Saturday, July 9, 2016



ದಿ.ರೇವಣ್ಣನವರ ಹಾಗೂ ಕೆ.ಬಸವಯ್ಯನವರ 10ನೇ ವರ್ಷದ ವಾಷಿಕೋತ್ಸವ 
ಚಿಕ್ಕನಾಯಕನಹಳ್ಳಿ,ಜು.09 : ದಿ.ರೇವಣ್ಣನವರು ನಿಸ್ವಾರ್ಥ ಸೇವೆಗೆ ಹೆಸರಾಗಿದ್ದರು, ಜಾತಿ ಬೇದ ಮರೆತು ತಮ್ಮ ಬಳಿ ಸಹಾಯಕ್ಕಾಗಿ ಬಂದವರೆಲ್ಲರಿಗೂ ಶಿಕ್ಷಣದ ನೆರವು ನೀಡಿ, ಸಕರ್ಾರಿ ಕೆಲಸ ದೊರಕಿಸಿ, ಸಮಾಜದ ಉತ್ತಮ ವ್ಯಕ್ತಿಗಳಾಗುವಂತೆ ಮಾಡಿದರು ಎಂದು ತುಮಕೂರು ಶ್ರೀದೇವಿ ಮೆಡಿಕಲ್ ಕಾಲೇಜಿನ ಡೀನ್ ಡಾ.ಸಿ.ಎಂ.ಗುರುಮೂತರ್ಿ ಹೇಳಿದರು.
ಪಟ್ಟಣದ ಕಂಬಳಿ ಸೊಸೈಟಿ ಮುಂಭಾಗದಲ್ಲಿ ಸ್ಥಾಪಿಸಿರುವ ದಿವಂಗತ ನಿವೃತ್ತ ಅಪರ ಕೃಷಿ ನಿದರ್ೇಶಕರಾಗಿದ್ದ ಸಿ.ಎಂ.ರೇವಣ್ಣ ಹಾಗೂ ನಿವೃತ್ತ ಜಿಲ್ಲಾ ವಿದ್ಯಾಧಿಕಾರಿ ಕೆ.ಬಸವಯ್ಯನವರ ಪುತ್ಥಳಿ ಪ್ರತಿಷ್ಠಾಪನೆಯ 10ನೇ ವರ್ಷದ ಪೂಜಾ ಕಾರ್ಯಕ್ರಮ ಹಾಗೂ ಕನಕ ಭವನದಲ್ಲಿ ನಡೆದ ವಾಷರ್ಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
   ಪುತ್ಥಳಿ ಅನಾವರಣ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಬಡವಿದ್ಯಾಥರ್ಿಗಳ ಶಿಕ್ಷಣಕ್ಕೆ ನೆರವು ನೀಡಿದ ಮಹಾನ್ ವ್ಯಕ್ತಿ ರೇವಣ್ಣ. ಸುಮಾರು 300ಕ್ಕೂ ಹೆಚ್ಚು ಜನರಿಗೆ ಸಕರ್ಾರಿ ಕೆಲಸ ದೊರಕುವಂತೆ ಮಾಡಿ, ಸಮಾಜದ ಏಳಿಗೆಗೆ ಶ್ರಮಿಸಿದವರು. ಅವರು ಹಾಕಿಕೊಟ್ಟ ದಾರಿಯಲ್ಲಿ ಕೆಲಸ ಮಾಡಿದವರು ಇಂದು ಸಮಾಜದ ಬಡ ವಿದ್ಯಾಥರ್ಿಗಳ ಶೈಕ್ಷಣಿಕ ಅಭಿವೃದ್ದಿಗೆ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದರು.
ಪುತ್ಥಳಿ ಅನಾವರಣ ಸಮಿತಿ ಗೌರವಾಧ್ಯಕ್ಷ ಕ್ಯಾಪ್ಟನ್ ಸೋಮಶೇಖರ್ ಮಾತನಾಡಿ, ರೇವಣ್ಣನವರ ಹಾಗೂ ಬಸವಯ್ಯ ಅವರ ನೆನಪಿಗಾಗಿ ಪುತ್ಥಳಿಗಳನ್ನು ಸ್ಥಾಪಿಸಲಾಗಿದೆ. ಹಾಗೂ ಸೇವಾ ಸಮಿತಿ ರಚಿಸಿಕೊಂಡು ಪ್ರತಿ ವರ್ಷ ಕಾರ್ಯಕ್ರಮ ಆಯೋಜಿಸಲಾಗುತ್ತಿರುವುದು, ಬಡವಿದ್ಯಾಥರ್ಿಗಳಿಗೆ ನೋಟ್ಬುಕ್, ಕನ್ನಡ ಇಂಗ್ಲಿಷ್ ನಿಘಂಟನ್ನು ನೀಡುತ್ತಿರುವುದು ಪ್ರಶಂಸನೀಯ ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ನೋಟ್ಬುಕ್ ವಿತರಿಸಲಾಯಿತು. ಪುತ್ಥಳಿ ಅನಾವಾರಣ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಹಾಗೂ ನಿವೃತ್ತ ಸಹಾಯಕ ಕೃಷಿ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. 
ಸಮಿತಿ ಅಧ್ಯಕ್ಷ ದೊರೆಮುದ್ದಯ್ಯ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಜಂಟಿ ಕೃಷಿ ನಿದರ್ೇಶಕ ಪಿ.ಮೋಹನ್, ಪತ್ರಿಕೋದ್ಯಮಿ ಸಿ.ಜಿ.ಮುದ್ದುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಪಟ್ಟಣದಲ್ಲಿ ಸ್ವಚ್ಛತೆಗೆ ಪುರಸಭೆ ಮುಂದಾಗುವರೇ ? 
ಚಿಕ್ಕನಾಯಕನಹಳ್ಳಿ,ಜು.09 : ಪಟ್ಟಣದ ಪುರಸಭಾ ವ್ಯಾಪ್ತಿಯಲ್ಲಿ ಬರುವ ಬಸ್ನಿಲ್ದಾಣ ನೆಹರು ವೃತ್ತ ದೇವಾಂಗ ಬೀದಿ ಸೇರಿದಂತೆ ಪಟ್ಟಣದ 23 ವಾಡರ್್ಗಳಲ್ಲಿ ಕಸದ ರಾಶಿಯೇ ಹರಡಿದ್ದು ಇದರಿಂದ ಪಟ್ಟಣದಲ್ಲಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.
ಪಟ್ಟಣದ  ಹೊಸ ಬಸ್ ನಿಲ್ದಾಣದ ಸುತ್ತಮುತ್ತಲ ಹೂವಿನ ಅಂಗಡಿಗಳು ಕಾಫಿ, ಟೀ, ಬಾಳೆ ಹಣ್ಣಿನ ಅಂಗಡಿಗಳಲ್ಲಿ ಬರುವ ತ್ಯಾಜ್ಯ ರಸ್ತೆ ಬದಿ ಚೆಲ್ಲಾಡುತ್ತಿದ್ದರೂ ಪುರಸಭೆ ತಲೆ ಕೆಡಿಸಿಕೊಂಡಿಲ್ಲ,  ಹೊಸ ಬಸ್ನಿಲ್ದಾಣದ ಹೈಮಾಸ್ಟ್ ಲೈಟ್ ಬಳಿ ಇಟ್ಟಿರುವ ಕಂಟೇನರ್ಗೆ ಕಸ ಹಾಕದೇ ಅಂಗಡಿ ಮಾಲೀಕರುಗಳು ಕಸವನ್ನು ಎಲ್ಲೆಂದರಲ್ಲಿ ಎಸೆದು ಹೋಗುತ್ತಿರುವುದರಿಂದ ಈ ಭಾಗದಲ್ಲಿ ಹಂದಿಗಳ ಹಾವಳಿ ಹೆಚ್ಚಿದೆ.
 ಖಾಸಗಿ ಬಸ್ ನಿಲ್ದಾಣದಲ್ಲಿರುವ ಚರಂಡಿ ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿದೆ, ಅಕ್ಕಪಕ್ಕದ ಪೆಟ್ಟಿಗೆ ಅಂಗಡಿಯವರು ಟೀ, ಕಾಫಿ, ಲೋಟಗಳನ್ನು ಚರಂಡಿಯಲ್ಲಿ ಹಾಕುತ್ತಿರುವುದರಿಂದ ಚರಂಡಿ ಘನತ್ಯಾಜ್ಯದಿಂದ ತುಂಬಿಕೊಂಡು ದುನರ್ಾತ ಬೀರುತ್ತಿದೆ. ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆ ನೀರು ಚರಂಡಿಯಲ್ಲಿ ನಿಂತು, ತ್ಯಾಜ್ಯ ಕೊಳೆಯುತ್ತಿದೆ. ಕೆಲವರು ಚರಂಡಿಯ ಮೇಲೆ ಹಾಕಿರುವ ಹಾಸು ಕಲ್ಲುಗಳನ್ನು ಅಪಹರಣವಾಗಿದ್ದು ಪಾದಚಾರಿಗಳು ತೀವ್ರ  ತೊಂದರೆ ಅನುಭವಿಸುತ್ತಿದ್ದಾರೆ.
 ಪಾದಾಚಾರಿಗಳು ನಡೆದು ಹೋಗುವಾಗ ಚರಂಡಿಯಲ್ಲಿ ಬಿದ್ದು ಕೈಕಾಲು ಮುರಿದು ಆಸ್ಪತ್ರೆ ಸೇರಿರುವ ಉದಾಹರಣೆಗಳೂ ಇವೆ. ಪುರಸಭೆ ಅಧಿಕಾರಿಗಳು, ಸದಸ್ಯರು ಚರಂಡಿಗಳಲ್ಲಿ ಹಾಕಿರುವ ತ್ಯಾಜ್ಯವನ್ನು ತೆಗೆದು ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಕ್ರಮಕೈಗೊಳ್ಳಬೇಕು ಹಾಗೂ ಕಳುವಾಗಿರುವ ಚಪ್ಪಡಿಗಳನ್ನು ಹಾಕಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


ಧರ್ಮಸ್ಥಳ ಸಂಸ್ಥೆಯ ಒಕ್ಕೂಟ ಪದಗ್ರಹ ಕಾರ್ಯಕ್ರಮ 
ಚಿಕ್ಕನಾಯಕನಹಳ್ಳಿ,ಜು.09 : ಧರ್ಮಸ್ಥಳ ಸಂಸ್ಥೆ ರೈತರಲ್ಲಿನ ಜ್ಞಾನವನ್ನು ಗುರುತಿಸಿಕೊಳ್ಳಲು ಹಾಗೂ ಕೌಶಲ್ಯಗಳನ್ನು ವೃದ್ದಿಸಿಕೊಳ್ಳಲು  ಹಲವು ರೀತಿಯಲ್ಲಿ ಸಹಕಾರ ನೀಡುತ್ತಿದೆ. ಸಂಸ್ಥೆಯ ನೆರವು ಬಳಸಿಕೊಂಡು ಆಥರ್ಿಕ ಪ್ರಗತಿ ಸಾಧಿಸಿಕೊಳ್ಳಿ ಎಂದು ಮಾಜಿ ತಾ.ಪಂ.ಅಧ್ಯಕ್ಷ ಹೆಚ್.ಆರ್.ಶಶಿಧರ್ ಹೇಳಿದರು.
ತಾಲ್ಲೂಕಿನ ಸಿದ್ದರಾಮನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ವತಿಯಿಂದ ಶನಿವಾರ ನಡೆದ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ದುಗಡಿಹಳ್ಳಿ ಮತ್ತು ಹೆಸರಹಳ್ಳಿ ಕಾರ್ಯಕ್ಷೇತ್ರಗಳ ನೂತನ ಒಕ್ಕೂಟ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಧರ್ಮಸ್ಥಳ ಸಂಸ್ಥೆ ವತಿಯಿಂದ ಸಾಲ ಸೌಲಭ್ಯಗಳು ಸುಲಭವಾಗಿ ದೊರೆಯುತ್ತವೆ. ಆದರೆ ಸಾಲ ಪಡೆದವರು ಕೃಷಿ ಕೆಲಸಗಳಿಗೆ ಹಣ ಹೂಡಿದರೆ ಆಥರ್ಿಕವಾಗಿ ಲಾಭ ಪಡೆಯಬಹುದು ಎಂದರು.
ತಾ.ಪಂ.ಸದಸ್ಯೆ ಶೈಲಾ ಮಾತನಾಡಿ, ಯುವಕರು ಸಂಸ್ಕೃತಿ ಮರೆಯಬಾರದು. ದೇಶದ ಕಲೆ, ಸಾಂಸ್ಕೃತಿಯನ್ನು ಯುವಪೀಳಿಗೆ ಬೆಳೆಸಿ ಮುಂದೆ ಬರುವಂತಹ ಜನಾಂಗಕ್ಕೆ ಮಾದರಿಯಾಗಿ ನೀಡಬೇಕು. ಮಹಿಳೆಯರು ಅಭಿವೃದ್ಧಿ ಅವಕಾಶಗಳನ್ನು ಎಂದಿಗೂ ಕಳೆದುಕೊಳ್ಳಬಾರದು ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಸಿ.ಎಸ್.ಪ್ರಶಾಂತ್ ಮಾತನಾಡಿ, ಗ್ರಾಮಗಳ ಕಲ್ಯಾಣ ರೈತರ ಅಭ್ಯೂದಯದಿಂದ ಮಾತ್ರ ಸಾಧ್ಯ ಎಂಬ ಆಶಯವನ್ನಿಟ್ಟುಕೊಂಡು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಕೆಲಸ ಮಾಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ರಾಜಶೇಖರ್, ಸಾವಿತ್ರಮ್ಮ, ಶಿಕ್ಷಕ ಶ್ಯಾಮಸುಂದರ್ ಮತ್ತಿತರರು ಉಪಸ್ಥಿತರಿದ್ದರು.



ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯಥರ್ಿಯಾಗಿ ಸ್ಪಧರ್ಿಸುವೆ ಟಿ.ದಾಸೇಗೌಡ 

ಚಿಕ್ಕನಾಯಕನಹಳ್ಳಿ,ಜು.09 : ಸಕರ್ಾರ ಶಿಕ್ಷಕರನ್ನು ಜೀತದಾಳುಗಳಂತೆ ಕಾಣುತ್ತಿದೆ, ಘನತೆಯ ವೇತನ ಹಾಗೂ ಮೂಲಭೂತ ಸೌಲಭ್ಯಗಳನ್ನು ನೀಡದೆ ಶಿಕ್ಷಕ ಸಮುದಾಯವನ್ನು ವಂಚಿಸುತ್ತಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ಪಕ್ಷೇತರವಾಗಿ ಸ್ಪಧರ್ಿಸಿರುವ ಟಿ.ದಾಸೇಗೌಡ ಆರೋಪಿಸಿದರು.
  ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ, ಕುಮಾರ್ ನಾಯಕ್ ವರದಿಯನ್ನು ಯಥಾವತ್ ಅನುಷ್ಠಾನಗೊಳಿಸಿ ವೇತನ ತಾರತಮ್ಯ ನಿವಾರಿಸಬೇಕು. ಹೊಸ ಪಿಂಚಣಿ ನೀತಿಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಮುಂದುವರೆಸಬೇಕು. ಶಾಲೆ, ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭತರ್ಿ ಮಾಡಬೇಕು ಎಂದು ಒತ್ತಾಯಿಸಿದರು.
    ಅನುದಾನ ಹಾಗೂ ಅನುದಾನ ರಹಿತ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳಿಗೆ ಆರೋಗ್ಯ ವಿಮೆ ವಿಸ್ತರಣೆ, ಅರೆಕಾಲಿಕ ಉಪನ್ಯಾಸಕರುಗಳ ಖಾಯಮಾತಿ, ಅನುದಾನ ರಹಿತ ಶಾಲೆ ಶಿಕ್ಷಕರುಗಳಿಗೆ ಮಹಾರಾಷ್ಟ್ರ ಮಾದರಿಯಲ್ಲಿ ಸಂಬಳ ಹಾಗೂ ಸೇವಾ ಭದ್ರತೆ ಒದಗಿಸುವುದು, ಮಹಿಳಾ ಸಿಬ್ಬಂದಿಗೆ ವಿಶೇಷ ರಜೆ ಹಾಗೂ ಶಾಲೆಗಳ ಉನ್ನತೀಕರಣ ತಮ್ಮ ಗುರಿ ಎಂದರು.
  ಗೋಷ್ಠಿಯಲ್ಲಿ ಪಟೇಲ್ ಗರುಡೇಗೌಡ ಅಧ್ಯಯನ ಕೇಂದ್ರದ ಸಂಯೋಜಕ ಜಿ.ಶಾಂತರಾಜು, ಎಸ್.ಎಂ.ಎಸ್, ಕಾಲೇಜ್ ಪ್ರಿನ್ಸಿಪಾಲ್ ಸ್ವಾಮಿಗೌಡ ಉಪಸ್ಥಿತರಿದ್ದರು.