Monday, March 23, 2015

ಕೇಂದ್ರ ಸಕರ್ಾರದ ಭೂಸ್ವಾಧೀನ ಪ್ರಕ್ರಿಯೆ ಬಗ್ಗೆ ಆಂದೋಲನ : ಸೀಮೆಎಣ್ಣೆ ಕೃಷ್ಣಯ್ಯ
ಚಿತ್ರ ಶೀಷರ್ಿಕೆ :
                            

ಚಿಕ್ಕನಾಯಕನಹಳ್ಳಿ ಪಟ್ಟಣದ ಸೀಮೆಎಣ್ಣೆ ಕೃಷ್ಣಯ್ಯನವರು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದಶರ್ಿಯಾಗಿ ನೇಮಕವಾಗಿರುವುದಕ್ಕೆ ತಾಲ್ಲೂಕು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು. ಮುಖಂಡರಾದ ಹೆಚ್.ಬಿ.ಎಸ್.ನಾರಾಯಣಗೌಡ, ಕೆ.ಜಿ.ಕೃಷ್ಣೆಗೌಡ, ಉದ್ರಿಲೋಕೇಶ್, ಚಂದ್ರಶೇಖರ್, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.
ಚಿಕ್ಕನಾಯಕನಹಳ್ಳಿ,ಮಾ. : ಕೇಂದ್ರ ಸಕರ್ಾರ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ರೈತರಿಗೆ ಮಾರಕವಾಗಲಿದೆ ಈ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ಆಂದೋಲನವನ್ನು ಕೈಗೆತ್ತಿಕೊಳ್ಳುವುದಾಗಿ  ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದಶರ್ಿ ಸೀಮೆಎಣ್ಣೆ ಕೃಷ್ಣಯ್ಯ ಹೇಳಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜನರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡುವ ಅಗತ್ಯವಿದೆ ಎಂದರಲ್ಲದೆ,  ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲು ಏಪ್ರಿಲ್ ತಿಂಗಳ ಮೊದಲ ವಾರದಲಿ ಯೋಜನೆ ರೂಪಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಸದಸ್ಯತ್ವ ನೊಂದಾವಣಿ ಕಾರ್ಯಕ್ಕೆ ಹೆಚ್ಚು ಒತ್ತು ನೀಡಲಾಗುವುದು, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹಗಲಿರುಳು ಶ್ರಮಿಸುವುದಾಗಿ ಹೇಳಿದ ಅವರು, ಕಾಂಗ್ರೆಸ್ ತತ್ವ ಸಿದ್ದಾಂತಗಳಿಗೆ ಬದ್ದನಾಗಿ ಎಲ್ಲಾ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವುದರಿಂದ ನನ್ನನ್ನು ಜಿಲ್ಲಾ ಪ್ರಧಾನ ಕಾರ್ಯದಶರ್ಿಯನ್ನಾಗಿ ಆಯ್ಕೆ ಮಾಡಿದ್ದಾರೆ, ಮುಂದಿನ ದಿನಗಳಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಎಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಾಲ್ಲೂಕಿನಲ್ಲಿ ಪಕ್ಷದ ಏಳಿಗೆಗೆ ಶ್ರಮಿಸುವುದಾಗಿ ತಿಳಿಸಿದರು.
ಕಾಂಗ್ರೆಸ್ ಸಾಮಾಜಿಕ ನ್ಯಾಯಕ್ಕೆ ಬದ್ದವಾಗಿದ್ದು ಮುಂದಿನ ತಿಂಗಳು ತಾಲ್ಲೂಕಿನ ಕಾಂಗ್ರೆಸ್ ಕಾರ್ಯರ್ತರ ಸಮಾವೇಶ ನಡೆಸಲಾಗುವುದು, ನನ್ನನ್ನು ಜಿಲ್ಲಾ ಕಾಂಗ್ರೆಸ್ ಘಟಕದ ಕಾರ್ಯದಶರ್ಿಯಾಗಿ ಮಾಡಿರುವ ಜಿಲ್ಲಾ ಅಧ್ಯಕ್ಷರು  ಹಾಗೂ ರಾಜ್ಯ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸುತ್ತಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಯ್ಯನವರು ಹಾಗೂ ರಾಜ್ಯಾಧ್ಯಕ್ಷ ಆರ್.ಪರಮೇಶ್ವರ್ ನೇತೃತ್ವದಲ್ಲಿ ಸದೃಢವಾಗುತ್ತಿದ್ದು ಜಿಲ್ಲೆಯಲ್ಲಿ ಸಂಸದರಾದ ಎಸ್.ಪಿ.ಮುದ್ದಹನುಮೇಗೌಡರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಪಿಅಹಮದ್ರವರ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಹೆಚ್.ಬಿ.ಎಸ್.ನಾರಾಯಣಗೌಡ, ಕೆ.ಜಿ.ಕೃಷ್ಣೆಗೌಡ, ಉದ್ರಿಲೋಕೇಶ್, ಚಂದ್ರಶೇಖರ್, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.



ದೇವಿ ಮಹಾತ್ಮೆ ಪೌರಾಣಿಕ ನಾಟಕ ಪ್ರದರ್ಶನ
ಚಿತ್ರ ಶೀಷರ್ಿಕೆ :
                                     

ಚಿಕ್ಕನಾಯಕನಹಳ್ಳಿ ಪಟ್ಟಣದ ಕೆಂಪಮ್ಮದೇವಿ ಬಯಲು ನಾಟಕ ಕಲಾಸಂಘದ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ನಡೆದ ದೇವಿ ಮಹಾತ್ಮೆ ನಾಟಕದ ಒಂದು ದೃಶ್ಯ.


: ಚಿಕ್ಕನಾಯಕನಹಳ್ಳಿ : ್ಟಣದ ಶ್ರೀ ಕೆಂಪಮ್ಮದೇವಿ ಬಯಲು ನಾಟಕ ಕಲಾಸಂಘದ ವತಿಯಿಂದ 71ನೇ ವರ್ಷದ ಶ್ರೀದೇವಿ ಮಹಾತ್ಮೆ ಅಥವಾ ರಕ್ತಬಿಜಾಸುರವ ವಧೆ ಎಂಬ ಪೌರಾಣಿಕ ನಾಟಕವನ್ನು ಯುಗಾದಿ ಹಬ್ಬದ ಅಂಗವಾಗಿ ಪ್ರದಶರ್ಿಸಲಾಯಿತು.
ನಾಟಕವನ್ನು ಪಟ್ಟಣದ ಕಾಳಮ್ಮನಗುಡಿ ಬೀದಿಯಲ್ಲಿರುವ ಶ್ರೀ ಸಿದ್ದೇಶ್ವರಸ್ವಾಮಿ ಮಠದ ಮುಂಭಾಗದ  ಶ್ರೀ ಕೆಂಪಮ್ಮದೇವಿ ಬಯಲು ರಂಗಮಂದಿರದಲ್ಲಿ ತುಮಕೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿದರ್ೇಶನಾಲಯದ ಸಹಯೋಗದೊಂದಿಗೆ ಯುಗಾದಿ ಹಬ್ಬದ ರಾತ್ರಿ ಪ್ರದಶರ್ಿಸಲಾಯಿತು.
ನಾಟಕವನ್ನು ನೋಡಲು ಪಟ್ಟಣದ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಜನರು ಆಗಮಿಸಿ ರಾತ್ರಿಯಿಡೀ ನಡೆದ ನಾಟಕವನ್ನು ವೀಕ್ಷಿಸಿದರು. ನಾಟಕವು ರಕ್ತಬಿಜಾಸುರನು ತನ್ನ ಅಹಂಕಾರದಿಂದ ಲೋಕವನ್ನು ಅಲ್ಲೋಲಕಲ್ಲೋಲ ಮಾಡಲು ಯತ್ನಿಸಿದಾಗಿ ತ್ರಿಮೂತರ್ಿಗಳಾದ ಬ್ರಹ್ಮ, ವಿಷ್ಣು, ಮಹೇಶ್ವರರು ಪಾರ್ವತಿ ದೇವಿಗೆ ಶಕ್ತಿಯನ್ನು ನೀಡಿ ರಕ್ತಬಿಜಾಸುರನನ್ನು ಸಂಹರಿಸುವುದೇ ನಾಟಕದ ಸಾರಂಶವಾಗಿದೆ.





No comments:

Post a Comment