Saturday, May 18, 2013


ತಾಲೂಕಿನ ಸಕರ್ಾರಿ ಆಸ್ಪತ್ರೆಗಳಲ್ಲಿ ಶೇ.45ರಷ್ಟು ಸಿಬ್ಬಂದಿಗಳ ಕೊರತೆ
              

ಚಿಕ್ಕನಾಯಕನಹಳ್ಳಿ,ಮೇ.18: ತಾಲೂಕಿನ ಆಸ್ಪತ್ರೆಗಳಲ್ಲಿ ಶೇ.45 ಸಿಬ್ಬಂದಿಗಳ ಕೊರತೆ ಇದ್ದು, ಜನಸಂಖ್ಯೆಗೆ ಅನುಗಣವಾಗಿ ಆಸ್ಪತ್ರೆಗಳಲ್ಲಿ ಮೂಲಭೂತ ಅಗತ್ಯಗಳಿಲ್ಲ ಎಂದು ತಾಲೂಕು ವೈದ್ಯಾಧಿಕಾರಿ ಶಿವಕುಮಾರ್ ತಿಳಿಸಿದರು.
ತಾಲೂಕಿನ ಶೆಟ್ಟೀಕೆರೆಯಲ್ಲಿ ನಡೆದ ರಕ್ತದೊತ್ತಡ, ಮಧುಮೇಹ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ  ಮೂಲಭೂತ ಸೌಕರ್ಯಗಳಿಲ್ಲದೆ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿದೆ ಎಂದರಲ್ಲದೆ, ಈ ಬಗ್ಗೆ ಜನರಿಗೆ ಆರೋಗ್ಯ ಶಿಕ್ಷಣ ಕೊಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೂ ಜನರೇ ಇರುವುದಿಲ್ಲವೆಂದ ಅವರು, ಅದೇ ಹಣ ಹಂಚುವ ಕಾರ್ಯಕ್ರಮ ಹಮ್ಮಿಕೊಂಡರೆ ನಾ ಮುಂದು, ತಾ ಮುಂದು ಎಂದು ಒಬ್ಬರ ಮೇಲೊಬ್ಬರು ಬರುತ್ತರೆ, ಶಿಕ್ಷಣ ನೀಡುತ್ತವೆಂದರೆ ಬೆರಳೆಣಿಕೆಯಷ್ಟು ಜನರು ಇರುವುದಿಲ್ಲವೆಂದರು. ಆನರು ಆಸ್ಪತ್ರೆಯಿಂದ ಹೇಗೆ ತಮ್ಮ ಕಾಯಿಲೆ ನಿವಾರಣೆಗೆ ಸ್ಪಂದಿಸಬೇಕೆಂದು ಅಪೇಕ್ಷಿಸುತ್ತಾರೋ ಅದೇರೀತಿ ಇಲಾಖೆಯು ಸಮುದಾಯದಿಂದ ಕೆಲವೊಂದು ಸಮಸ್ಯೆಗಳ ನಿವಾರಣೆಗೆ ಸ್ಪಂದಿಸಬೇಕೆಂಬ ಹಂಬಲವನ್ನು ಹೊಂದಿರುತ್ತದೆ ಎಂದರು.
ತಾ.ಪಂ.ಸದಸ್ಯ ರಮೇಶ್ ಕುಮಾರ್ ಮಾತನಾಡಿ,ಇಲ್ಲಿನ ಆಸ್ಪತ್ರೆಯ ವ್ಯವಸ್ಥೆ ಸುಧಾರಿಸಬೇಕು, ಇಲ್ಲಿನ ನಸರ್್ಗಳು ಹೆರಿಗೆ ಮಾಡಿ ಅವರ ಕಡೆಯಿಂದ ಹಣವನ್ನು ವಸೂಲಿ ಮಾಡಿ ಹಂಚಿಕೊಳ್ಳಲು ಕಿತ್ತಾಟಮಾಡುತ್ತಾರೆ, ಒಂದಿಬ್ಬರು ನಸರ್್ಗಳು ರೋಗಿಗಳ ಜೊತೆ ಅಸಭ್ಯವಾಗಿ ವತರ್ಿಸುತ್ತಾರೆ ಎಂದರಲ್ಲದೆ, ನಾನು ಈ ರೀತಿ ನೇರವಾಗಿ ಮಾತನಾಡುವುದು ಹಾಗೂ ಈ ಸಭೆಗೆ ಬಂದಿರುವುದೇ ಅವರಿಗೆ ಅಪಥ್ಯವಾಗಿದೆ ಎಂದರು.
ಗ್ರಾಮಸ್ವರಾಜ್ಯ ಚಿಂತಕ ರಘು ಗೋಪಾಲನಹಳ್ಳಿ ಮಾತನಾಡಿ, ರಕ್ತದಾನ, ಮರಣದ ನಂತರ ನೇತ್ರದಾನ ಹಾಗೂ ವೈದ್ಯಕೀಯ ಕಾಲೇಜ್ಗಳಿಗೆ ದೇಹದಾನ ಮಾಡುವುದರಿಂದ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು ಜೊತೆಗೆ ದಾನದ ಮಹತ್ವವನ್ನು ಮುಂದಿನ ಪೀಳಿಗೆಗೆ  ಒಳ್ಳೆಯ ಮಾರ್ಗವನ್ನು ತೋರಿಸಿಕೊಟ್ಟಂತಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಡಾ.ಗಣೇಶ್, ನೂತನ ವೈದ್ಯಾಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾದ ಡಾ.ರಾಧಿಕ ಉಪಸ್ಥಿತರಿದ್ದರು.
ಫಾರ್ಮಸಿಸ್ಟ್ ರಘುನಾಥ್ ಸ್ವಾಗತಿಸಿ ನಿರೂಪಿಸಿದರೆ, ಆರೋಗ್ಯ ಸಹಾಯಕ ನರೇಂದ್ರ ವಂದಿಸಿದರು.
13ನೇ ಹಣಕಾಸು ಆಯೋಗದಡಿ ಬಿಡುಗಡೆ ಮಾಡುವ ಹಣವನ್ನು ಕುಡಿಯುವ ನೀರಿಗೆ ಮೀಸಲಿಡಿ
           

ಚಿಕ್ಕನಾಯಕನಹಳ್ಳಿ,ಮೇ.18 : 13ನೇ ಹಣಕಾಸು ಆಯೋಗದಡಿ ಬಿಡುಗಡೆ ಮಾಡುವ ಹಣದಲ್ಲಿ ಶೇ.90ರಷ್ಟು ಕಟ್ಟಡಗಳ ಅಭಿವೃದ್ದಿ ಕಾರ್ಯಗಳಿಗೆ ಕಾಯ್ದಿರಿಸಿ ಸುತ್ತೋಲೆ ಹೊರಡಿಸಿರುವುದನ್ನು ಪ್ರಶ್ನಿಸಿದ ತಾ.ಪಂ.ಸದಸ್ಯರು ಕುಡಿಯುವ ನೀರಿನ ಯೋಜನೆಗಳಿಗೆ ಹಣವನ್ನು ವಿನಿಯೋಗಿಸಲು ಸಕರ್ಾರ ಕ್ರಮ ಕೈಗೊಳ್ಳುವಂತೆ ತಾ.ಪಂ.ಸಾಮಾನ್ಯ ಸಭೆಯಲ್ಲಿ ಸಕರ್ಾರವನ್ನು ಒತ್ತಾಯಿಸಿದ್ದಾರೆ.
ಪಟ್ಟಣದ ತಾ.ಪಂ.ಸಭಾಂಗಣದಲ್ಲಿ ತಾ.ಪಂ.ಅಧ್ಯಕ್ಷ ಎಂ.ಎಂ.ಜಗದೀಶ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯರು, ಜಿಲ್ಲೆಯಲ್ಲಿ ಮಳೆ ಇಲ್ಲದೆ ಕುಡಿಯುವ ನೀರಿಗಾಗಿ ಹಳ್ಳಿಗಳಲ್ಲಿ ತೀವ್ರ ನೀರಿನ ಕೊರತೆಯಿಂದ ಜನ ತತ್ತರಿಸುವ ಸಂದರ್ಭದಲಿ ಸಾವಿರ ಅಡಿ ಕೊಳವೆ ಬಾವಿ ಕೊರೆಸಿದರೂ ನೀರು ಬರುತ್ತಿಲ್ಲ, ತೆಂಗು ಅಡಿಕೆ ಬೆಳೆಗೆ ನೀರಿಲ್ಲದೆ ಮರಗಳು ಒಣಗುತ್ತಿವೆ, ತೆಂಗು ಅಡಿಕೆ ಬೆಳೆಗಾರರ ನೆರವಿಗೆ ಬರಬೇಕಾದ ಸಕರ್ಾರ ಕುಡಿಯುವ ನೀರಿಗೆ ಆದ್ಯತೆ ನೀಡದೇ, ಕಟ್ಟಡಗಳಿಗೆ ಆದ್ಯತೆ ನೀಡಿರುವುದನ್ನು ಪುನರ್ ಪರಿಶೀಲಿಸುವಂತೆ ತಾ.ಪಂ.ಸದಸ್ಯರು ಸಕರ್ಾರವನ್ನು ಒತ್ತಾಯಿಸಿದ್ದಾರೆ. ಅದ್ದೂರಿಯಾಗಿ ಆಚರಿಸಬೇಕಾದ ಬಸವಜಯಂತಿ ಕಾರ್ಯಕ್ರಮಕ್ಕೆ ಕೆಲವು ತಾ.ಪಂ.ಸದಸ್ಯರಿಗೆ ತಿಳಿಸದೆ ತಾಲ್ಲೂಕು ಆಡಳಿತ ಅವಮಾನಿಸಿದೆ ಎಂದು ಸದಸ್ಯ ಶಶಿಧರ್ ಆರೋಪಿಸಿದರು.
ಜಿಲ್ಲಾ ಪಂಚಾಯತ್ನಲ್ಲಿ ತಾಲ್ಲೂಕಿನ ಯಾವುದೇ ಅಭಿವೃದ್ದಿಗೆ ಅನುದಾನವನ್ನು ಪಡೆಯಬೇಕಾದರೆ ಪ್ರತಿಯೊಂದು ಹಂತದಲ್ಲೂ ಶೇ.35ರಷ್ಟು ಕಮಿಷನ್ಗೆ ಹಣ ಹೋಗುತ್ತದೆ, ಕಳಪೆ ಕಾಮಗಾರಿ ಮಾಡಿದರೆ ಜನ ನಮ್ಮನ್ನು ದೂರುತ್ತಾರೆ, ಆಕ್ಷನ್ ಪ್ಲಾನ್ ಮಾಡಿ ಅನುಮೋದನೆಗೆ ಕಳಿಸಿದರೆ ಎರಡು ತಿಂಗಳಾದರೂ ಮಂಜೂರಾತಿ ನೀಡುವುದಿಲ್ಲ, ಆಕ್ಷನ್ ಪ್ಲಾನ್ ಬದಲಾಯಿಸಿಲು ಅಧಿಕಾರಿಗಳಿಗೆ ಹಣ ನೀಡಿದರೆ ಮಾತ್ರ ಮಂಜೂರಾತಿ ನೀಡುತ್ತಾರೆ ಎಂದರಲ್ಲದೆ ಟ್ರಜರಿಯಲ್ಲಿ ಬಿಲ್ ತೆಗೆದುಕೊಳ್ಳಬೇಕಾದರೆ ಶೇ.1ರಷ್ಟು ಕಮಿಷನ್ ತೆಗೆದುಕೊಳ್ಳುತ್ತಾರೆ ಎಂದು ಆಕ್ಷೇಪಿಸಿ ಟ್ರಜರಿ ಕ್ಲಕರ್್ನ್ನು ಸಭೆಗೆ ಕರೆಸಿ ಛೀಮಾರಿ ಹಾಕಿದ ಪ್ರಸಂಗ ನಡೆಯಿತು.
ತಾಲ್ಲೂಕಿನಲ್ಲಿ ಎನ್.ಬಿ.ಎ ಹಾಗೂ ಎನ್.ಆರ್.ಇ.ಜಿ.ಇ ಯೋಜನೆ ಅಡಿಯಲ್ಲಿ ನಿಮರ್ಿಸಿದ ಶೌಚಾಲಯಕ್ಕೆ ಒಟ್ಟು 1,36,22,400 ರೂ ಬಿಡುಗಡೆಯಾಗಿದ್ದು ಇದರಲ್ಲಿ 67,84,300ರೂ ಖಚರ್ಾಗಿದೆ, ತಾಲ್ಲೂಕಿನಲ್ಲಿ 4800 ಶೌಚಾಲಯ ನಿಮರ್ಿಸಲು ನಿಗದಿಪಡಿಸಲಾಗಿತ್ತು 5039 ಶೌಚಾಲಯಗಳನ್ನು ನಿಮರ್ಿಸಲಾಗಿದೆ, ಜಿಲ್ಲೆಯಲ್ಲಿ ನಾವು ಪ್ರಥಮಸ್ಥಾನದಲ್ಲಿದ್ದೇವೆ ಎಂದು ತಾ.ಪಂ.ಅಧ್ಯಕ್ಷ ಎಂ.ಎಂ.ಜಗದೀಶ್ ತಿಳಿಸಿದರು.
ಕನ್ನಡ ಸಂಘದ ವೇದಿಕೆ ಬಳಿ ಕಳೆದ 5ವರ್ಷಗಳ ಹಿಂದೆ 5ಮಳಿಗೆಯನ್ನು  ತಾ.ಪಂ.ವತಿಯಿಂದ ನಿಮರ್ಿಸಿದ್ದು ಅದನ್ನು ಇದುವರೆಗೆ ಬಾಡಿಗೆಗೆ ನೀಡದೇ ಇರುವುದರಿಂದ ಸಕರ್ಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಠ ಉಂಟಾಗಿದ್ದು ಇದರ ಬಗ್ಗೆ ಕ್ರಮ ಕೈಗೊಳ್ಳುವಂತೆ ತಾ.ಪಂ.ಸದಸ್ಯ ಶಶಿಧರ್ ಒತ್ತಾಯಿಸಿದರು.
ತಾಲ್ಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಇದ್ದು ಕೊಳವೆ ಬಾವಿಗಳನ್ನು ಕೊರೆಸಿ ಎಂದು ಶಶಿಧರ್ ಆಗ್ರಹಿಸಿದರು. ಸಮಾಜ ಕಲ್ಯಾಣಿ ಇಲಾಖೆ ಅಧಿಕಾರಿಗಳು ಯಾವಾಗಲೂ ಕಛೇರಿಯಲ್ಲಿ ಇರುವುದಿಲ್ಲ ಎಂದು ತಾ.ಪಂ.ಸದ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.  ತಿಪಟೂರಿನಿಂದ ಸಮಾಜ ಕಲ್ಯಾಣಾಧಿಕಾರಿಯನ್ನು ನಿಯೋಜಿಸಲಾಗಿದೆ ಆದರೂ ಇದುವರೆಗೂ ಅವರು ರಿಪೋಟ್ ಮಾಡಿಕೊಂಡಿಲ್ಲ ಆದ್ದರಿಂದ ಇವರಿಗೆ ನೋಟಿಸ್ ನೀಡುವಂತೆ ಕಾರ್ಯನಿರ್ವಹಣಾಧಿಕಾರಿಗೆ ಸಲಹೆ ನೀಡಿದರು.
ಸಭೆಯಲ್ಲಿ ತಾ.ಪಂ.ಉಪಾಧ್ಯಕ್ಷೆ ಲತಾಕೇಶವಮೂತರ್ಿ, ಇ.ಓ. ತಿಮ್ಮಯ್ಯ ಸೇರಿದಂತೆ ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಚೇತನಗಂಗಾಧರ್, ಹೇಮಾವತಿ, ಲತಾ, ಸೀತಾರಾಮಯ್ಯ, ನವೀನ್, ರಮೇಶ್ಕುಮಾರ್, ಜಯಣ್ಣ  ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಕಿ ಆಕಸ್ಮಿಕದಿಂದ ಸಾವನ್ನಪ್ಪಿದ ನಾಗರತ್ನಮ್ಮ ಕುಟುಂಬದವರಿಗೆ ಸಕರ್ಾರದಿಂದ ಪರಿಹಾರ: ಶಾಸಕ ಸಿ.ಬಿ.ಎಸ್.
              

ಚಿಕ್ಕನಾಯಕನಹಳ್ಳಿ,ಮೇ.18: ತಾಲೂಕಿನ ದೊಡ್ಡೇಣ್ಣೆಗೆರೆ ಗ್ರಾಮದಲ್ಲಿ ಇತ್ತೀಚೆಗೆ ಅಗ್ನಿ ದುರಂತ ನಡೆದು ಮೂರು ಮನೆ ಸುಟ್ಟು ಹೋಗಿದ್ದು, ನಾಗರತ್ನಮ್ಮ ಎಂಬುವರು ಅಸುನೀಗಿದ್ದು ನೊಂದ ಕುಟುಂಬಗಳ ಮನೆಗೆ ಭೇಟಿ ನೀಡಿದ್ದ ಶಾಸಕ ಸಿ.ಬಿ.ಸುರೇಶ್ಬಾಬು ಸಾಂತ್ವಾನ ಹೇಳಿದರು.
ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕರು, ಈ ಬಗ್ಗೆ ಕೂಲಂಕುಷವಾಗಿ ಮಾಹಿತಿ ಪಡೆದರಲ್ಲದೆ, ಪರಿಹಾರದ ವಿಷಯವಾಗಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸಕರ್ಾರದಿಂದ ಹೆಚ್ಚಿನ ಪರಿಹಾರವನ್ನು ನೀಡುವಂತೆ ಒತ್ತಾಯಿಸದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಘಟನೆ ನಡೆದ 24 ಗಂಟೆ ಒಳಗೆ ನಾಗರತ್ನಮ್ಮ ಕುಟುಂಬದವರಿಗೆ ಪ್ರಕೃತಿ ವಿಕೋಪ ನಿಧಿಯಿಂದ ಒಂದುವರೆ ಲಕ್ಷ ರೂಗಳ ಚೆಕ್ನ್ನು ನೀಡುವಂತೆ ತಹಶೀಲ್ದಾರ್ ರವರಿಗೆ ನೀಡಿದ ಆದೇಶದ ಮೇರೆಗೆ ತಹಶೀಲ್ದಾರ್ ಕಾಮಾಕ್ಷಮ್ಮ ಶಾಸಕರ ನೇತೃತ್ವದಲ್ಲಿ ನಾಗರತ್ನಮ್ಮ ಕುಟುಂಬದವರಿಗೆ ಚೆಕ್ ವಿತರಿಸಿದರು.
 ಬೆಂಕಿ ಅವಘಡದಿಂದಾದ ನಷ್ಟ: ಬಸಮ್ಮ ಎಂಬವರ ಮನೆಯಲ್ಲಿದ್ದ ಒಂದು ಜೊತೆ ಬಂಗಾರದ  ಓಲೆ, 50 ಸಾವಿರ ರೂ ಬೆಲೆ ಬಾಳುವ ವಸ್ತುಗಳು ಹಾಗೂ ವರದಯ್ಯನವರ ಮನೆ ಮತ್ತು ಅದರಲ್ಲಿದ್ದ ಒಂದುವರೆ ಲಕ್ಷ ರೂಗಳಷ್ಟು ವಸ್ತುಗಳ ನಾಶವಾಗಿವೆ ಹಾಗೂ ಮಕ್ಕಳ ಎಸ್.ಎಸ್.ಎಲ್.ಸಿ.ಯ ಅಂಕಪಟ್ಟಿ ಸೇರಿದಂತೆ ಶಾಲಾ ದಾಖಲಾತಿಗಳು ನಾಶವಾಗಿವೆ.
ಕಲ್ಲಹಳ್ಳಿ ಅಂಗನವಾಡಿ ಸಹಾಯಕಿ ಹುದ್ದೆಗೆ ಅಜರ್ಿ ಆಹ್ವಾನ
ಚಿಕ್ಕನಾಯಕನಹಳ್ಳಿ,ಮೇ.18 : ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಬರುವ ದೊಡ್ಡಬಿದರೆ ಪಂಚಾಯಿತಿಯ ಕಲ್ಲಹಳ್ಳಿ ಅಂಗನವಾಡಿ ಸಹಾಯಕಿ ಹುದ್ದೆಗೆ ಅಜರ್ಿ ಕರೆಯಲಾಗಿದೆ ಎಂದು ಸಿ.ಡಿ.ಪಿ.ಓ. ಅನೀಸ್ ಖೈಸರ್ ತಿಳಿಸಿದ್ದಾರೆ.
ಅಂಗನವಾಡಿ ಕೇಂದ್ರ ವ್ಯಾಪ್ತಿಯ ಸಾಮಾನ್ಯ ಅಭ್ಯಥರ್ಿಗಳಿಂದ ಅಜರ್ಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲಾತಿಗಳೊಂದಿಗೆ ಜೂನ್ 15ರ ಸಂಜೆ 5.30ರೊಳಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಛೇರಿಗೆ ತಲುಪವಂತೆ ಸಲ್ಲಿಸುವುದು, ಹೆಚ್ಚಿನ ವಿವರಗಳಿಗಾಗಿ ಕಛೇರಿಯನ್ನು ಸಂಪಕರ್ಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಪೂರ್ವಭಾವಿ ಸಭೆ

ಚಿಕ್ಕನಾಯಕನಹಳ್ಳಿ,ಮೇ.18: ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಸುವ ಸಲುವಾಗಿ ಶಾಸಕ ಸಿ.ಬಿ.ಸುರೇಶ್ಬಾಬು ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಇದೇ 20ರ ಸೋಮವಾರ ಮಧ್ಯಾಹ್ನ 3ಗಂಟೆಗೆ ತಾಲೂಕು ಕಛೇರಿಯಲ್ಲಿ ಕರೆಯಲಾಗಿದೆ ಎಂದು ಕಾರ್ಯದಶರ್ಿ ಮಂಜುನಾಥರಾಜ ಅರಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಲೋಕಾಯುಕ್ತ ನಿರೀಕ್ಷಕರ ಜನ ಸಂಪರ್ಕ ಸಭೆ
ಚಿಕ್ಕನಾಯಕನಹಳ್ಳಿ,ಮೇ.18 : ತಾಲ್ಲೂಕಿನ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಇದೇ 21ರಂದು ಮಂಗಳವಾರ ಮಧ್ಯಾಹ್ನ 3ಗಂಟೆಯಿಂದ ಸಂಜೆ 5ಗಂಟೆಯವರೆಗೆ ತುಮಕೂರು ಲೋಕಾಯುಕ್ತ ಪೋಲಿಸ್ ನಿರೀಕ್ಷಕರು ಜನಸಂಪರ್ಕ ಸಭೆಯನ್ನು ನಡೆಸಲಿದ್ದು ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ತಹಶೀಲ್ದಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.