೇಕಾಗಿದೆ ಎಂದು ಮನವಿ ಮಾಡಿದರು.
ಬಿ.ಇ.ಓ ಸಾ.ಚಿ.ನಾಗೇಶ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ರಾಜ್ಯ ಸಕರ್ಾರದ ವತಿಯಿಂದ ಎಸ್.ಎಸ್.ಎ ಬಂದಾಗಿನಿಂದ ಎಸ್.ಡಿ.ಎಂ.ಸಿ ರಚಿಸಲಾಗಿ ಶಾಲೆಗಳ ಗುಣಾತ್ಮಕ ಶಿಕ್ಷಣ ಹಾಗೂ ಶಾಲಾ ಭೌತಿಕ ಅಭಿವೃದ್ದಿಯತ್ತ ಗಮನ ಹರಿಸಲಾಗಿದ್ದು ಇದಕ್ಕೆ ಎಲ್ಲಾ ಪೋಷಕರು ಸಹಕಾರ ಅಗತ್ಯವಾಗಿದೆ. ಸಕರ್ಾರಿ ಶಾಲೆಗಳನ್ನು ಓದಿದ ಹಲವರು ಇಂದು ಸಕರ್ಾರದ ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದ ಅವರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳಿಸದೆ ಸಕರ್ಾರಿ ಶಾಲೆಗಳಿಗೆ ಕಳುಹಿಸುವಂತೆ ಮನವಿ ನೀಡಿದರು.
ಮುಖ್ಯ ಅತಿಥಿಗಳಾದ ಶಿಕ್ಷಣ ಸಂಯೋಜಕರಾದ ಮರುಳಾನಾಯ್ಕ ಮಾತನಾಡಿ ಎಸ್.ಡಿ.ಎಂ.ಸಿ.ಸದಸ್ಯರ ಸಹಕಾರದಿಂದ ಇಂದು ಶಾಲೆಗಳಲ್ಲಿ ವಿದ್ಯಾಥರ್ಿಗಳ ಸಂಖ್ಯೆ ಗಣನೀಯ ಹೆಚ್ಚಳ ಕಂಡಿದ್ದು ಪ್ರಶಂಸನೀಯ ಎಂದರು. ಹಿಂದೆ ಶಿಕ್ಷಕರಿಗೆ ಗುರುಸ್ಥಾನ ನೀಡಿ ಎಲ್ಲಾ ಕೆಲಸ ಕಾರ್ಯಗಳಲ್ಲಿ ಗೌರವಿಸಿ ಸ್ವಾಗತಿಸುತ್ತಿದ್ದರು. ಆದರೆ ಖಾಸಗಿ ಶಾಲೆಗಳ ಬಗ್ಗೆ ಜನರಲಿ ವ್ಯಾಮೋಹ ಹೆಚ್ಚಾಗಿದೆ ಎಂದರಲ್ಲದೆ, ಸಕರ್ಾರಿ ಶಾಲೆಗಳಲ್ಲಿ ಯಾವುದಕ್ಕೂ ಕೊರತೆಯಿಲ್ಲ ಎಂದರು.
ಸಮಾರಂಭದಲ್ಲಿ ಮುಖ್ಯೋಪಾಧ್ಯಾಯಿನಿ ಚೇತನ ಉಪಸ್ಥಿತರಿದ್ದರು. ಶಾಲಾ ಮಕ್ಕಳು ಪ್ರಾಥರ್ಿಸಿದರು. ಸಿ.ಆರ್.ಪಿ ದುರ್ಗಯ್ಯ ಸ್ವಾಗತಿಸಿದರೆ, ಜಗದೀಶ್ ನಿರೂಪಿಸಿ, ಎಚ್.ಆರ್.ಹೊನ್ನಲಿಂಗಯ್ಯ ವಂದಿಸಿದರು.



ರೈತ ಸಂಘದ ಉದ್ಘಾಟನಾ ಸಮಾರಂಭ
ಚಿಕ್ಕನಾಯಕನಹಳ್ಳಿ,ಸೆ.23 : ರೈತ ಸಂಘಗಳ ಉದ್ಘಾಟನಾ ಸಮಾರಂಭ ಹಾಗೂ ತಾಲ್ಲೂಕು ರೈತಸಂಘ ಕಾಯರ್ಾಯಲದ ಉದ್ಘಾಟನೆಯನ್ನು 24ರ(ಇಂದು) ಶನಿವಾರ ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.
ರೈತ ಸಂಘದ ಕಾಯರ್ಾಲಯದ ಉದ್ಘಾಟನೆ ನೆರವೇರಿಸಲು ರಾಜ್ಯ ರೈತ ಸಂಘದ ಕಾಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಗಮಿಸುತ್ತಿದ್ದು ಪಟ್ಟಣದ ಅರಣ್ಯ ಇಲಾಖೆ ಎದುರು ನೂತನವಾಗಿ ಆರಂಭಿಸಿರುವ ಕಾಯರ್ಾಲಯ, ಶೆಟ್ಟಿಕೆರೆ ಹೋಬಳಿ ಮಾಕುವಳ್ಳಿ ಗೊಲ್ಲರಹಳ್ಳಿ ಗ್ರಾಮದಲ್ಲಿ ಹಾಗೂ ದಬ್ಬೇಘಟ್ಟ ಗ್ರಾಮದಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ರೈತ ಸಂಘದ ಉದ್ಘಾಟನೆ ನೆರವೇರಿಸಲಿದ್ದಾರೆ.