Friday, October 7, 2011


ಚಿ.ನಾ..ಹಳ್ಳಿ ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸದಿದ್ದರೆ ಒಗ್ಗೂಡಿಸಿ ಉಗ್ರಹೋರಾಟ
ಚಿಕ್ಕನಾಯಕನಹಳ್ಳಿ,ಸೆ.07 : ಸಕರ್ಾರ ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸದಿದ್ದರೆ ತಾಲ್ಲೂಕಿನ ಪ್ರತಿ ಹಳ್ಳಿಹಳ್ಳಿಯಲ್ಲೂ ಎಲ್ಲಾ ಪಕ್ಷ, ರೈತರು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿ ಉಗ್ರಹೋರಾಟ ನಡೆಸುವುದಾಗಿ ಶಾಸಕ ಸಿ.ಬಿ.ಸುರೇಶ್ಬಾಬು ಸಕರ್ಾರಕ್ಕೆ ಎಚ್ಚರಿಸಿದ್ದಾರೆ.
ಚಿಕ್ಕನಾಯಕನಹಳ್ಳಿ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸದಿರುವ ಬಗ್ಗೆ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ತಾಲ್ಲೂಕು ಕಛೇರಿ ಆವರಣದಲ್ಲಿ ಮಾತನಾಡಿದರು.
ಡಾ.ನಂಜುಡಪ್ಪರವರ ವರದಿಯನ್ವಯ ತಾಲ್ಲೂಕು ಅತಿಹಿಂದುಳಿದ ಪ್ರದೇಶವಾಗಿದ್ದು ಇಲ್ಲಿನ ರೈತರು ಮಳೆಯನ್ನು ತಮ್ಮ ಬದುಕಿಗೆ ಅಳವಡಿಸಿಕೊಂಡು ಜೀವನ ನಡೆಸುತ್ತಿರುವವರು ಮುಂಗಾರು ಮತ್ತು ಹಿಂಗಾರು ಮಳೆಯಿಲ್ಲದೆ ಬೆಳೆಯನ್ನು ಕಳೆದುಕೊಳ್ಳುತ್ತಿದ್ದಾರೆ ಅಲ್ಲದೆ ತಾಲ್ಲೂಕಿನಲ್ಲಿರುವ 195600 ಜಾನುವಾರುಗಳಿಗೆ ಮೇವಿನ ಸಮಸ್ಯ ಎದುರಾಗಿದ್ದು ರೈತರು ತೀವ್ರ ಆಥರ್ಿಕವಾಗಿ ಸಂಕಷ್ಟಕ್ಕೊಳಗಾಗಿದ್ದಾರೆ, ಈ ಪ್ರದೇಶದಲ್ಲಿ ಬರಗಾಲ ಕಾಣಿಸಿಕೊಂಡಿರುವುದರಿಂದ ಹಿಂಗಾರು, ಮುಂಗಾರು ಬೆಳೆಯ ವೈಪಲ್ಯದ ಬಗ್ಗೆ ಈಗಾಗಲೇ ಸಕರ್ಾರಕ್ಕೆ ವರದಿ ನೀಡಲಾಗಿದೆ ಆದರೂ ಬರಪ್ರದೇಶದ ಹೆಸರಿನಿಂದ ತಾಲ್ಲೂಕನ್ನು ಕೈಬಿಟ್ಟಿರುವುದರಿಂದ ಜನತೆ ಮುಂದಿನ ದಿನಗಳಲ್ಲಿ ಆಥರ್ಿಕ ಸಂಕಷ್ಟ ಎದುರಿಸಲಿದ್ದಾರೆ ಎಂದ ಅವರು ತಾಲ್ಲೂಕಿನಲ್ಲಿ ನೀರಿನ ಜೊತೆಗೆ ವಿದ್ಯುತ್ ಸಮಸ್ಯೆಯೂ ಎದುರಾಗಿದೆ ತಾಲ್ಲೂಕಿನಲ್ಲಿ ವ್ಯಾಪ್ತಿಯಲ್ಲಿ ಸುಮಾರು 19000 ಐ.ಪಿ.ಸೆಟ್ಟುಗಳು ಚಾಲನೆಯಲ್ಲಿದ್ದು ಐ.ಪಿ.ಸೆಟ್ ಹೊಂದಿರುವ ರೈತರಿಗೆ ಉತ್ತಮ ವೋಲ್ಟೇಜ್ ಒದಗಿಸಲು ತೊಂದರೆಯಾಗಿರುತ್ತದೆ ಅಲ್ಲದೆ ಇತ್ತೀಚಿನ ಅನಿಯಮಿತ ಲೋಡ್ಶೆಡ್ಡಿಂಗ್ನಿಂದ ಸಾಕಷ್ಟು ತೊಂದರೆಯಾಗುತ್ತಿದ್ದು ಬಡರೈತರ ಹಿತದೃಷ್ಠಿಯಿಂದ ಇವುಗಳನ್ನು ತಪ್ಪಿಸಲು ಹೋರಾಟ ಆರಂಬಿಸಿದ್ದು ತಕ್ಷಣಕ್ಕೆ ಪಕ್ಷದ ಜನಪ್ರತಿನಿಧಿಗಳ ವತಿಯಿಂದ ನಡೆಯುತ್ತಿರುವ ಈ ಪ್ರತಿಭಟನೆಯು ತಾಲ್ಲೂಕನ್ನು ಸಕರ್ಾರ ಬರಪೀಡಿತ ಪ್ರದೇಶವೆಂದು ಘೋಷಿಸದಿದ್ದರೆ ಎಲ್ಲಾ ಪಕ್ಷಗಳ ಜೊತೆಗೂಡಿ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು.
ಪುರಸಭಾಧ್ಯಕ್ಷ ಸಿ.ಎಲ್.ದೊಡ್ಡಯ್ಯ ಮಾತನಾಡಿ ತಾಲ್ಲೂಕಿನಲ್ಲಿ ಈಗಾಗಲೇ ಮಳೆಯಿಲ್ಲದೇ ಆಹಾರ ಧಾನ್ಯ ಬೆಳೆಯು ಇಳಿಮುಖವಾಗಿದ್ದು ರೈತರು ಕಂಗಾಲಾಗಿದ್ದಾರೆ, ನೀರಿಗಾಗಿ ಪರದಾಡುತ್ತಿದ್ದಾರೆ ಇದರ ಕೂಲಂಕುಶವಾಗಿ ಜಿಲ್ಲಾಧಿಕಾರಿಗಳು ಅರಿತು ತಾಲ್ಲೂಕನ್ನು ಬರಪೀಡಿತ ಪ್ರದೇಶವಾಗಿ ಘೋಷಿಸಬೇಕು ಎಂದು ಹೇಳಿದರು.
ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಎಂಬಿ.ನಾಗರಾಜು, ತಾ.ಪಂ.ಉಪಾಧ್ಯಕ್ಷೆ ಬಿ.ಬಿ.ಪಾತೀಮ, ಚಂದ್ರಶೇಖರಶೆಟ್ಟರು ಮಾತನಾಡಿದರು.
ಪ್ರತಿಭಟನೆಯಲ್ಲಿ ಟೌನ್ ಬ್ಯಾಂಕ್ ಅಧ್ಯಕ್ಷ ಸಿ.ಎಸ್.ನಟರಾಜು, ಪುರಸಭಾ ಸದಸ್ಯ ಸಿ.ಎಸ್.ರಮೇಶ್, ಎಂ.ಎನ್.ಸುರೇಶ್, ಸಿ.ಕೆ.ಕೃಷ್ಣಮೂತರ್ಿ, ರಾಜಣ್ಣ, ರುಕ್ಮಿಣಮ್ಮ, ಮಾಜಿ ತಾ.ಪಂ.ಅಧ್ಯಕ್ಷ ಕೆ.ಜಿ.ಮಲ್ಲಿಕಾಜರ್ುನಯ್ಯ , ತಾ.ಪಂ.ಸದಸ್ಯರಾದ ಲತಾ, ಚೇತನಗಂಗಾಧರ್ ಮುಂತಾದವರಿದ್ದರು.