
ನಿಮ್ಮ ಸುದ್ದಿ ವಾಹಕ ............................................................................................................................... ......................................................... feed back: chiguru_2020@rediffmail.com
Tuesday, April 27, 2010
ತಪ್ಪು ಮಾಡೋದು ಸಹಜ, ತಿದ್ದಿ ನಡೆಯೋನೆ ಮನಜ: ಡಾ.ಹಮೀದ್
Monday, April 26, 2010
'ಸುಡುಗಾಡು ಸಿದ್ದ'ರಿಂದ ಗ್ರಾ. ಪಂ.ಚುನಾವಣಾ ಬಹಿಷ್ಕಾರ......?!
(ಚಿಗುರು ಕೊಟಿಗೆಮನೆ)
ಚಿಕ್ಕನಾಯಕನಹಳ್ಳಿ,ಏ.26: ತಾಲೂಕಿನ ನೂರಕ್ಕೂ ಹೆಚ್ಚಿನ ಸುಡಗಾಡು ಸಿದ್ದರ ಕುಟುಂಬಗಳು ಈ ಬಾರಿಯ ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಿವೆ.
ಕಳೆದ ಇಪ್ಪತ್ತು ವರ್ಷಗಳಿಂದ ನಾವು ಸಕರ್ಾರಕ್ಕೆ ನಿವೇಶನ ಕೊಡುವಂತೆ ಕೋರಿ ಸಲ್ಲಿಸಿದ ಮನವಿಗೆ ಪುರಸ್ಕಾರ ಸಿಕ್ಕಿಲ್ಲ ಹಾಗೂ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ನಿರ್ಲಕ್ಷ ವಹಿಸಿವೆ, ನಮ್ಮ ಬೇಡಿಕೆ ಪೂರೈಸದ ಜನರಿಗೆ ನಾವೇಕೆ ಓಟು ಹಾಕಬೇಕು ಎಂಬ ನಿಲುವನ್ನು ವ್ಯಕ್ತ ಪಡಿಸುವ ಈ ಜನರು, ಕಳೆದ ಇಪ್ಪತ್ತು ವರ್ಷಗಳಿಂದ ಸಕರ್ಾರಿ ಜಮೀನಿನಲ್ಲೇ ಗುಡಿಸಲುಗಳನ್ನು ಹಾಕಿಕೊಂಡಿದ್ದು, ಈ ಸ್ಥಳಗಳನ್ನೇ ನಮಗೆ ಮಂಜೂರ ಮಾಡಿಕೊಡುವಂತೆ ಕೋರಿ ರಾಜ್ಯಪಾಲರಿಂದ ಹಿಡಿದು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ವರೆಗೆ ಎಲ್ಲರಿಗೂ ಅಜರ್ಿ ಕೊಟ್ಟರೂ ನಮ್ಮ ಕೆಲಸವಾಗಿಲ್ಲ ಎಂದು ದೂರಿದ್ದಾರೆ.
ಚುನಾವಣೆಗಳ ಸಂದರ್ಭದಲ್ಲಿ ಮಾತ್ರ ಬೆಣ್ಣೆಯಂತಹ ಮಾತುಗಳನ್ನು ಹಾಡಿಕೊಂಡು ನಮ್ಮ ಬಳಿ ಬರುವ ಅಭ್ಯಾಥರ್ಿಗಳಿಗೆ ಈ ಭಾರಿ ನಾವು ಎಷ್ಟು ಮುಖ್ಯರು ಎಂಬುದನ್ನು ತೋರಿಸುವ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ.
ತಾಲೂಕಿನ ಕಾತ್ರಿಕೆಹಾಳ್, ಸಿಂಗದಹಳ್ಳಿ, ಕೇದಿಗೆಹಳ್ಳಿ ಪಾಳ್ಯದ ಗುಂಡು ತೋಪು ಹಾಗೂ ಹೊಯ್ಸಲಕಟ್ಟೆಗಳಲ್ಲಿ ವಾಸಿಸುವ ಈ ಜನಾಂಗದವರು ಕಳೆದ 20 ವರ್ಷಗಳಿಂದ ಒಂದೇ ಕಡೆ ನೆಲೆಸಿದ್ದು ಸ್ಥಳೀಯ ತೋಟಗಳಲ್ಲಿ ಹಾಗೂ ಹೋಲಗಳಲ್ಲಿ ಕೃಷಿ ಕಾಮರ್ಿಕರ ಕೆಲಸವನ್ನು ಮಾಡುತ್ತಿದ್ದು, ಉದ್ಯೋಗ ಖಾತ್ರಿ ಯೋಜನೆಯಲ್ಲೂ ಕೆಲಸವನ್ನು ಮಾಡುತ್ತಿದ್ದೇವೆ ಎನ್ನುವ ಈ ಜನರು, ನಾವು ಕಳೆದ 20 ವರ್ಷಗಳಿಂದ ನಿಗಧಿತ ಸ್ಥಳದಲ್ಲಿ ವಾಸಿಸುತ್ತಿದ್ದೇವೆ ಎಂಬುದಕ್ಕೆ ವಾಸಸ್ಥಳ ಧೃಡೀಕರಣ ಪತ್ರವನ್ನು ಇದೇ ಸ್ಥಳೀಯ ಸಂಸ್ಥೆಗಳು ನೀಡಿವೆ. ಆದರೆ ಉಚಿತ ನಿವೇಶನವನ್ನು ಮಾತ್ರ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಕಳೆದ 15 ವರ್ಷಗಳಿಂದ ಅಲೆದಾಟವನ್ನು ಆರಂಭಿಸಿದ್ದು, ನೂರಾರು ಬಾರಿ ಅಜರ್ಿ ಸಲ್ಲಿಸಿದ್ದೇವೆ, ಅಜರ್ಿ ಸಲ್ಲಿಸಿದ್ದಕ್ಕೆ ದಾಖಲೆಗಳನ್ನು ಇಟ್ಟು ಕೊಂಡಿದ್ದೇವೆ ಎನ್ನುವ ಗೌರಮ್ಮ, ಜೋಪಡಿಗಳಲ್ಲಿ ವಾಸ ಮಾಡುವ ನಾವು ನಿದ್ರೆಯಲ್ಲೂ ಜೀವವನ್ನು ಕೈಯಲ್ಲಿ ಹಿಡಿದುಕೊಂಡೇ ಮಲಗಬೇಕಾದ ಸಂದರ್ಭಗಳೂ ಉಂಟು, ಕಾರಣ ನಾವು ಜೀವಿಸುವುದು ಹಾವು, ಜೇಳು, ಮಂಡ್ರಗಪ್ಪೆಗಳು ವಾಸ ಮಾಡುವ ಜಾಗದಲ್ಲಿ, ಅವು ನಮ್ಮ ಪ್ರಾಣಕ್ಕೆ ಯಾವಾಗ ಬೇಕಾದರೂ ಸಂಚಕಾರ ತರಬಲ್ಲವು ಎನ್ನುವ ಸಿಂಗದಹಳ್ಳಿ ಮಾರಯ್ಯ, ಈ ಬಾರಿ ಜೋರಾದ ಗಾಳಿಯೊಂದಿಗೆ ಮಳೆ ಬಂದಂತಹ ಸಂದರ್ಭದಲ್ಲಂತೂ ಜೀವವೇ ಬಾಯಿಗೆ ಬಂದಂತಾಯಿತು ಎನ್ನುವ ಮೂಲಕ ಭಾವೋದ್ವೇಗಕ್ಕೆ ಒಳಗಾಗುತ್ತಾರೆ.
ಹೆಂಚು, ಶೀಟುಗಳಿರುವ ಮನೆಗಳೇ ಈ ಮಳೆಯಲ್ಲಿ ಅಧ್ವಾನವಾಗಿ ಹೋಗಿರುವಾಗ, ನಮ್ಮ ಗುಡಿಸಲುಗಳ ಸ್ಥಿತಿ ಹೇಗಾಗಿರಬೇಕೆಂಬುದನ್ನು ನೀವೇ ಊಹಿಸಿಕೊಳ್ಳಿ ಎನ್ನುವ ಕಾತ್ರಿಕೆಹಾಳ್ನ ಶಂಕ್ರಯ್ಯ, ನಮಗೆ ನಿವೇಶನ ನೀಡಿ, ಆಶ್ರಯ ಮನೆಯಲ್ಲಿ ಅವಕಾಶ ಕಲ್ಪಿಸಿ ಎಂದು ಹಲವು ಸಲ ಅಲವತ್ತುಕೊಂಡರೂ ನಮ್ಮ ಬಗ್ಗೆ ಕರುಣೆ ತೋರದ ಜನಪ್ರತಿನಿಧಿಗಳಿಗೆ ನಾವೇಕೆ ಓಟು ಹಾಕಬೇಕು, ನಮ್ಮ ಕಷ್ಠಕ್ಕೆ ಯಾರು ಸ್ಪಂಧಿಸುತ್ತಾರೆ, ನಮ್ಮ ಬೇಡಿಕೆಗಳನ್ನು ಯಾರು ಈಡೇರಿಸಿಯೇ ತೀರುತ್ತೇವೆಂದು ನಮ್ಮ ಬಳಿಗೆ ಬರುವವರೆಗೆ ನಾವು ಚುನಾವಣೆಗಳಲ್ಲಿ ಭಾಗವಹಿಸಬಾರದೆಂಬ ನಿಧರ್ಾರಕ್ಕೆ ಬಂದಿದ್ದೇವೆ ಎಂದು ಕಾತ್ರಿಕೆಹಾಳ್ನ ಅಂಬಿಕಾ ಹೇಳುತ್ತಾರೆ.
ನಾವು ಅಧಿಕೃತವಾಗಿ ಸಕರ್ಾರಿ ಕಛೇರಿಗೆ 1995ರಿಂದಲೂ ಅಜರ್ಿ ಸಲ್ಲಿಸುತ್ತಲೇ ಬಂದಿದ್ದೇವೆ ಎಂದು ದಾಖಲೆ ಸಮೇತ ತೋರಿಸುವ ಇವರು, ಕಳೆದ ಡಿಸೆಂಬರ್ 14 ರಂದು ಪಟ್ಟಣಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ರಾಜ್ಯಪಾಲರಿಗೂ ಮನವಿ ಪತ್ರವನ್ನು ನೀಡಿದ್ದು, ಈ ಸಂಬಂಧ ರಾಜ್ಯಪಾಲರು ಸಹ ಸಕರಾತ್ಮಕವಾಗಿ ಸ್ಪಂದಿಸಿ ಜಿಲ್ಲಾಧಿಕಾರಿಗಳಿಗೆ ಡಿ.17 ರಂದೇ ಪತ್ರ ಬರೆದಿದ್ದಾರೆ ಆದರೂ ಸಹ ಪ್ರಯೋಜನವಾಗಿಲ್ಲ ಎನ್ನುವ ಗುಂಡುತೋಪಿನ ವೆಂಕಟೇಶ್, ರಾಜ್ಯಪಾಲರಿಗೆ ಅಜರ್ಿ ಕೊಟ್ಟ ನಂತರ ನಮಗೆ ನಾವೀಗಿರುವ ಸ್ಥಳದಿಂದ ಎತ್ತಂಗಡಿ ಮಾಡುವಂತೆ ತಹಶೀಲ್ದಾರ್ ನೋಟೀಸ್ ನೀಡಿದ್ದಾರೆ ಎಂದು ಮಮ್ಮಲಮರುಗುವ ವೆಂಕಟೇಶ್, ನಾವು ಈ ದೇಶದ ಪ್ರಜೆಯೇ ಅಲ್ಲವೇ, ನಮಗೆ ಇಲ್ಲಿ ವಾಸಿಸುವ ಹಕ್ಕೇ ಇಲ್ಲವೆ, ನಾವೇನು ಯಾರದೊ ಖಾಸಗಿ ಸ್ವತ್ತಿನಲ್ಲಿ ವಾಸ ಮಾಡುತ್ತಿಲ್ಲ ಎಂದು ಕಣ್ಣಂಚಲಿ ನೀರು ತುಂಬಿಕೊಂಡು ಮಾತನಾಡುವ ವೆಂಕಟೇಶ್, ಈ ಜಾಗ ಗುಂಡಿಗೊಟರುಗಳಿಂದ ಕೂಡಿದ್ದ ಸ್ಥಳ, ಇಲ್ಲಿ ಹಂದಿ-ನಾಯಿ ಮತ್ತಿತರ ಪ್ರಾಣಿಗಳು ವಾಸಿಸುತ್ತಿದ್ದವು, ಅವುಗಳನ್ನೇಲ್ಲಾ ಓಡಿಸಿ ಈಗ ನಾವು ವಾಸಿಸುತ್ತಿದ್ದೇವೆ, ಆ ಪ್ರಾಣಿಗಳು ವಾಸಿಸುತ್ತಿದ್ದಾಗ ಅಧಿಕಾರಿಗಳಿಗೆ ಈ ಜಾಗ ಸಕರ್ಾರಿ ಜಮೀನು ಅನ್ನಿಸರಲಿಲ್ಲವೆ, ಯಾವಾಗ ನಾವು ಇಲ್ಲಿ ಗುಡಿಸಲು ಹಾಕಿಕೊಂಡವೊ ಹಾಗೂ ಈ ಜಾಗದಲ್ಲಿ ನಮಗೂ ಮನೆ ಕಟ್ಟಿಕೊಳ್ಳಲು ಅವಕಾಶ ಕೊಡಿ ಎಂದು ಅಧಿಕಾರಿಗಳನ್ನು ಮನವಿ ಮಾಡಿಕೊಂಡೆವೊ, ಆಗ ಈ ಅಧಿಕಾರಿಗಳಿಗೆ ಇದು ಸಕರ್ಾರಿ ಜಾಗ ಎಂಬ ಸುಳಿವು ಸಿಕ್ಕಿತೇ ಎನ್ನುವ ವೆಂಕಟೇಶ್, ಈ ಸವರ್ೇ ನಂಬರಿನಲ್ಲಿರುವ ಜಾಗದಲ್ಲಿ ಬೇರೆ ಜನಕ್ಕೆ ಹಕ್ಕು ಪತ್ರಗಳನ್ನು ಕೊಡಲು ಸಾಧ್ಯವಾಗಿದೆ, ನಾವು ಕೇಳಿದರೆ ಕೊಡಲು ಇಲ್ಲದ ಕಾನೂನುಗಳನ್ನು ಹೇಳುವ ಈ ಅಧಿಕಾರಿಗಳು ನಮ್ಮಂತಹ ಬಡವರು ಇಲ್ಲಿ ವಾಸ ಮಾಡಲು, ಬದುಕು ಕಟ್ಟಿಕೊಳ್ಳಲು ಅವಕಾಶವಿಲ್ಲವೆ ಎಂದು ಮುಗ್ದವಾಗಿ ಪ್ರಶ್ನಿಸುತ್ತಾರೆ. ಇವರ ಪ್ರಶ್ನೆಗೆ ಉತ್ತರ ಕೊಡಬೇಕಾದ ಜನ ಚುನಾವಣೆಯಲ್ಲಿ ತಮ್ಮ 'ನೆಲೆಯನ್ನು' ಕಂಡುಕೊಳ್ಳಲು ಬ್ಯೂಸಿಯಾಗಿದ್ದಾರೆಯೇ..........?
ಹಿಂದುಳಿದ ವರ್ಗಗಳಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಪ್ರತಿಭಟನೆ
Saturday, April 24, 2010
ಹೇಮೆಯ ವಿಷಯದಲ್ಲಿ ಮಲತಾಯಿಧೋರಣೆ: ಸೀಮೆಣ್ಣೆ ಕೃಷ್ಣಯ್ಯ ಆರೋಪ
Friday, April 23, 2010
ಜನರ ಮನ ಸೆಳೆದ ಗುರು ಕಿರಣ್ ನೃತ್ಯ ಕಾರ್ಯಕ್ರಮ
ಚಿಕ್ಕನಾಯಕನಹಳ್ಳಿ,ಏ.23: ಸುಗಮ ಸಂಗೀತದಿಂದ ಪಾಶ್ಚಿಮಾತ್ಯ ಸಂಗೀತದ ವರೆಗೆ, ಭರತ ನಾಟ್ಯದಿಂದ ಪಾಪ್ ಡ್ಯಾನ್ಸ್ ವರಗೆ, ಸ್ಟಾರ್ ವ್ಯಾಲ್ಯೂ ಕಲಾವಿದರ ದಂಡೇ ಇಲ್ಲಿಗೆ ಆಗಮಿಸಿ ಕಾರ್ಯಕ್ರಮಗಳನ್ನು ನೀಡುವ ಮೂಲಕ ತಾಲೂಕಿನಲ್ಲಿ ಸಾಂಸ್ಕೃತಿಕ ವಾತಾವರಣವನ್ನು ಉಂಟು ಮಾಡಿದೆ.
ತಾತಯ್ಯನವರ 50 ನೇ ವರ್ಷದ ಉರಸ್ ಅಂಗವಾಗಿ ಸಂಗೀತ ನಿದರ್ೇಶಕ ಗುರು ಕಿರಣ್ ರವರ ತಂಡ ಇಲ್ಲಿನ ಜನರಿಗೆ ಒದಗಿಸಿದ ಮನರಂಜನೆಯನ್ನು 12 ಸಾವಿರಕ್ಕೂ ಹೆಚ್ಚಿನ ರಸಿಕರು ಮಳೆಯ ನಡುವೆಯೂ ರಾತ್ರಿ 2.30ರವರೆಗೆ ವೀಕ್ಷಿಸಿದೆ.ಗುರು ಕಿರಣ್ ನೇತೃತ್ವದ ತಂಡ ನೀಡಿದ ನೃತ್ಯ ಹಾಗೂ ಶಮಿತಾ ಮಲ್ನಾಡ್, ಜೋಗಿ ಖ್ಯಾತಿಯ ಸುನೀತ, ಲಕ್ಷ್ಮಿ ಯವರ ಹಾಡುಗಾರಿಕೆಗೆ ಇಲ್ಲಿನ ಜನ ತಲೆ ತೂಗಿದ್ದಾರೆ. ಮಿಮಿಕ್ರಿ ದಯಾನಂದ್ ರವರ ಕಜಗುಳಿ ಜನರಿಗೆ ಮನರಂಜನೆಯನ್ನು ನೀಡಿತು.ಜಗಮಗಿಸುವ ರಂಗ ಮಂಟಪದಲ್ಲಿ ನವೀನ ರೀತಿಯ ನೆರಳು ಬೆಳಕಿನ ನಡುವೆ ನಡೆದ ಕಾರ್ಯಕ್ರಮ ರಸಿಕರ ಮನಸೂರೆಗೊಂಡಿದೆ.ಈ ಕಾರ್ಯಕ್ರಮವನ್ನು ಶಾಸಕ ಸಿ.ಬಿ.ಸುರೇಶ್ಬಾಬು, ಸಂಗೀತ ನಿದರ್ೇಶಕ ಗುರುಕಿರಣ್, ಗಾಯಕರುಗಳಾದ ಶಮಿತಾ ಮಲ್ನಾಡ್, ಚೇತನ್ ಕುಮಾರ್, ಸುನೀತ, ನಿರೂಪಕಿ ಅನುಶ್ರೀ ಯವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷೆ ಜಯಮ್ಮದಾನಪ್ಪ, ತಾ.ಪಂ. ಅಧ್ಯಕ್ಷ ಕೆ.ಜಿ.ಮಲ್ಲಿಕಾಜರ್ುನಯ್ಯ, ಪುರಸಭಾ ಅಧ್ಯಕ್ಷ ಸಿ.ಎಂ.ರಂಗಸ್ವಾಮಯ್ಯ, ಕಲ್ಪವೃಕ್ಷ ಬ್ಯಾಂಕ್ನ ಅಧ್ಯಕ್ಷ ಸಿ.ಎಸ್.ನಟರಾಜುರವರನ್ನು ಸನ್ಮಾನಿಸಲಾಯಿತು.
ಸಾಂಸ್ಕೃತಿಕ ವಾತಾವರಣದ ಮೆರಗು: ಇತ್ತೀಚಿಗೆ ಇಲ್ಲಿನ ಜನರು ಡಾ.ಸಿ. ಅಶ್ವಥ್ ರವರ ಸುಗಮ ಸಂಗೀತದಿಂದ ಆರಂಭಗೊಂಡು ರಾಜೇಶ್ ಕೃಷ್ಣನ್, ಗುರು ಕಿರಣ್, ಡಾ.ಸಂಜಯ್ ರವರ ಭರತ ನಾಟ್ಯದ ವರೆಗೆ, ಯುವ ಗಾಯಕರುಗಳಾದ ಅಶ್ವಿನ್ ಶಮರ್ಾ, ಮದ್ವೇಶ್ ಭಾರಧ್ವಜ್, ಅನಿರುಧ್, ಸಹನ, ಹಂಸಿಣಿ ವರೆಗಿನ ಯುವ ಪ್ರತಿಭೆಗಳ ಸಂಗೀತವನ್ನು ಇಲ್ಲಿಯ ಜನರು ಆಸ್ವಾದಿಸಿದ್ದಾರೆ.ಕನ್ನಡವೇ ಸತ್ಯ ಕಾರ್ಯಕ್ರಮದ ಮೂಲಕ ಡಾ.ಸಿ.ಅಶ್ವಥ್, ಉರಸ್ನ ಅಂಗವಾಗಿ ರಾಜೇಶ್ ಕೃಷ್ಣನ್, ಚಿಣ್ಣರ ಹಬ್ಬದ ಅಂಗವಾಗಿ ಅಶ್ವಿನ್ ಶರ್ಮ ಸೇರಿದಂತೆ ಝೀ ಟಿ.ವಿ.ಯ ಯುವ ಕಲಾವೃಂದವರಿಂದ ನೃತ್ಯ ಕಾರ್ಯಕ್ರಮ ರಸಿಕರ ಮನ ತಣಿದಿದೆ.
ಗ್ರಾ.ಪಂ.ಚುನಾವಣೆ: 5 ದಿನಕ್ಕೆ 789 ನಾಮಪತ್ರಗಳ ಸಲ್ಲಿಕೆ
ಚಿಕ್ಕನಾಯಕನಹಳ್ಳಿ,ಏ.23: ತಾಲೂಕಿನ 28 ಗ್ರಾ.ಪಂ.ಗಳಲ್ಲಿ ಇಲ್ಲಿಯವರೆಗೆ 789 ಅಜರ್ಿಗಳನ್ನು ಸಲ್ಲಿಸಿದ್ದು ಇದರಲ್ಲಿ 23ರ ಶುಕ್ರವಾರ ಒಂದೇ ದಿನ 560 ನಾಮ ಪತ್ರಗಳು ಸಲ್ಲಿಕೆ ಆಗಿದೆ ಎಂದು ತಹಶೀಲ್ದಾರ್ ಟಿ.ಸಿ.ಕಾಂತರಾಜು ತಿಳಿಸಿದ್ದಾರೆ.
ನಾಮ ಪತ್ರ ಸಲ್ಲಿಸಲು ಆರಂಭಗೊಂಡ ಮೊದಲ ದಿನವಾದ ಹತ್ತೊಂಭತ್ತರಂದು ಮೂರು ಅಜರ್ಿಗಳು ಮಾತ್ರ ಸಲ್ಲಿಕೆಯಾಗಿದ್ದು, 20 ರಂದು 9 ಸಲ್ಲಿಕೆಯಾಗಿದ್ದರೆ, 21 ರಂದು 41 ನಾಮಪತ್ರಗಳು ಸಲ್ಲಿಕೆಯಾಗಿದೆ, 22 ರಂದು 176 ನಾಮಪತ್ರಗಳು, 23 ರಂದು 560 ನಾಮ ಪತ್ರಗಳು ಸಲ್ಲಿಕೆಯಾಗಿದ್ದು 28 ಗ್ರಾ.ಪಂ.ಗಳ ಪೈಕಿ ಅತಿ ಹೆಚ್ಚು ಹುಳಿಯಾರಿನಲ್ಲಿ ಒಂದೇ ದಿನ 52 ನಾಮ ಪತ್ರಗಳು ಸಲ್ಲಿಕೆಯಾಗಿದ್ದರೆ, ಬರಗೂರಿನಲ್ಲಿ 7 ನಾಮಪತ್ರಗಳು ಸಲ್ಲಿಕೆಯಾಗಿವೆ.
ಗಣತಿ ಸಹಾಯ ವಾಣಿ: ತಾಲೂಕಿನಲ್ಲಿ ಗಣತಿ ಕಾರ್ಯ ನಡೆಯುತ್ತಿದ್ದು, ಗಣತಿಯ ಬಗ್ಗೆ ಹೆಚ್ಚಿನ ಮಾಹಿತಿ ಅಗತ್ಯವಿದ್ದವರು ಸಹಾಯ ವಾಣಿವನ್ನು ಸಂಪಕರ್ಿಸ ಬಹುದು, ತಾಲೂಕು ಕಛೇರಿ ದೂರವಾಣಿ ಸಂಖ್ಯೆ: 267242, ಗ್ರಾಮಾಂತರ ವಿಭಾಗಕ್ಕೆ ಹೆಚ್ಚುವರಿ ಚಾಜರ್್ ಅಧಿಕಾರಿ ಕೆ.ವಿ.ಕುಮಾರ್ ರವರ ಮೊಬೈಲ್ ಸಂಖ್ಯೆ: 9448747612, ಜನಗಣತಿ ಶಾಖೆಯ ಎಚ್.ಎಸ್.ಗುರುಸಿದ್ದಪ್ಪ ನವರ ಮೊಬೈಲ್ ಸಂಖ್ಯೆ 9844624098 ಇಲ್ಲಿ ಸಂಪಕರ್ಿಸ ಬಹುದು.
ಸ್ವತಂತ್ರ ಹೋರಾಟಗಾರನ ನಿಧನ: ಶೆಟ್ಟೀಕೆರೆಯ ಸ್ವತಂತ್ರ ಹೋರಾಟಗಾರ ಎಸ್.ಸಿ.ರಾಮಲಿಂಗಪ್ಪ(85) ನಿಧನರಾಗಿದ್ದಾರೆ. ಇವರು ಸ್ವತಂತ್ರ ಹೋರಾಟದಲ್ಲಿ ಸಕ್ರಿಯಾವಾಗಿ ಭಾಗವಹಿಸಿದ್ದು ಆರು ತಿಂಗಳ ಕಾಲ ಸೆರೆಮನೆ ವಾಸ ಅನುಭವಿಸಿದ್ದರು.
ಇವರು ಪತ್ನಿ, ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳು ಮತ್ತು ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ.
ಮೃತರ ಗೃಹಕ್ಕೆ ತಹಶೀಲ್ದಾರ್ ಟಿ.ಸಿ.ಕಾಂತರಾಜು ಭೇಟಿ ನೀಡಿ ಸಕರ್ಾರದ ವತಿಯಿಂದ ಸಲ್ಲಬೇಕಾದ ಗೌರವವನ್ನು ಸಲ್ಲಿಸಿದ್ದಾರೆ. ಶಾಸಕ ಸಿ.ಬಿ.ಸುರೇಶ್ ಬಾಬು ರಾಮಲಿಂಗಪ್ಪನವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.
ಸಾಲದ ಮೇಲಿನ ಬಡ್ಡಿ ಇಳಿಕೆ
ಚಿಕ್ಕನಾಯಕನಹಳ್ಳಿ,ಏ.23: ಕಲ್ಪವೃಕ್ಷ ಕೋ ಆಪರೇಟಿವ್ ಬ್ಯಾಂಕಿನಿಂದ ನೀಡುವ ವಿವಿಧ ಸಾಲಗಳ ಬಡ್ಡಿದರವನ್ನು ಕಡಿಮೆ ಮಾಡಿದೆ ಮತ್ತು ನಿತ್ಯನಿಧಿ ಠೇವಣಿಯನ್ನು ಆರು ತಿಂಗಳ ಅವಧಿಗೆ ನಿಗದಿಮಾಡಲಾಗಿದೆ ಎಂದು ಕಲ್ಪವೃಕ್ಷ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸಿ.ಎಸ್.ನಟರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಡಿಮೆ ಬಡ್ಡಿ ಮಾಡಿರುವ ಸಾಲಗಳಲ್ಲಿ ಶೇ.15ರಷ್ಟಿದ್ದ ಅಡಿಕೆ ದಾಸ್ತಾನು ಸಾಲವನ್ನು ಶೇ.14 ಇಳಿಸಿದೆ, ಶೇ.13ರಷ್ಟಿದ್ದ ಆಭರಣ ಸಾಲವನ್ನು ಶೇ.10ರಷ್ಟಕ್ಕೆ, ವಾಹನಸಾಲವನ್ನು 13ರಷ್ಟಕ್ಕೆ ಮತ್ತು ಶೇ.16ರಷ್ಟಿದ್ದ ನಗದು ಹಾಗು ವ್ಯಾಪಾರ ಸಾಲವನ್ನು ಶೇ.14ರಷ್ಟಕ್ಕೆ ಇಳಿಸಲಾಗಿದ್ದು ಷೇರುದಾರರು ಹಾಗೂ ಗ್ರಾಹಕರು ಇದರ ಸದುಪಯೋಗ ಪಡೆಯಲು ಕೋರಿದ್ದಾರೆ.
Thursday, April 22, 2010
- 50ನೇ ವರ್ಷದ ತಾತಯ್ಯನ ಉರಸ್ನ ವೈಭವದ ಆಚರಣೆ
- ದೆಹಲಿ ಮತ್ತು ಕೊಲ್ಲಾಪುರದ ಪಾಟರ್ಿಗಳಿಂದ ಜಿದ್ದಾಜಿದ್ದಿನ ಖಾವಲಿ
- ಗಾಯಕ ಗುರುಕಿರಣ್ ತಂಡದವರಿಂದ ರಸ ಸಂಜೆ
- ಐವತ್ತು ಸಾವಿರಕ್ಕೂ ಅಧಿಕ ಭಕ್ತರ ಆಗಮನದ ನಿರೀಕ್ಷೆ
- ಜಗಮಗಿಸುವ ಬಾಣಬಿರುಸುಗಳ ಸಿಡಿ ಮದ್ದು
- ಹಂದನಕೆರೆ ಹೋಬಳಿಯಲ್ಲಿ ಭಾರಿ ಆಲಿಕಲ್ಲು ಮಳೆ ಹಾಗೂ ಬಿರುಗಾಳಿ
- 30 ಲಕ್ಷಕ್ಕೂ ಅಧಿಕ ಮೌಲ್ಯದ ಆಸ್ತಿಪಾಸ್ಥಿಗೆ ನಷ್ಟ
- ಆಲಿಕಲ್ಲಿನಿಂದಜೀವಹಾನಿ, ಮನೆಗಳ ಮೇಲ್ಚಾವಣಿ ಗಾಳಿಗೆ, ನಿರಾಶ್ರಿತರಿಗೆ ಗಂಜಿಕೇಂದ್ರ