Friday, March 20, 2015

ಡಿ.ಕೆ.ರವಿಯವರ ಸಾವನ್ನು ಸಿಬಿಐಗೆ ವಹಿಸದಿದ್ದರೆ ಉಗ್ರಹೋರಾಟ : ತಾ.ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಪರಮೇಶ್ವರ್

ಚಿಕ್ಕನಾಯಕನಹಳ್ಳಿ, : ಐಎಎಸ್ ಅಧಿಕಾರಿ ಡಿ.ಕೆ.ರವಿಯವರ ಸಾವಿನ ಬಗ್ಗೆ ಸಕರ್ಾರ ಸಿಬಿಐಗೆ ವಹಿಸುವ ಬಗ್ಗೆ ದೃಢ ನಿಧರ್ಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಉಗ್ರಹೋರಾಟ ಕೈಗೊಳ್ಳಲಾಗುವುದು ಎಂದು ತಾ.ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಪರಮೇಶ್ವರ್ ಹೇಳಿದರು.
ಪಟ್ಟಣದ ಪಟೇಲ್ ಗರುಡೇಗೌಡ ಅಧ್ಯಯನ ಕೇಂದ್ರದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಐಎಎಸ್ ಅಧಿಕಾರಿ ಡಿ.ಕೆ.ರವಿರವರ ನಿಧನಕ್ಕೆ ಶ್ರದ್ದಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಡಿ.ಕೆ.ರವಿರವರು ಜಾತಿಗೆ ಮೀರಿ ಬೆಳೆದ ವ್ಯಕ್ತಿಯಾಗಿದ್ದರು ಅವರ ಸಾವಿನಿಂದ ಕನರ್ಾಟಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಮುಖಂಡ ನಾರಾಯಣಗೌಡ ಮಾತನಾಡಿ, ಮುಖ್ಯಮಂತ್ರಿಗಳು ಜನರ ಭಾವನೆಗೆ ತಕ್ಕಂತೆ ನಿಧರ್ಾರ ಕೈಗೊಳ್ಳಬೇಕು, ಡಿ.ಕೆ.ರವಿರವರ ಸಾವಿನ ಬಗ್ಗೆ ಇಡೀ ರಾಜ್ಯವೇ ಸಿಬಿಐಗೆ ವಹಿಸುವಂತೆ ಒತ್ತಾಯಿಸುತ್ತಿದ್ದರೂ ಸಕರ್ಾರ ಮಾತ್ರ ಸಿಬಿಐಗೆ ವಹಿಸುಲು ಹಿಂದೇಟು ಹಾಕಲು ಕಾರಣವೇನು ಎಂದರು.
ಈ ಸಂದರ್ಭದಲ್ಲಿ ತಾ.ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಶ್ರೀನಿವಾಸಮೂತರ್ಿ, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಬಿ.ಪ್ರಕಾಶ್, ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಹೆಚ್.ಎಸ್.ಪ್ರಕಾಶ್, ಬೆಳಗುಲಿವೆಂಕಟೇಶ್, ಕೆ.ಜಿ.ಕೃಷ್ಣೆಗೌಡ, ಸತೀಶ್, ರಾಜಣ್ಣ, ಗಂಗಯ್ಯ, ನಿಶಾನಿಕಿರಣ್ ಮತ್ತಿತರರು ಉಪಸ್ಥಿತರಿದ್ದರು.