Tuesday, December 23, 2014


ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಉತ್ಸವ ಹಾಗೂ ರೈತರ ದಿನಾಚಾರಣೆ 


ಚಿಕ್ಕನಾಯಕನಹಳ್ಳಿ,: ಸುಪ್ರಿಂ ಕೋಟರ್್ನ ನೇಮಿಸಿದ ಸಿ.ಇ.ಸಿ.ಶಿಫಾರಸ್ಸಿನಂತೆ, ತಾಲ್ಲೂಕಿನ ಗಣಿ ಭಾದಿತ ಪ್ರದೇಶಗಳಿಗೆ ಕೇಂದ್ರ ಸಕರ್ಾರ 94.77 ಕೋಟಿ ರೂಗಳನ್ನು ಬಿಡುಗಡೆ ಮಾಡಿದ್ದು ಕೃಷಿ ಇಲಾಖೆಗೆ 3.54 ಕೋಟಿ ರೂ ನೀಡಲಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಹೇಳಿದರು.
ಪಟ್ಟಣದ ಕೃಷಿ ಇಲಾಖಾ ವತಿಯಿಂದಿ ಕಸಬಾ ರೈತ ಸಂಪರ್ಕ ಕೇಂದ್ರದಲ್ಲಿ ನಡೆದ ಕೃಷಿ ಉತ್ಸವ ಹಾಗೂ ರೈತರ ದಿನಾಚಾರಣೆ ರೈತರಿಗಾಗಿ ರೈತರಿಂದ ರೈತರಿಗೋಸ್ಕರ 2014ನೇ ಕೃಷಿ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಅನುದಾನ ಒಂದು ವರ್ಷದ ಅವಧಿಗೆ ನೀಡಿದ್ದು, ಈ ಹಣದಲ್ಲಿ ಕೃಷಿ ಇಲಾಖೆಯಿಂದ ಚೆಕ್ಡ್ಯಾಂ, ಹಿಂಗುಗುಂಡಿ, ತಡೆಅಣೆ ನಿಮರ್ಿಸುವ ಮೂಲಕ ಬಿದ್ದ ಮಳೆಯನ್ನು  ಹಿಂಗಿಸಲು ಸಹಾಯವಾಗುತ್ತದೆ ಇದರಿಂದ ಅಂತರ್ಜಲ ಹೆಚ್ಚಾಗುತ್ತದೆ ಎಂದರು.
ರೈತರು ದೇಶದ ಬೆನ್ನೆಲುಬು ರೈತರಿಲ್ಲದೆ ಬದುಕಲು ಸಾಧ್ಯವಿಲ್ಲ, ಶೇ.80ರಷ್ಟು ರೈತರು ಕೃಷಿಯ ಚಟುವಟಿಕೆಗಳಲ್ಲಿ ತೊಡಗಿಡಿಸಿಕೊಂಡಿದ್ದಾರೆ ಸಕರ್ಾರ ರೈತರು ಕೃಷಿ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಯಂತ್ರೋಪಕರಣ ಹಾಗೂ ಔಷಧಿ, ರಸಗೊಬ್ಬರವನ್ನು ಸಬ್ಸಿಡಿ ದರದಲ್ಲಿ ನೀಡುತ್ತಿದ್ದು ಇದರ ಉಪಯೋಗ ಪಡೆಯುವಂತೆ ಸಲಹೆ ನೀಡಿದ ಅವರು, ಕೃಷಿ ಇಲಾಖೆಯ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ, ಧರ್ಮಸ್ಥಳ ಗ್ರಾಮೀಣ ಅಭಿವೃದ್ದಿ ಸಂಸ್ಥೆ ನಮ್ಮ ಹಿಂದಿನ ಕೃಷಿ ಪದ್ದತಿಯನ್ನು ಅವಲಂಬಿಸಲು ರೈತರಿಗೆ ಪ್ರೋತ್ಸಾಹ ನೀಡುತ್ತಿದ್ದು ಸಕರ್ಾರ ರೈತರಿಗೆ ಧರ್ಮಸ್ಥಳ ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಮೂಲಕ ಶೇ.75ರಷ್ಟು ಹಣ ನೀಡುತ್ತಿದೆ ಉಳಿದ ಶೇ.25 ರಷ್ಟು ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ವಿನಿಯೋಗಿಸಿ ರೈತರಿಗೆ ಯಂತ್ರೋಪಕರಣವನ್ನು ಅತ್ಯಂತ ಕಡಿಮೆ ದರದಲ್ಲಿ ಬಾಡಿಗೆಗೆ ನೀಡುತ್ತಿದೆ, ರೈತರು ಇದರ ಉಪಯೋಗ ಪಡೆಯಬೇಕೆಂದು ಸಲಹೆ ನೀಡಿದರು.
ಹೇಮಾವತಿ ನಾಲೆಯಿಂದ ತಾಲ್ಲೂಕಿಗೆ ನೀರು ಹರಿಯುವುದರಿಂದ ಶಟ್ಟಿಕೆರೆ, ಹಂದನಕೆರೆ, ಕಸಬಾ ಹೋಬಳಿಗಳಿಗೆ ಕುಡಿಯುವ ನೀರು ಲಭಿಸಲಿದೆ ಮಹಿಳೆಯರಿಗೆ ಕೃಷಿ ಹಾಗೂ ಡೈರಿ ನಡೆಸಲು ಹಸುಗಳನ್ನು ನೀಡುವ ಕಾರ್ಯಕ್ರಮ ಹಮ್ಮಿಕೊಳಲಾಗುತ್ತದೆ, ಇದರಿಂದ ಮಹಿಳೆಯರು ತಮ್ಮ ಕುಟುಂಬಗಳ ಆಥರ್ಿಕ ಮಟ್ಟವನ್ನು ಹೆಚ್ಚಿಸಿಕೊಳ್ಳುವಂತೆ ಸಲಹೆ ನೀಡಿದರು.
ಸಕರ್ಾರ ರಾಗಿ, ಭತ್ತಕ್ಕೆ ಬೆಂಬಲ ಬೆಲೆ ನೀಡಲು ತೀಮರ್ಾನಿಸಿದೆ, ಬಿಳಿಗೆರೆ, ದೊಡ್ಡ ಎಣ್ಣೆಗೆರೆ, ಕಾತ್ರಿಕೆಹಲ್ನಲ್ಲಿ ವಿದ್ಯುತ್ ಉಪಸ್ಥಾವರಗಳನ್ನು ನಿಮರ್ಿಸಿ ಕಾಯರ್ಾರಂಭ ಮಾಡಿದ್ದು ಸಾಲ್ಕಟ್ಟೆ ಬಳಿ ವಿದ್ಯುತ್ ಸೆಬ್ ಸ್ಟೇಷನ್ ಮಾಡಲು ಸಕರ್ಾರ ಮಂಜೂರಾತಿ ನೀಡಿದೆ ಇದರಿಂದ ತಾಲ್ಲೂಕಿನಲ್ಲಿ ವಿದ್ಯುತ್ ಅಭಾವ ಕಡಿಮೆಯಾಗಲಿದೆ ಎಂದರು.
ಕೃಷಿ ತಜ್ಞಾ ಡಾ||ಕೆ.ಜಿ.ಬೋರಯ್ಯ ಮಾತನಾಡಿ ರೈತರು ಬೇಸಾಯ ಮಾಡುವಾಗ ನಾಲ್ಕು ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು ಮಾಗಿ ಉಳುಮೆ ಮಾಡಿ,  ಬಿಜೋಪಚಾರ, ನೀರು ಸಂರಕ್ಷಣೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ರೈತರಿಗೆ ಸಲಹೆ ನೀಡಿದರು. ಬಿಜೋಪಚಾರ ಮಾಡಿದರೆ ಫಸಲಿಗೆ ಮುಂದೆ ಬರುವಂತಹ ರೋಗ ಹಾಗೂ ಮಳೆ ಕಡಿಮೆಯಾದರೂ ಸಹ ಪೈರು ತಡೆಯುತ್ತದೆ. ಮಳೆ ನೀರು ಸಂರಕ್ಷಣೆ ಮಾಡುವುದರಿಂದ ಭೂಮಿಯಲ್ಲಿ ನೀರು ಹಿಂಗಿ ಅಂತರ್ಜಲ ಹೆಚ್ಚುತ್ತದೆ. ರೈತರು ತಮ್ಮ ಹೊಲಗಳಲ್ಲಿ ಬೆಳೆದ ಮಣ್ಣು ಕೊಚ್ಚಿಕೊಂಡು ಹೋಗದಂತೆ ನೋಡಿಕೋಳ್ಳಬೇಕು ಇದಕ್ಕೆ ರೈತರಿಗೆ ಆಸಕ್ತಿ ಇರಬೇಕು ಎಂದರು.
ಕೃಷಿ ತಜ್ಞ ಡಾ.ಪಾಲಣ್ಣ ಮಾತನಾಡಿ ರೈತರು ತಾವು ಬೆಳೆದ ಬೆಳೆಗೆ ರೋಗ ಬಂದಾಗ ಔಷಧಿ ಸಿಂಪಡಿಸುವುದು. ಮುಖ್ಯವಾಗಿ ಅದು ಹೇಗೆ ಬಂದಿದೆ ಇದ್ಕಕೆ ಪರಿಹಾರವೇನು ಎಂದು ಕೃಷಿ ತಜ್ಞರ ಜೊತೆಯಲ್ಲಿ ಚಚರ್ಿಸಿ ಪರಿಹಾರ ಪಡೆದುಕೊಳ್ಳುವಂತೆ ಸೂಚಿಸಿದರು, ರೈತರು ಬೆಳೆ ಬೆಳೆಯುವ ಮುನ್ನ ತಮ್ಮ ಜಮೀನಿನಲ್ಲಿರುವ ಮಣ್ಣನ್ನು ಪರಿಕ್ಷಿಸಿ ಬೆಳೆ ಬೆಳೆಯುವುದರಿಂದ ರೈತರಿಗೆ ಅನೂಕೂಲದ ಜೊತೆಯಲ್ಲಿ ಆಥರ್ಿಕವಾಗಿ ಲಾಭ ಹೊಂದಬಹುದು ಎಂದರಲ್ಲದೆ  ಕೃಷಿ ಭೂಮಿ ಕಡಿಮೆಯಾಗುತ್ತಿದ್ದು ಹೆಚ್ಚು ಹೆಚ್ಚು ಆಹಾರ ಬೆಳೆಯುವ ರಭಸದಲ್ಲಿ ರಸಗೊಬ್ಬರವನ್ನು ಹಾಕುವುದರಿಂದ ಭೂಮಿ ಬರಡಾಗುವುದರ ಜೊತೆಯಲ್ಲಿ ಬೆಳೆಗಳಿಗೆ ರೋಗಗಳು ಹೆಚ್ಚಾಗುತ್ತವೆ ಸಾವಯವ ಗೊಬ್ಬರ ಬಳಕೆ ಕಡಿಮೆಯಾಗುವುದರಿಂದಲೂ ಬೆಳೆಗಳಿಗೆ ಕೀಟಬಾಧೆ ಜಾಸ್ತಿಯಾಗುತ್ತದೆ ಎಂದರು.
     ಸಹಾಯಕ ಕ್ಷéಷಿ ಉಪನಿದರ್ೇಶಕ ಹೆಚ್.ಹೊನ್ನೇದಾಸೇಗೌಡ ಪ್ರಾಸ್ತಾವಿಕ ಮಾತುಗಳನ್ನಾಡಿ,  ಚೌದ್ರಿ ಚರಣ್ಸಿಂಗ್ ಭೂ ಸುಧಾರಣೆಯಂತಹ ಕಾರ್ಯಕ್ರಮಗಳನ್ನು ತಂದಿದ್ದಾರೆ,  ಕೃಷಿ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿ ಅನೇಕ ಕೃಷಿಗೆ ಸಂಭಂದಿಸಿದ ಪುಸ್ತಕಗಳನ್ನು ರಚಿಸಿದ್ದಾರೆ, ಇವರ ಜನ್ಮ ದಿನಾಚರಣೆ ಅಂಗವಾಗಿ ಕೃಷಿ ಉತ್ಸವ ಹಾಗೂ ರೈತರ ದಿನಾಚರಣೆ ಹಮ್ಮಿಕೊಳ್ಳಲಾಗುತ್ತದೆ ಎಂದರು.
     ಕಾರ್ಯಕ್ರಮದಲ್ಲಿ ತಾ.ಪಂ.ಅಧ್ಯಕ್ಷೆ ಲತಾಕೇಶವಮೂತರ್ಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಜಾನಮ್ಮ ರಾಮಚಂದ್ರಯ್ಯ, ಎನ್.ಜಿ.ಮಂಜುಳ, ನಿಂಗಮ್ಮರಾಮಯ್ಯ, ತಾಲ್ಲೂಕ್ ಪಂಚಾಯ್ತಿ ಸದಸ್ಯರಾದ ಚೇತನಗಂಗಾಧರ್, ಹೇಮಾವತಿ ,ಲತಾ ವಿಶ್ವೇಶ್ವರಯ್ಯ, ಕವಿತಾಪ್ರಕಾಶ್, ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್.ನಟರಾಜ್, ಉಪಾದ್ಯಕ್ಷ ನಾಗರಾಜಪ್ಪ, ಜಿಲ್ಲಾ ಪ್ರತಿನಿಧಿಸಿ.ಬಿ.ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು. 
  ಈ ಸಂದರ್ಭದಲ್ಲಿ ಪ್ರಗತಿ ಪರ ರೈತರಾದ ಕಾಂತರಾಜ್, ಬಿ.ಎನ್.ಲೋಕೇಶ್, ಜಗದಾಂಬ, ಬಸವರಾಜುರವರಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.

ಎ.ಪಿ.ಎಂ.ಸಿ ಸದಸ್ಯರ  ಉತ್ತರ ಭಾರತದ ರಾಜ್ಯದ ಎ.ಪಿ.ಎಂ.ಸಿ. ಸ್ಥಳಗಳಿಗೆ ಪ್ರವಾಸ 

ಚಿಕ್ಕನಾಯಕನಹಳ್ಳಿ,ಡಿ.23 : ತಾಲ್ಲೂಕಿನ ಎ.ಪಿ.ಎಂ.ಸಿ ಸದಸ್ಯರು ಸಕರ್ಾರದ ವತಿಯಿಂದ  ಉತ್ತರ ಭಾರತದ ರಾಜ್ಯದ ಎ.ಪಿ.ಎಂ.ಸಿ. ಸ್ಥಳಗಳಿಗೆ ಪ್ರವಾಸ ತೆರಳುವ ಮುನ್ನ  ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿರವರ ಮಾರ್ಗದರ್ಶನ ಪಡೆಯಲು ಅವರ ನಿವಾಸಕ್ಕೆ ತೆರಳಿದ್ದರು. 
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಉತ್ತರ ಭಾರತದಲ್ಲಿನ ಕೃಷಿ ಮಾರುಕಟ್ಟೆಗಳು ಉತ್ತಮವಾಗಿವೆ ಅಲ್ಲಿನ ಸೇವೆಗಳು ಜನರಿಗೆ ಹತ್ತಿರವಾಗಿದ್ದು ಅಲ್ಲಿನ ಸೇವೆಗಳನ್ನು, ಆಡಳಿತವನ್ನು ತಿಳಿದು ಉತ್ತಮವಾಗಿರುವುದನ್ನು ಚಿಕ್ಕನಾಯಕನಹಳ್ಳಿಗೆ ಜನತೆಗೆ ನೀಡುವಂತೆ ಎ.ಪಿ.ಎಂ.ಸಿ ಸದಸ್ಯರಿಗೆ ಕಿವಿ ಮಾತು ಹೇಳಿದರು.
ಎ.ಪಿ.ಎಂ.ಸಿ ಸದಸ್ಯ ಶಿವರಾಜು ಮಾತನಾಡಿ, ಕೃಷಿ ಮಾರುಕಟ್ಟೆ ಸಮಿತಿಯ ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಎರಡು ವರ್ಷಗಳಾಗಿದ್ದು ಜನತೆಗೆ ಉತ್ತಮ ಆಡಳಿತ ನೀಡುತ್ತಿದ್ದೇವೆ, ಉತ್ತರ ಭಾರತ ರಾಜ್ಯಗಳಾದ ದೆಹಲಿ, ಚಂಡಿಗಡ, ಜೈಪುರ, ರಿಶಿಕೇಶ, ಆಗ್ರ, ಹರಿದ್ವಾರ, ಅಮೃತಸರ, ಪ್ರದೇಶಗಳ ಕೃಷಿ ಮಾರುಕಟ್ಟೆಗಳ ಅಧ್ಯಯನಕ್ಕಾಗಿ ಹಾಗೂ ಪ್ರವಾಸವಕ್ಕಾಗಿ 15ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು ಈ ಪ್ರವಾಸಕ್ಕಾಗಿ ಮಾಜಿ ಶಾಸಕರು ಹೆಚ್ಚು ಬೆಂಬಲ ವ್ಯಕ್ತಪಡಿಸಿದ್ದರಲ್ಲದೆ ಅವರ ಮಾರ್ಗದರ್ಶನ ಪಡೆಯುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಎ.ಪಿ.ಎಂ.ಸಿ ಅಧ್ಯಕ್ಷ ಬಿ.ಸಣ್ಣಯ್ಯ, ದ್ರಾಕ್ಷಾಯಣಮ್ಮ, ಸಿಂಗದಹಳ್ಳಿ ರಾಜ್ಕುಮಾರ್  ಮತ್ತಿತರರು ಉಪಸ್ಥಿತರಿದ್ದರು