Saturday, October 20, 2012


ಚಿಕ್ಕನಾಯಕನಹಳ್ಳಿ,ಅ.16 : ತಾಲ್ಲೂಕಿನ ಹಂದನಕೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಜಮೀನಿನ ಸಂಬಂಧ ಪ್ರಕರಣದ ನಡೆದಿದ್ದ ಗಲಾಟೆಯಲ್ಲಿ ಕೆಂಪಣ್ಣ ಎಂಬ ವ್ಯಕ್ತಿಗೆ ಇಲ್ಲಿನ ಅಪರ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ವೀಣಾ.ಎನ್ರವರು ಒಂದು ವರ್ಷ ಜೈಲುವಾಸ ಮತ್ತು ಐದುನೂರು ರೂಪಾಯಿ ದಂಡ ವಿಧಿಸಿ ತೀಪರ್ು ನೀಡಿದ್ದಾರೆ.
  2010, ಜೂನ11ರಂದ ದಾಖಲಾಗಿದ್ದ ಪ್ರಕರಣದ ಆರೋಪಿಗಳಾದ ಕೆಂಪಣ್ಣ, ಈತನ ಹೆಂಡತಿ ಸುಶೀಲಮ್ಮ, ಇವರ ಮಗಳು ಗೌರಮ್ಮ, ಹಾಗೂ ಗೌರಮ್ಮನ ಗಂಡ ಕೆಂಪಯ್ಯ ಇವರುಗಳು ಜಮೀನಿನ ದ್ವೇಷದಿಂದ ಸರೋಜಳಮ್ಮನನ್ನು ಹೊಡೆಯಬೇಕೆಂಬ ಉದ್ದೇಶದಿಂದ ಅವ್ಯಾಚ್ಯಾ ಶಬ್ದಗಳಿಂದ ಬೈದು, ಆರೋಪಿ ಕೆಂಪಣ್ಣ ದೊಣ್ಣೆಯಿಂದ ಆಕೆಯ ಬಲಗೈಗೆ ಹೊಡೆದು ಬಲಗೈ ಮುರಿದಿದ್ದು ಸುಶೀಲಮ್ಮ, ಗೌರಮ್ಮ, ಸರೋಜಳಮ್ಮನ ಮೇಲೆ ಆರೋಪಿತರು ಹಲ್ಲೆ ಮಾಡಿ ಸರೋಜಮ್ಮಳಿಗೆ ಪ್ರಾಣ ಬೆದರಿಕೆ ಹಾಕಿದ್ದರ ಮೇರೆಗೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿತರಿಗೆ ಭಾರತೀಯ ದಂಡ ಸಂಹಿತಿ ಕಲಂ 504, 506, 324ರ ಅಡಿಯಲ್ಲಿ ತಲಾ 6ತಿಂಗಳು ಜೈಲುವಾಸ ಇಲ್ಲವೇ 500ರೂ ದಂಡ ವಿಧಿಸಿ ನ್ಯಾಯಾಲಯ ತೀಪರ್ು ನೀಡಿದೆ.
ರಾಜ್ಯ ಸಕರ್ಾರದ ಪರವಾಗಿ ಸಹಾಯಕ ಸಕರ್ಾರಿ ಅಭಿಯೋಜಕರಾದ ಆರ್.ರವಿಚಂದ್ರ ವಾದಿಸಿದ್ದರು.
ತೆಂಗು ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ, ವೈಜ್ಞಾನಿಕ ಬೆಲೆ ನಿಗಧಿಗೆ ಒತ್ತಾಯ: ಸಂಸದ ಜಿ.ಎಸ್.ಬಿ.
ಚಿಕ್ಕನಾಯಕನಹಳ್ಳಿ,ಅ.14 : ತೆಂಗು ಬೆಳೆಯು ದೇಶದಲ್ಲಿ ಶೇ. 47ರಷ್ಟು ಮಾತ್ರ ಉತ್ಪಾನೆಯಾಗುತ್ತಿದೆ, ಉಳಿದ ಶೇ.53ರಷ್ಟು ತೆಂಗನ್ನು ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ ಇದರಿಂದ ಕೊಬ್ಬರಿ ಬೆಲೆಗಿಂತ ಪಾಮಾಯಿಲ್(ತಾಳೆ ಎಣ್ಣೆ)ನ ಬೆಲೆ ಹೆಚ್ಚುತ್ತಿದೆ ಇದನ್ನು ತಡೆಗಟ್ಟಲು ತೆಂಗು ಬೆಳೆಗಾರರು ಒಗ್ಗಟ್ಟಾಗಿ ಬೆಳೆಯನ್ನು ಹೆಚ್ಚಿಸಿ ಕೊಬ್ಬರಿಗೆ ಉತ್ತಮ ಬೆಲೆ ದೊರಕುವಂತೆ ಮಾಡಬೇಕು ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ತೆಂಗು ಬೆಳೆಗಾರರ ಸಂಘ ಹಮ್ಮಿಕೊಂಡಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತೆಂಗು ಬೆಳೆಗಾರರ ಅಭಿವೃದ್ದಿಗಾಗಿ ಕೇಂದ್ರ ಸಕರ್ಾರ ನೀಡುತ್ತಿರುವ ಸವಲತ್ತನ್ನು ಉತ್ತಮವಾಗಿ ಬಳಸಿಕೊಳ್ಳಬೇಕು ಆದರೆ ಬೆಳೆಗಾರರು ಸವಲತ್ತನ್ನು ಉಪಯೋಗಿಸಿಕೊಳ್ಳುವಲ್ಲಿ ವಿಫಲರಾಗುತ್ತಿದ್ದರೆ ಎಂದ ಅವರು ಕೇರಳ, ಕನರ್ಾಟಕ, ಆಂದ್ರಪ್ರದೇಶ, ತಮಿಳುನಾಡಿನ ರೈತರಿಗೆ ತೆಂಗು ಬೆಳೆ ಉತ್ಪಾದಿಸಲು ಅಲ್ಲಿನ ಸಕರ್ಾರಗಳು ಉತ್ತಮ ಅವಕಾಶ ಕಲ್ಪಿಸುತ್ತಿವೆ ಎಂದರು.
ಬೆಳೆಗಾರರು ಉತ್ತಮ ತೆಂಗನ್ನು ಬೆಳೆಯಲು  ತಾವು ಮಾಡುವ ಪರಾಂಪರಿಕ ಕೃಷಿಯೊಂದಿಗೆ ಸಾವಯುವ ಕೃಷಿ, ರಾಸಾಯನಿಕಗಳನ್ನು ಬಳಸಿ ಕೃಷಿ ಮಾಡಿದರೆ ಹೆಚ್ಚು ಬೆಳೆ ಬೆಳೆಯಬಹುದು ಎಂದರಲ್ಲದೆ ತೆಂಗಿನ ಬೆಳೆಯಲ್ಲಿ ರಸಸೋರುವ ರೋಗ, ಕೆಂಪುಮೂತಿ ರೋಗವನ್ನು ತಡೆಗಟ್ಟಬೇಕು, ಇಲ್ಲವಾದರೆ ಈ ರೋಗದಿಂದ ಬೆಳೆಗೆ ಹೆಚ್ಚು ತೊಂದರೆಯಾಗುತ್ತದೆ, ರಾಜ್ಯದಲ್ಲಿ ತೆಂಗುಬೆಳೆಯಲ್ಲಿ ರಸಸೋರುವ ರೋಗ ಹೆಚ್ಚಾಗಿ ಕಂಡ ಬರುತ್ತಿದೆ ಆದ್ದರಿಂದ ರೈತರು ಈ ರೋಗ ತಡೆಗಟ್ಟಲು ಕಾಳಜಿವಹಿಸಬೇಕು ಎಂದರು.
 ಹುಳಿಯಾರಿನಲ್ಲಿ ನೆಫೆಡ್ ಕೇಂದ್ರ ಇರುವಂತೆ ಚಿಕ್ಕನಾಯಕನಹಳ್ಳಿಯಲ್ಲಿ ಹಾಗೂ   ಇತರೆಡೆಗಳಲ್ಲೂ  ಕೊಬ್ಬರಿ ನೆಫೆಡ್ ಕೇಂದ್ರ ತೆರೆಯಬೇಕು ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಇಂತಹ ಕಾರ್ಯಕ್ರಮಕ್ಕೆ ನಮ್ಮ ಬೆಂಬಲ ಸದಾ ಇರುತ್ತದೆ ಎಂದರು.
ಈಡೀ ರಾಜ್ಯಾದ್ಯಾಂತ ತೆಂಗು ಬೆಳೆಗಾರರು, ತೆಂಗು ಮಾರಾಟಗಾರರಿಗೆ ಹಲವಾರು ಸ್ಫಧರ್ಿಗಳಿದ್ದಾರೆ ಇಂತಹ ಸಂದರ್ಭದಲ್ಲಿ ಉತ್ಪಾದನೆ, ಮಾರಾಟ ಮಾಡುವಾಗ ಮೋಸ ಮಾಡುವ ವರ್ತಕರಿರುತ್ತಾರೆ ಇದನ್ನು ಗಮನದಲ್ಲಿಟ್ಟುಕೊಂಡು ರೈತರು ವ್ಯವಹಾರ ನಡೆಸಬೇಕು ಎಂದರು.
ಸಮಾರಂಭದಲ್ಲಿ ತಾಲ್ಲೂಕು ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ಲಿಂಗರಾಜು, ತೆಂಗು ಬೆಳೆಗಾರರ ಜಿಲ್ಲಾ ಸಂಚಾಲಕ ಎಂ.ಬಿ.ಸಿದ್ದಪ್ಪ, ತಿಪಟೂರು ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಸ್ವಾಮಿ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಬಿ.ಎನ್.ಶಿವಪ್ರಕಾಶ್, ರೈತ ಮುಖಂಡ ಸತೀಶ್ಕೆಂಕೆರೆ ಮತ್ತಿತರರು ಉಪಸ್ಥಿತರಿದ್ದರು.


ತಾ.ಪಂ. ಗದ್ದುಗೆಗೆ ಚುನಾವಣೆ: ಬಿ.ಜೆ.ಪಿ.ಯ.ಜಗದೀಶ್ ಅಧ್ಯಕ್ಷ, ಜೆ.ಡಿ.ಯು.ನ.ಲತಾ ಉಪಾಧ್ಯಕ್ಷೆ
ಚಿಕ್ಕನಾಯಕನಹಳ್ಳಿ,ಅ.19: ತಾ.ಪಂ. ಅಧ್ಯಕ್ಷರಾಗಿ ಬಿ.ಜೆ.ಪಿ.ಯ ಜೆ.ಸಿ.ಪುರ ಕ್ಷೇತ್ರದ ಸದಸ್ಯ ಎಂ.ಎಂ.ಜಗದೀಶ್ 12 ಮತಗಳನ್ನು ಪಡೆದು ಆಯ್ಕೆಯಾದರೆ, ತೀರ್ಥಪುರ ಕ್ಷೇತ್ರದ ಎಂ.ಇ.ಲತಾ ಕೇಶವಮೂತರ್ಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಶಿಲ್ಪ ತಿಳಿಸಿದರು.
ಒಟ್ಟು 19 ಸದಸ್ಯ ಬಲವಿರುವ ತಾ.ಪಂ.ಸಮಿತಿಯಲ್ಲಿ ಜೆ.ಡಿ.ಎಸ್.ನ 7ಸದಸ್ಯರು  ಬಿ.ಜೆ.ಪಿ.6 ಹಾಗೂ ಜೆ.ಡಿ.ಯು 6 ಸಂಖ್ಯಾಬಲಹೊಂದಿದೆ, ಅಧ್ಯಕ್ಷರ ಹುದ್ದೆಗೆ ಇಬ್ಬರು ಸ್ಪಧರ್ೆಗಿಳಿದಿದ್ದರು, ಸಾಮಾನ್ಯ ಕ್ಷೇತ್ರಕ್ಕೆ ಮೀಸಲಿದ್ದ ಅಧ್ಯಕ್ಷರ ಹುದ್ದೆಗೆ ಬಿ.ಜೆ.ಪಿ.ಯಜಗದೀಶ್ 12 ಮತಗಳನ್ನು ಪಡೆದರೆ, ಜೆ.ಡಿ.ಎಸ್.ನ ಎ.ಜಿ.ಕವಿತ 7 ಮತಗಳಿ ತೃಪ್ತಿ ಪಡೆದುಕೊಳ್ಳಬೇಕಾಯಿತು.
ಹೊಂದಾಣಿಕ ಸೂತ್ರದಂತೆ ಅಧ್ಯಕ್ಷ ಹುದ್ದೆ:  ಪತ್ರಕರ್ತರೊಂದಿಗೆ ಮಾತನಾಡಿದ ಅಧ್ಯಕ್ಷ ಎಂ.ಎಂ.ಜಗದೀಶ್, ಈ ಚುನಾವಣೆಯಲ್ಲಿ ಬಿ.ಜೆ.ಪಿ ಹಾಗೂ ಜೆ.ಡಿ.ಯು ಹೊಂದಾಣಿಕೆ ಮಾಡಿಕೊಂಡಿದ್ದು, ಅದರ ಪ್ರಕಾರ ನಾನು 6 ತಿಂಗಳ ಅವಧಿಗೆ ಅಧ್ಯಕ್ಷನಾಗಿರುವುದಾಗಿ ತಿಳಿಸಿದರಲ್ಲದೆ, ಮುಂದಿನ ಆರು ತಿಂಗಳನಂತರ  ಅಧ್ಯಕ್ಷ ಗಾಧಿಯನ್ನು  ಜೆ.ಡಿ.ಯು.ಗೆ ಬಿಟ್ಟುಕೊಡಲು ಸಿದ್ದ ಎಂದರು.
ಉಪಾಧ್ಯಕ್ಷೆ ಲತಾ ಕೇಶವಮೂತರ್ಿ ಪತ್ರಿಕೆಯೊಂದಿಗೆ ಮಾತನಾಡಿ, ನಮ್ಮ ಮುಖಂಡ ಹಾಗೂ ಡಿ.ಸಿ.ಸಿ.ಬ್ಯಾಂಕ್ನ ನಿದರ್ೇಶಕ ಸಿಂಗದಹಳ್ಳಿ ರಾಜ್ಕುಮಾರ್ ರವರ ಸಹಕಾರದಿಂದ ನಾನು ಈ ಹುದ್ದೆಯನ್ನು ಅಲಂಕರಿಸಲು ಸಾಧ್ಯವಾಯಿತು ಎಂದ ಅವರು, ಈ ಮೂಲಕ ಕಾಡು ಗೊಲ್ಲ ಸಮಾಜದ ಮಹಿಳೆಯೊಬ್ಬಳು ಪ್ರಥಮ ಬಾರಿಗೆ ತಾ.ಪಂ. ಉಪಾಧ್ಯಕ್ಷರ ಹುದ್ದೆ ಅಲಂಕರಿಸಿದಂತಾಗಿದೆ ಎಂದರು.
ರಸ್ತೆಗಿಳಿದ ಜೆ.ಡಿ.ಎಸ್. ಸದಸ್ಯರು: ಬಿ.ಜೆ.ಪಿ. ಸದಸ್ಯರು ಮೋಸ ಮಾಡಿದ್ದಾರೆ, ಕೆ.ಎಸ್.ಕಿರಣ್ಕುಮಾರ್ ವಚನ ಭ್ರಷ್ಟರಾಗಿದ್ದಾರೆ ಎಂಬ ಘೋಷಣೆಗಳ ಮೂಲಕ ರಸ್ತೆಗಿಳಿದ ಜೆ.ಡಿ.ಎಸ್.ನ ಚೇತನ ಗಂಗಾಧರ್, ಲತಾ, ಹೇಮಾವತಿ, ಕವಿತಾ, ಬೀಬಿ ಫಾತೀಮಾ, ಶಿವರಾಜ್ ಸೇರಿದಂತೆ ಅವರ ಬೆಂಬಲಿಗರು ಐ.ಬಿ.ಮುಂಭಾಗದಲ್ಲಿ ರಸ್ತೆಗಿಳಿದು ಪ್ರತಿಭಟಿಸಲು ಮುಂದಾದರು, ಕಳೆದ ಅವಧಿಯಲ್ಲಿ ನಮ್ಮೊಂದಿಗೆ ಅಧಿಕಾರ ಹಂಚಿಕೊಂಡ ಬಿ.ಜೆ.ಪಿ.ಯವರು  ಅಧ್ಯಕ್ಷರಾಗಿ ಮೆರೆದು, ಈಗ ನಮ್ಮ ಕಡೆಯವರು  ಅಧ್ಯಕ್ಷರಾಗುವ ಹಂತದಲ್ಲಿ ನಮ್ಮಿಂದ ದೂರವಾಗಿ ಜೆ.ಡಿ.ಯು ಸದಸ್ಯರೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ದೂರಿದರು.
ಕೆಲಕಲ ರಸ್ತೆ ಮಧ್ಯೆ ಕುಳಿತುಕೊಂಡರಾದರೂ ಪೊಲೀಸರ ಮಧ್ಯೆ ಪ್ರವೇಶದಿಂದ ಜೆ.ಡಿ.ಎಸ್.ನವರು ರಸ್ತೆಯನ್ನು ತೆರವುಗೊಳಿಸಿ ವಾಹನಗಳು ಓಡಾಡಲು ಅನವು ಮಾಡಿದರು.
ಹಲವು ಕುತೂಹಲಗಳನ್ನಿಟ್ಟುಕೊಂಡಿದ್ದ ಬಿ.ಜೆ.ಪಿ, ಜೆ.ಡಿ.ಎಸ್ ಹಾಗೂ ಜೆ.ಡಿ.ಯು ಪಕ್ಷದ ಬೆಂಬಲಿಗರು, ಭಾರಿ ಸಂಖ್ಯೆಯಲ್ಲಿ ತಾ.ಪಂ.ಯ ಸುತ್ತಾಮುತ್ತಾ ಸೇರಿದ್ದರು. ಹಲವು ಗೊಂದಲಗಳಿಗೆ ಕಾರಣವಾಗಿದ್ದ ಚುನಾವಣೆಯ ಫಲಿತಾಂಶವನ್ನು ತಿಳಿಯಲು ಸೇರಿದ್ದ ಜನರನ್ನು ಸಮರ್ಥರೀತಿಯಲ್ಲಿ ಹತೋಟಿಗೆ ತೆಗೆದುಕೊಂಡಿದ್ದ ಪೊಲೀಸರು,  ಶಾಂತರೀತಿಯಿಂದ ಚುನಾವಣೆ ನಡೆಯುವಂತೆ ನೋಡಿಕೊಂಡರಲ್ಲದೆ, ವಿಜಯೋತ್ಸವದ ಮೇರವಣಿಗೆಯನ್ನು ದಕ್ಷರೀತಿಯಲ್ಲಿ ನಿಭಾಯಿಸಿದರು.   

ಮಾತಿಗೆ ತಪ್ಪಿದ ಬಿ.ಜೆ.ಪಿ.: ಶಾಸಕ ಸಿ.ಬಿ.ಎಸ್. ಆರೋಪ
ಚಿಕ್ಕನಾಯಕನಹಳ್ಳಿ,ಅ.19: ತಾಲೂಕು ಪಂಚಾಯಿತಿ ಚುನಾವಣೆಯ ಅಧಿಕಾರಕ್ಕಾಗಿ ತಾಲೂಕು ಬಿ.ಜೆ.ಪಿ. ಮಾತಿಗೆ ತಪ್ಪಿ, ವಚನ ಭ್ರಷ್ಟತನವನ್ನು ಪ್ರದಶರ್ಿಸುವ ಮೂಲಕ ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್ ರವರು ಒಂದು ಸಮಾಜಕ್ಕೆ ಸೀಮಿತವೆಂಬುದನ್ನು ಪ್ರದಶರ್ಿಸಿದ್ದಾರೆ ಶಾಸಕ ಸಿ.ಬಿ.ಸುರೇಶ್ ಬಾಬು ಆರೋಪಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಅವಧಿಯ ಅಧ್ಯಕ್ಷರ ಅವಧಿಯಲ್ಲಿ ಜೆ.ಡಿ.ಎಸ್.ನೊಂದಿಗೆ ಒಪ್ಪಂದ ಮಾಡಿಕೊಂಡ ಬಿ.ಜೆ.ಪಿ.ಯವರು ಅವರು ಅಧ್ಯಕ್ಷ ಪದವಿ ಇಟ್ಟುಕೊಂಡು ನಮಗೆ ಉಪಾಧ್ಯಕ್ಷ ಪದವಿಯನ್ನು ಕೊಟ್ಟರು. ಬಿ.ಜೆ.ಪಿಯವರ ಒಪ್ಪಂದಂತೆ ಈ ಅವಧಿಯಲ್ಲಿ ಜೆ.ಡಿ.ಎಸ್.ಗೆ  ಅಧ್ಯಕ್ಷ ಪದ ವಿ ಕೊಡಬೇಕಾಗುತ್ತದೆ ಎಂಬ ಧೋರಣೆಯಿಂದ ಜೆ.ಡಿ.ಯು.ನೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡು ಮತ್ತೇ ಬಿ.ಜೆ.ಪಿ.ಯವರು ಅದರಲ್ಲೂ ಅವರ ಸಮಾಜದವರೇ ಅಧ್ಯಕ್ಷರಾಗುವಂತೆ ನೋಡಿಕೊಳ್ಳುವ ಮೂಲಕ ಬಿ.ಜೆ.ಪಿ.ಯವರ ಕೋಮುವಾದಿತನವನ್ನು ಮತ್ತೇ ಪ್ರದಶರ್ಿಸಿದ್ದಾರೆ, ಇದಕ್ಕೆ ಮುಂದಿನ ಚುನಾವಣೆಗಳಲ್ಲಿ ಬಿ.ಜೆ.ಪಿ.ಗೆ ತಕ್ಕ ಪಾಠ ಜನರೇ ಕಲಿಸಲಿದ್ದಾರೆ ಎಂದರು.
ತಾ.ಪಂ.ಚುನಾವಣೆ ಸಂಬಂಧ ಹಿಂದಿನ ಒಪ್ಪಂದದ ಬಗ್ಗೆ ನೆನಪಿಸಲು ನಾನು ದೂರವಾಣಿ ಮೂಲಕ ಸಂಪಕರ್ಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ, ಅವರ ಮೊಬೈಲ್ನ ಸ್ವಿಚ್ ಆಫ್ ಮಾಡಿಕೊಳ್ಳುವ ಮೂಲಕ ತಮ್ಮ ಅಸಹಕಾರವನ್ನು ಪ್ರದಶರ್ಿಸಿದರು ಎಂದರು.
ಇನ್ನು ಮುಂದೆ ಜೆ.ಡಿ.ಎಸ್ ಯಾವುದೇ ಸಂದರ್ಭದಲ್ಲೂ ಬಿ.ಜೆ.ಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲವೆಂದು ಸ್ಪಷ್ಟ ಪಡಿಸಿದ ಅವರು, ಈ ವಿಷಯವನ್ನು ನಮ್ಮ ಕಾರ್ಯಕರ್ತರು ಜನರ ಮುಂದಿಟ್ಟು ಮುಂದಿನ ಚುನಾವಣೆಗಳಿಗೆ ಹೋಗಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜೆ.ಡಿ.ಎಸ್.ನ ತಾ.ಪಂ.ಸದಸ್ಯರುಗಳಾದ ಚೇತನ ಗಂಗಾಧರ್, ಲತಾ, ಹೇಮಾವತಿ, ಕವಿತಾ, ಬೀಬಿ ಫಾತೀಮಾ, ಶಿವರಾಜ್ ಸೇರಿದಂತೆ ಕಲ್ಪವೃಕ್ಷ ಬ್ಯಾಂಕ್ನ ಅಧ್ಯಕ್ಷ ಸಿ.ಎಸ್.ರಮೇಶ್, ಜೆ.ಡಿ.ಎಸ್.ಮುಖಂಡ ರಾಮಚಂದ್ರಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ತಾ.ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಂ.ನರಸಿಂಹಯ್ಯ ನಿಧನ
ಚಿಕ್ಕನಾಯಕನಹಳ್ಳಿ,ಅ.19 : ತಾಲ್ಲೂಕಿನ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾಗಿ 15ವರ್ಷಗಳ ಕಾಲ ಹಾಗೂ ಕಾರ್ಯದಶರ್ಿಯಾಗಿ 10ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ನಿವೃತ್ತ ಶಿಕ್ಷಕ ಎಂ.ನರಸಿಂಹಯ್ಯನವರು(86) ವಿಧಿವಶರಾಗಿದ್ದಾರೆ.
ಎಂ.ನರಸಿಂಹಯ್ಯನವರು ಬಿ.ಎ.ಪಧವೀದರರಾಗಿದ್ದು, ಇವರು ಶಿಕ್ಷಕ ವೃತ್ತಿಯನ್ನು ತಿಮ್ಮನಹಳ್ಳಿಯಿಂದ ಪ್ರಾರಂಭಿಸಿ, ಚಿಕ್ಕನಾಯಕನಹಳ್ಳಿ, ಕಿಬ್ಬನಹಳ್ಳಿಯಲ್ಲಿ ವೃತ್ತಿ ನಿರ್ವಹಿಸಿ ಚಿಕ್ಕನಾಯಕನಹಳ್ಳಿಯ ಕುರುಬರಶ್ರೇಣಿಯಲ್ಲಿ ನಿವೃತ್ತಿ ಹೊಂದಿರುತ್ತಾರೆ. ನಂತರ ಚಿಕ್ಕನಾಯಕನಹಳ್ಳಿಯ ತಾಲ್ಲೂಕು ನಿವೃತ್ತಿ ಶಿಕ್ಷಕರ ಸಂಘದಲ್ಲಿ ಸೇವೆ ಸಲ್ಲಿಸಿ ಅವರ ಅವಧಿಯಲ್ಲಿ ಸಂಘಕ್ಕೆ ಕೆಳ ಮತ್ತು ಮೊದಲ ಅಂತಸ್ಥಿನ ಕಟ್ಟಡ ನಿಮರ್ಾಣ ಮಾಡಿದ್ದಾರೆ.
ಮೈಸೂರಿನಲ್ಲಿ ರಾಜ್ಯಮಟ್ಟದ ಸಮ್ಮೇಳನದಲ್ಲಿ ಇವರ ಕಾರ್ಯವೈಖರಿಯನ್ನು ಮೆಚ್ಚಿ ಅಭಿನಂದಿಸಲಾಗಿತ್ತು. ಇವರು ಕಳೆದ  ಹದಿನೈದು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದರು. ಇವರು ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳಾದ ವಿಜ್ಞಾನ ಸಂಘದ ಅಧ್ಯಕ್ಷೆ ಹಾಗೂ ತೀರ್ಥಪುರ ಸಕರ್ಾರಿ ಕಾಲೇಜ್ನ ಪ್ರಾಚಾಯರ್ಾರಾದ  ಎನ್.ಇಂದಿರಮ್ಮ ನವರನ್ನು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ಕಂದಿಕೆರೆಯ ಅವರ ಜಮೀನಿನಲ್ಲಿ ಮಾಡಲಾಯಿತು.
ಪಾಥರ್ೀವ ಶರೀರಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು, ಡಿ.ಸಿ.ಸಿ.ಬ್ಯಾಂಕ್ ನಿದರ್ೇಶಕ ಸಿಂಗದಹಳ್ಳಿ ರಾಜ್ಕುಮಾರ್ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದರು.

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ನೌಕರರ ಮುಷ್ಕರ
ಚಿಕ್ಕನಾಯಕನಹಳ್ಳಿ,ಅ.19 : ಖಾಯಮಾತಿ, ಕನಿಷ್ಟಕೂಲಿ, ಪಿಂಚಣಿ ಹಾಗೂ ಉಪಧನ(ಗ್ರಾಚ್ಯುಯಿಟಿ) ಮುಂತಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ಇಲ್ಲಿನ ಅಂಗನವಾಡಿ ಕಾರ್ಯಕತರ್ೆಯರು ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟನೆ ನಡೆಸಿದರು.
ಪಟ್ಟಣದ ನೆಹರು ಸರ್ಕಲ್ನಿಂದ ತಾಲ್ಲೂಕು ಕಛೇರಿಯವರೆಗೆ ಹೊರಟ ಪ್ರತಿಭಟನಾ ಮೆರವಣಿಯಲ್ಲಿ ಅಂಗನವಾಡಿ ನೌಕರರು ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಶಿರಸ್ತೆದಾರ್ ಬೊಮ್ಮಾಯ್ಯರವರಿಗೆ ಮನವಿ ಪತ್ರ ಸಲ್ಲಿಸಿದರು.
ಮಿನಿ ಅಂಗನವಾಡಿ ಕೇಂದ್ರದಲ್ಲಿರುವ ಕಾರ್ಯಕತರ್ೆಯರಿಗೂ ಮೈನ್ ಅಂಗನವಾಡಿ ಕಾರ್ಯಕತರ್ೆಯರ ಸೌಲಭ್ಯ ನೀಡಬೇಕು, ಗ್ರಾಮ ಪಂಚಾಯಿತಿ ಸದಸ್ಯರುಗಳನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು, ಅಂಗನವಾಡಿ ಕಾರ್ಯಕತರ್ೆರಿಗೆ ಗ್ರಾಮ ಪಂಚಾಯಿತಿ ಸದಸ್ಯರುಗಲ ಕಿರುಕುಳ ನಿಲ್ಲಬೇಕು. ಗ್ರಾಮ ನೈರ್ಮಲ್ಯ ಸಮಿತಿಯಲ್ಲಿ ಆಶಾ ಕಾರ್ಯಕತರ್ೆ ಇಲ್ಲದ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕತರ್ೆಯರು ಕಾರ್ಯದಶರ್ಿಯಾಗಿ ಸಮಿತಿ ನಡೆಸುತ್ತಿದ್ದು ಇದರಲ್ಲಿ ಪಂಚಾಯಿತಿಯ ಸದಸ್ಯರು ಅಧ್ಯಕ್ಷರಾಗಿದ್ದು ಇವರು ಇದರಲ್ಲಿ ಪಂಚಾಯಿತಿಯ ಸದಸ್ಯರು ಅಧ್ಯಕ್ಷರಾಗಿದ್ದು ಇವರು ಕಾರ್ಯಕತೆರ್ಯರಿಗೆ ಕಿರುಕುಳ ನೀಡುವುದು ತಪ್ಪಬೇಕು, ಅಂಗನವಾಡಿ ಕಾರ್ಯಕತರ್ೆಯರು ಮತ್ತು ಸಹಾಯಕಿಯರಿಗೆ ಕೊಟ್ಟಿರುವ ಸಮವಸ್ತ್ರ ಸರಿ ಇಲ್ಲದಿರುವುದರಿಂದ ಕ್ಷೇತ್ರ ಮಟ್ಟದ ಸಭೆ ಮತ್ತು ವೃತ್ತ ಮಟ್ಟದ ಸಭೆ ಹಾಕಬಾರೆಂದು ಅನುಮತಿ ನೀಡಬೇಖು, ಅಂಗನವಾಡಿ ಕೇಂದ್ರದಲ್ಲಿ ವಾರದಲ್ಲಿ ಮೂರು ದಿನ ಮಾತ್ರ ಹಾಕಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಮುಖಂಡರಾದ ಮುಜೀಬ್, ಅಧ್ಯಕ್ಷೆ ಪೂರ್ಣಮ್ಮ, ಉಪಾಧ್ಯಕ್ಷೆ ಅನ್ನಪೂರ್ಣ, ಕಾರ್ಯದಶರ್ಿ ಶಾರದ ಕೆ.ಜಿ, ಖಜಾಂಚಿ ಯಶೋಧ, ಸಾವಿತ್ರಮ್ಮ, ಲಕ್ಷ್ಮಮ್ಮ, ಸುನಂದ ಹಾಗೂ ಕಾರ್ಯಕತರ್ೆಯರು ಉಪಸ್ಥಿತರಿದ್ದರು.



Wednesday, October 10, 2012


  1. ಇಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿರುವಾಗ ಅಲ್ಲಿನ ಬೆಳೆಗೆ ನೀರು ಬಿಡುಎನ್ನುವುದು  ಎಂತಹ ನ್ಯಾಯ: ಡಾ.ಯತೀಶ್ವರಶಿವಾಚಾರ್ಯಸ್ವಾಮಿ

  • ವಿದ್ಯಾಥರ್ಿಗಳಿಗೂ ತಟ್ಟಿದ ಕಾವೇರಿ ಹೋರಾಟದ ಕಾವು
  • ಮಾನವ ಸರಪಳಿ ರಚಿಸಿ,  ರಸ್ತೆತಡೆ.


 ಚಿಕ್ಕನಾಯಕನಹಳ್ಳಿ,ಅ.08 ; ಹಳೇ ಮೈಸೂರು ಪ್ರಾಂತ್ಯದವರು ಕುಡಿಯುವ ನೀರಿಗಾಗಿ ನಂಬಿರುವುದೇ ಕಾವೇರಿ ನೀರನ್ನು, ನಾವಿಲ್ಲಿ ಕುಡಿಯುವ ನೀರಿಗೇ ಪರಿತಪಿಸುತ್ತಿರುವಾಗ ತಮಿಳುನಾಡಿನ ಜನಕ್ಕೆ  ಬೇಸಾಯಕ್ಕೆ ನೀರು ಬಿಡುತ್ತಿರುವುದು ಅಕ್ಷಮ್ಯ ಅಪರಾಧ ಎಂದು ಕುಪ್ಪೂರು ಮಠದ ಪೀಠಾಧ್ಯಕ್ಷ ಡಾ.ಯತೀಶ್ವರ ಶಿವಾಚಾರ್ಯಸ್ವಾಮಿ ಹೇಳಿದರು.
ಪಟ್ಟಣದ ಶೆಟ್ಟಿಕೆರೆ ಗೇಟ್ ಬಳಿ ಕನರ್ಾಟಕ ರಕ್ಷಣಾ ವೇದಿಕೆ ಹಾಗೂ ಅಖಿಲ ಭಾರತೀಯ ವಿದ್ಯಾಥರ್ಿ ಪರಿಷತ್ನ ಸಂಘಟನೆ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರತಿ ಬಾರಿಯ ಬರಗಾಲದ ಸಂದರ್ಭದಲ್ಲಿ ನೀರಿನ  ವಿಷಯವಾಗಿ ಜಯಲಲಿತಾ ಸಮಸ್ಯೆ ಉಂಟು ಮಾಡುತ್ತಲೇ ಇರುತ್ತಾರೆ, ನಮ್ಮ ರಾಜ್ಯದಲ್ಲಿ ಹುಟ್ಟುವ ಕಾವೇರಿ ನಮ್ಮವಳು, ನಮಗಾಗಿ ಮೀಸಲಿರುವಳು, ಕೇಂದ್ರ ಸಕರ್ಾರ ಕಾವೇರಿ ವಿಚಾರವಾಗಿ ತಮಿಳುನಾಡಿನ ಪರ ವಹಿಸುವ ಮೂಲಕ  ರಾಜ್ಯಕ್ಕೆ ಮೋಸ ಮಾಡುತ್ತಲೇ ಬಂದಿದ್ದಾರೆ ಎಂದರು.
ಭಾಜಪ ಮುಖಂಡ  ಶಿವಣ್ಣ ಮಾತನಾಡಿ, ಕೇಂದ್ರ ಸಕರ್ಾರ ರಾಜಕೀಯ ಉದ್ದೇಶದಿಂದ ಕಾವೇರಿ ನದಿ ನೀರನ್ನು ಬಳಸಿಕೊಂಡಿರುವುದು ಖಂಡನೀಯವಾಗಿದೆ, ಕಾವೇರಿ ನೀರನ್ನು ತಕ್ಷಣ ನಿಲ್ಲಿಸಬೇಕು ಇಲ್ಲವಾದರೆ ನೀರಿಗಾಗಿ ರಾಜ್ಯಾದ್ಯಂತ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದರು.
ಕನರ್ಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಸಿ.ಟಿ.ಗುರುಮೂತರ್ಿ ಮಾತನಾಡಿ, ಈಗಾಗಲೇ ತಮಿಳುನಾಡಿಗೆ ಬಿಟ್ಟಿರುವ ನೀರಿನಿಂದ ಕಬಿನಿ ಜಲಾಶಯ ಖಾಲಿಯಾಗುವ ಭೀತಿ ಎದುರಾಗಿದೆ, ಇದರಿಂದ ರೈತರಿಗೆ ತೀವ್ರ ರೀತಿಯ ಸಂಕಷ್ಟ ಎದುರಾಗಿ ಮುಂದಿನ ದಿನಗಳಲ್ಲಿ ಹನಿ ನೀರಿಗೂ ಇಲ್ಲಿನ ಜನ ಪರದಾಡುವ ಸ್ಥಿತಿ ಎದುರಾಗಲಿದೆ ಎಂದರು. 
ತಾ.ಅಭಾವಿಪ ಪ್ರಮುಖ್ ಚೇತನ್ಪ್ರಸಾದ್ ಮಾತನಾಡಿ ರಾಜ್ಯದಲ್ಲಿ ಮಳೆ ಕೊರತೆಯಿಂದ ಕಾವೇರಿ ಜಲಾನಯನ ಪ್ರದೇಶದ ನಾಲ್ಕೂ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಿದ್ದರೂ ಸಹ ಕೇಂದ್ರ ಸಕರ್ಾರ ತಮಿಳುನಾಡಿಗೆ ನೀರನ್ನು ಬಿಡಬೇಕು ಎಂದು ಅಧಿಸೂಚನೆ ಹೊರಡಿಸಿರುವುದು ಅತ್ಯಂತ ಖಂಡನೀಯ ಎಂದರಲ್ಲದೆ,  ಜನವರಿ ನಂತರ ಇಲ್ಲಿನ ಜನರಿಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾದರೂ ಆಶ್ಚರ್ಯವಿಲ್ಲ ಎಂದರು.
ಪ್ರತಿಭಟನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಎಸ್.ರವಿಕುಮಾರ್, ಸಂಚಾಲಕ ಜಾಕಿರ್ ಹುಸೇನ್, ಕಾರ್ಯಕರ್ತರುಗಳಾದ ರವಿ, ಮಧು, ಸುಧಿಂದ್ರ, ಕರವೇ ಕಾರ್ಯಕರ್ತರಾದ ಮಧು, ಸೇರಿದಂತೆ ಕಾಲೇಜು ವಿದ್ಯಾಥರ್ಿಗಳು ಪಾಲ್ಗೊಂಡಿದ್ದರು.
ಪ್ರತಿಭಟನೆಯಲ್ಲಿ ಕಾಲೇಜು ವಿದ್ಯಾಥರ್ಿಗಳು ಪಾಲ್ಗೊಂಡು , ಮಾನವ ಸರಪಳಿ ರಚಿಸಿದರು, ರಸ್ತೆ ತಡೆ ನಡೆಸಿದರು.

Saturday, October 6, 2012


ಕಾವೇರಿಗೆ  ಚಿ.ನಾ.ಹಳ್ಳಿಯಲ್ಲಿ ಬಂದ್ಗೆ ಸಂಪೂರ್ಣ ಬೆಂಬಲ




aPÀÌ£ÁAiÀÄPÀ£ÀºÀ½î §AzïUÁV £ÉºÀgÀÄ ¸ÀPÀð¯ï §½ ¸ÀÛ§Ý
ka,ra,ve strice


memorandam sallike
raitha sangatane strice


ಚಿಕ್ಕನಾಯಕನಹಳ್ಳಿ,ಅ.06 : ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು  ವಿರೋಧಿಸಿ ಕನ್ನಡ ಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕನರ್ಾಟಕ ಬಂದ್ಗೆ ತಾಲ್ಲೂಕಿನಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಯಿತು.
ಇಲ್ಲಿನ ಕನರ್ಾಟಕ ರಕ್ಷಣ ವೇದಿಕೆ, ಜನಪರ ವೇದಿಕೆ, ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಸ್ಪಂದನ ಪ್ರಗತಿಪರ ಒಕ್ಕೂಟ, ಸ್ನೇಹಕೂಟ, ದಿವ್ಯಜ್ಯೋತಿ ಹವ್ಯಾಸಿ ಕಲಾಸಂಘ, ಟಿಪ್ಪುಸುಲ್ತಾನ್ ಯುವಕ ಸಂಘ, ಭುವನೇಶ್ವರಿ ಯುವ ಸಂಘ, ಕುಂಚಾಂಕುರ ಕಲಾ ಸಂಘ, ಕನ್ನಡ ಸಾಹಿತ್ಯ ಪರಿಷತ್, ಛಾಯಾಗ್ರಾಹಕರ ಸಂಘ, ಸುಭಾಷ್ ಚಂದ್ರಬೋಸ್ ಆಟೋಚಾಲಕರ ಸಂಘ, ಕನ್ನಡಭಿಮಾನಿಗಳು ಕನರ್ಾಟಕ ಬಂದ್ಗೆ ಬೆಂಬಲಿಸಿ ಧರಣಿ ಸತ್ಯಾಗ್ರಹ ಹಾಗೂ  ಪ್ರತಿಭಟನೆ ನಡೆಸಿದವು.
ಆಸ್ಪತ್ರೆಗಳು, ಔಷಧಿ ಅಂಗಡಿಗಳನ್ನು ಹೊರತು ಪಡಿಸಿ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿದರು.
ಪ್ರತಿಭಟನೆಯ ವೇಳೆ ಸಂಚರಿಸುತ್ತಿದ್ದ ವಾಹನಗಳನ್ನು ಕನ್ನಡಪರ ಸಂಘಟನೆಗಳು ತಡೆದು ಬಂದ್ಗೆ ಸಹಕರಿಸುವಂತೆ ಒತ್ತಾಯಿಸಿದವು.
ಈ ಸಂದರ್ಭದಲ್ಲಿ ಸ್ವಾತಂತ್ರ ಹೋರಾಟಗಾರರ ಸಂಘದ ಅಧ್ಯಕ್ಷ ಎಸ್.ಮುರುಡಯ್ಯ ಮಾತನಾಡಿ ರಾಜ್ಯದಲ್ಲಿ ಈಗಾಗಲೇ ಮಳೆ ಇಲ್ಲದೆ  ಬರ ಬಂದು ರೈತರು ಕಂಗಾಲಾಗಿದ್ದಾರೆ, ರೈತರು ಬಿತ್ತಿರುವ ಬೆಳೆಗಳು ಅರ್ಧಕ್ಕೆ ಒಣಗಿ ರೈತರು ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ, ಇಂತಹ ಪರಿಸ್ಥಿತಿಯಲ್ಲಿ ಸುಪ್ರಿಂಕೋಟರ್್ ಅವೈಜ್ಞಾನಿಕ ತೀಪರ್ು ನೀಡಿದ್ದು ಈ ತೀರ್ಪನ್ನು ಕೂಡಲೇ   ಮರುಪರಿಶೀಲಿಸಿ ಕನರ್ಾಟಕ ರಾಜ್ಯದ ಸಮಸ್ಯೆಯ ಕಡೆಯೂ ಗಮನ ಹರಿಸಿ ತೀಪರ್ು ನೀಡಬೇಕು ಎಂದರು.
ಸಾಹಿತಿ ಎಂ.ವಿ.ನಾಗರಾಜ್ ರಾವ್ ಮಾತನಾಡಿ, ಕಾವೇರಿ ನಮ್ಮವಳು, ಕೇಂದ್ರ ಸಕರ್ಾರ ಯಾರನ್ನೊ ಮೆಚ್ಚುಸುವುದಕ್ಕಾಗಿ ಕನರ್ಾಟಕದವರಿಗೆ ನೋವುಂಟು ಮಾಡಬಾರದು, ನಮ್ಮ ರಾಜ್ಯದಲ್ಲಿ ಬರದ ಈ ಸಂದರ್ಭದಲ್ಲಿ ಕುಡಿಯಲು  ನೀರಿಲ್ಲದೆ ಹಾಹಾಕಾರ ಪಡುತ್ತಿರುವಾಗ ತಮಿಳುನಾಡಿಗೆ ಬೆಳೆ ಬೆಳೆಯಲು ನೀರು ಬಿಡುತ್ತಿದ್ದಾರೆ, ಆ ನೀರಾದರೂ ಬೆಳೆಗೆ ಹೋಗುತ್ತಿದೆಯೇ ಎಂದರೆ  ಅದೂ ಇಲ್ಲ. ಪ್ರಾಧಿಕಾರದ ತೀಪರ್ು ಅವೈಜ್ಞಾನಿಕ ಎಂದು ಜರಿದರು.
ಪ್ರತಿಭಟನೆಯಲ್ಲಿ  ಪ್ರಾಂಶುಪಾಲ ಎ.ಎನ್.ವಿಶ್ವೇಶ್ವರಯ್ಯ, ಜನಪರ ವೇದಿಕೆ ಅಧ್ಯಕ್ಷ ಸಿ.ಡಿ.ಚಂದ್ರಶೇಖರ್, ಕನರ್ಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಸಿ.ಟಿ.ಗುರುಮೂತರ್ಿ, ಶೆಟ್ಟೀಕೆರೆ ಜಿ.ಪಂ.ಸದಸ್ಯ ಎಚ್.ಬಿ.ಪಂಚಾಕ್ಷರಿ, ತಾ.ಪಂ.ಸದಸ್ಯ ಎಂ.ಎಂ.ಜಗದೀಶ್, ರೈತ ಸಂಘದ ಜಿಲ್ಲಾ ಕಾರ್ಯದಶರ್ಿ ದಬ್ಬೆಘಟ್ಟ ಜಗದೀಶ್,  ತಾ.ಭಾಜಪ ಅಧ್ಯಕ್ಷ ಶಿವಣ್ಣ(ಮಿಲ್ಟ್ರಿ), ಕಾರ್ಯದಶರ್ಿ ಸುರೇಶ್,  ಪುರಸಭಾ ಸದಸ್ಯರುಗಳಾದ ವರದರಾಜು, ದೊರೆಮುದ್ದಯ್ಯ, ಸಿ.ಎಂ.ರಂಗಸ್ವಾಮಯ್ಯ, ಎಂ.ಎನ್.ಸುರೇಶ್, ಸಿ.ಎಸ್.ರಮೇಶ್, ರಾಜಣ್ಣ, ರುಕ್ಮಿಣಮ್ಮ,  ತಾ.ಭಾಜಪ ಹಿಂದುಳಿದ ವರ್ಗಗಳ ಅಧ್ಯಕ್ಷ  ಶ್ರೀನಿವಾಸಮೂತರ್ಿ, ತಾ.ಕ.ಸಾ.ಪ.ಅಧ್ಯಕ್ಷ ಎಂ.ಎಸ್.ರವಿಕುಮಾರ್, ನಗರ ಕೇಂದ್ರಿತ ಘಟಕದ ಅಧ್ಯಕ್ಷ ಸುನಿಲ್ಕುಮಾರ್,  ಕೃಷ್ಣೆಗೌಡ, ಸಿದ್ದರಾಮಯ್ಯ, ಕುಂಚಾಂಕುರ ಕಲಾ ಸಂಘದ ಅಧ್ಯಕ್ಷ ಸಿ.ಎಚ್.ಗಂಗಾಧರ್, ಸೇರಿದಂತೆ ಕನ್ನಡ ಪರ ಅಭಿಮಾನಿಗಳು ಪಾಲ್ಗೊಂಡಿದ್ದರು.

Tuesday, July 3, 2012







ತಾಲ್ಲೂಕು  ಕಲೆ, ಸಾಹಿತ್ಯ, ಸಂಸ್ಕೃತಿ, ಜಾನಪದ, ತವರೂರು
ಚಿಕ್ಕನಾಯಕನಹಳ್ಳಿ,ಜು.03 :  ತಾಲ್ಲೂಕು  ಕಲೆ, ಸಾಹಿತ್ಯ, ಸಂಸ್ಕೃತಿ, ಜಾನಪದ, ತವರೂರಾಗಿದ್ದು ಇವುಗಳ ಅಭಿವೃಧ್ಧಿಗೆ ಸಂಘ ಸಂಸ್ಥೆಗಳು ಹೆಚ್ಚು ಗಮನ ಹರಿಸಿ ಎಂದು  ಶಾಸಕ ಸಿ.ಬಿ.ಸುರೇಶ್ಬಾಬು ಹೇಳಿದರು.
ಪಟ್ಟಣದ ಹಳೆಯೂರು ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಪಟ್ಟಣದ ಕಲ್ಪವೃಕ್ಷ ಕೋ ಆಪರೇಟಿವ್ ಬ್ಯಾಂಕ್ ಸಭಾಂಗಣದಲಿ  ರಾಜ್ಯಮಟ್ಟದ ಡ್ಯಾನ್ಸ್ ಡ್ಯಾನ್ಸ್ ಸ್ಪಧರ್ೆಯ ಮುಕ್ತಾಯ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮುಂದಿನ ವರ್ಷದಿಂದ ರಾಜ್ಯಮಟ್ಟದ ಡ್ಯಾನ್ಸ್ ಡ್ಯಾನ್ಸ್ ಸ್ಪಧರ್ೆಯನ್ನು ಕನ್ನಡ ಸಂಘದ ವೇದಿಕೆಯಲ್ಲಿ ನೆಡೆಸಲಾಗುವುದು ಎಂದರು.
ಸಮಾರಂಭದ ಉದ್ಗಾಟನೆಯನ್ನು ಅನ್ನಪೂಣರ್ೇಶ್ವರಿ ಕಲಾ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ನೆರೆವೆರಿಸಿದರು.
ಕಾರ್ಯಕ್ರಮದಲ್ಲಿ ಕೋ-ಅಪರೇಟಿವ್ ಬ್ಯಾಂಕ್ ಅದ್ಯಕ್ಷ ಸಿ ಎಸ್ ನಟರಾಜ್ , ಪುರಸಬಾದ್ಯಕ್ಷ ದೊರೆ ಮುದ್ದಯ್ಯ, ಕರವೇ ಅಧ್ಯಕ್ಷ ಸಿ ಟಿ ಗುರುಮೂತರ್ಿ, ಪುರಸಭಾ ಸದಸ್ಯ ಎಂ ಎನ್ ಸುರೇಶ್, ಜಿ.ಪಂ. ಸದಸ್ಯೆ ಜಾನಮ್ಮ ರಾಮಚಂದ್ರಯ್ಯ ,ತಾ.ಪಂ. ಸದಸ್ಯೆ ಚೇತನ್ ಗಂಗಾಧರ್ ಮುಂತಾದವರಿದ್ದರು.
ಜೂನಿಯರ್ ಸಿಂಗಲ್ಸ್ನಲ್ಲಿ ಹರಿಹರದ ಹರ್ಷಪಚ್ಚಿ ಪ್ರಥಮ ಸ್ಥಾನ, ರಾಯಚೂರು ಬಿಷಾ ದ್ವಿತೀಯ ಸ್ಥಾನ , ಜಾವಗಲ್ ರೂಪ ತೃತೀಯ ಸ್ಥಾನ ಪಡೆದರು.
ಸೀನಿಯರ್ ಸಿಂಗಲ್ಸ್  ತುಮಕೂರು ಸಂಸ್ಕ್ರುತಿ ಪ್ರಥಮ ಸ್ಥಾನ, ಬೆಂಗಳೂರಿನ ಪ್ರಶಾಂತ್ ದ್ವಿತೀಯ , ತುಮಕೂರು ಮನೋಜ್ ಕುಮಾರ್ ತೃತೀಯ ಸ್ಥಾನ ಪಡೆದರು.
   ಜೂನಿಯರ್ ಗ್ರೂಪ್ಸ್ ನಲ್ಲಿ ಭಟ್ಕಳದ ಸಾಗರ್ ಡ್ಯಾನ್ಸ್ ಗ್ರೂಪ್ ಪ್ರಥಮ ಸ್ಥಾನ, ಬೆಂಗಳೂರಿನ ದೀಶ ತಂಡ ದ್ವಿತೀಯ ,ಮಡಿಕೇರಿ ಗ್ರೂಪ್ಸ್ ಮೂರನೇ ಸ್ಥಾನ.
   ಹಿರಿಯರ ವಿಭಾಗದಲ್ಲಿ ಉಡುಪಿಯ ಸಾಗರ್ ಗೇಮ್ ಪ್ರಥಮ ಸ್ಥಾನ , ಆನೇಕಲ್ನ ನ್ಯೂ ಸ್ಟೀರೀಸ್ ತಂಡ ದ್ವಿತೀಯ ಸ್ಥಾನ , ಕೊಡಗು ಕೂರಗಿ ಫೈಲ್ ತೃತಿಯ ಸ್ಥಾನ ಪಡೆದರು.
ರಾಜ್ಯಮಟ್ಟದ ಡ್ಯಾನ್ಸ್ ಡ್ಯಾನ್ಸ್ ಸ್ಪಧರ್ೆಯಲ್ಲಿ 150 ತಂಡಗಳು ಭಾಗವಹಿಸಿದ್ದವು.


ಸಕರ್ಾರ ಮಲ ಹೊರುವ ಪದ್ದತಿಯನ್ನು ತಡೆಗಟ್ಟಲು  ನೂತನವಾಗಿ ಸೆಪ್ಟಿಕ್ ಟ್ಯಾಂಕರ್ ಯೋಜನೆ
ಚಿಕ್ಕನಾಯಕನಹಳ್ಳಿ,ಜು.02 : ಸಕರ್ಾರ ಮಲ ಹೊರುವ ಪದ್ದತಿಯನ್ನು ತಡೆಗಟ್ಟಲು  ನೂತನವಾಗಿ ಸೆಪ್ಟಿಕ್ ಟ್ಯಾಂಕರ್ ಬಳಸುವ ಕಾರ್ಯವನ್ನು ಕೈಗೆತ್ತಿಕೊಂಡಿದ್ದು ಇದನ್ನು ಪಟ್ಟಣದಲ್ಲಿ ಪುರಸಭಾ ವ್ಯಾಪ್ತಿಗೆ ಬರುವ ಎಲ್ಲಾ ವಾಡರ್್ಗಳ ಜನಸಾಮಾನ್ಯರು ಬಳಸಲು ಇಂದು ಚಾಲನೆ ನೀಡಲಾಗಿದೆ ಎಂದು ಪುರಸಭಾಧ್ಯಕ್ಷ ದೊರೆಮುದ್ದಯ್ಯ ತಿಳಿಸಿದರು.
ನೂತನವಾಗಿ ಬಂದಿರುವ ಸೆಪ್ಟಿಕ್ ಟ್ಯಾಂಕರ್ 6.5ಲಕ್ಷದ್ದಾಗಿದ್ದು, ಈ ಟ್ಯಾಂಕರ್ 3ಸಾವಿರ ಲೀಟರ್ ನೀರು ತುಂಬವಷ್ಟು ಸಾಮಥ್ರ್ಯ ಹೊಂದಿದೆ, ಇದನ್ನು ಸಾರ್ವಜನಿಕರು ಬಾಡಿಗೆ ಆಧಾರದ ಮೇಲೆ ಪಡೆಯಬಹುದಾಗಿದ್ದು ಅದಕ್ಕಾಗಿ ಇಂದು ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ನೂತನ ಸೆಪ್ಟಿಕ್ ಟ್ಯಾಂಕರ್ನ್ನು ಸಾರ್ವಜನಿಕರು ಬಾಡಿಗೆ ಆಧಾರದ ಮೇಲೆ  ಬಳಸಿಕೊಳ್ಳಲು ಮುಕ್ತಗೊಳಿಸುವ  ಕಾರ್ಯಕ್ಕೆ ಶಾಸಕ ಸಿ.ಬಿ.ಸುರೇಶ್ಬಾಬು ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎಂ.ರಂಗಸ್ವಾಮಿಯ್ಯ, ಸದಸ್ಯ ಸಿ.ಎಸ್.ರಮೇಶ್, ಸಿ.ಪಿ.ಮಹೇಶ್, ಬಾಬುಸಾಹೇಬ್, ಪುರಸಭಾ ಮುಖ್ಯಾಧಿಕಾರಿ ಟಿ.ಆರ್.ವೆಂಕಟೇಶ್ ಶೆಟ್ಟಿ ಸೇರಿದಂತೆ ಹಲವರು ಹಾಜರಿದ್ದರು. 




2012-13ನೇ ಸಾಲಿನ ರೋಟರಿ ನೂತನ ಪದಾಧಿಕಾರಿಗಳ 37ನೇ ಪದವಿ ಸ್ವೀಕಾರ ಸಮಾರಂಭ
ಚಿಕ್ಕನಾಯಕನಹಳ್ಳಿ,ಜು.03 : 2012-13ನೇ ಸಾಲಿನ ರೋಟರಿ ನೂತನ ಪದಾಧಿಕಾರಿಗಳ 37ನೇ ಪದವಿ ಸ್ವೀಕಾರ ಸಮಾರಂಭವನ್ನು ಇದೇ 8ರ ಬೆಳಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ.
ಸಮಾರಂಭವನ್ನು ಪಟ್ಟಣದ ಗುರುಭವನದಲ್ಲಿ ಹಮ್ಮಿಕೊಂಡಿದ್ದು ಚಲನಚಿತ್ರ ಸಾಹಿತಿ ಸಿ.ವಿ.ಶಿವಶಂಕರ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.
ಡಿಸ್ಟ್ರಿಕ್ಟ್ ಟ್ರೈನರ್ ಜಿಲ್ಲಾ ಗವರ್ನರ್ ಪಿಡಿಜಿ ರೊ.ಯು.ಬಿ.ಭಟ್ ಪದವಿ ಪ್ರದಾನ, ಹೊಸ ಸದಸ್ಯರ ಸೇರ್ಪಡೆ, ಸನ್ಮಾನ ಹಾಗೂ ಎಸ್.ಎ.ನಭಿ ಜ್ಞಾಪಕಾರ್ಥ ರೋಟರಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸಲಿದ್ದು ಗ್ರೂಪ್-1 ಅಸಿಸ್ಟೆಂಟ್ ಗವರ್ನರ್ ಬಿಳಿಗೆರೆ ಶಿವಕುಮಾರ್ ರೋಟರಿ ಪತ್ರಿಕೆ ನಾಯಕ ಬಿಡುಗಡೆ ಮಾಡಲಿದ್ದು 319ರ ಅಸೋಸಿಯೇಷನ್ ಪ್ರೆಸಿಡೆಂಟ್ ಶೈಲಜ ಭಟ್ ಸೇವಾಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಬಿ.ಇ.ಓ ಸಾ.ಚಿ.ನಾಗೇಶ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಡಾ.ಬಿ.ಎಸ್.ರವೀಂದ್ರ, ಎಚ್.ಎಸ್.ಶಾಮಸುಂದರ್, ಎಚ್.ಎನ್.ಸುರೇಶಕುಮಾರ, ರಮೇಶಬಾಬು, ಡಾ.ತಿಮ್ಮನಹಳ್ಳಿ ವೇಣುಗೋಪಾಲ್, ಎಸ್.ಜಗದೀಶಯ್ಯ, ಸಿ.ಎಸ್.ಚಂದ್ರಶೇಖರ್, ಸಿ.ಎಂ.ಮುದ್ದುಕುಮಾರ್ರವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

Thursday, June 28, 2012



ಜಾತ್ರೆಯ ಪ್ರಯುಕ್ತ ಫ್ಲಕ್ಸ್ಗಳ ಹಾವಳಿ: ಕಿರಿಕಿರಿ ಅನುಭವಿಸುತ್ತಿರುವ ಸಾರ್ವಜನಿಕರು

                                 ಚಿಕ್ಕನಾಯಕನಹಳ್ಳಿ,ಜೂ.28 : ಪ್ರತಿ ಬಾರಿ ಶ್ರೀ ಹಳೆಯೂರು ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಹಾಕಲಾಗುತ್ತಿದ್ದ ಪ್ಲೆಕ್ಸ್ಗಳಿಗಿಂತ ಈ ಬಾರಿ 50ಕ್ಕೂ ಹೆಚ್ಚು ಪ್ಲೆಕ್ಸ್ಗಳು ಪಟ್ಟಣದ ನೆಹರು ಸರ್ಕಲ್ ಬಳಿ ರಾರಾಜಿಸುತ್ತಿವೆ.
ಪಟ್ಟಣದ ನೆಹರು ಸರ್ಕಲ್ನಲ್ಲಿ  ರಾಜಕೀಯ ಮುಖಂಡರ ಅಭಿಮಾನಿಗಳ ಹೆಸರಿನಲ್ಲಿ, ಕೆಲವು ಸಂಘಗಳ ಹೆಸರಿನಲ್ಲಿ ಶುಭಕೋರುವ ಪ್ಲೆಕ್ಸ್ಗಳು ಇವೆ, ಜೆ.ಡಿ.ಎಸ್ ಶಾಸಕ ಸಿ.ಬಿ.ಸುರೇಶ್ಬಾಬು ಅಭಿಮಾನಿಗಳ ಬಳಗ, ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಅಭಿಮಾನಿ ಬಳಗ, ಬಿಜೆಪಿಯ ಮುಖಂಡರು ಹಾಗೂ ಕಾಂಗ್ರೆಸ್ನ ಮುಖಂಡರುಗಳ ಪ್ಲೆಕ್ಸ್ಗಳು ಬಿಎಸ್ಆರ್ ಪಕ್ಷದ ಶ್ರೀರಾಮುಲು ಅಭಿಮಾನಿ ಬಳಗ, ಜಾತ್ರೆಯ ಪ್ರಯುಕ್ತವೆಂಬುದು ನೆಪ ಮಾತ್ರ ಆದರೆ ಇದು ಮುಂಬರುವ ಎಂ.ಎಲ್.ಎ. ಚುನಾವಣೆಯನ್ನು ದೃಷ್ಟಿಯಲ್ಲಿಟ್ಟು ಕೊಂಡು ಈಗಿನಿಂದಲೇ ಹವಾ ಸೃಷ್ಟಿಸುತ್ತಿದ್ದಾರೆ. ಇದು ಒಂದು ರೀತಿಯ ಪ್ರತಿಷ್ಠೆಯ ಪ್ರಶ್ನೆಯಾಗು ಕಾಡುತ್ತಿರುವ ಈ ಸಂದರ್ಭದಲ್ಲಿ ಸಂಕಟ ಅನುಭವಿಸುತ್ತಿರುವವರು ಮಾತ್ರ ನಗರದ ಹೃದಯ ಭಾಗದಲ್ಲಿರುವ ಅಂಗಡಿ ಮುಂಗ್ಗಟ್ಟುಗಳ ಮಾಲೀಕರು.
ಪ್ಲೆಕ್ಸ್ಗಳಿಂದ ಅಂಗಡಿಯವರಿಗೆ ಕಿರಿಕಿರಿಯುಂಟಾಗಿದ್ದು, ಸರ್ಕಲ್ನಲ್ಲಿರುವ ಅಂಗಡಿಗಳು ಪ್ಲೆಕ್ಸ್ಗಳ ಹಾವಳಿಯಿಂದ ಮುಚ್ಚಿದಂತೆ ಕಾಣುತ್ತಿದ್ದು ನೆಹರು ಸರ್ಕಲ್ನ ಅಂಗಡಿಯವರು ಪ್ಲೆಕ್ಸ್ ಹಾಕಿರುವವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. 
ಈ ಹಿಂದೆ ನಡದಿದ್ದ  ಪುರಸಭಾ ಸಾಮಾನ್ಯ ಸಭೆಯಲ್ಲಿ ಪ್ಲೆಕ್ಸ್ ಕಟ್ಟಲು ಇಂತಿಷ್ಟು ಹಣ ಎಂದು ನಿಗಧಿ ಪಡಿಸಿ, ಅನುಮತಿ ಪಡೆಯಬೇಕೆಂಬ ನಿಯಮವನ್ನು ಮಾಡಲಾಗಿತ್ತು. ಆದರೆ ಈಗ ಹಾಕಲಾಗಿರುವ ಪ್ಲೆಕ್ಸ್ಗಳಲ್ಲಿ 17 ಪ್ಲೆಕ್ಸ್ಗಳಿಗೆ ಮಾತ್ರ ಅನುಮತಿ ಪಡೆಯಲಾಗಿದೆ ಉಳಿದ 35ಕ್ಕೂ ಹೆಚ್ಚಿನ ಫ್ಲಕ್ಸ್ಗಳು ಅನಧಿಕೃತ  ಎಂದು ತಿಳಿದು ಬಂದಿದೆ.

ಜಾತ್ರೆಯ ಪ್ರಯುಕ್ತ ಎರಡು ಪೌರಾಣಿಕ ನಾಟಕಗಳು
ಚಿಕ್ಕನಾಯಕನಹಳ್ಳಿ,ಜೂ.28 : ದುಶ್ಯಾಸನ ಕಥೆ ಅಥವಾ ದ್ರೌಪತಿ ವಸ್ತ್ರಾಪಹರಣ ಎಂಬ ಪೌರಾಣಿಕ ನಾಟಕವನ್ನು ಶ್ರೀ ಹಳೆಯೂರು ಆಂಜನೇಯಸ್ವಾಮಿ ರಥೋತ್ಸವದ ಅಂಗವಾಗಿ ಇದೇ 30ರ ಶನಿವಾರ ರಾತ್ರಿ 7.30ಕ್ಕೆ ಏರ್ಪಡಿಸಲಾಗಿದೆ.
ನಾಟಕವನ್ನು ಚಿಕ್ಕಮ್ಮದೇವಿ ಕಲಾ ಸಂಘದ ವತಿಯಿಂದ ಡಾ.ಅಂಬೇಡ್ಕರ್ ನಗರ ಶ್ರೀ ರಾಮಮಂದಿರದ ಮುಂಭಾಗ ಏರ್ಪಡಿಸಲಾಗಿದೆ.
ಕುರುಕ್ಷೇತ್ರ: ಕುರುಕ್ಷೇತ್ರ ಅಥವಾ ಧರ್ಮರಾಜ್ಯ ಸ್ಥಾಪನೆ ಎಂಬ ಪೌರಾಣಿಕ ನಾಟಕವನ್ನು ಶ್ರೀ ಹಳೆಯೂರು ಆಂಜನೇಯಸ್ವಾಮಿ ರಥೋತ್ಸವದ ಅಂಗವಾಗಿ ಇದೇ ಜುಲೈ1ರ ಭಾನುವಾರ ರಾತ್ರಿ 8.30ಕ್ಕೆ ಏರ್ಪಡಿಸಲಾಗಿದೆ. 
ನಾಟಕವನ್ನು ಶ್ರೀ ರೇಣುಕ ಯಲ್ಲಮ್ಮ ಕೃಪಾಪೋಷಿತ ಕಲಾ ಸಂಘದ ವತಿಯಿಂದ ಶ್ರೀ  ಯಲ್ಲಮ್ಮದೇವಿ ದೇವಾಲಯದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.

Friday, June 22, 2012


ವೀರಶೈವ ಧರ್ಮಗ್ರಂಥ ಸಿದ್ದಾಂತ ಶಿಖಾಮಣಿ ರಷ್ಯಾ ಭಾಷೆಯಲ್ಲಿ ಬಿಡುಗಡೆ
    
ಚಿಕ್ಕನಾಯಕನಹಳ್ಳಿ,ಜೂ.22 : ಇದುವರೆಗೂ ಹಿಂದಿ, ಇಂಗ್ಲೀಷ್, ತಮಿಳು, ಮರಾಠಿ ಭಾಷೆಗಳಲ್ಲಿ ಇದ್ದ ಶ್ರೀ ಸಿದ್ದಾಂತ ಶಿಖಾಮಣಿ ವೀರಶೈವ ಧರ್ಮಗ್ರಂಥವನ್ನು ರಷ್ಯಾ ಭಾಷೆಗೆ ತಜರ್ುಮೆಗೊಳಿಸುವ ಮೂಲಕ ರಷ್ಯಾ ದೇಶದ ಜನರಿಗೆ ವೀರಶೈವ ಧರ್ಮದ ಪವಿತ್ರ ಗ್ರಂಥದ ಆಚಾರ ವಿಚಾರ ಹಾಗೂ ಶಿವಯೋಗಗಳನ್ನು ಅರಿಯುವ ಮೌಲ್ಯ ದೊರಕಿದೆ ಎಂದು ಕಾಶಿ ಜಗದ್ಗುರು ಜಂಗಮವಾಡಿ ಮಠದ ಡಾ.ಚಂದ್ರಶೇಖರ ಶಿವಾಚಾರ್ಯಸ್ವಾಮಿ ತಿಳಿಸಿದ್ದಾರೆ.
ತಾಲ್ಲೂಕಿನ ಕುಪ್ಪೂರು ಮಠದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ರಷ್ಯಾ ದೇಶದ ಮಾಸ್ಕೋ ನಗರದಲ್ಲಿ ಇದೇ ಜೂನ್ 2ರ 2012ರಂದು ತಜರ್ುಮೆಗೊಂಡ ಭಾರತೀಯ ಮೂಲ ಸಂಸ್ಕೃತಿ ಗ್ರಂಥವಾದ ಸಿದ್ದಾಂತ ಶಿಖಾಮಣಿ ಬಿಡುಗಡೆಗೊಂಡಿದೆ, ಈ ಗ್ರಂಥಕ್ಕೆ ರಷ್ಯಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಗ್ರಂಥದಲ್ಲಿರುವ ಯೋಗದ ಆಕರ್ಷಣೆಗೆ ಪಾಶ್ಚಿಮಾತ್ಯ ದೇಶಗಳಲ್ಲೂ ಆಕರ್ಷಣೆ ಹೆಚ್ಚುತ್ತಿದೆ. 
ಕಳೆದ 2ವರ್ಷದಿಂದ ಈ ಗ್ರಂಥದ ಬಗ್ಗೆ ಅನುವಾದ ಮಾಡಿದ ಉಗಂಡ ದೇಶದ ಯೂಲಿಯಾ ಗ್ರಂಥವನ್ನು ರಷ್ಯಾ ಭಾಷೆಗೆ ತಜರ್ುಮೆಗೊಳಿಸಿದ್ದಾರೆ. ಇವರು ಮೂಲತಹ ಸಾಪ್ಟ್ವೇರ್ ಇಂಜನಿಯರ್ ಆಗಿದ್ದು ಭಾರತ ದೇಶದ ಸಂಸ್ಕೃತ, ಹಿಂದಿ ಭಾಷೆಯ ಬಗ್ಗೆ ತಿಳಿದಿದ್ದಾರೆ.
ಸಿದ್ದಾಂತ ಶಿಖಾಮಣಿ ಗ್ರಂಥದಲ್ಲಿ ಆರತಿ ಯೋಗ ವಿದ್ಯೆ ಬಗ್ಗೆ ತಿಳಿಸಲಾಗಿದೆ, ರಷ್ಯಾದಲ್ಲಿ ದೀಕ್ಷೆ ಪಡೆದ ಎಲ್ಲರೂ ಮಾಸ ಶಿವರಾತ್ರಿಯಂದು ಒಂದು ಕಡೆ ಸೇರಿ ಸಾಮೂಹಿಕ ಲಿಂಗ ಪೂಜೆ ಮಾಡುವ ಪರಿಪಾಠ ಮಾಡಿಕೊಂಡಿದ್ದಾರೆ.
ಡಾ.ಯತೀಶ್ವರ ಶಿವಾಚಾರ್ಯಸ್ವಾಮಿ ಮಾತನಾಡಿ ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯಲು ದೇಶ-ವಿದೇಶಗಳಲ್ಲಿ ಭಾರತೀಯ ಸಂಸ್ಕೃತಿ ಇರುವ ಗ್ರಂಥವನ್ನು ಆ ಭಾಷೆಗೆ ತಜರ್ುಮೆಗೊಳಿಸುವ ಮೂಲಕ ಸಂಸ್ಕೃತಿ ಹೆಚ್ಚಾಗಿ ಪ್ರಚಾರವಾಗಬೇಕು ಎಂದರು.
ಬೆಳೆಸಿರಿ ಟ್ರಸ್ಟ್ವತಿಯಿಂದ ನೋಟ್ ಬುಕ್ ವಿತರಣೆ
ಚಿಕ್ಕನಾಯಕನಹಳ್ಳಿ,ಜೂ.22 : ತಾಲ್ಲೂಕಿನ ಲಕ್ಮೇನಹಳ್ಳಿ ಜನತಾ ಕಾಲೋನಿಯ 1ರಿಂದ 5ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಶಾಲಾ ವಿದ್ಯಾಥರ್ಿಗಳಿಗೆ ಬೆಳೆಸಿರಿ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ ಮಾಡಲಾಯಿತು.
ನಿವೃತ್ತ ನೌಕರರ ಸಂಘದ ಉಪಾದ್ಯಕ್ಷ ನಂಜುಂಡಪ್ಪ, ನಿವೃತ್ತ ಶಿಕ್ಷಣ ತರಬೇನಹಳ್ಳಿ ಕುಮಾರಸ್ವಾಮಿ, ಮುಖ್ಯೋಪಾಧ್ಯಾಯ ಮಂಜುನಾಥ್, ಟ್ರಸ್ಟ್ನ ನಿದರ್ೇಶಕ ಸಿ.ಹೆಚ್.ನಾಗರಾಜು, ನಿವೃತ್ತ ಸಹಾಯಕ ನಿದರ್ೇಶಕರು ಬಡವಿದ್ಯಾಥರ್ಿಗಳಿಗೆ  ನೋಟ್ಬುಕ್ ವಿತರಿಸಿದರು.
ಕನಕ ವಿದ್ಯಾಭಿವೃದ್ದಿ ನಿಧಿಯಿಂದ ವಿದ್ಯಾಥರ್ಿಗಳಿಗೆ ವಿವಧ ಸವಲತ್ತು ವಿತರಣೆ
ಚಿಕ್ಕನಾಯಕನಹಳ್ಳಿ,ಜೂ.22 : ಪ್ರತಿಭಾ ಪುರಸ್ಕಾರ, ಉಚಿತ ನೋಟ್ಬುಕ್ ವಿತರಣೆ, ಕಾಲೇಜು ಶುಲ್ಕ ಪಾವತಿ ಸಹಾಯಧನ ವಿತರಣಾ ಸಮಾರಂಭವನ್ನು ಇದೇ 24ರ ಭಾನುವಾರ ಬೆಳಗ್ಗೆ 11ಕ್ಕೆ ಏರ್ಪಡಿಸಲಾಗಿದೆ ಎಂದು ಕನಕ ವಿದ್ಯಾಭಿವೃದ್ದಿ ನಿಧಿ ಸಮಿತಿ ಕಾರ್ಯದಶರ್ಿ ಕಣ್ಣಯ್ಯ ತಿಳಿಸಿದ್ದಾರೆ.
ಸಮಾರಂಭವನ್ನು ಕನಕ ವಿದ್ಯಾಭಿವೃದ್ದಿ ನಿಧಿ ಸಮಿತಿ ವತಿಯಿಂದ ಪಟ್ಟಣದ ಕನಕ ಭವನದಲ್ಲಿ ಹಮ್ಮಿಕೊಂಡಿದ್ದು ಶಾಸಕ ಸಿ.ಬಿ.ಸುರೇಶ್ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುರಸಭಾಧ್ಯಕ್ಷ ದೊರೆಮುದ್ದಯ್ಯ, ಬಿ.ಸಿ.ಎಂ. ಜಿಲ್ಲಾಧಿಕಾರಿ ಸಿ.ಟಿ.ಮುದ್ದುಕುಮಾರ್, ಬಿ.ಇ.ಓ ಸಾ.ಚಿ.ನಾಗೇಶ್, ಮಾಜಿ ಪುರಸಭಾಧ್ಯಕ್ಷ ಸಿ.ಬಸವರಾಜು, ಕಂಬಳಿ ಸೊಸೈಟಿ  ಅಧ್ಯಕ್ಷ ಸಿ.ಡಿ.ಚಂದ್ರಶೇಖರ್, ಕನಕ ವಿದ್ಯಾಭಿವೃದ್ದಿ ಸಮಿತಿ ಅಧ್ಯಕ್ಷ ಎನ್.ಶ್ರೀಕಂಠಯ್ಯ ಉಪಸ್ಥಿತರಿರುವರು.
ಪುರಸಭೆಯ ವಿವಿಧ ಅಭಿವೃದ್ದಿ ಕಾಮಗಾರಿಗಳ ಚಾಲನೆಗೆ ಗೃಹ ಸಚಿವರು ಚಿ.ನಾ.ಹಳ್ಳಿಗೆ
ಚಿಕ್ಕನಾಯಕನಹಳ್ಳಿ,ಜೂ.22 : ಪಟ್ಟಣದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭವನ್ನು ಇದೇ 27ರ ಬುಧವಾರ ಬೆಳಗ್ಗೆ 11ಕ್ಕೆ ಏರ್ಪಡಿಸಲಾಗಿದೆ.
ಸಮಾರಂಭವನ್ನು ಕನ್ನಡ ಸಂಘದ ವೇದಿಕೆಯಲ್ಲಿ ಹಮ್ಮಿಕೊಂಡಿದ್ದು ಅಂದು ವಾಡರ್್ ನಂ.23ರಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನ ಶಂಕುಸ್ಥಾಪನೆ, ಸಂತೆ ಮೈದಾನ ಕಾಮಾಗಾರಿ ಶಂಕುಸ್ಥಾಪನೆ, ಪುರಸಭೆ ಸಭಾಂಗಣ ಕಟ್ಟಡ ನಿಮರ್ಾಣ ಶಂಕುಸ್ಥಾಪನೆ, ಖಾಸಗಿ ಬಸ್ ನಿಲ್ದಾಣದಲ್ಲಿ ಅಂಗಡಿ ಮಳಿಗೆಗಳ ಮತ್ತು ಸುಲಭ ಶೌಚಾಲಯ ಉದ್ಘಾಟನೆ, ವಾಡರ್್ ನಂ.17ರ ಮುಸ್ಲಿಂ ಬ್ಲಾಕ್ ಮಾಂಸ ಮಾರಾಟದ ಮಾರುಕಟ್ಟೆ ಮತ್ತು 19ನೇ ವಾಡರ್್ನ ಸಾರ್ವಜನಿಕ ಶೌಚಾಲಯ ಉದ್ಘಾಟನೆ ನೆರವೇರಲಿದೆ. 
ಸಮಾರಂಭದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ನೆರವೇರಿಸಲಿದ್ದು, ಗೃಹ ಸಚಿವ ಆರ್. ಅಶೋಕ, ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ,  ಸಂಸದ ಜಿ.ಎಸ್.ಬಸವರಾಜು ಆಗಮಿಸಲಿರುವ ಈ ಸಭೆಯ ಅಧ್ಯಕ್ಷತೆಯನ್ನು ಶಾಸಕ ಸಿ.ಬಿ.ಸುರೇಶ್ ಬಾಬು ವಹಿಸುವರು ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರುಗಳು, ಜಿ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಮಾಜಿ ಶಾಸಕರುಗಳು, ಪುರಸಭಾ ಸದಸ್ಯರುಗಳು ಸೇರಿದಂತೆ ಹಲವರು ಗಣ್ಯರು  ಸಭೆಯಲ್ಲಿ ಹಾಜರಿರುವರು ಎಂದು ಪುರಸಭಾ ಅಧ್ಯಕ್ಷ ದೊರೆಮುದ್ದಯ್ಯ ತಿಳಿಸಿದ್ದಾರೆ.

ತಾ.ಬಿ.ಜೆ.ಪಿ ವತಿಯಿಂದ ಕೇಂದ್ರ ಸಕರ್ಾರದ ಆಥರ್ಿಕ ನೀತಿಯ ವಿರುದ್ದ ರಸ್ತ ತಡೆ 


ಚಿಕ್ಕನಾಯಕನಹಳ್ಳಿ,ಜೂ.22 : ಬ್ರಿಟೀಷರ ಆಳ್ವಿಕೆಯ ದಬ್ಬಾಳಿಕೆಯು ಕೇಂದ್ರದ ಯುಪಿಎ ಸಕರ್ಾರದ ಮೂಲಕ ಮತ್ತೆ ಮುಂದುವರಿದೆ, ಪೆಟ್ರೋಲ್ ಬೆಲೆ ಹೆಚ್ಚಳ, ಹಾಗೂ ತಪ್ಪು ಆಥರ್ಿಕ ನೀತಿಯನ್ನು ಜಾರಿಗೊಳಿಸುತ್ತಾ ದೇಶದ ಜನರಿಗೆ ಬರೆ ಎಳೆಯುತ್ತಿದೆ ಎಂದು ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್ ಕೇಂದ್ರ ಸಕರ್ಾರದ ವಿರುದ್ದ ಕಿಡಿಕಾರಿದರು.
ಪಟ್ಟಣದ ನೆಹರು ಸರ್ಕಲ್ ಬಳಿ ಭಾಜಪ ಕಾರ್ಯಕರ್ತರು ಕೇಂದ್ರ ಸಕರ್ಾರದ ಆಥರ್ಿಕ ನೀತಿ ಹಾಗೂ ರಾಜಕೀಯ ನಿದರ್ಾರಗಳನ್ನು ವಿರೋಧಿಸಿ ಜನಸಂಘರ್ಷ ಅಭಿಯಾನ ಹಾಗೂ ಜೈಲ್ ಭರೋ ಕಾರ್ಯಕ್ರಮದ ಮೂಲಕ ಪಟ್ಟಣದಲ್ಲಿ ರಸ್ತೆ ತಡೆ ಏರ್ಪಡಿಸಿದ್ದರು.
ಪೆಟ್ರೋಲ್ ಬೆಲೆ ಜಾಸ್ತಿ ಆದಂತೆಲ್ಲಾ ಪ್ರತಿ ಬೆಲೆಯೂ ಹೆಚ್ಚುತ್ತಿದೆ, ಇದಕ್ಕೆ  ದೇಶದ ಎಲ್ಲಾ ಸಂಘ ಸಂಸ್ಥೆಗಳು, ಜನಸಾಮಾನ್ಯರು ಖಂಡಿಸಬೇಕು ಎಂದು ಕೆ.ಎಸ್.ಕೆ ತಿಳಿಸಿದರು.
ತಾಲ್ಲೂಕು ಭಾಜಪ ಅಧ್ಯಕ್ಷ ಮಿಲ್ಟ್ರಿ ಶಿವಣ್ಣ ಮಾತನಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಬೆಲೆ ಏರಿಕೆಯಾಗುತ್ತಿದೆ, 2004ರಿಂದ ಯುಪಿಎ ಸಕರ್ಾರ ದಿನನಿತ್ಯ ವಸ್ತುಗಳ ಬೆಲೆ ಏರಿಸಿರುವುದು ಸಕರ್ಾರದ ಸಾಧನೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಜಪ ಜಿ.ಪಂ.ಸದಸ್ಯ ಹೆಚ್.ಬಿ.ಪಂಚಾಕ್ಷರಿ, ತಾ.ಪಂ.ಅಧ್ಯಕ್ಷ ಜಿ.ಆರ್.ಸೀತರಾಮಯ್ಯ, ಪಕ್ಷದ ಕಾರ್ಯದಶರ್ಿಗಳಾದ ಕವಿತಾಕಿರಣ್ಕುಮಾರ್, ಸುರೇಶ್ಹಳೆಮನೆ, ತಾ.ಪಂ.ಸದಸ್ಯ ಕೆಂಕೆರೆ ನವೀನ್, ಎಂ.ಎಂ.ಜಗದೀಶ್, ಎಂ.ಎಸ್.ರವಿಕುಮಾರ್  ಎಬಿವಿಪಿ ಚೇತನ್ಪ್ರಸಾದ್ ಸೇರಿದಂತೆ ಭಾಜಪ ಕಾರ್ಯಕರ್ತರು ಉಪಸ್ಥಿತರಿದ್ದರು.


Wednesday, June 20, 2012


ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಮಾದಿಗ ದಂಡೋರ ಸಮಿತಿಯ ಒತ್ತಾಯ

        ಚಿಕ್ಕನಾಯಕನಹಳ್ಳಿ,ಜೂ.20: ಮಾದಿಗ ಜನಾಂಗಕ್ಕೆ ಪರಿಶಿಷ್ಠ ಜಾತಿಯಲ್ಲಿ ಶೇ.15ರಷ್ಟರ ಸರಿಯಾದ ಮೀಸಲಾತಿ ದೊರೆಯದೇ ಇರುವುದರಿಂದ  ಜನಾಂಗಕ್ಕೆ ಎ.ಬಿ.ಸಿ.ಡಿ ಮೀಸಲಾತಿ ವಗರ್ೀಕರಣ ಆಗಬೇಕೆಂದು ಸಕರ್ಾರಕ್ಕೆ ಸದಾಶಿವ ಆಯೋಗ ವರದಿ ಸಲ್ಲಿಸಿರುವುದನ್ನು ತಕ್ಷಣವೇ ಸಕರ್ಾರ ಲೋಕಸಭೆಗೆ ಶಿಫಾರಸ್ಸು ಮಾಡಿ ಜನಾಂಗದ ಬೇಡಿಕೆಯನ್ನು ಈಡೇರಿಸಬೇಕೆಂದು ರಾಜ್ಯ ಮಾದಿಗ ದಂಡೋರ ಸಮಿತಿಯ ಜಂಟಿ ಕಾರ್ಯದಶರ್ಿ ಬೇವಿನಹಳ್ಳಿ ಚನ್ನಬಸವಯ್ಯ ತಿಳಿಸಿದರು.
ಸದಾಶಿವ ಆಯೋಗ ಪರಿಶಿಷ್ಠ ಜಾತಿಗಳ ಸ್ಥಿತಿಗತಿ ಕುರಿತು ಸಕರ್ಾರಕ್ಕೆ 200 ಪುಟಗಳ ವರದಿ ಸಲ್ಲಿಸಿದೆ, ಶೇ.6 ಎಡಗೈ(ಮಾದಿಗರಿಗೆ), ಶೇ.5 ಬಲಗೈ, ಶೇ.3 ಪರಿಶಿಷ್ಠರಲ್ಲಿ ಸ್ಪೃಷ್ಯರಿಗೆ, ಶೇ.1ರಷ್ಟು ಒಳಮೀಸಲಾತಿಗಾಗಿ ನೀಡಲು ಆಯೋಗ ಶಿಫಾರಸ್ಸು ಮಾಡಿ ಸಕರ್ಾರಕ್ಕೆ ಮನವಿ ಸಲ್ಲಿಸಿದ್ದು, ಈ ಮನವಿಯನ್ನು ಸಕರ್ಾರ ಪುರಸ್ಕರಿಸಿ ಜನಾಂಗದ ಸುಮಾರು 96.60ಲಕ್ಷ ಜನರ ಮೀಸಲಾತಿಯನ್ನು ನೀಡುವ ಬಗ್ಗೆ ಸಕರ್ಾರ ಜಾರಿಗೊಳಿಸಲು ಸಂಪುಟದಲ್ಲಿ ತೀಮರ್ಾನಿಸಿ ಲೋಕಸಭೆಗೆ ಶಿಫಾರಸ್ಸು ಮಾಡಿ ಜನಾಂಗದ ಅಭಿವೃದ್ದಿಗೆ ಮುಂದಾಗಬೇಕೆಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರು ಹಾಗೂ ಸಚಿವರಾದ ಗೋವಿಂದ ಕಾರಜೋಳ, ಎ.ನಾರಾಯಣಸ್ವಾಮಿಯವರಿಗೆ ಒತ್ತಾಯಿಸಿದ್ದು, ತತ್ಕ್ಷಣ ಸಕರ್ಾರ ಶಿಫಾರಸ್ಸು ಮಾಡಿ ಲೋಕಸಭೆಗೆ ಕಳುಹಿಸಲು ಒತ್ತಾಯಿಸಿದರು ಎಂದ ಅವರು ಜನಾಂಗದ ಸುಮಾರು 6ಲಕ್ಷ ಜನರು ಸರಿಯಾಗಿ ಜಾತಿ ಹೆಸರು ಹೇಳದೆ ಶೇ.1ರ ಮೀಸಲಾತಿಯನ್ನು ಕಳೆದುಕೊಂಡಿರುವುದು ವಿಷಾದನೀಯವಾಗಿದ್ದು ಜನಂಗದವರು ದಯಮಾಡಿ ಜಾತಿ ಹೆಸರನ್ನು ಪ್ರಸ್ತಾಪಿಸಲು ಕೋರಿದರು.
ಗೋಷ್ಠಿಯಲ್ಲಿ ತಾಲ್ಲೂಕು ಮಾದಿಗ ಸಂಘದ ಅಧ್ಯಕ್ಷ ಜಯಣ್ಣ, ಪ್ರಧಾನ ಕಾರ್ಯದಶರ್ಿ ರಾಜು ಬೆಳಗಿಹಳ್ಳಿ, ಸಿ.ಎನ್.ಹನುಮಯ್ಯ, ರಾಮಯ್ಯ, ನೀಲಕಂಠಯ್ಯ, ಸಿದ್ದರಾಮಣ್ಣ ಉಪಸ್ಥಿತರಿದ್ದರು.

ಶ್ರೀ ಹಳೆಯೂರು ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ

ಚಿಕ್ಕನಾಯಕನಹಳ್ಳಿ,ಜೂ.20 ; ಶ್ರೀ ಹಳೆಯೂರು ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಇದೇ 30 ಮತ್ತು 1 ಮತ್ತು 2ರಂದು ನಡೆಯಲಿದೆ, 30ರ ಶನಿವಾರ ಬೆಳ್ಳಿಪಲ್ಲಕ್ಕಿ, ಜುಲೈ1ರಂದು ಬ್ರಹ್ಮ ರಥೋತ್ಸವ, ಜುಲೈ2ರಂದು ರಥೋತ್ಸವ ಹಮ್ಮಿಕೊಳ್ಳಲಾಗಿದೆ.
 ಜಾತ್ರೆಯ ಪ್ರಯುಕ್ತ ಪಟ್ಟಣದಲ್ಲಿ ಅದ್ದೂರಿ ತಯಾರಿ ನಡೆಯುತ್ತಿದೆ, ರಸ್ತೆಗಳಿಗೆ ಡಾಂಬರೀಕರಣ, ವಿದ್ಯುತ್ ಕಂಬಗಳ ಮರು ಜೋಡಣೆ, ಶುಭಕೋರುವ ಪ್ಲೆಕ್ಸ್ಗಳ ಮೂಲಕ ಜಾತ್ರೆಗೆ ಆಗಮಿಸುವವರಿಗೆ ಕಂಗೊಳಿಸಲು ಬೇಕಾಗುವ ಎಲ್ಲಾ ರೀತಿಯ ತಯಾರಿ ಹೆಚ್ಚಿದೆ.
ಸುಮಾರು 800 ವರ್ಷಗಳ ಇತಿಹಾಸವಿರುವ ಶ್ರೀ ಹಳೆಯೂರು ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವವು ಪ್ರತಿ ವರ್ಷಕ್ಕಿಂತ ಈ ವರ್ಷದ ತಯಾರಿ ಜೋರಾಗಿ ನಡೆಯುತ್ತಿದೆ. 
ಆಷಾಡ ಮಾಸದ ಸಮಯದಲ್ಲಿ ನಡೆಯುವ ಈ ಜಾತ್ರೆಗೆ ನವದಂಪತಿಗಳು ಒಟ್ಟಾಗಿ ಪಾಲ್ಗೊಂಡು ತೇರಿಗೆ ಬಾಳೆಹಣ್ಣು ಎಸೆಯುತ್ತಾರೆ.
ಇನ್ನು ಜಾತ್ರೆಗೆ ಕುಂಚಾಂಟಿಗರ ಸಂಘವು ಚಿತ್ರಕಲೆಯನ್ನು ಪ್ರದಶರ್ಿಸುವ, ದಿವ್ಯಜ್ಯೋತಿ ಹವ್ಯಾಸಿ ಕಲಾ ಸಂಘ ನವದಂಪತಿಗಳ ಸ್ಪಧರ್ೆ, ಅನ್ನಪೂಣರ್ೇಶ್ವರಿ ಕಲಾ ಸಂಘ ಡ್ಯಾನ್ಸ್ ಡ್ಯಾನ್ಸ್ ಸ್ಪಧರ್ೆ ಹಾಗೂ ಮಾರುತಿ ವ್ಯಾಯಾಮ ಸಂಘ ಕುಸ್ತಿ ಪಂದ್ಯವನ್ನು ಪ್ರತಿವರ್ಷದಂತೆ ಈ ವರ್ಷವೂ ಹಮ್ಮಿಕೊಂಡಿದ್ದಾರೆ. 


ಕಿರುಧಾನ್ಯವಾದ ಹಾರಕ ಬೆಳೆಗಾರರ ಗುಂಪಿಗೆ ತರಬೇತಿ ಕಾರ್ಯಕ್ರಮ
ಚಿಕ್ಕನಾಯಕನಹಳ್ಳಿ,ಜೂ.20: ತಾಲೂಕಿನ ಗೋಪಾಲನಹಳ್ಳಿಯಲ್ಲಿ ಕಿರುಧಾನ್ಯವಾದ ಹಾರಕ ಬೆಳೆಗಾರರ ಗುಂಪಿಗೆ ತರಬೇತಿ ಕಾರ್ಯಕ್ರಮವನ್ನು ಶ್ರೀ ಕಾಲಭೈರವೇಶ್ವರ ಬನಶಂಕರಿ ಕೆರೆ ಅಭಿವೃದ್ದಿ ಸಂಘದ ಕಛೇರಿಯಲ್ಲಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಕೃಷಿ ವಿಶ್ವ ವಿದ್ಯಾನಿಲಯದ ಸಹ ಪ್ರಧ್ಯಾಪಕರಾದ ಸಿ.ಸೋಮಶೇಖರ್ ರವರು ಹಾರಕ ಬೆಳೆಯ ಬೇಸಾಯಕ್ರಮ ಮತ್ತು ಕೃಷಿ ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡಿದರಲ್ಲದೆ, ಕೃಷಿ ವಿಶ್ವವಿದ್ಯಾಲಯ ವತಿಯಿಂದ ಕಿರು ಧಾನ್ಯ ಯೋಜನೆಯಡಿಯಲ್ಲಿ ಹಾರಕದ ತಳಿಗಳಾದ ಜಿ.ಪಿ.ಯು.ಕೆ.-3 ಹಾಗೂ ಆರ್.ಬಿ.ಕೆ.-155ರ ಬೀಜಗಳನ್ನು ಗುಂಪಿನ ಸದಸ್ಯರಿಗೆ ವಿತರಿಸಲಾಯಿತು.
ಕೊನೆಹಳ್ಳಿಯ ಕೃಷಿ ವಿಜ್ಞಾನ ಕೇಂದ್ರ ಶಂಕರ್ ರವರು ಮಾತನಾಡಿ ಹಾರಕ ಬೆಳೆಗೆ ತಗಲುವ ಕೀಟ ಬಾದೆಗಳ ಬಗ್ಗೆ ಮಾಹಿತಿ ನೀಡಿದರು
ತಾಲೂಕಿನ 'ಆತ್ಮ' ಯೋಜನೆಯ ತಾಂತ್ರಿಕ ವ್ಯವಸ್ಥಾಪಕರಾದ ಜಗನಾಥ್ ರವರು ಸರಕು ಆಸಕ್ತರ ಗುಂಪುಗಳನ್ನು ರಚನೆ ಅವುಗಳ ಕಾರ್ಯ ಮಹತ್ವದ ಬಗ್ಗೆ ತಿಳಿಸಲು ಈ ಯೋಜನೆಯಡಿಯಲ್ಲಿ ಪ್ರವಾಸಗಳ ಮೂಲಕ ತರಬೇತಿ ನೀಡಲು ಅವಕಾಶ ಕಲ್ಪಿಸಿಕೊಡುವುದಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯ್ತಿ ಸದಸ್ಯರಾದ ಜಿ.ಎಮ್.ಬಸವರಾಜು ವಹಿಸದ್ದರು. ಕಾರ್ಯಕ್ರಮದಲ್ಲಿ ಹಾರಕ ಬೆಳೆಗಾರರ ಸಂಘದ ಅಧ್ಯಕ್ಷರಾದ ಜಿ.ಎಸ್.ಚಂದ್ರಶೇಖರಯ್ಯ ಭಾಗವಹಿಸಿದ್ದರು. ಜಿಲ್ಲಾ ಸಂಯೋಜಕ ಡಾ.ಗೋಪಿನಾಥ್ ಕಾರ್ಯಕ್ರಮ ನಿರೂಪಿಸಿದರೆ ಉಪನ್ಯಾಸಕ ಜಿ.ಎಸ್.ರಘು ಸ್ವಾಗತಿಸಿ ವಂದಿಸಿದರು.

 

Saturday, April 21, 2012


ಅಕ್ರಮ ಮರಳು : ಸಾಗಾಣಿಕೆ ತಡೆಯಲು ಕೆರೆ ಅಂಗಳಕ್ಕೆ ನಿಷೇದಾಜ್ಞೆ ಜಾರಿ. ಎನ್.ಆರ್.ಉಮೇಶ್ಚಂದ್ರ
ಚಿಕ್ಕನಾಯಕನಹಳ್ಳಿ,ಏ.21 : ತಾಲ್ಲೂಕಿನ ಶೆಟ್ಟಿಕೆರೆ ಕೆರೆಯಲ್ಲಿನ ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ಕೆರೆಯ ಒಳಗೆ ಅತಿಕ್ರಮ ಪ್ರವೇಶ ಮಾಡದಂತೆ  ಐ.ಪಿ.ಸಿ ಸೆಕ್ಷನ್ 133ರ ಪ್ರಕಾರ  ನಿಷೇದಾಜ್ಞೆ ಆದೇಶ ಹೊರಡಿಸಲಾಗಿದೆ ಎಂದು ತಹಶೀಲ್ದಾರ್ ಎನ್.ಆರ್.ಉಮೇಶ್ಚಂದ್ರ ತಿಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು ಇದೇ ಏಪ್ರಿಲ್ 23ರಿಂದ ಈ ಆದೇಶ ಜಾರಿಗೆ ಬರಲಿದ್ದು  ಈ ಮೂಲಕ ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ತಾಲ್ಲೂಕು ಆಡಳಿತ ಅಗತ್ಯ ಕ್ರಮ ಕೈಗೊಂಡಿದೆ, 2011 ಮೇ 5ರಿಂದ 2012 ಏಪ್ರಿಲ್ 1ರವರೆಗೆ ವಿವಿಧ ಸ್ಥಳಗಳಲ್ಲಿ ಅಕ್ರಮ ಮರಳು ಸಾಗಾಣಿಕೆಯಯನ್ನು ಸೀಜ್ ಮಾಡಲಾಗಿದ್ದು ಈ ಸಂಬಂಧ ವಿಧಿಸಿದ ದಂಡವು  ಒಂದು ಲಕ್ಷದ ಏಳು ಸಾವಿರದ ಐದುನೂರು ರೂಪಾಯಿಯನ್ನು ಸಕರ್ಾರಕ್ಕೆ ಜಮಾ ಮಾಡಲಾಗಿದೆ. ನಲವತ್ಮೂರು ಸಾವಿರದ ಐದುನೂರು ರೂ ಮರಳನ್ನು ಹರಾಜು ಮಾಡಲಾಗಿದೆ ಈ ಮೂಲಕ ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ಕಾನೂನಿನ ಅಡಿಯಲ್ಲಿ ಅಗತ್ಯವಿರುವ ಎಲ್ಲಾ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ ಅವರು  ಕೆಲವು ಕಡೆ ನಡೆಯುತ್ತಿದ್ದ ಮರಳು ಸಾಗಾಣಿಕೆಯನ್ನು ಸೀಜ್ ಮಾಡಲು ಹೋದಾಗ ಸಾರ್ವಜನಿಕರಿಂದ ಪ್ರತಿರೋಧ ಎದುರಿಸಬೇಕಾಯಿತು, ಇಂತಹ ಸಂದರ್ಭದಲ್ಲಿ ಸಾರ್ವಜನಿಕರನ್ನು ಪ್ರಶ್ನಿಸಿದರೆ ನಮಗೆ ಮನೆ ಕಟ್ಟಿಕೊಳ್ಳಲು ಮರಳು ಲಭ್ಯವಾಗದ್ದರಿಂದ ಮರಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂಬ ವಿಷಯಗಳನ್ನು ತಿಳಿಸಿತ್ತಾರೆ ಎಂದ ಅವರು ಹೊರಗಡೆಯಿಂದ ತಂದಂತಹ ಮರಳನ್ನು ಶೇಖರಿಸಿಡಲು ತಾಲ್ಲೂಕಿನ ಪ್ರತಿ ಹೋಬಳಿಗೂ 2ಎಕರೆ ಜಮೀನು ಕಲ್ಪಿಸಿದ್ದು ಇದರ ಉಸ್ತುವಾರಿಯನ್ನು ಪಿ.ಡಬ್ಯೂ.ಡಿಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿಧಾನಸೌಧ ಮುತ್ತಿಗೆ ಕಾರ್ಯಕ್ರಮಕ್ಕೆ ತಾಲ್ಲೂಕು ರೈತ ಸಂಘ, ಹಸಿರು ಸೇನೆ ಬೆಂಬಲ
ಚಿಕ್ಕನಾಯಕನಹಳ್ಳಿ,ಏ.21 : ರಾಜ್ಯ ಸಕರ್ಾರ ರೈತರಿಗೆ ವಿದ್ಯುತ್ ಶಕ್ತಿ ಸರಬರಾಜು, ಸಾಲ ಮನ್ನಾ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿರುವುದರ ವಿರುದ್ದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇದೇ 25ರ ಬುಧುವಾರ ಹಮ್ಮಿಕೊಂಡಿರುವ  ವಿಧಾನಸೌಧ ಮುತ್ತಿಗೆ ಕಾರ್ಯಕ್ರಮಕ್ಕೆ ತಾಲ್ಲೂಕು ರೈತ ಸಂಘ, ಹಸಿರು ಸೇನೆ ಬೆಂಬಲ ವ್ಯಕ್ತಪಡಿಸಿದೆ.
ತಾಲ್ಲೂಕು ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲದಲ್ಲಿ ಹಲವು ಬೇಡಿಕೆಗಳನ್ನಿಟ್ಟಿದ್ದು ಅದರಲ್ಲಿ ಬರಗಾಲ ಪ್ರದೇಶದ ರೈತರ ಎಲ್ಲಾ ಸಾಲಗಳನ್ನು ತಕ್ಷಣ ರದ್ದು ಮಾಡಬೇಕು, ಟ್ರಾಕ್ಟರ್ ಸಾಲ ಮನ್ನ ಮಾಡಿ  ಹೊಸದಾಗಿ ಸಾಲ ಕೊಡಬೇಕು, ಪ್ರತಿ ಜಿಲ್ಲೆಗೆ ತಕ್ಷಣ 5ಕೋಟಿ ಮೊದಲನೆ ಕಂತಿನಲ್ಲಿ ಬಿಡುಗಡೆ ಮಾಡಿ ಜಿಲ್ಲಾಧಿಕಾರಿಗಳ ಜೊತೆಗೆ ಜಿಲ್ಲೆಗೊಬ್ಬರಂತೆ ರಾಜ್ಯ ಮಟ್ಟದ ಅಧಿಕಾರಿ ಮತ್ತು ಮಂತ್ರಿಗಳನ್ನು ನೇಮಿಸಿ ಜನಗಳಿಗೆ ಉದ್ಯೋಗ, ಜಾನುವಾರುಗಳಿಗೆ ಗೋಶಾಲೆ, ಮೇವು, ನೀರು ಒದಗಿವುದು ಇವುಗಳು ಸೇರಿದಂತೆ ರೈತರಿಗೆ ನೆರವಾಗುವಂತ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಗೂ ಕಾರ್ಯಕ್ರಮ ಬೆಂಬಲಿಸಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಪಿ.ಮಲ್ಲೇಶ್, ಗೌರವಾಧ್ಯಕ್ಷ ತಿಮ್ಮನಹಳ್ಳಿ ಲೋಕಣ್ಣ, ಉಪಾಧ್ಯಕ್ಷ ಗಂಗಣ್ಣ ಕಾಡೇನಹಳ್ಳಿ, ಕಾರ್ಯದಶರ್ಿ ಮರುಳಪ್ಪ ಕಾರ್ಯಕ್ರಮಕ್ಕೆ ಬೆಂಬಲ ತಿಳಿಸಿದ್ದಾರೆ.

ಬಸವೇಶ್ವರರ ಜಯಂತ್ಯೋತ್ಸವ
ಚಿಕ್ಕನಾಯಕನಹಳ್ಳಿ,ಏ.21 : ಮಹಾನ್ ಮಾನವತಾವಾದಿ, ಸಮಾಜ ಸುಧಾರಕ ಹಾಗೂ ಶ್ರೇಷ್ಠ ವಚನಕಾರ ಶ್ರೀ ಬಸವೇಶ್ವರರ ಜಯಂತ್ಯೋತ್ಸವ ಸಮಾರಂಭವನ್ನು ಇದೇ 24ರ ಮಂಗಳವಾರ ಬೆಳಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ.
ಸಮಾರಂಭವನ್ನು ತಾಲ್ಲೂಕು ಆಡಳಿತ ಮತ್ತು ಬಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಕನ್ನಡ ಸಂಘದ ವೇದಿಕೆಯಲ್ಲಿ ಹಮ್ಮಿಕೊಂಡಿದ್ದು ಶಾಸಕ ಸಿ.ಬಿ.ಸುರೇಶ್ಬಾಬು ಅಧ್ಯಕ್ಷತೆ ವಹಿಸಲಿದ್ದು ಪುರಸಭಾಧ್ಯಕ್ಷ ದೊರೆಮುದ್ದಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ.
ತಾ.ಪಂ.ಅಧ್ಯಕ್ಷ ಸೀತರಾಮಯ್ಯ ಬಸವೇಶ್ವರರ ಭಾವಚಿತ್ರ ಅನಾವರಣಗೊಳಿಸಲಿದ್ದು, ಸಕರ್ಾರಿ ಪ್ರಥಮ ದಜರ್ೆ ಕಾಲೇಜಿನ ಪ್ರಾಂಶುಪಾಲ ಎ.ಎನ್.ವಿಶ್ವೇಶ್ವರಯ್ಯ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ತಾ.ಪಂ.ಉಪಾಧ್ಯಕ್ಷೆ ಬಿಬಿ ಪಾತೀಮ, ಪುರಸಭಾ ಉಪಾಧ್ಯಕ್ಷೆ ಗಾಯಿತ್ರಿಪುಟ್ಟಣ್ಣ, ಜಿ.ಪಂ.ಸದಸ್ಯತು, ಮಾಜಿ ಶಾಸಕರು, ಜನಪ್ರತಿನಿಧಿಗಳು ಉಪಸ್ಥಿತರಿರುವರು.

Monday, April 2, 2012




ಬರಪರಿಹಾರ ಕಾರ್ಯದಲ್ಲಿ  ಜನಪ್ರತಿನಿಧಿಗಳನ್ನು ಕಡೆಗಣಿಸುತ್ತಿರುವ ಡಿ.ಸಿ.: ಶಾಸಕ ಸಿ.ಬಿ.ಎಸ್. ಆರೋಪ
ಚಿಕ್ಕನಾಯಕನಹಳ್ಳಿ,ಏ.02 : ತಾಲ್ಲೂಕಿನಲ್ಲಿ ನೀರಿನ ಸಮಸ್ಯೆ ದಿನೇ ದಿನೇ ಉಲ್ಬಣವಾಗುತ್ತಿದೆ, ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗಿದೆ ಅಲ್ಲದೆ ತಾಲ್ಲೂಕು  ಬರಪೀಡಿತ ಪ್ರದೇಶವೆಂದು ಸಕರ್ಾರ ಘೋಷಿಸಿದೆ ಆದರೂ ಜಿಲ್ಲಾಧಿಕಾರಿಗಳು ಸೌಜನ್ಯಕ್ಕಾದರೂ ತಾಲ್ಲೂಕಿನಲ್ಲಿ ಒಂದು ಬಾರಿಯಾದರೂ ಜನಪ್ರತಿನಿಧಿಗಳ ಸಭೆ ಕರೆದು ತಾಲ್ಲೂಕಿನ ಸಮಸ್ಯೆಗಳ ಬಗ್ಗೆ ಚಚರ್ಿಸದೆ, ಜನಪ್ರತಿನಿದಿಗಳನ್ನು ಕಡೆಗಣಿಸಿ ಜಿಲ್ಲೆಯಲ್ಲಿ ಪ್ರೆಸಿಡೆಂಟ್ನಂತೆ ಮಾದರಿಯಲ್ಲಿ ಅವರ ಪಾಡಿಗೆ ಅವರು ವತರ್ಿಸುತ್ತಿದ್ದಾರೆ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಆರೋಪಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕ ಸಿ.ಬಿ.ಸುರೇಶ್ ಬಾಬು, ಬರಪರಿಹಾರ ಕಾರ್ಯ ನಿರೀಕ್ಷಿತ ವೇಗದಲ್ಲಿ ಆಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಸಕರ್ಾರ ಈ ಹಿಂದೆ ಕೂಲಿಗಾಗಿ ಕಾಳು ಯೋಜನೆ ಎಂಬ ಕಾರ್ಯಕ್ರಮ ಹಮ್ಮಿಕೊಂಡು ಜನತೆಯ ಜೀವನ ಸುಧಾರಿಸಿತ್ತು,  ಅದೇ ರೀತಿ ಈಗ ನೀರಿನ ಬವಣೆ ನಿವಾರಿಸಲು ಹೆಚ್ಚಿನ ರೀತಿಯಲ್ಲಿ ಬೋರ್ವೆಲ್ಗಳನ್ನು ಕೊರೆಸಿ ನೀರಿನ ದಾಹ ತೀರಿಸುವ ಅಗತ್ಯವಿದೆ ಇದಕ್ಕೆ ಜಿಲ್ಲಾಡಳಿತ ಸ್ಪಂದಿಸಿ ತಾಲ್ಲೂಕಿನ ಸಮಸ್ಯೆಗಳನ್ನು ಸಕರ್ಾರಕ್ಕೆ ಸಲ್ಲಿಸಬೇಕು, ಆದರೆ ಜಿಲ್ಲಾಧಿಕಾರಿಗಳು ಇಲ್ಲಿಯ ಸಮಸ್ಯೆ ಬಗ್ಗೆ ಒಂದು ಬಾರಿಯೂ  ಈ ಕಡೆ ಗಮನ ಹರಿಸುತ್ತಿಲ್ಲದಿರುವುದರಿಂದ ತಾಲೂಕಿನಲ್ಲಿ ಸಮಸ್ಯೆ ಹೆಚ್ಚುತ್ತಿದೆ, 
ಬರಪರಿಹಾರ ಸಮಿತಿಗೆ  ಶಾಸಕರುಗಳನ್ನು ಅಧ್ಯಕ್ಷರನ್ನಾಗಿ ಸಕರ್ಾರ ಮಾಡಿದೆ, ಆದರೆ ಜಿಲ್ಲಾಧಿಕಾರಿಗಳು ಶಾಸಕರನ್ನು ಹಾಗೂ ಜನಪ್ರತಿನಿಧಿಗಳನ್ನು ಲೆಕ್ಕಿಸದಿರುವುದು ಶೋಚನೀಯವಾಗಿದೆ ಎಂದ ಅವರು,  ಜಾನುವಾರುಗಳಿಗೆ ಮೇವಿನ ಸಮಸ್ಯೆ  ಹಾಗೂ ಜನರ ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿದೆ, ಕೆಲವು ಕಡೆ ಬೋರ್ವೆಲ್ ಮತ್ತು ಪೈಪ್ಲೈನ್ ಇರುವ ಕಡೆ  ನೀರು ತಳಮಟ್ಟಕ್ಕೆ ಹೋಗುತ್ತಿದೆ,  ಇದರಿಂದ ಜನರು ಜೀವನೋಪಾಯಕ್ಕಾಗಿ ಕುಟುಂಬ ಸಮೇತ ಪಟ್ಟಣಗಳತ್ತ ಗುಳೇ ಹೋಗುತ್ತಿದ್ದಾರೆ.  ಸಕರ್ಾರ ಬರಪೀಡಿತ ಪ್ರದೇಶಗಳಿಗೆ ಅನುದಾನ ನೀಡುತ್ತಿರುವುದು ಸಾಲುತ್ತಿಲ್ಲ ಇದಕ್ಕಾಗಿ ಜಿಲ್ಲಾಧಿಕಾರಿಗಳು ತಾಲ್ಲೂಕಿಗೆ ಆಗಮಿಸಿ ಸಮಸ್ಯೆಗಳನ್ನು ತಿಳಿಯಬೇಕು,  ಸಕರ್ಾರ ಬರಪೀಡಿತ ಪ್ರದೇಶಗಳ ಸಮಸ್ಯೆ ನಿವಾರಿಸಲು ಉತ್ತಮ ರೀತಿಯಲ್ಲಿ ಹಣ ಮಂಜೂರು ಮಾಡಬೇಕು ಎಂದು ತಿಳಿಸಿದರು. 



ಸಕಾಲ ದಿಂದ ಜನರಿಗೆ ಸಕರ್ಾರಿ ಸೇವೆಗಳು ಶೀಘ್ರ ಸಿಗುವಂತಾಗಲಿ
ಚಿಕ್ಕನಾಯಕನಹಳ್ಳಿ,ಏ.02 : ಸಕರ್ಾರಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸುವಾಗ ಯಾರ ಒತ್ತಡಕ್ಕೂ ಮಣಿಯದೇ, ಸಾರ್ವಜನಿಕರ ಸೇವೆಯನ್ನು ವಿಳಂಬಗೊಳಿಸದೆ ಶೀಘ್ರವಾಗಿ ಪರಿಹರಿಸಬೇಕು ಎಂಬ ಉದ್ದೇಶದಿಂದ ಸಕಾಲ ಎಂಬ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸ್ವಾಗತಾರ್ಹವಾಗಿದ್ದು ಇದರಿಂದ ಸಾರ್ವಜನಿಕರ ಸೇವೆ ಸಕಾಲದಲ್ಲಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಅಭಿಪ್ರಾಯಪಟ್ಟರು.
ಪಟ್ಟಣದ ತಾಲ್ಲೂಕು ಕಛೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಕಾಲ ಯೋಜನೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು  ಸಕರ್ಾರದ ಕೆಲಸ ಪೂರ್ಣಗೊಳ್ಳಲು ದಿನವಿಡಿ ಕಾಯುವ ಸಾರ್ವಜನಿಕರು ಇನ್ನು ಮುಂದೆ ಶೀಘ್ರವಾಗಿ ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಬಹುದು, ತಡವಾದರೆ ಅದರ ಬದಲಾಗಿ ಪರಿಹಾರ ಧನ ಪಡೆಯಬಹುದಾಗಿದೆ, ಅದಕ್ಕಾಗಿ ಸಾರ್ವಜನಿಕರು ತಮ್ಮ ಸಮಸ್ಯೆ ಬಗ್ಗೆ ಅಧಿಕಾರಿಗಳಲ್ಲಿ ಅಜರ್ಿ ನೀಡಿ, ಅಜರ್ಿ ನೀಡಿದಕ್ಕಾಗಿ ಸ್ವೀಕೃತಿ ಪತ್ರ ಪಡೆಯಬೇಕು, ಅಜರ್ಿ ನೀಡಿಯೂ ತಮ್ಮ ಕೆಲಸ ತಾವು ಪಡೆದ ಕಾಲವಕಾಶದೊಳಗೆ ಪೂರ್ಣಗೊಳ್ಳದಿದ್ದರೆ ಸ್ವೀಕೃತಿ ಪತ್ರ ನೀಡಿದ ಅಧಿಕಾರಿಯೂ ತಮ್ಮ ವೇತನದಲ್ಲಿ 20ರೂ ನಿಂದ 500ರೂ ವರೆಗೆ ಪರಿಹಾರ ನೀಡಲಿದ್ದಾರೆ ಎಂದು  ತಿಳಿಸಿದ ಅವರು  ಈ ಸಕಾಲ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಕಾರ್ಯಕ್ರಮ ಹಮ್ಮಿಕೊಂಡು ಈ ಯೋಜನೆಯ ಬಗ್ಗೆ ಗ್ರಾಮದ ಜನರಿಗೂ ತಿಳಿಸಬೇಕು, ಹಾಗೂ ಅಧಿಕಾರಿಗಳು ಸಕಾಲ ಯೋಜನೆಯನ್ನು ಮರೆಯದೆ ಸರಿಯಾದ ವೇಳೆಯಲ್ಲಿ ಸಾರ್ವಜನಿಕರ ಕಾರ್ಯ ಪೂರ್ಣಗೊಳಿಸಲು ತಿಳಿಸಿದರು.
ಜಿ.ಪಂ.ಸದಸ್ಯೆ ಲೋಹಿತಬಾಯಿ ಮಾತನಾಡಿ ಸಕರ್ಾರ ಹಮ್ಮಿಕೊಂಡಿರುವ ಸಕಾಲ ಯೋಜನೆಯಿಂದ ಅಧಿಕಾರಿಗಳ ಹಾಗೂ ಜನಸಾಮಾನ್ಯರ ಭಾಂದವ್ಯ ಬೆಳೆಯುತ್ತದೆ ಎಂದ ಅವರು ಈ ಯೋಜನೆಯಿಂದ ಸಾರ್ವಜನಿಕರು ಪ್ರತಿ ದಿನ ಕಛೇರಿಗಳನ್ನು ಅಲೆಯುವುದು ತಪ್ಪುತ್ತದೆ ಎಂಬ ಅಭಿಪ್ರಾಯವಿದೆ, ಅಲ್ಲದೆ ಅಧಿಕಾರಿಗಳು ಕಛೇರಿಯಲ್ಲಿ ಏನಾದರೂ ತೊಂದರೆ ಇದ್ದರೆ ಸಾರ್ವಜನಿಕರಲ್ಲಿ ನೇರವಾಗಿ ತಿಳಿಸಿ ನಿಮ್ಮ ಕೆಲಸ ಯಾವಗ ಪೂರ್ಣಗೊಳ್ಳುತ್ತದೆ ಎಂಬುದರ ಬಗ್ಗೆ ಸರಿಯಾದ ಮಾಹಿತಿ ನೀಡಿ, ಅವರನ್ನು ಕಛೇರಿಯಿಂದ ಕಛೇರಿಗೆ ಅಲೆಸಬೇಡಿ ಎಂದು ಸಲಹೆ ನೀಡಿದರು.
ಸಕಾಲದ ಸಂಪನ್ಮೂಲ ವ್ಯಕ್ತಿ ಹಾಗೂ, ಸಿ.ಡಿ.ಪಿ.ಓ ಅನೀಸ್ಖೈಸರ್ ಮಾತನಾಡಿ ಸಕಾಲ ಯೋಜನೆಯಲ್ಲಿ ಅಧಿಕಾರಿಗಳು ತಮ್ಮ ಕೆಲಸವನ್ನು ನಿಗದಿತ ದಿನಾಂಕದೊಳಗೆ ಮಾಡಿಕೊಡದಿದ್ದರೆ ಪರಿಹಾರ ಹಣ ಕೊಡಬೇಕು, ಪರಿಹಾರ ಹಣ ನೀಡಿದ ನಂತರವೂ ಕೆಲಸವನ್ನು ಪೂರ್ಣಗೊಳಿಸುವುದು ಈ ಯೋಜನೆಯಲ್ಲಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಯ ಉದ್ಘಾಟನೆ ಗ್ರಾ.ಪಂ.ಕಛೇರಿಗಳಲ್ಲೂ ನಡೆಯಲಿದೆ ಎಂದರು.
ಪುರಸಭಾ ಸದಸ್ಯ ಸಿ.ಡಿ.ಚಂದ್ರಶೇಖರ್ ಮಾತನಾಡಿ ಸಕಾಲ ಯೋಜನೆಯಲ್ಲಿ ಅಧಿಕಾರಿಗಳು ಮಾತ್ರ ಕರ್ತವ್ಯಯತೆಯಿಂದ ಕೂಡಿರಬೇಕೆಂದಲ್ಲ ಜನಪ್ರತಿನಿಧಿಗಳು ಈ ಯೋಜನೆಯ ಉದ್ದೇಶ ತಿಳಿದುಕೊಂಡು ತಮ್ಮ ವ್ಯಾಪ್ತಿಗೆ ಬರುವ ಸಾರ್ವಜನಿಕರಿಗೆ ಈ ಬಗ್ಗೆ ಮಾಹಿತಿ ನೀಡಬೇಕು, ಶಾಸಕಾಂಗ, ಕಾಯರ್ಾಂಗ, ನ್ಯಾಯಾಂಗಗಳು ಯಾವಾಗ ತಮ್ಮ ಕಾರ್ಯಚಟುವಟಿಕೆಯನ್ನು ಸರಿಯಾಗಿ ನಿರ್ವಹಿಸುತ್ತವೆಯೋ ಆ ಸಮಯದಲ್ಲಿ ಸಕರ್ಾರದ ಯೋಜನೆ, ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ ಎಂದರು.
ಸಮಾರಂಭದಲ್ಲಿ ತಾ.ಪಂ.ಅಧ್ಯಕ್ಷ ಸೀತಾರಾಮಯ್ಯ,  ತಹಶೀಲ್ದಾರ್ ಉಮೇಶ್ಚಂದ್ರ,  ಪುರಸಭಾಧ್ಯಕ್ಷ ದೊರೆಮುದ್ದಯ್ಯ, ತಾ.ಪಂ.ಉಪಾಧ್ಯಕ್ಷೆ ಬಿಬಿಫಾತೀಮ, ಸದಸ್ಯೆ ಚೇತನಗಂಗಾಧರ್, ಪುರಸಭಾ ಉಪಾಧ್ಯಕ್ಷೆ ಗಾಯಿತ್ರಿಪುಟ್ಟಣ್ಣ, ಪುರಸಭಾ ಸದಸ್ಯರಾದ ಸಿ.ಎಂ.ರಂಗಸ್ವಾಮಯ್ಯ, ಸಿ.ಎಸ್.ರಮೇಶ್, ರೇಣುಕಗುರುಮೂತರ್ಿ,  ಇ.ಓ ಎನ್.ಎಂ.ದಯಾನಂದ್ ಸೇರಿದಂತೆ ಮುಂತಾದವರಿದ್ದರು.


ಮರಳು ಮಾಫಿಯಾಕ್ಕೆ ಬಲಿಯಾದ ಗ್ರಾಮ ಸಹಾಯಕ ವಿಜಯ್ ಕುಮಾರ್

ಚಿಕ್ಕನಾಯಕನಹಳ್ಳಿ,ಏ.02 : ತಾಲ್ಲೂಕಿನ ಶೆಟ್ಟಿಕೆರೆಯಲ್ಲಿ ಮರಳು ಮಾಫಿಯಾಕ್ಕೆ ಗ್ರಾಮ ಸಹಾಯಕ ವಿಜಯ್ಕುಮಾರ್(48)ನನ್ನು ಅಮಾನುಷವಾಗಿ ಕೊಲೆ ಮಾಡಿದ್ದಾರೆ.       ವಿಜಯ್ಕುಮಾರ್ ಶೆಟ್ಟಿಕೆರೆಯ ಗ್ರಾಮಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದು ಶೆಟ್ಟಿಕೆರೆಯ ಕೆರೆಯಲ್ಲಿ ಮರಳು ತುಂಬಲು ಬಂದ ಜನರನ್ನು ತಡೆಯಲು ಹೋದಾಗ ಈ ಘಟನೆ ನಡೆದಿರಬಹುದೆನ್ನೆಲಾಗಿದೆ. ಮೃತ ವಿಜಯ ಕುಮಾರ್ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಮಾರಕಸ್ತ್ರಾಗಳಿಂದ ಹೊಡೆದಿರುವ ಗುರುತುಗಳಿವೆ, ಜೊತೆಗೆ ಕುತ್ತಿಗೆಯ ಬಳಿ ಕಾಲಿನಿಂದ ತುಳಿದಿರುವ ಕುರುಹಗಳಿವೆ.
  ಭಾನುವಾರ ರಾತ್ರಿ ಈ ಕೃತ್ಯ ನಡೆದಿದ್ದು ಸೋಮವಾರ ಗ್ರಾಮಸ್ಥರಿಗೆ ತಿಳಿದು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. 
 ಘಟನಾ ಸ್ಥಳಕ್ಕೆ ಶಾಸಕ ಸಿ.ಬಿ.ಸುರೇಶ್ಬಾಬು, ಎಸ್.ಪಿ.ಮೋಹನ್ ರೆಡ್ಡಿ, ಪ್ರಭಾರ ಡಿವೈಎಸ್ಪಿ ಶಿವರುದ್ರ ಸ್ವಾಮಿ,  ತಹಶೀಲ್ದಾರ್ ಉಮೇಶ್ಚಂದ್ರ, ಸಿ.ಪಿ.ಐ ಕೆ.ಪ್ರಭಾಕರ್ ಭೇಟಿ ನೀಡಿ ಪರಿಶೀಲಿಸಿದರು. ಚಿ.ನಾ.ಹಳ್ಳಿ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಲೂಕಿನಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಮರಳು ಮಾಫಿಯಾ: ತಾಲೂಕಿನ ಶೆಟ್ಟೀಕೆರೆ, ಕಾಡೇನಹಳ್ಳಿ, ಬರಗೂರು, ಹೊಸಕೆರೆ, ಬಳ್ಳೆಕಟ್ಟೆ ಸೇರಿದಂತೆ ಹಲವು ಕಡೆ ಮರಳು ಮಾಫಿಯಾ ನಡೆಯುತ್ತಿದೆ.  ಈ ಬಗ್ಗೆ ತಾಲೂಕು ಆಡಳಿತಕ್ಕೆ ಮಾಹಿತಿ ಇದ್ದರೂ ಯಾವುದೇ ಕ್ರಮವನ್ನು ಕೈಗೊಳ್ಳದೆ, ಅಧೀನ ನೌಕರರನ್ನು ಬಿಟ್ಟು ಆಟನೋಡುವ ಅಧಿಕಾರಿಗಳ ಕಾಟಕ್ಕೆ ವಿಜಯಕುಮಾರ್ ಬಲಿಯಾಗಿದ್ದಾನೆ ಎಂಬುದು ಸ್ಥಳೀಯರ ಅಭಿಪ್ರಾಯ.
ಪರಿಹಾರಕ್ಕೆ ಒತ್ತಾಯ:  ಮರಳು ಮಾಫಿಯಾಕ್ಕೆ ಬಲಿಯಾಗಿರುವ ಗ್ರಾಮ ಸಹಾಯಕ ನಾಯಕ ಜನಾಂಗದವನಾಗಿದ್ದು, ಹೆಂಡತಿ, ಎರಡು ಹೆಣ್ಣು, ಒಬ್ಬ ಗಂಡು ಮಗನ ತಂದೆ, ಅವನ ಸಾವಿನಿಂದ ಕುಟುಂಬ ಬೀದಿಗೆ ಬಿದ್ದಂತಾಗಿದೆ,  ಆದ್ದರಿಂದ ಸಕರ್ಾರ ಶೀಘ್ರ ಆರೋಪಿಗಳನ್ನು ಬಂಧಿಸಬೇಕು ಹಾಗೂ ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಡಿ.ಸಿ.ಸಿ.ಬ್ಯಾಂಕ್ ನಿದರ್ೇಶಕ ಹಾಗೂ ಅಹಿಂದ ತಾಲೂಕು ಅಧ್ಯಕ್ಷ ಸಿಂಗದಹಳ್ಳಿ ರಾಜ್ಕುಮಾರ್ ಒತ್ತಾಯಿಸಿದ್ದಾರೆ.

ಸುಪ್ರಿಂ ಸೆಲೂನ್ನಲ್ಲಿ ಮಟ್ ಮಂಗ್ಳವಾರದ ಕವಿಗೋಷ್ಠಿ
ಚಿಕ್ಕನಾಯಿಕನಹಳ್ಳಿ,ಏ.02: ಪಟ್ಟಣದ ಸುಪ್ರಿಂ ಸೆಲೂನ್ನಲ್ಲಿ ಸಾಹಿತ್ಯ ಎಂಬ ನೂತನ ಕಲ್ಪನೆಯೊಂದಿಗೆ ಸಾಹಿತ್ಯದ ಕೆಲಸವನ್ನು ತನ್ನ ಕಾಯಕದೊಂದಿಗೆ ನೆಡೆಸಿಕೊಡುತ್ತಿರುವ ಸುಪ್ರಿಂ ಸುಬ್ರಹ್ಮಣ್ಯ  ಅವರು, ಇದೇ ಏ.3ರಂದು ಸಂಜೆ 5.30ಕ್ಕೆ ತನ್ನ ಸೆಲೂನ್ನಲ್ಲಿ ಕವಿಗೋಷ್ಠಿ ಏರ್ಪಡಿಸಿದ್ದಾರೆ.
ಜಾಡು ವೇದಿಕೆಯೊಂದಿಗೆ ನಡೆಯುತ್ತಿರುವ ಈ ಕವಿಗೋಷ್ಠಿಯಲ್ಲಿ ಚಿಂತಕ ಕೆ.ದೊರೈರಾಜ್, ಸಾಹಿತಿಗಳಾದ ಎಂ.ವಿ.ನಾಗರಾಜ್ರಾವ್, ಜಿ.ವಿ.ಆನಂದಮೂತರ್ಿ, ಬಿಳಿಗೆರೆ ಕೃಷ್ಣಮೂತರ್ಿ, ಅಬ್ದುಲ್ ಹಮೀದ್, ಎನ್.ನಾಗಪ್ಪ, ಎನ್.ಇಂದಿರಮ್ಮ, ಎಸ್.ಗಂಗಾಧರಯ್ಯ, ಉಗಮ ಶ್ರೀನಿವಾಸ್, ಸಿ.ಗುರುಮೂತರ್ಿ ಕೊಟಿಗೆಮನೆ,  ಅಣೆಕಟ್ಟೆ ವಿಶ್ವನಾಥ್, ದೇವರಹಳ್ಳಿ ಧನಂಜಯ, ರಾಧಕೃಷ್ಣ, ಸಿ.ಪಿ.ಗಿರೀಶ್, ಸಿ.ಎ.ಸೋಮಶೇಖರ್ ಸೇರಿದಂತೆ ಹಲವು ಕವಿಗಳು ತಮ್ಮ ಕವನಗಳನ್ನು ವಾಚಿಸಲಿದ್ದಾರೆ. 
ಅಂಬೇಡ್ಕರ್ ಜಯಂತಿ ಅಂಗವಾಗಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿ
ಚಿಕ್ಕನಾಯಕನಹಳ್ಳಿ,ಏ.02: ಡಾ.ಅಂಬೇಡ್ಕರ್ ಜನ್ಮದಿನಾಚರಣೆಯ ಅಂಗವಾಗಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಹಾಗೂ ವಿಧವೆಯರಿಗೆ ಉಚಿತವಾಗಿ 10 ದಿನಗಳ  ಬ್ಯೂಟಿ ಪಾರ್ಲರ್ ತರಬೇತಿಯನ್ನು ನೀಡಲಾಗುವುದು ಎಂದು ಸುಪ್ರಿಂ ಬ್ಯೂಟಿಪಾರ್ಲರ್ ತರಬೇತಿ ಸಂಸ್ಥೆಯ ಕಾರ್ಯದಶರ್ಿ ವನಜ ಸುಬ್ರಹ್ಮಣ್ಯ ತಿಳಿಸಿದ್ದಾರೆ.
 ತರಬೇತಿಗೆ ಅಜರ್ಿ ಸಲ್ಲಿಸುವವರು 18 ರಿಂದ 35 ವರ್ಷ ವಯಸ್ಸಿನ ಮಹಿಳೆಯರಾಗಿರಬೇಕು, ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ತರಬೇತಿಯನ್ನು ನೀಡಲಾಗುವುದು, ತರಬೇತಿಯ ನಂತರ ಸಟರ್ಿಫಿಕೇಟ್ ನೀಡಲಾಗುವುದು. ಈ ತರಬೇತಿಗೆ ಆಯ್ದ 10 ಮಹಿಳೆಯರನ್ನು ಮಾತ್ರ ಆಯ್ಕೆಮಾಡಿಕೊಳ್ಳಲಾಗುವುದು. ಹೆಚ್ಚಿನ ವಿಷಯಗಳಿಗೆ ತರಬೇತಿ ಸಂಸ್ಥೆಯ ಅಧ್ಯಕ್ಷೆ ರತ್ನಮ್ಮ ರೇಣುಕಸ್ವಾಮಿ ಮೊ.9741752827 ಕಾರ್ಯದಶರ್ಿ ವನಜ ಸುಬ್ರಹ್ಮಣ್ಯ ಮೊ.9742316759 ಸಂಪಕರ್ಿಸಬಹುದು.

Wednesday, March 28, 2012


ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆ
ಚಿಕ್ಕನಾಯಕನಹಳ್ಳಿ,ಮಾ.28 : ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮತ್ತು ಬಹಿರಂಗ ಸಭೆ ಏರ್ಪಡಿಸುವ ಬಗ್ಗೆ ಕ್ಷೇತ್ರದ ವಿಧಾನಸಭಾ ವ್ಯಾಪ್ತಿಯ ಸಮಸ್ತ ಕಾಂಗ್ರೆಸ್ ಮುಖಂಡರುಗಳ ಮತ್ತು ಕಾರ್ಯಕರ್ತರುಗಳ ಪೂರ್ವಭಾವಿ ಸಭೆಯನ್ನು ಇದೇ 29ರ ಗುರವಾರ ಸಂಜೆ 4ಗಂಟೆಗೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕರೆಯಲಾಗಿದೆ ಎಂದು ಚಿನಾಹಳ್ಳಿ ವಿಧಾನಸಭಾ ಕ್ಷೇತ್ರದ ಸಂಘಟನಾ ಉಸ್ತುವಾರಿ ಮತ್ತು ವೀಕ್ಷಕರಾದ ಕ್ಯಾಪ್ಟನ್ ಸೋಮಶೇಖರ್ ತಿಳಿಸಿದ್ದಾರೆ.
ಪಟ್ಟಣದ ಕನ್ನಡ ಸಂಘದ ವೇದಿಕೆಯಲ್ಲಿ ಏಪ್ರಿಲ್ 10ರ ಮಂಗಳವಾರ ಸಂಜೆ 4ಗಂಟೆಗೆ ನಡೆಯಲಿರುವ ಚಿನಾಹಳ್ಳಿ ವಿಧಾನಸಭಾ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಮತ್ತು ಬಹಿರಂಗ ಸಭೆಯಲ್ಲಿ ರಾಷ್ಟ್ರ ಮತ್ತು ರಾಜ್ಯ ನಾಯಕರಾದ ಎಸ್.ಎಂ.ಕೃಷ್ಣ, ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ್ ಮತ್ತು ಇತರ ನಾಯಕರುಗಳು, ಭಾಗವಹಿಸಲಿರುವ ಸಭೆಯ ರೂಪು ರೇಷೆಗಳನ್ನು ಚಚರ್ಿಸಿ ನಿರ್ಧರಿಸಲಾಗುವುದು. ಈ ಸಭೆಯು ಅಚ್ಚುಕಟ್ಟಾಗಿ ರೂಪಿಸಲು ಕಾರ್ಯಕರ್ತರು ಮತ್ತು ಮುಖಂಡರುಗಳು ಈ ಪೂರ್ವಭಾವಿ ಸಭೆಯಲ್ಲಿ  ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಿದ್ದಾರೆ.

ವಿದ್ಯುತ್ ವ್ಯತ್ಯಯ
ಚಿಕ್ಕನಾಯಕಹಳ್ಳಿ,ಮಾ.28 : ತಾಲ್ಲೂಕಿನ ಉಪವಿಭಾಗದ ತಿಮ್ಮನಹಳ್ಳಿ 110/11 ಕೆ.ವಿ ಉಪಕೇಂದ್ರದಲ್ಲಿ ಮತ್ತು ಹಂದನಕೆರೆ 110/11 ಕೆ.ವಿ ಉಪಕೇಂದ್ರದಲ್ಲಿ ಇದೇ ಮಾಚರ್್ 30 ಮತ್ತು 31ರಂದು ಬೆಳಗ್ಗೆ 10ಗಂಟೆಯಿಂದ ಸಂಜೆ 6ಗಂಟೆಯವರೆಗೆ ತುತರ್ು ನಿರ್ವಹಣಾ ಕಾರ್ಯವಿರುವುದರಿಂದ, ಈ ಎರಡೂ ಉಪಕೇಂದ್ರಗಳಿಂದ ಪೂರಕವಾಗುತ್ತಿರುವ 11.ಕೆ.ವಿ ಮಾರ್ಗಗಳಿಗೆ ಬೆಳಗ್ಗೆ 10ರಿಂದ ಸಂಜೆ 6ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲವಾಗಿದ್ದು ಗ್ರಾಹಕರು ಎಂದಿನಂತೆ ಸಹಕರಿಸಬೇಕಾಗಿ ಬೆವಿಕಂ. ಸಹಾಯಕ ಕಾರ್ಯನಿವರ್ಾಹಕ ಇಂಜನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Thursday, March 22, 2012


ನೀರಿಗಾಗಿ ಹಾಹಾಕಾರ: ಖಾಲಿ ಕೊಡ ಹಿಡಿದ ಜನತೆಯ ಪರದಾಟ 
  • ನೀರು ಬಿಡಲು ಆಗ್ರಹಿಸಿ ಗ್ರಾ.ಮ ಪಂಚಾಯಿತಿಗೆ ಬೀಗ ಜಡಿದ ಗ್ರಾಮಸ್ಥರು. 
  • ಅಧಿಕಾರಸ್ಥರಿಗೆ ಧಿಕ್ಕಾರ ಕೂಗಿದ ಮಹಿಳೆಯರು  
  • ಖಾಲಿ ಕೊಡ ಹಿಡಿದು 2ನೇ ದಿನವೂ ಗ್ರಾ.ಪಂ. ಕಾಯರ್ಾಲಯಕ್ಕೆ ಬೀಗ. 
  • ಅಕ್ಕಪಕ್ಕದ ತೋಟಗಳಲ್ಲಿ ನೀರಿಗಾಗಿ ಕಾಡಿಬೇಡಿ ನಿತ್ಯ ಕರ್ಮಗಳನ್ನು ಪೂರೈಸಿಕೊಳ್ಳುತ್ತಿರುವ     ಜನರು .

ಚಿಕ್ಕನಾಯಕನಹಳ್ಳಿ,ಮಾ.22 : ಸಕರ್ಾರ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದೆ, ಇದೇ ಸಮಯದಲ್ಲಿ ಬೇಸಿಗೆಗಾಲ ಶುರುವಾಗಿ ಹಲವು ದಿನಗಳು ಕಳೆದಿವೆ, ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ನೀರಿಗಾಗಿ ಪರದಾಡುವ ಸ್ಥಿತಿ ಎದುರಾಗಿದೆ, ಜನರು ನೀರಿಗಾಗಿ  ಅಕ್ಕಪಕ್ಕದ ತೋಟಗಳಲ್ಲಿ ಕಾಡಿಬೇಡಿ ತಮ್ಮ ದಿನನಿತ್ಯ ಕರ್ಮಗಳನ್ನು ಪೂರೈಸುವಲ್ಲಿ ನಿರತರಾಗಿರುವುದು ಸಾಮಾನ್ಯ ದೃಷ್ಯವಾಗಿದೆ, ಆದರೆ ಇದರಿಂದ ರೋಸಿಹೋಗಿರುವ  ದುಗಡಿಹಳ್ಳಿ ಗ್ರಾಮದ ಜನ ಅಂತಿಮ ಪ್ರಯತ್ನವಾಗಿ  ಗ್ರಾ.ಪಂ.ಕಾಯರ್ಾಲಯಕ್ಕೆ ಬೀಗ ಜಡಿಯುವ ಮೂಲಕ ತಮ್ಮ ರೋಷವನ್ನು ವ್ಯಕ್ತಪಡಿಸಿದ್ದಾರೆ.
ತಾಲ್ಲೂಕಿನ ದುಗಡಿಹಳ್ಳಿ, ಸಿದ್ದರಾಮನಗರ ಗ್ರಾಮಗಳಲ್ಲಿ ಕಳೆದ 6ತಿಂಗಳಿನಿಂದಲೂ ನೀರಿಗಾಗಿ ಪರದಾಡುತ್ತಿದ್ದರು, ಈ ಬಗ್ಗೆ ಅಧಿಕಾರದಲ್ಲಿರುವ ಎಲ್ಲ ವರ್ಗದ ಜನರ ಬಳಿಯೂ ಗೋಳು ಹೇಳಿಕೊಂಡರು ಕುಡಿಯಲು ನೀರು ಸಿಗದಿರುವುದರಿಂದ  ಸಿಟ್ಟಿಗೆದ್ದ ಜನರು ಮಾ.21ರಂದು   ಗ್ರಾಮ ಪಂಚಾಯಿತಿ ಕಾಯರ್ಾಲಯಕ್ಕೆ ಬೀಗ ಜಡಿದು ಪ್ರತಿಭಟಿಸಿದ್ದಾರೆ, ಮೊದಲನೆ ದಿನ ಗ್ರಾಮ ಪಂಚಾಯಿತಿ ಕಾಯರ್ಾಲಯಕ್ಕೆ ಬೀಗ ಜಡಿದು ಪ್ರತಿಭಟಿಸಿದಕ್ಕೆ ಗ್ರಾ.ಪಂ.ಅಧ್ಯಕ್ಷರಾದ ಲಕ್ಷ್ಮೀದೇವಮ್ಮ  ಪ್ರತಿಕ್ರಿಯಿಸಿ ನಾಳೆ ಟ್ಯಾಂಕರ್ ಮೂಲಕ ನೀರನ್ನು ತರಿಸುವುದಾಗಿ ಭರವಸೆ ನೀಡಿದರು, ಈ ಭರವಸೆಗೆ ಒಪ್ಪಿಕೊಂಡ ಗ್ರಾಮಸ್ಥರು ಗ್ರಾ.ಪಂ. ಕಾಯರ್ಾಲಯಕ್ಕೆ ಹಾಕಿದ್ದ ಬೀಗ ತೆಗೆದು ಅಲ್ಲಿನ ನೌಕರರಿಗೆ ಕರ್ತವ್ಯ ನಿರ್ವಹಿಸಲು ಅನವು ಮಾಡಿಕೊಟ್ಟರು, ಮರು ದಿನ ಅಂದರೆ ಮಾ.22ರಂದು  1ಗಂಟೆಯಾದರೂ ನೀರು ಬಾರದಿರುವದನ್ನು ಮನಗಂಡು  ಗ್ರಾಮಸ್ಥರು ಮತ್ತೆ ಗ್ರಾ.ಪಂ.ಕಾಯರ್ಾಲಯದ ಮುಂದೆ ಖಾಲಿ ಕೊಡ ಪ್ರದಶರ್ಿಸಿ ಬೀಗ ಜಡಿದು ಪ್ರತಿಭಟಿಸಿದರು.
ಹೊಸದಾಗಿ ಬೋರ್ ಕೊರೆಸಿದ್ದು ಅದಕ್ಕೆ ಮೋಟಾರ್ ಅಳವಡಿಸಿಲ್ಲ,  ಗ್ರಾಮದ ಜನತೆಗೆ ನೀರು ಬಿಡಬೇಕಾದ ನೌಕರ ಅಪಘಾತಕ್ಕೀಡಾಗಿ  ಆಸ್ಪತ್ರೆ ಸೇರಿದ್ದಾನೆ,  ಇವೆಲ್ಲಾ ಕಾರಣಗಳಿಂದ  ಸುಮಾರು ಆರು ತಿಂಗಳಿನಿಂದಲೂ ಸರಿಯಾಗಿ ನೀರಿನ ಸರಬರಾಜು ಇಲ್ಲದೆ ಗ್ರಾಮದ ಜನರು ಅಕ್ಕಪಕ್ಕದಲ್ಲಿನ ತೋಟಗಳಿಗೆ ಹೋಗಿ ತೋಟದ ಮಾಲೀಕರಲ್ಲಿ ವಿನಂತಿಸಿಕೊಂಡು ನೀರನ್ನು ತಂದು ತಮ್ಮ ದಿನನಿತ್ಯ ಕಾರ್ಯಗಳನ್ನು ಪೂರೈಸಿಕೊಳ್ಳುತ್ತಿರುವುದಾಗಿ  ಆ ಭಾಗದ ಗ್ರಾಮಸ್ಥ ಲೋಕೇಶ್  ಪತ್ರಿಕೆಯ ಬಳಿ ಹೇಳಿಕೊಂಡಿದ್ದಾರೆ. ಈ ಕೂಡಲೇ ಗ್ರಾಮಕ್ಕೆ ನೀರು ಬಿಡಲು ಪಯರ್ಾಯ ವ್ಯವಸ್ಥೆ ಮಾಡಬೇಕು. ಇಲ್ಲವಾದರೆ ನಮಗೆ ನೀರು ಸಿಗುವವರೆಗೆ ಗ್ರಾ.ಪಂ.ಗೆ ಬೀಗ ಜಡಿಯುವುದು ಖಂಡಿತವೆಂದು ಆ ಭಾಗದ ಜನರು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಸಿ.ಲೋಕೇಶ್ ಬಿಲ್ಲೇಮನೆ, ನಿಜಗುಣಮೂತರ್ಿ, ನಂದೀಶ್, ಷಡಾಕ್ಷರಿ ಸೇರಿಂದತೆ ಮಹಾಲಿಂಗೇಶ್ವರ ಯುವಕ ಸಂಘದ ಸದಸ್ಯರು, ಮಹಿಳಾ ಸ್ತ್ರೀ ಶಕ್ತಿ ಸಂಘದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.


Tuesday, March 13, 2012




ಜಿಲ್ಲೆಯಲ್ಲಿ ಉತ್ತಮ ಪ್ರಗತಿಯ ಪ್ರಥಮ ಸಂಘವನ್ನಾಗಿಸಲು ಶ್ರಮಿಸುವೆ
ಚಿಕ್ಕನಾಯಕನಹಳ್ಳಿ,ಮಾ.13: ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳಿಗಿಂತ ನಂದಿನಿ ಹಾಲು ಉತ್ಪಾದಕರುಗಳ ಪತ್ತಿನ ಸಹಕಾರ ಸಂಘವನ್ನು ಜಿಲ್ಲೆಯಲ್ಲೇ ಉತ್ತಮ ಪ್ರಗತಿಯ ಪ್ರಥಮ ಪತ್ತಿನ ಸಹಕಾರ ಸಂಘ ಮಾಡಲು ಸಂಘದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಾಲ್ಲೂಕು ಹಾಲು ಉತ್ಪಾದಕರುಗಳ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಹಳೆಮನೆ ಶಿವನಂಜಪ್ಪ ಹೇಳಿದರು.
ಪಟ್ಟಣದ ನಂದಿನಿ ಹಾಲು ಉತ್ಪಾಕರುಗಳ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ 2012ನೇ ಸಾಲಿನ  ಚುನಾವಣೆಯಲ್ಲಿ 3ನೇ ಬಾರಿ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಹಳೆಮನೆ ಶಿವನಂಜಪ್ಪ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀನರಸಿಂಹಯ್ಯರವರಿಗೆ ನಿದರ್ೇಶಕರುಗಳು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಳೆಮನೆ ಶಿವನಂಜಪ್ಪ ಸಂಘದ ಅಭಿವೃದ್ದಿಗಾಗಿ ನಿಷ್ಠೆಯಿಂದ  ಕಾರ್ಯನಿರ್ವಹಿಸಲಿದ್ದು, ಟೀಕೆಗಳಿಗೆ ಕಿವಿಗೊಡದೆ ಅಭಿವೃದ್ದಿ ಕಡೆಗೆ ಕೊಂಡೊಯ್ಯುಲು ಶ್ರಮಿಸುತ್ತೇನೆ, ಇದಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ಕೋರಿದರು. ನಂದಿನಿ ಪತ್ತಿನ ಸಹಕಾರ ಸಂಘದಲ್ಲಿ ಜಾತಿ, ಭೇದ ಮಾಡದೆ, ಒಂದೇ ರೀತಿಯ ವ್ಯವಸ್ಥೆ ಇರುವುದು ಎಂದು ತಿಳಿಸಿದರು.
3ನೇ ಬಾರಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಲಕ್ಷ್ಮೀನರಸಿಂಹಯ್ಯ ಮಾತನಾಡಿ ವಿಸ್ತರಣಾಧಿಕಾರಿಗಳಿಗೂ, ಸಂಘದ ಸದಸ್ಯರಿಗೂ, ಖಾತೆದಾರರಿಗೂ  ಉತ್ತಮವಾದ ಸಂಬಂಧ ಇರಬೇಕು ಆಗ ಸಂಘದಲ್ಲಿ ಅಭಿವೃದ್ದಿ ಕಾಣುತ್ತದೆ ಎಂದರು.
ಸಮಾರಂಭದಲ್ಲಿ ನಿದರ್ೇಶಕ ಸಿದ್ದರಾಮಯ್ಯ, ವಿಸ್ತರಣಾಧಿಕಾರಿ ಯರಗುಂಟಪ್ಪ ಉಪಸ್ಥಿತರಿದ್ದರು.
ಬರ ನಿರ್ವಹಣಾ ಕೋಶದ ಸಹಾಯವಾಣಿ
ಚಿಕ್ಕನಾಯಕನಹಳ್ಳಿ,ಮಾ.13: ತಹಶೀಲ್ದಾರ್ ಕಛೇರಿಯಲ್ಲಿ ಬರಪರಿಹಾರ ನಿರ್ವಹಣಾ ಕೋಶವನ್ನು ತೆರೆಯಲಾಗಿದ್ದು, ಇಲ್ಲಿ ಕುಡಿಯುವ ನೀರು, ಮೇವಿನ ಕೊರತೆ ಹಾಗೂ ಇತರೆ ಉದ್ಯೋಗ ಸೃಜನ ಕಾಮಗಾರಿಗಳ ದೂರುಗಳು ಹಾಗೂ ಸಲಹೆಗಳನ್ನು ಸ್ವೀಕರಿಸಲು ಈ ಕೋಶವನ್ನು ತೆರೆಯಲಾಗಿದೆ.
ಬರ ಪರಿಹಾರ ನಿರ್ವಹಣಾ ವಿಷಯವಾಗಿ ಹೆಚ್ಚಿನ ಮಾಹಿತಿಗಾಗಿ ಈ ಕೋಶದಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು  ಸಾರ್ವಜನಿಕರು 08133-267242 ಈ ಸಂಖ್ಯೆಯನ್ನು ಸಂರ್ಪಕಿಸಲು ಕೋರಲಾಗಿದೆ.
ಪ್ರೌಢಶಾಲಾ ಶಿಕ್ಷಕರ ಹೆಚ್ಚುವರಿ ಪಟ್ಟಿ
ಚಿಕ್ಕನಾಯಕನಹಳ್ಳಿ,ಮಾ.13: ಸಕರ್ಾರಿ ಪ್ರೌಢಶಾಲೆಗಳ ಗ್ರೇಡ್-2 ಸಹ ಶಿಕ್ಷಕರ ತಾತ್ಕಾಲಿಕ ಹೆಚ್ಚುವರಿ ಪಟ್ಟಿಯನ್ನು ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಸದರಿ ಪಟ್ಟಿಯ ಬಗ್ಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ದಿ.15.03.12ರೊಳಗೆ ಕಛೇರಿಗೆ ಮುದ್ದಾಂ ಸಲ್ಲಿಸಿ ಸ್ವೀಕೃತಿ ಪಡೆಯಲು ಬಿ.ಇ.ಓ. ಸಾ.ಚಿ.ನಾಗೇಶ್ ಕೋರಿದ್ದಾರೆ.



Saturday, March 10, 2012


ತಾತಯ್ಯನವರ 52ನೇ ವರ್ಷದ ಉರುಸ್ ಕಾರ್ಯಕ್ರಮ
ಚಿಕ್ಕನಾಯಕನಹಳ್ಳಿ,ಮಾ.10 : ಹಜರತ್ ಸೈಯದ್ ಮೊಹಿದ್ದೀನ್ ಷಾ ಖಾದ್ರಿಯವರ ಉರುಸ್, ತಾತಯ್ಯನವರ 52ನೇ ವರ್ಷದ ಉರುಸ್ ಕಾರ್ಯಕ್ರಮವನ್ನು ಇದೇ 12ರಿಂದ 14ರವರೆಗೆ ನಡೆಯಲಿದೆ ಎಂದು ಸಿ.ಬಿ.ಸುರೇಶ್ಬಾಬು ಅಭಿಮಾನಿ ಬಳಗ ತಿಳಿಸಿದೆ.
ಉರುಸ್ ಕಾರ್ಯಕ್ರಮವು 12ರ ಸೋಮವಾರದಂದು ರಾತ್ರಿ 8.30ಕ್ಕೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ 
 ತಾತಯ್ಯನವರ ಉತ್ಸವ ನಡೆಯಲಿದೆ, 13ರ ಮಂಗಳವಾರ ಸಂಜೆ 7.30ಕ್ಕೆ ಸಕರ್ಾರಿ ಪ್ರೌಡಶಾಲೆ ಆವರಣದಲ್ಲಿ ಮುಜ್ತಾಬಾ ನಾಜಾನ್ ಪಾಟರ್ಿ ಆಫ್ ಮುಂಬಯಿ ಮತ್ತು ನೂರಿ ಸಭಾ ಪಾಟರ್ಿ ಆಫ್ ನಾಗಪುರುರವರಿಂದ ಜಿದ್ದಾಜಿದ್ದಿನ ಖವ್ವಾಲಿ ನಡೆಯಲಿದ್ದು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನೆರವೇರಿಸಲಿದ್ದು ಗೋರಿಕಮಿಟಿ ಉಪಾಧ್ಯಕ್ಷ ಟಿ.ರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು, ಶಾಸಕ ಸಿ.ಬಿ.ಸುರೇಶ್ಬಾಬು, ಜಿ.ಪಂ.ಅಧ್ಯಕ್ಷ ಆನಂದರವಿ ಮತ್ತಿತರರು ಉಪಸ್ಥಿತರಿರುವರು.
14ರ ಬುಧವಾರ ಸಂಜೆ 7.30ಕ್ಕೆ ನಗೆಹಬ್ಬ, ಸಂಗೀತ ರಸಸಂಜೆಯನ್ನು ಖ್ಯಾತ ಹಾಸ್ಯಗಾರರಾದ ರಿಚಡರ್್ ಲೂಯಿಸ್ ಹಾಗೂ ಮೈಸೂರ್ ಆನಂದ್ ತಂಡದವರಿಂದ ನಡೆಯಲಿದ್ದು ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಆರ್.ಕೆ.ರಾಜು ಉದ್ಘಾಟನೆ ನೆರವೇರಿಸಲಿದ್ದಾರೆ. ಶಾಸಕ ಸಿ.ಬಿ.ಸುರೇಶ್ಬಾಬು ಅಧ್ಯಕ್ಷತೆ ವಹಿಸಲಿದ್ದು ಖ್ಯಾತ ಚಲನಚಿತ್ರ ನಟ ದುನಿಯಾ ವಿಜಯ್ ಹಾಗೂ ನಟಿ ಪೂಜಾಗಾಂಧಿರವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.
ಮುಖ್ಯ ಅತಿಥಿಗಳಾಗಿ ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದರಾಜು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಟಿ.ಆರ್.ಸುರೇಶ್, ಪುರಸಭಾಧ್ಯಕ್ಷ ದೊರೆಮುದ್ದಯ್ಯ, ಉಪಾಧ್ಯಕ್ಷೆ ಗಾಯಿತ್ರಿದೇವಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ನಾಗರಾಜು, ಟೌನ್ ಬ್ಯಾಂಕ್ ಅಧ್ಯಕ್ಷ ಸಿ.ಎಸ್.ನಟರಾಜು ಉಪಸ್ಥಿತರಿರುವರು.

ತಾತಯ್ಯನವರ ಉತ್ಸವಕ್ಕೆ ಸೂಕ್ತ ಬಂದು ಬಸ್ತ್ ವ್ಯವಸ್ಥೆ
                                            
ಚಿಕ್ಕನಾಯಕನಹಳ್ಳಿ,ಮಾ.10 : ತಾತಯ್ಯನವರ ಉತ್ಸವಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಬಂದು ಬಸ್ತ್ ವ್ಯವಸ್ಥೆ ಕಲ್ಪಿಸುವುದಾಗಿ ಸರ್ಕಲ್ ಇನ್ಸ್ಪೆಕ್ಟರ್ ಕೆ.ಪ್ರಭಾಕರ್ ತಿಳಿಸಿದರು.
ತಾತಯ್ಯನವರ ಉರುಸ್ ಉತ್ಸವ ಆರಂಭವಾಗುವ ಹಿನ್ನೆಲೆಯಲ್ಲಿ ಪಟ್ಟಣದ ಪೋಲಿಸ್ ಠಾಣೆಯಲ್ಲಿ ಕರೆದಿದ್ದ ಹಿಂದು ಮುಸ್ಲಿಂ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮೊದಲಿನಿಂದಲೂ ನೆಡಯುತ್ತಿರುವ ಈ ಉರುಸ್ ಕಾರ್ಯಕ್ರಮಕ್ಕೆ ಎಲ್ಲಾ ಹಿಂದು ಮುಸ್ಲಿಂರು ಒಟ್ಟಾಗಿ ಸೇರಿ ಉರುಸ್ನ್ನು ಯಶಸ್ವಿಯಾಗಿ ನಡೆಸಲು ಕರೆ ನೀಡಿದರು.
ಪುರಸಭಾ ಸದಸ್ಯ ಬಾಬುಸಾಹೇಬ್ ಮಾತನಾಡಿ ಈ ಬಾರಿ ತಾತಯ್ಯನವರ ಉರುಸ್ಗೆ ಲಕ್ಷಕ್ಕೂ ಅಧಿಕ ಜನ ಭಾಗವಹಿಸಲಿದ್ದು ಅದಕ್ಕಾಗಿ ಹೆಚ್ಚು ಮಹಿಳಾ ಪೋಲಿಸ್ ಸಿಬ್ಬಂದಿಯನ್ನು ನೇಮಿಸಲು ಸಲಹೆ ನೀಡಿದರು.
ಟೌನ್ ಬ್ಯಾಂಕ್ ಅಧ್ಯಕ್ಷ ಸಿ.ಎಸ್.ನಟರಾಜು ಮಾತನಾಡಿ ಉರುಸ್ ಸಮಯದಲ್ಲಿ ಯಾವುದೇ ತೊಂದರೆಯಾಗದಂತೆ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ತಿಳಿಸಿದರು.
ಶಾಂತಿ ಸಭೆಯಲ್ಲಿ ಪಿ.ಎಸ್.ಐ ಕೆ.ಪ್ರಭಾಕರ್, ಪ್ರೊಪೆಷನರಿ ಪಿ.ಎಸ್.ಐ ನಾಗರಾಜುಮೇಕ, ಪೋಲಿಸ್ ಗುಪ್ತಮಾಹಿತಿ ಸಿಬ್ಬಂದಿ ಆರ್.ದಯಾನಂದ್, ಪುರಸಭಾಧ್ಯಕ್ಷ ದೊರೆಮುದ್ದಯ್ಯ, ಕಾಂಗ್ರೆಸ್ ಪಕ್ಷದ ವಿಧಾನಸಭಾ ವೀಕ್ಷಕರಾದ ಕ್ಯಾಪ್ಟನ್ ಸೋಮಶೇಖರ್,  ಗೋರಿ ಕಮಿಟಿಯ ಟಿ.ರಾಮಯ್ಯ, ಘನ್ನಿಸಾಬ್, ಪುರಸಭಾ ಸದಸ್ಯ ಸಿ.ಎಂ.ರಂಗಸ್ವಾಮಯ್ಯ, ದಲಿತ ಮುಖಂಡ ಮಲ್ಲಿಕಾಜರ್ುನ್,  ಕರವೇ ಅಧ್ಯಕ್ಷ ಸಿ.ಟಿ.ಗುರುಮೂತರ್ಿ,  ನಾಮಿನಿ ಸದಸ್ಯ ಎಂ.ಎಸ್.ರವಿಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 ಮಹಿಳೆಯರಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಹೋರಾಡುವುದೇ ಮಹಿಳಾ ದಿನಾಚರಣಾ ಕಾರ್ಯಕ್ರಮದ ಉದ್ದೇಶ
                                             
ಚಿಕ್ಕನಾಯಕನಹಳ್ಳಿ,ಮಾ.10 : ಕಾಲಕ್ಕೆ ತಕ್ಕಂತೆ ಜೀವನ ಶೈಲಿ ಬದಲಾಗುತ್ತಿದೆ ಅದರಂತೆ ಮಹಿಳೆಯರು, ಎಲ್ಲಾ ಕ್ಷೇತ್ರದಲ್ಲೂ ಭಾಗಿಯಾಗಿದ್ದಾರೆ ಆದರೂ ಅವರಿಗೆ ಜೀವನ ಸುಧಾರಣೆಯಲ್ಲಿ ಒತ್ತಡ ಹೆಚ್ಚಿರುತ್ತದೆ ಈ ಬಗ್ಗೆ ಮಹಿಳೆಯರಿಗೆ ಗಮನ ಹರಿಸಿ ಅವರಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಹೋರಾಡುವುದೇ ಮಹಿಳಾ ದಿನಾಚರಣಾ ಕಾರ್ಯಕ್ರಮದ ಉದ್ದೇಶ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಎಂ.ರಾಜಶೇಖರ್ ಅಭಿಪ್ರಾಯಪಟ್ಟರು.
ಪಟ್ಟಣದ ಶಿಶು ಅಭಿವೃದ್ದಿ ಯೋಜನಾ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಡಿದ ಅವರು ಮಹಿಳೆಯರು ಪುರುಷರಿಗಿಂತ ಮುಂದೆ ಇರುವುದನ್ನು ಇಂದು ನಾವು ಕಾಣುತ್ತಿದ್ದೇವೆ, ಸಕರ್ಾರವು ಇಂದು ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುತ್ತಿದೆ ಇದರ ಜೊತೆಗೆ ತಮ್ಮ ಶ್ರಮವನ್ನು ಹೆಚ್ಚಿನದಾಗಿ ಬಳಸಿಕೊಂಡರೆ ತಮ್ಮ ಕ್ಷೇತ್ರಗಳಲ್ಲಿ ಉತ್ತಮ ದಾರಿ ಕಾಣಲು ಸಾಧ್ಯ ಎಂದರು.
ನ್ಯಾಯಾಧೀರಾದ ಕೆ.ನಿರ್ಮಲ ಮಾತನಾಡಿ ಸಮಾಜದಲ್ಲಿ ಮಹಿಳೆಯರು ಮತ್ತು ಪುರುಷರು ಎರಡು ಕಣ್ಣುಗಳಿದ್ದಂತೆ, ಸಮಾಜದಲ್ಲಿ ಪುರುಷರು ಎಷ್ಟು ಮುಖ್ಯವೋ ಅಷ್ಟೇ ಮಹಿಳೆಯರು ಮುಖ್ಯ, ದೇಶದಲ್ಲಿ ಸ್ತ್ರೀಯರಿಗೆ ವಿಶೇಷ ಸ್ಥಾನಮಾನವಿದೆ, ಹಿಂದಿನ ಕಾಲದಿಂದಲೂ ಹೆಣ್ಣನ್ನೇ ದೇವತೆ, ಆದಿಶಕ್ತಿ, ಮಾತೆಯರು ಎಂಬ ಪೂಜ್ಯ ಭಾವನೆಯಿಂದ ಕಾಣಲಾಗುತ್ತಿದೆ, ಇಂದು ಮಹಿಳೆಯರಿಗೆ ಸಕರ್ಾರವು ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿರುವುದು ಉನ್ನತ ಸ್ಥಾನಮಾನವನ್ನು ಅಲಂಕರಿಸಿ ಸಮಾಜದ ಸೇವೆಯನ್ನು ಮಾಡುವಲ್ಲಿ ಸಹಕಾರಿಯಾಗಿದೆ ಎಂದರು.
ಸಿ.ಡಿ.ಪಿ.ಓ ಅನೀಸ್ಖೈಸರ್ ಮಾತನಾಡಿ 1808ರಲ್ಲಿ ಇಗ್ಲೆಂಡ್ ದೇಶದಲ್ಲಿ ಮಾಚರ್್ 8ರಂದು ಕಾಮರ್ಿಕರು ನಡೆಸಿದ ಹೋರಾಟದ ಫಲವಾಗಿ ಮಹಿಳಾ ದಿನಾಚರಣೆ ಜಾರಿಗೆ ಬಂತು ಇದರಿಂದ ಮಹಿಳೆಯರಿಗೆ ಸಮಾನ ಅವಕಾಶಗಳು ಲಭಿಸಲು ಫಲಕಾರಿಯಾಯಿತು, ನಮ್ಮ ರಾಜ್ಯದಲ್ಲಿ 1975ರಿಂದ ಮಾಚರ್್ 8ರಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಎಂ.ವಿ.ಶಿವಾನಂದ್ ಮಾತನಾಡಿ ಸ್ವಾತಂತ್ರ್ಯ ಬಂದ ನಂತರ ಸ್ತ್ರೀಯರಿಗೆ ಸಮಾನ ಅವಕಾಶ ಸಿಗುತ್ತಿರಲಿಲ್ಲ, ಸ್ತ್ರೀಯರ ಅಭಿವೃದ್ದಿಗೆ ಅನೇಕ ಕಾನೂನುಗಳು ಜಾರಿಯಾಗಿದ್ದು ಅದರಲ್ಲಿ ವರದಕ್ಷಿಣೆ ನಿಷೇದ ಕಾಯಿದೆ, ಕೌಟುಂಬಿಕ ದೌರ್ಜನ್ಯ ಕಾಯಿದೆ, ಆಸ್ತಿಯ ಹಕ್ಕು, ವಿವಾಹ ಹಕ್ಕು   ಮಹಿಳೆಯರ ಏಳಿಗೆಗಾಗಿ ಕಾನೂನುಗಳು ರೂಪಿತವಾಗಿದ್ದು ಸಮಾಜದಲ್ಲಿ ಮಹಿಳೆಯರು ಮುಂದೆ ಬರಲು ಈ ಕಾಯಿದೆಗಳು ಸಹಕಾರಿಯಾಗಿವೆ ಎಂದರು.
ಸಮಾರಂಭದಲ್ಲಿ ನ್ಯಾಯಾಧೀಶರಾದ ಎ.ಜಿ.ಶಿಲ್ಪ, ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಪರಮೇಶ್ವರಪ್ಪ ಉಪಸ್ಥಿತರಿದ್ದರು.
ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಜಿ.ಈ.ಪರ್ವತಯ್ಯ ಸ್ವಾಗತಿಸಿದರೆ, ವಕೀಲರ ಸಂಘದ ಕಾರ್ಯದಶರ್ಿ ರಾಜಶೇಖರ್ ವಂದಿಸಿದರು.

Thursday, March 8, 2012


ವಿಕಲಚೇತನರಿಗೆ ಕೃತಕ ಅಂಗ ಜೋಡಣೆ  ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ
ಚಿಕ್ಕನಾಯಕನಹಳ್ಳಿ,ಮಾ.06 : ಜನರು ಆಕಸ್ಮಿಕವಾಗಿ  ಅಥವ ಅಪಘಾತಗಳಿಂದ ಅವಘಡಕ್ಕೊಳಗದ ಸಂದರ್ಭದಲ್ಲಿ ಅವರಿಗೆ ಕೃತಕ ದೇಹದ ಭಾಗಗಳನ್ನು ನೀಡಿದರೆ, ಅವರು ತಮಗೆ ತಾವೇ ಆತ್ಮಸ್ಥೈರ್ಯ ಕಂಡುಕೊಳ್ಳುವುದರ ಮೂಲಕ ತಮ್ಮ ಜೀವನ ಸುಧಾರಿಸಲು ಸಹಕಾರಿಯಾಗುತ್ತದೆ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಹೇಳಿದರು.
ಪಟ್ಟಣದ ಕಲ್ಪವೃಕ್ಷ ಕೋ ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಇನ್ನರ್ವೀಲ್ ಕ್ಲಬ್ ವತಿಯಿಂದ ನಡೆದ ಉಚಿತ ಕೃತಕ ಕಾಲು ಜೋಡಣಾ ಶಿಬಿರವನ್ನು ಉದ್ಘಾಟಿಸಿ  ಮಾತನಾಡಿದ ಅವರು,  ಅಪಘಾತಕ್ಕೊಳಗಾದ ವ್ಯಕ್ತಿಯು ಆ ಸಂದರ್ಭದಲ್ಲಿ ತನ್ನಲ್ಲಿರುವ ನಂಬಿಕೆ,  ಶಕ್ತಿಯನ್ನು ಕಳೆದುಕೊಂಡು ಮೂಲೆಗುಂಪಾಗುತ್ತಾನೆ, ಈ ಸಮಯದಲ್ಲಿ ಅವರಿಗೆ ದೇಹಕ್ಕೆ ಕೃತಕ ಭಾಗಗಳನ್ನು ನೀಡಿ ಆತ್ಮಸ್ಥೈರ್ಯ ತುಂಬಿದರೆ ಅವರು ಜೀವಿಸಲು ಸಹಕಾರಿಯಾಗುವುದು ಎಂದ ಅವರು, ಇಂತಹ ಕಾರ್ಯವನ್ನು ಇನ್ನರ್ವೀಲ್ ಕ್ಲಬ್ ಮಾಡುತ್ತಿರುವುದು ಸಂತೋಷಕರ ಮತ್ತು ಅಂಗವಿಕಲರಿಗೆ ಸಕರ್ಾರ ಹೆಚ್ಚಿನ ರೀತಿಯಲ್ಲಿ ನೆರವಾಗಬೇಕು ಹಾಗೂ ಅವರಿಗೆ ಶಾಶ್ವತ ಪರಿಹಾರ ನೀಡಬೇಕೆಂದರು.
ಇನ್ನರ್ವೀಲ್ ಕ್ಲಬ್ ಜಿಲ್ಲಾ ವೈಸ್ ಛೇರಮನ್ ಮೀನಾ ಅಂಬ್ಲಿ ಮಾತನಾಡಿ ಕೃತಕ ಕಾಲು ಜೋಡಣಾ ಶಿಬಿರವನ್ನು ಕ್ಲಬ್ ಹಲವು ವರ್ಷಗಳಿಂದ  ಹಮ್ಮಿಕೊಂಡು ಬರುತ್ತಿರುವುದಾಗಿ ತಿಳಿಸಿದರು.
ಪುರಸಭಾಧ್ಯಕ್ಷ ದೊರೆಮುದ್ದಯ್ಯ ಮಾತನಾಡಿ ಇನ್ನರ್ವೀಲ್ ಸಂಸ್ಥೆ ಹಮ್ಮಿಕೊಂಡಿರುವ ಕೃತಕ ಕಾಲು ಜೋಡಣಾ ಶಿಬಿರವನ್ನು ಬಡ ಜನರು ಸದುಪಯೋಗ ಪಡೆದುಕೊಳ್ಳಬೇಕು, ಅಲ್ಲದೆ ಇಂತಹ ಕಾರ್ಯಕ್ರಮಗಳನ್ನು ಪ್ರತಿ ಹಳ್ಳಿ ಹಳ್ಳಿಯಲ್ಲೂ ಹಮ್ಮಿಕೊಂಡ ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ಸಮಾರಂಭದಲ್ಲಿ ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ವೀಣಾಶಂಕರ್,  ರೋಟರಿ ಕ್ಲಬ್ ಅಧ್ಯಕ್ಷ ಕೆ.ಆರ್.ಚನ್ನಬಸವಯ್ಯ, ತಾ.ಪಂ.ಸದಸ್ಯರಾದ ಚೇತನಗಂಗಾಧರ್, ಲತಾ, ಟೌನ್ ಬ್ಯಾಂಕ್ ಅದ್ಯಕ್ಷ ಸಿ.ಎಸ್.ನಟರಾಜು, ಪುರಸಭಾ ಉಪಾದ್ಯಕ್ಷೆ ಗಾಯಿತ್ರಿಪುಟ್ಟಣ್ಣ, ಪುರಸಭಾ ಸದಸ್ಯರಾದ ಸಿ.ಎಸ್.ರಮೇಶ್, ಕವಿತಾಚನ್ನಬಸವಯ್ಯ, ಮಹಾವೀರ್ಜೈನ್ನ ಡಾ.ಮುರುಳಿ,  ವೈದ್ಯಾಧಿಕಾರಿ ಡಾ.ಶಿವಕುಮಾರ್, ಸಿ.ಡಿ.ಪಿ.ಓ ಅನೀಸ್ಖೈಸರ್ ಸೇರಿದಂತೆ ಮುಂತಾದವರಿದ್ದರು.
ಸಮಾರಂಭದಲ್ಲಿ ಇನ್ನರ್ವೀಲ್ ಕ್ಲಬ್ಮ ಚಂದ್ರಿಕಾಮೂತರ್ಿ ಪ್ರಾಥರ್ಿಸಿದರೆ, ವೀಣಾಶಂಕರ್ ಸ್ವಾಗತಿಸಿ, ಭವಾನಿಜಯರಾಂ ನಿರೂಪಿಸಿದರು.
                                         
ಹೇಗೆ ನಡೆದುಕೊಳ್ಳಬೇಕೆಂಬದನ್ನು ಅರಿತರೆ ಜಗಳ ಇಲ್ಲವಾಗುತ್ತದೆ
                                         
ಚಿಕ್ಕನಾಯಕನಹಳ್ಳಿ,ಮಾ.06 : ಜಗಳಮಾಡಿಕೊಂಡು ಜೀವನದಲ್ಲಿ ಅಶಾಂತಿ ಉಂಟುಮಾಡಿಕೊಳ್ಳುತ್ತಾ  ನ್ಯಾಯಾಲಯಗಳಿಗೆ ಆಗಮಿಸಿ ಸುಮ್ಮನೆ ತಮ್ಮ ಸಮಯ ಹಾಗೂ ಹಣವನ್ನು ಹಾಳು ಮಾಡಿಕೊಳ್ಳುವುದನ್ನು ಬಿಟ್ಟು ಶಾಂತಿಯುತವಾಗಿ ಜೀವನ ನಡೆಸಿ, ತಮ್ಮ ಸುತ್ತಮುತ್ತಲಿನ ಸಮಾಜವನ್ನು ಪರಿವರ್ತನೆ ಮಾಡಿ  ಎಂದು ನ್ಯಾಯಾಧೀಶರಾದ ನಿರ್ಮಲ ಹೇಳಿದರು.
ಪಟ್ಟಣದ ಡಿ.ವಿ.ಪಿ ಶಾಲೆಯ ಆವರಣದಲ್ಲಿ ನಡೆದ ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ನ್ಯಾಯಾಲಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಾಂತಿಯುತ ಜೀವನ ನಡೆಸಲು  ವಿದ್ಯಾವಂತರೇ ಆಗಬೇಕೆಂದೇನಿಲ್ಲ, ಯಾರೇ ಆಗಲಿ ನಾವು ಎಲ್ಲಿ, ಯಾವಾಗ, ಯಾವ ರೀತಿ ನಡೆದುಕೊಳ್ಳಬೇಕೆಂಬುದೇನು ಅರಿತವನಿಗೆ ಮುಂದೇನಾಗಬಹುದು ಎಂಬ ಗ್ರಹಿಸುವಿಕೆ ಮುಖ್ಯ ಎಂದ ಅವರು, ಇದರಿಂದಲೇ ಅರ್ಧ ಸಮಸ್ಯೆಗಳು ತಪ್ಪುತ್ತವೆ ಎಂದರು,  ಮಕ್ಕಳು ತಮ್ಮ  ವ್ತಕ್ತಿತ್ವ ವಿಕಾಸನ ಮಾಡಿಕೊಳ್ಳಬೇಕು ಅದಕ್ಕೆ ಪೋಷಕರು ಸಹಕರಿಸಬೇಕು ಮತ್ತು ಹಲವು ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.
ನ್ಯಾಯಾಧೀಶರಾದ ಎ.ಜಿ.ಶಿಲ್ಪ ಮಾತನಾಡಿ  ನಾವು ಮಾಡಿದ ರೀತಿಯೇ ಸರಿ ಎಂಬ  ಯೋಚನೆಗಳು ಮಕ್ಕಳಲ್ಲಿ ಹಲವು ಕೃತ್ಯಗಳನ್ನು ಎಸಗುತ್ತಾರೆ ಆ  ಆಲೋಚನೆಯಲ್ಲಿ ತಪ್ಪುಗಳನ್ನು ಮಾಡುತ್ತಾರೆ ಆ ಮೂಲಕ ಅವರು ಬಾಲಪರಾಧಿಗಳಾಗುತ್ತಾರೆ ಇದರ ಬಗ್ಗೆ ಪೋಷಕರು ಎಚ್ಚರ ವಹಿಸಬೇಕು  ಎಂದ ಅವರು ಬಾಲಪರಾಧಿಗಳಿಗೆ ಪ್ರತಿ ಜಿಲ್ಲೆಯಲ್ಲಿ ವಿಶೇಷ ನ್ಯಾಯಾಲಯಗಳಿವೆ ಅಲ್ಲಿ ಅವರ ತಪ್ಪುಗಳನ್ನು ವಿಶೇಷವಾಗಿ ಚಚರ್ಿಸಿ ಸೂಕ್ತ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಸಮಾರಂಭದಲ್ಲಿ  ಡಿ.ವಿ.ಪಿ ಶಾಲೆಯ ಕಾರ್ಯದಶರ್ಿ ಸಿ.ಎಸ್.ನಟರಾಜು ಮಾತನಾಡಿದರು. ಸಮಾರಂಭದಲ್ಲಿ  ನಿವೃತ್ತ ಉಪನ್ಯಾಸಕ ಜಿ.ತಿಮ್ಮಯ್ಯ, ಶಿಕ್ಷಕ ನಾಗರಾಜು ಉಪಸ್ಥಿತರಿದ್ದರು

ಚಿಕ್ಕನಾಯಕನಹಳ್ಳಿ,ಮಾ08 : ತಾಲ್ಲೂಕು ಬೋರನಕಣಿವೆಯ ಸೇವಾ ಚೇತನದಲ್ಲಿ ಮಾ.14 ಮತ್ತು 15ರಂದು ವಿಶೇಷ ಘಟಕ ಮತ್ತು ಗಿರಿಜನ ಯೋಜನೆಯಡಿ ಯುವ ಕವಿಗಳಿಗೆ ಕಾವ್ಯ ಕಮ್ಮಟ ಏರ್ಪಡಿಸಲಾಗಿದೆ.
ಕನ್ನಡ ಸಾಹಿತ್ಯ ಅಕಾಡೆಮಿ ಹಾಗೂ ಬೋರನಕಣಿವೆ ಸೇವಾ ಚೇತನಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ ಈ ಕಾವ್ಯ ಕಮ್ಮಟದ ಉದ್ಘಾಟನಾ ಸಮಾರಂಭ ಮಾ.14ರ ಬೆಳಗ್ಗೆ 11ಕ್ಕೆ ಜರುಗಲಿದೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತ ಡಾ.ಮನುಬಳಿಗಾರ್ ಉದ್ಘಾಟಿಸಲಿರುವ ಈ ಕಾರ್ಯಕ್ರಮದಲ್ಲಿ ಹಿರಿಯ ಕವಿ ಹೆಚ್.ಗೋವಿಂದಯ್ಯ ಮುಖ್ಯ ಅತಿಥಿಗಳಾಗಿ ಕೈಗಾರಿಕೋದ್ಯಮಿ ಬಿ.ಎ.ಚಿದಂಬರಯ್ಯ, ಪ್ರಜಾಪ್ರಗತಿ ಸಂಪಾದಕ ಎಸ್.ನಾಗಣ್ಣ ವಿಶೇಷ ಆಹ್ವಾನಿತರಾಗಿ ಆಗಮಿಸುವರು. ಮದ್ಯಾಹ್ನ 2.30 ಗಂಟೆಗೆ ಕವಿ, ಪ್ರೊ.ಕೆ.ಬಿ.ಸಿದ್ದಯ್ಯ ಅವರೊಂದಿಗೆ ಸಂವಾದ ಸಂಜೆ 6ಕ್ಕೆ ಬಿಳಿಗೆರೆ ಕೃಷ್ಣಮೂತರ್ಿ ಅವರಿಂದ ತತ್ವಪದಗಳ ಗಾಯನ ಜರುಗಲಿದೆ, ಮಾ.15ರಂದು ಮದ್ಯಾಹ್ನ 2.30ಕ್ಕೆ ಸಮಾರೋಪ ಸಮಾರಂಬ ಜರುಗಲಿದ್ದು ಪ್ರೊ.ಎಸ್.ಜಿ.ಸಿದ್ದರಾಮಯ್ಯ ಸಮಾರೋಪದ ಅದ್ಯಕ್ಷತೆ ವಹಿಸಲಿದ್ದಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿದರ್ೇಶಕ ಕಾ.ತ.ಚಿಕ್ಕಣ್ಣ ಸಮಾರೋಪ ಭಾಷಣ ಮಾಡಲಿದ್ದಾರೆ, ರುದ್ರಪ್ಪ ಅನಗವಾಡಿ ಎಸ್.ಆರ್.ವೆಂಕಟೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಂಸತ್ತಿಗೂ ಹಾಗೂ ವಿದಾನಸಭೆಗೆ ಶೇ.50ರಷ್ಟು ಮಹಿಳೆಯರಿಗೆ ಮೀಸಲಿಡಬೇಕೆ

                                    
ಚಿಕ್ಕನಾಯಕನಹಳ್ಳಿ,ಮಾ.08 : ಸಂಸತ್ತಿಗೂ ಹಾಗೂ ವಿದಾನಸಭೆಗೆ ಶೇ.50ರಷ್ಟು ಮಹಿಳೆಯರಿಗೆ ಮೀಸಲಿಡಬೇಕೆಂದು ಜಿ.ಪಂ.ಸದಸ್ಯೆ ಲೋಹಿತಾಬಾಯಿ ಸಕರ್ಾರವನ್ನು ಒತ್ತಾಯಿಸಿದರು.
ಪಟ್ಟಣದ ಕನ್ನಡ ಸಂಘದ ವೇದಿಕೆಯಲ್ಲಿ ಸೃಜನ ಮಹಿಳಾ ಸಂಘದ ವತಿಯಿಂದ ನಡೆದ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿ ಪ್ರಪಂಚದಲ್ಲಿ ಶೇ.50ರಷ್ಟು ಮಹಿಳೆಯರು ಇರುವುದರಿಂದ ಸಕರ್ಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಬೇಕು, ಮಹಿಳೆಯರಿಗೆ ಸಮಾಜದಲ್ಲಿ ಸಕರ್ಾರಿ ಕೆಲಸ ಕುಟುಂಬ ಪಾಲನೆಯಲ್ಲಿ ಅವಕಾಶ ನೀಡಿದರೆ ಸಮರ್ಥವಾಗಿ ನಡೆಸಿಕೊಂಡು ಹೋಗುತ್ತಾಳೆ, ಮಹಿಳೆಯರು ಹಾಗೂ ಶಿಕ್ಷಿತರಾದರೆ ಮಾತ್ರ ಸಮಾಜ ಜಾಗೃತರಾಗಲು ಸಾಧ್ಯ, ಆ ಸಂದರ್ಭದಲ್ಲಿ ಅವರಿಗೆ ಅವಕಾಶಗಳು ತಾವಾಗೇ ಬರುತ್ತವೆ, ಸಕರ್ಾರ ಮಹಿಳೆಯರ ಬಗ್ಗೆ ಕಾನೂನುಗಳಿದ್ದರೂ ಸಮಾಜದಲ್ಲಿ ವರದಕ್ಷಿಣೆ ಕಿರುಕುಳ ಲೈಂಗಿಕ, ದೌರ್ಜನ್ಯಗಳು ನಡೆಯುತ್ತಲೇ ಇದೆ, ಇದರ ಬಗ್ಗೆ ಮಹಿಳೆಯರೆಲರಿಗೂ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯ ಎಂದರು, ಮಹಿಳಾ ದಿನಾಚರಣೆಯಂದು ಸಕರ್ಾರ ರಜಾ ಘೋಷಿಸುವಂತೆ ಒತ್ತಾಯಿಸಿದರು. 
ಪುರಸಭಾಧ್ಯಕ್ಷ ದೊರೆಮುದ್ದಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಹಿಳೆಯರು ರಾತ್ರಿ ನಿಭರ್ೀತಿಯಿಂದ ಸಂಚರಿಸಿದಾಗ ದೇಶ ರಾಮ ರಾಜ್ಯವಾಗುವುದರಲ್ಲಿ ಅನುಮಾನವಿಲ್ಲ ಎಂಬುದನ್ನು ಗಾಂಧೀಜಿಯವರ ಕನಸು ಕಂಡಿದ್ದರು, ಮಹಿಳೆಯರು ಸಕರ್ಾರ ನೀಡುವ ಸವಲತ್ತುಗಳೂ ಸರಿಯಾಗಿ ಉಪಯೋಗಿಸಿಕೊಂಡು ಆಥರ್ಿಕವಾಗಿ ಮುಂದೆ ಬರಬೇಕು, ಸ್ತ್ರೀಯರ ಮೇಲಿನ ದೌರ್ಜನ್ಯ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿನ ದೌರ್ಜನ್ಯಗಳನ್ನು ತಡೆಯುವುದು ಸಮಾಜದ ಎಲ್ಲಾ ನಾಗರೀಕರ ಕರ್ತವ್ಯ ಎಂದರು.
ಸಮಾರಂಭಕ್ಕೂ ಮುನ್ನ ಆಂಜನೇಯಸ್ವಾಮಿ ದೇವಸ್ಥಾನದಿಂದ ಕನ್ನಡ ಸಂಘದವರೆಗೆ ಮೆರವಣಿಗೆ ನಡೆಸಲಾಯಿತು. ನೆಹರು ಸರ್ಕಲ್ನಲ್ಲಿ ಮಾನವ ಸರಪಳಿ ನಿಮರ್ಿಸಿ, ಜನರಲ್ಲಿ ಮಹಿಳೆಯರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ತಾ.ಪಂ.ಸಸದಸ್ಯರಾದ ಚೇತನಗಂಗಾಧರ್, ಲತಾವಿಶ್ವೇಶ್ವರಯ್ಯ, ಪುರಸಭಾ ಉಪಾಧ್ಯಕ್ಷೆ ಗಾಯಿತ್ರಿದೇವಿ, ಪುರಸಭಾ ಸದಸ್ಯರಾದ ರೇಣುಕಗುರುಮೂತರ್ಿ, ರುಕ್ಮಿಣಮ್ಮ, ಶಿವಣ್ಣ, ಕವತಾಚನ್ನಬಸವಯ್ಯ, ಸುಮಿತ್ರಕಣ್ಣಯ್ಯ, ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ವೀಣಾಶಂಕರ್ ಮುಂತಾದವರಿದ್ದರು.

Wednesday, February 22, 2012

ಎರಡು ಸಮಾಜಗಳ ನಡುವೆ ವೈಷಮ್ಯ ಮೂಡಿಸುತ್ತಿರುವ ಪೊಲೀಸ್ ಇಲಾಖೆ ಶೀಘ್ರ ಎಚ್ಚೆತ್ತುಕೊಳ್ಳಲಿ: ಸಿ.ಡಿ.ಸಿ.
ಚಿಕ್ಕನಾಯಕನಹಳ್ಳಿ,ಫೆ.22 : ತಾಲ್ಲೂಕಿನ ಅಜ್ಜಿಗುಡ್ಡೆ ಗ್ರಾಮದಲ್ಲಿ ಅಂಗವಿಕಲೆ ಲಕ್ಕಮ್ಮನಿಗೆ ಹಾಗೂ ಅವರ ಮನೆಯ ಮೇಲೆ ನಡೆದ ದಾಂಧಲೆಯನ್ನು  ಖಂಡಿಸಿರುವುದಲ್ಲದೆ, ದಾಂಧಲೆ ನಡೆಸಿದ ಆರೋಪಿಗಳ ವಿರುದ್ದ ಪೋಲಿಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಶ್ರೀ ರೇವಣಸಿದ್ದೇಶ್ವರ ಕಂಬಳಿ ಸೊಸೈಟಿ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ಸಿ.ಡಿ.ಚಂದ್ರಶೇಖರ್ ಆಗ್ರಹಿಸಿದ್ದಾರೆ.
ಇದೇ 18ರಂದು ಪತ್ರಿಕೆಯಲ್ಲಿ ಪ್ರಕಟಗೊಂಡ ವರದಿಯನ್ನು ಆಧಾರಿಸಿ ಅಜ್ಜಿಗುಡ್ಡೆ ಲಕ್ಕಮ್ಮ ಹಾಗೂ ಅವರ ಮಗನಿಗೆ ಸಾಂತ್ವಾನ ಹೇಳಲೆಂದು ಅಜ್ಜಿಗುಡ್ಡೆಯ ಮನೆಗೆ ತೆರಳಿದ್ದರು.  
ದಾಂಧಲೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಅಂಗವಿಕಲ ಎಂಬ ಕಾರಣಕ್ಕೆ ಪೊಲೀಸ್ ಇಲಾಖೆ ಇಷ್ಟೋಂದು ತಾತ್ಸಾರ ಮಾಡುತ್ತಿರುವುದು ಸರಿಯಲ್ಲ ಎಂದ ಅವರು, ಲಕ್ಕಮ್ಮ ಮತ್ತು ಅವರ ಕುಟುಂಬ ಅಶಕ್ತರಲ್ಲ ಅವರ ಜೊತೆ ನಾವಿದ್ದೇವೆ, ಕುರುಬ ಸಮಾಜದ ಒಂದೇ ಒಂದು ಮನೆ ಇದೆ ಎಂಬ ಕಾರಣಕ್ಕೆ ಇಷ್ಟೊಂದು ಕಿರುಕುಳ ನೀಡುವುದು ಸರಿಯಲ್ಲ. ಪೊಲೀಸ್ ಇಲಾಖೆ ಶೀಘ್ರ ಎಚ್ಚೆತ್ತುಕೊಂಡು ಅನ್ಯಾಯಕ್ಕೊಳಗಾಗಿರುವ ಈ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.
  ಚರಂಡಿಯ ಕೊಳಚೆ ನೀರು ಹರಿಯುವ ವಿಷಯಕ್ಕೆ ಎದ್ದಿರುವ ಈ ವೈಷ್ಯಮ್ಯವನ್ನು ತಮನ ಮಾಡಲು  ತಾಲ್ಲೂಕು ಪಂಚಾಯಿತಿ ಶೀಘ್ರ ಇಲ್ಲಿ ಚರಂಡಿ ನಿಮರ್ಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ. ಲಕ್ಕಮ್ಮನ ಮನೆಯವರು  ಅಜರ್ಿ ಕೊಟ್ಟು 2ವರ್ಷವಾದರೂ ತಾಲ್ಲೂಕು ಆಡಳಿತ ಯಾವ ಕ್ರಮವನ್ನು ಕೈಗೊಂಡಿಲ್ಲ ಆದ್ದರಿಂದ  ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ  ಈ ಬಗ್ಗೆ ಪರಿಶೀಲಿಸಿ ಅಂಗವಿಕಲೆ ಅಜ್ಜಿಗೆ ಹಾಗೂ ಅವರ ಮನೆಗೆ ನಡೆದಿರುವ ದಾಂಧಲೆಗೆ ಪರಿಹಾರ ನೀಡಬೇಕು ಎಂದ ಅವರು ಕೇವಲ 2ಮನೆಗಳ ನಡುವೆ ಉಂಟಾದ ಈ ಗಲಭೆಯು ಎರಡು ಸಮಾಜದ ನಡುವೆ ವೈಷಮ್ಯ ಬೆಳೆಯುವಂತೆ ಮಾಡದೆ ಪೊಲೀಸ್ ಇಲಾಖೆ ಲಕ್ಕಮ್ಮನ ದೂರನ್ನು ದಾಖಲೆ ಮಾಡಿಕೊಂಡು ಶೀಘ್ರ ಎಫ್.ಐ.ಆರ್. ನೀಡುವಂತೆ ಒತ್ತಾಯಿಸಿದ್ದಾರೆ.  

ಅಧಿಕಾರಿಗಳ ನಿರ್ಲಕ್ಷ ಅಭಿವೃದ್ದಿ ಕಾರ್ಯಗಳು ಕುಂಠಿತ: ಆರೋಪ
ಚಿಕ್ಕನಾಯಕನಹಳ್ಳಿ,ಫೆ.22 :  ತಾಲ್ಲೂಕು ಪಂಚಾಯ್ತಿ ಸ್ವತ್ತನ್ನು ಅಳತೆ ಮಾಡಿಸಲು ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ತಹಶೀಲ್ದಾರ್ ರವರಿಗೆ  ಹಾಗೂ ಭೂಮಾಪನ ಇಲಾಖೆಯ ಸೂಪರ್ ವೈಸರ್ ಹೇಳಿ ಹಲವು ದಿನಗಳಾದರೂ ಇಲ್ಲಿಯವರೆಗೆ ಅಳತೆ ಮಾಡಿರುವುದಿಲ್ಲ ಎಂದು ತಾ.ಪಂ.ಸದಸ್ಯ ನಿರಂಜನಮೂತರ್ಿ ಆರೋಪಿಸಿದ್ದಾರೆ.
ತಿಮ್ಲಾಪುರ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಶೇ.15ರಷ್ಟು ಲಂಚಕೊಟ್ಟರೆ ಒಬ್ಬನೇ ವ್ಯಕ್ತಿಗೆ 15ಲಕ್ಷದಷ್ಟು ಕಾಮಗಾರಿ ಮಂಜೂರು ಮಾಡಿಕೊಡುತ್ತಾರೆ, ಇಲ್ಲಿಯ ಅಧಿಕಾರಿಗಳು ತಮಗೆ ಆಪ್ತರಾದವರಿಗೆ ಚಿ.ನಾ.ಹಳ್ಳಿ  ತಾ.ಪಂ.ನಿಂದಲೇ ಅನುಷ್ಠಾನಗೊಳಿಸಿ, ಉಳಿದವರಿಗೆ  ಜಿಲ್ಲಾ ಪಂಚಾಯ್ತಿಗೆ ಕಳುಹಿಸಿಕೊಡಿ ಎಂದು ಹೇಳಿ ತಲೆ ತಪ್ಪಿಸಿಕೊಳ್ಳುತ್ತಾರೆ ಎಂದು ನಿರಂಜನಮೂತರ್ಿ ಆರೋಪಿಸಿದ್ದಾರೆ. 
 2011-12ನೇ ಸಾಲಿನ ತಾ.ಪಂಚಾಯ್ತಿಯಲ್ಲಿ ಮಾಚರ್್ 15ಕ್ಕೆ 11-12ನೇ ಸಾಲಿನ ಹಣ ಖಚರ್ಾಗಬೇಕು ಇಲ್ಲದಿದ್ದರೆ ಸಕರ್ಾರ ವಾಪಸ್ ಪಡೆಯಲಿದೆ ಎಂದು ಖಜಾನೆಯಿಂದ ಪತ್ರ ಬಂದಿದೆ, 29 ಇಲಾಖೆಗಳಲ್ಲಿ ಹಣ ಸಕರ್ಾರಕ್ಕೆ ವಾಪಸ್ ಹೋದರೆ ನೇರವಾಗಿ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
  1. ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಜವಬ್ದಾರಿ ಅರಿತು ಕೆಲಸ ಮಾಡಲಿ.

ಚಿಕ್ಕನಾಯಕನಹಳ್ಳಿ,ಫೆ.22 : ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು ಜವಾಬ್ದಾರಿಗಳು, ಕರ್ತವ್ಯಗಳನ್ನು ಅರಿತು ಶಾಲೆಯಲ್ಲಿ  ಕೆಲಸ ಮಾಡಬೇಕೆಂದು  ಪಟ್ಟಣದ ಕೆ.ಎಂ.ಎಚ್.ಪಿ.ಎಸ್.ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಸಿ.ಬಿ.ಲೋಕೇಶ್ ಹೇಳಿದರು.
ಪಟ್ಟಣದ ಬಸವೇಶ್ವರ ನಗರ ಸಕರ್ಾರಿ ಶಾಲೆಯಲ್ಲಿ  ನಡೆದ ಶಾಲಾಭಿವೃದಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ನಾಗರೀಕ ಸೌಕರ್ಯ ಸ್ಥಾಯಿ ಸಮಿತಿ ಸದಸ್ಯರಿಗೆ 3ದಿನದ ಸಂಕಲ್ಪ ಸಮಕ್ಷಮ ಹಾಗೂ ಸಮಾವೇಶದ ತರಬೇತಿ ಕಾಯರ್ಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ತರಬೇತಿ ಕಾಯರ್ಾಗಾರದಲ್ಲಿ ಭಾಗವಹಿಸುವ ಮೂಲಕ ಶಾಲೆಗಳಲ್ಲಿ ಮಕ್ಕಳಿಗಾಗಿ ಯಾವ ರೀತಿಯ ಅಭಿವೃದ್ದಿ ಕಾರ್ಯಗಳು ಮಾಡಬೇಕು ಅದಕ್ಕಾಗಿ ಶಿಕ್ಷಕರಿಗೆ ಯಾವ ರೀತಿ ಮಾರ್ಗದರ್ಶನ ನೀಡಬಹುದು ಎಂಬುದನ್ನು ತಿಳಿಯಬಹುದಾಗಿದ್ದು ಶಾಲೆಗಳಲ್ಲಿನ ಶೈಕ್ಷಣಿಕ ಪ್ರಗತಿ ಬಗ್ಗೆ ಹಾಗೂ ಶಾಲೆಗಳ ಮುಂದಿನ ಅಭಿವೃದ್ದಿ ಕಾರ್ಯಗಳಿಗೆ ತರಬೇತಿ ಕಾರ್ಯಗಾರಗಳು ಅನುಕೂಲ ಮಾಡಿಕೊಡುತ್ತವೆ ಎಂದ ಅವರು ಶಾಲೆಗಳ ಅಭಿವೃದ್ದಿಗೆ ಎಸ್.ಡಿ.ಎಂ.ಸಿ ಸದಸ್ಯರ ಪಾತ್ರ ಬಹುಮುಖ್ಯ ಎಂದರು.
ಕಾರ್ಯಕ್ರಮದಲ್ಲಿ ಎಚ್.ಪಿ.ಎಸ್.ರೇವಣ್ಣ ಮಠ ಶಾಲೆಯ ಅಧ್ಯಕ್ಷ ರೇವಣ್ಣ ಉದ್ಘಾಟಿಸಿದರು, ರಾ.ಪ್ರಾ.ಶಾ.ಶಿಕ್ಷಕರ ಸಂಘದ ಉಪಾಧ್ಯಕ್ಷೆ ಸಿ.ಎಸ್.ಶೋಭಾ, ಸಿ.ಆರ್.ಪಿ. ದುರ್ಗಯ್ಯ ರಾಜಣ್ಣ  ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಿಕ್ಷಕರುಗಳಾದ ಪ್ರಕಾಶ್ ಪ್ರಾಥರ್ಿಸಿದರೆ, ಕೃಷ್ನಮೂತರ್ಿ ವಂದಿಸಿದರು.