Saturday, September 24, 2011



ನೈತಿಕತೆ ಕಳೆದುಕೊಳ್ಳುತ್ತಿರುವ ಪ್ರಜಾಪ್ರಭುತ್ವದ ಆಧಾರ ಸ್ಥಂಬಗಳು: ಕೋಡಿಹಳ್ಳಿ ಚಂದ್ರಶೇಖರ್
ಚಿಕ್ಕನಾಯಕನಹಳ್ಳಿ,ಸೆ.24 : ಪ್ರಜಾಪ್ರಭುತ್ವದ ಆಧಾರ ಸ್ಥಂಬಗಳಾದ ಶಾಸಕಾಂಗ, ಕಾಯರ್ಾಂಗ, ನ್ಯಾಯಾಂಗ ಹಾಗೂ ಸಮೂಹ ಮಾಧ್ಯಮಗಳು ತಮ್ಮ ನೈತಿಕತೆ ಕಳೆದುಕೊಂಡು ದೇಶವನ್ನು ದಿವಾಳಿ ಮಾಡುತ್ತಿವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
ಪಟ್ಟಣದಲ್ಲಿ ರೈತ ಸಂಘ ಕಛೇರಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕನರ್ಾಟಕ ಭ್ರಷ್ಠಾಚಾರದಲ್ಲಿ ರಾಷ್ಟ್ರದಲ್ಲೇ ಅಗ್ರ ಸ್ಥಾನ ಪಡೆದಿದೆ, ಇದು ಕೇವಲ ರಾಜಕೀಯ ನಾಯಕರಿಗೆ ಬಂದಿಲ್ಲ ಇಡೀ ನಾಡಿಗೆ ಬಂದಿದೆ. ಇತ್ತೀಚಿನ ದಿನಗಳಲ್ಲಿ ಸುಪ್ರೀಂಕೋಟರ್್ ಕನರ್ಾಟಕದ ಗಣಿಗಾರಿಕೆಯ ಬಗ್ಗೆ ತನಿಖೆಗೆ ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದೆ. ಆದರೆ ರಾಷ್ಟ್ರ ಮಟ್ಟದಲ್ಲಿ ಕೇಂದ್ರ ಸಕರ್ಾರ 2ಜಿ ಸೆಕ್ಟ್ರಂ ಹಗರಣದಲ್ಲಿ ಸಿಲುಕಿದೆ ಅಷ್ಟೇಅಲ್ಲ, ರಾಷ್ಟ್ರದ ಎಲ್ಲಾ ಪಕ್ಷಗಳೂ ನೈತಿಕತೆ ಕಳೆದುಕೊಳ್ಳುತ್ತಿವೆ ಇದನ್ನು ಸರಿದಾರಿಗೆ ತರಲು ಪ್ರಜ್ಞಾವಂತ ನಾಗರೀಕರು ಸತ್ಯಾಗ್ರಹ, ಚಳುವಳಿಗಳನ್ನು ಕೈಗೊಳ್ಳಲು ರೈತಸಂಘ ಹಾಗೂ ಸಾರ್ವಜನಿಕರು ಸಂಘಟನೆಗೊಂಡು ಸರಿ ದಾರಿಗೆತರಬೇಕಿದೆ. ಕಳೆದ ಮೂರು ದಶಕಗಳಿಂದ ನಮ್ಮ ಸಂಘ ರಾಜಕೀಯ ವ್ಯಕ್ತಿಗಳ ವಿರುದ್ದ ಹೋರಾಟ ನಡೆಸುತ್ತಲೇ ಇದ್ದು ಮುಂದಿನ ದಿನಗಳಲ್ಲೂ ಈ ಕಾರ್ಯ ಮುಂದುವರಿಯಲಿದೆ ಎಂದರು.
ರಾಜ್ಯದ ಪಶ್ಚಿಮ ಘಟ್ಟಗಳಲ್ಲಿ ಮಳೆಯಿಂದ ಹಾನಿಯಾದರೆ ಬಯಲು ಪ್ರದೇಶದಲ್ಲಿ ಮಳೆಯಿಲ್ಲದೆ ಬರಗಾಲ ಬಂದಿದೆ, ರಾಜ್ಯ ಸಕರ್ಾರ ಈ ಭಾಗದ ಪ್ರದೇಶವನ್ನು ಬರಗಾಲವೆಂದು ಘೋಷಿಸಿ ಜನಜಾನುವಾರಗಳನ್ನು ರಕ್ಷಿಸಬೇಕು ಎಂದರು.
ಸಭೆಯಲ್ಲಿ ರಾಜ್ಯ ರೈತ ಸಂಘದ ಸೋಮಗುದ್ದ ರಂಗಸ್ವಾಮಿ, ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು, ಕಾರ್ಯದಶರ್ಿ ದೇವರಾಜು. ಜಿಲ್ಲಾ ಸಂಚಾಲಕ ಶಂಕರಣ್ಣ, ಹಸಿರುಸೇನೆ ಜಿಲ್ಲಾ ಸಂಚಾಲಕ ಕೆ.ಎಸ್.ಸತೀಶ್, ತಾಲ್ಲೂಕು ಉಪಾಧ್ಯಕ್ಷ ಗಂಗಾಧರ್, ತಿಮ್ಮನಹಳ್ಳಿ ಲೋಕೇಶ್, ಕೆ.ಪಿ.ಮಲ್ಲೇಶ್, ಎ.ಬಿ.ಪ್ರಕಾಶಯ್ಯ, ಮರುಳಸಿದ್ದಪ್ಪ, ಮಲ್ಲಿಕಾಜರ್ುನಯ್ಯ ಮುಂತಾದವರಿದ್ದರು.

ಚಿಕ್ಕನಾಯಕನಹಳ್ಳಿ,ಸೆ.24: ಚಂದ್ರಶೇಖರ್ ಕಂಬಾರರಿಗೆ ಜ್ಞಾನಪೀಠ ಪ್ರಶಸ್ತಿ ಬಂದಿರುವುದು ಕನ್ನಡದ ಹಿರಿಮೆಯನ್ನು ಅಂತರರéಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಬಿಂಬಿಸಿದಂತಾಗಿದೆ ಎಂದು ತಾಲ್ಲೂಕು ಕಸಾಪ ಹರ್ಷವ್ಯಕ್ತ ಪಡಿಸಿದೆ.
ಅಧ್ಯಕ್ಷ ಎಂ.ವಿ.ನಾಗರಾಜ್ರಾವ್ ಈ ಬಗ್ಗೆ ಪ್ರತಿಕ್ರಿಯಿಸಿ ದೇಶೀ ಸಂಸ್ಕೃತಿಯನ್ನು ತಮ್ಮ ಅಭಿವ್ಯಕ್ತಿಯ ಮಾಧ್ಯಮವನ್ನಾಗಿಸಿಕೊಂಡು ಕನ್ನಡ ಭಾಷೆಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ ಎಂದಿದ್ದಾರೆ.